Homeಮುಖಪುಟಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ...

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

- Advertisement -
- Advertisement -

ಗುರು ಪೂರ್ಣಿಮಾ ಅಂಗವಾಗಿ ಆಯೋಜಿಸಿದ್ದ ಗುರುವಂದನಾ ಸಮಾರಂಭ ವೇಳೆ ಶಿಕ್ಷಕರ ಪಾದ ತೊಳೆಯುವಂತೆ ಕೇರಳದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಶಿಕ್ಷಣ ಸಚಿವ ಶಿವನ್ ಕುಟ್ಟಿ ಗರಂ ಆಗಿದ್ದು, ಅಧಿಕಾರಿಗಳಿಂದ ವರದಿ ಕೇಳಿದ್ದಾರೆ.

ಕಾಸರಗೋಡು ಮತ್ತು ಮಾವೇಲಿಕರದ ಎರಡು ಖಾಸಗಿ ಶಾಲೆಗಳಿಂದ ವಿವರಣೆ ಕೇಳಲಾಗಿದೆ. ವರದಿ ನೀಡುವಂತೆ ಶಿಕ್ಷಣ ಇಲಾಖೆ ಮಹಾ ನಿರ್ದೇಶಕರಿಗೆ ಸಚಿವ ಶಿವನ್‌ ಕುಟ್ಟಿ ಸೂಚಿಸಿದ್ದಾರೆ. ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ ಎಂದು onmanorama.com ವರದಿ ಮಾಡಿದೆ.

ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಶಿವನ್ ಕುಟ್ಟಿ, ವಿದ್ಯಾರ್ಥಿಗಳಿಂದ ಶಿಕ್ಷರ ಪಾದ ತೊಳೆಯುವಂತೆ ಒತ್ತಾಯಿಸಿದ ಶಾಲೆಗಳ ಆಡಳಿತ ಮಂಡಳಿ ವಿರುದ್ದ ಕಿಡಿಕಾರಿದ್ದು, “ಇದು ಅನುಚಿತ ವರ್ತನೆ, ಅಲ್ಲದೆ ಪ್ರಜಾಪ್ರಭುತ್ವ ಮತ್ತು ಪ್ರಗತಿಪರ ಶಿಕ್ಷಣ ವ್ಯವಸ್ಥೆಯ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಕಾಸರಗೋಡಿನ ಬಂದಡ್ಕದ ಸರಸ್ವತಿ ವಿದ್ಯಾಲಯದಲ್ಲಿ ಮತ್ತು ಆಲಪ್ಪುಝದ ಮಾವೇಲಿಕರದಲ್ಲಿರುವ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ ಶಾಲೆಯಲ್ಲಿ ಮಕ್ಕಳಿಂದ ಪಾದ ಪೂಜೆ ಮಾಡಲಿಸಲಾಗಿದೆ. ಇವೆರಡೂ ಸಿಬಿಎಸ್‌ಸಿ ಸಂಯೋಜಿತ ಶಾಲೆಗಳಾಗಿದ್ದು, ಭಾರತೀಯ ವಿದ್ಯಾ ನಿಕೇತನ ಇವುಗಳನ್ನು ನಿರ್ವಹಿಸುತ್ತಿದೆ.

ಭಾರತೀಯ ವಿದ್ಯಾ ನಿಕೇತನ ಆರ್‌ಎಸ್‌ಎಸ್‌ನ ಶೈಕ್ಷಣಿಕ ವಿಭಾಗವಾದ ವಿದ್ಯಾ ಭಾರತಿಯ (ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ) ಕೇರಳದ ಅಂಗ ಸಂಸ್ಥೆಯಾಗಿದೆ.

ಎರಡು ಶಾಲೆಗಳು ಮಾತ್ರವಲ್ಲದೆ ಕಾಸರಗೋಡು ಜಿಲ್ಲೆಯ ತ್ರಿಕರಿಪುರದ ಶ್ರೀ ಚಕ್ರಪಾಣಿ ವಿದ್ಯಾ ಮಂದಿರ, ಕುಂದಂಕುಝಿಯ ಹರಿಶ್ರೀ ವಿದ್ಯಾಲಯ, ಚೀಮೇನಿಯ ವಿವೇಕಾನಂದ ವಿದ್ಯಾ ಮಂದಿರ ಸೇರಿದಂತೆ ಇತರೆ ಖಾಸಗಿ ಶಾಲೆಗಳಲ್ಲೂ ಮಕ್ಕಳಿಂದ ಶಿಕ್ಷಕರ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ವರದಿಯಾಗಿದೆ.

ಕಾಸರಗೋಡಿನ ಬಂದಡ್ಕ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಮಾತ್ರವಲ್ಲದೆ, ಅತಿಥಿಗಳ ಪಾದಗಳನ್ನೂ ನೀರು ಹಾಕಿ ತೊಳೆದು, ನಂತರ ಹೂವು ಅರ್ಪಿಸಿ ಪೂಜೆ ಮಾಡಿದ ವಿಡಿಯೋ ವೈರಲ್ ಆದ ಬಳಿಕ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕೆಲವೆಡೆ ಅತಿಥಿಗಳ ಹೆಸರಿನಲ್ಲಿ ಮಕ್ಕಳು ಸ್ಥಳೀಯ ಆರ್‌ಎಸ್‌ಎಸ್‌, ಬಿಜೆಪಿ ನಾಯಕರ ಪಾದಗಳನ್ನು ತೊಳೆದಿದ್ದಾರೆ ಎನ್ನಲಾಗಿದೆ.

ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ಸಂಘಟನೆಗಳು ಮಕ್ಕಳು ಪಾದ ತೊಳೆದಿರುವುದನ್ನು ಬಲವಾಗಿ ಖಂಡಿಸಿವೆ. ಚೀಮೇನಿ ಶಾಲೆಯಲ್ಲಿ ವಿದ್ಯಾರ್ಥಿಗಳು ನೂರಾರು ಶಿಕ್ಷಕರ ಪಾದಗಳನ್ನು ತೊಳೆದಿದ್ದಾರೆ ಎಂದು ಡಿವೈಎಫ್‌ಐ ಆರೋಪಿಸಿದೆ. “ಈ ಬ್ರಾಹ್ಮಣ್ಯದ ಆಚರಣೆಗಳನ್ನು ಆರ್‌ಎಸ್‌ಎಸ್‌ ಬೆಂಬಲಿತ ಶಾಲೆಗಳಲ್ಲಿ ನಡೆಸಲಾಗಿದ್ದರೂ, ಇದು ನಮ್ಮ ರಾಜ್ಯಕ್ಕೆ ನಾಚಿಕೆಗೇಡಿನ ಸಂಗತಿ” ಎಂದು ಡಿವೈಎಫ್‌ಐ ಹೇಳಿಕೆಯಲ್ಲಿ ತಿಳಿಸಿದೆ.

ಆಲಪ್ಪುಝ ಜಿಲ್ಲೆಯ ಅಟ್ಟುವದಲ್ಲಿರುವ ವಿವೇಕಾನಂದ ವಿದ್ಯಾ ಪೀಠದಲ್ಲಿ ವಿದ್ಯಾರ್ಥಿಗಳಿಗೆ ಬಿಜೆಪಿ ನಾಯಕನ ಪಾದಗಳನ್ನು ತೊಳೆಯುವಂತೆ ಒತ್ತಾಯಿಸಲಾಗಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ. ಎಸ್‌ಎಫ್‌ಐ ರಾಜ್ಯ ಸಮಿತಿ ಶಿಕ್ಷಣ ಸಚಿವ ಶಿವನ್‌ಕುಟ್ಟಿ ಮತ್ತು ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದೆ.

ಮಕ್ಕಳ ಹಕ್ಕುಗಳ ಆಯೋಗ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದೆ. “ಬಂದಡ್ಕದ ಸರಸ್ವತಿ ವಿದ್ಯಾಲಯದ ಬಗ್ಗೆ ಆರಂಭಿಕ ದೂರು ಬಂದಿತ್ತು. ನಂತರ ರಾಜ್ಯಾದ್ಯಂತ ಹಲವು ಶಾಲೆಗಳಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ನಮ್ಮ ಗಮನಕ್ಕೆ ಬಂದಿದೆ. ಆಯೋಗವು ಈ ಬಗ್ಗೆ ವರದಿ ಸಲ್ಲಿಸುವಂತೆ ಪೊಲೀಸರಿಗ ಸೂಚಿಸಿದೆ” ಎಂದು ಆಯೋಗದ ಕಾಸರಗೋಡು ಜಿಲ್ಲಾ ಉಸ್ತುವಾರಿ ಮೋಹನಕುಮಾರ್ ಬಿ ತಿಳಿಸಿದ್ದಾರೆ.

ಮಕ್ಕಳು ಪಾದ ತೊಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಂದಡ್ಕ ಶಾಲೆಯ ಮುಖ್ಯೋಪಾಧ್ಯಾಯಿನಿ ಪಿ.ಟಿ. ಉಮಾ “ಇದು ‘ವ್ಯಾಸ ಜಯಂತಿ’ಯ ಅಂಗವಾಗಿ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಪದ್ದತಿ. ಆಹ್ವಾನಿತ ಗೌರವಾನ್ವಿತರ ಪಾದಗಳನ್ನು ಶಿಕ್ಷಕರು ಸ್ವತಃ ತೊಳೆದಿದ್ದಾರೆ. ವಿದ್ಯಾರ್ಥಿಗಳು ಅವರ ಪಾದಗಳಿಗೆ ಹೂವುಗಳನ್ನು ಮಾತ್ರ ಅರ್ಪಿಸಿದ್ದಾರೆ. ಈ ಮೂಲಕ ಮಕ್ಕಳು ಹಿರಿಯರ ಆಶೀರ್ವಾದ ಪಡೆದಿದ್ದಾರೆ. ಮಕ್ಕಳು ಪ್ರತಿದಿನ ಅವರ ಪೋಷಕರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಪ್ರೋತ್ಸಾಹಿಸಲಾಗುತ್ತದೆ. ಇಂತಹ ಅಭ್ಯಾಸಗಳ ಅನುಪಸ್ಥಿತಿಯು ಮಕ್ಕಳು ಮಾದಕ ದ್ರವ್ಯ ಸೇವನೆ ಬಲಿಯಾಗಲು ಮತ್ತು ಅನೈತಿಕ ವರ್ತನೆಗೆ ಕಾರಣವಾಗುತ್ತದೆ” ಎಂದು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಚೀಮೇನಿಯ ವಿವೇಕಾನಂದ ಶಾಲೆಯ ಶಿಕ್ಷಕರು ಮತ್ತು ಪೋಷಕರ ಸಮಿತಿಯ ಅಧಿಕಾರಿ ರಾಜೀವನ್ ಮಕ್ಕಳು ಪಾದ ತೊಳೆದಿರುವುದನ್ನು ಸಮರ್ಥಿಸಿಕೊಂಡಿದ್ದು, “ಇದು ಪ್ರಾಚೀನ ಮತ್ತು ದೈವಿಕ ಸನಾತನ ಧರ್ಮದ ಭಾಗವಾಗಿದೆ. ಈ ಆಚರಣೆಗೆ ಬರುವ ವಿರೋಧಗಳನ್ನು ನಾವು ‘ಒಗ್ಗಟ್ಟಿನಿಂದ ಪ್ರತಿರೋಧಿಸುತ್ತೇವೆ’ ಎಂಬುವುದಾಗಿ ಹೇಳಿದ್ದಾರೆ” ಎಂದು ನ್ಯೂಸ್ ಮಿನಿಟ್ ತಿಳಿಸಿದೆ.

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...