Homeಕರ್ನಾಟಕವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆ: ಎಸ್‌ಪಿಗೆ ದೂರು ನೀಡಿದ ಪೋಷಕರು

ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆ: ಎಸ್‌ಪಿಗೆ ದೂರು ನೀಡಿದ ಪೋಷಕರು

- Advertisement -
- Advertisement -

ತಮ್ಮ ಧಾರ್ಮಿಕ ಆಚರಣೆಯಾದ ಹಿಜಾಬ್‌ ಅನ್ನು ಧರಿಸಿ ಕಾಲೇಜು ಪ್ರವೇಶಕ್ಕೆ ಅನುಮತಿಸುವಂತೆ ಕೋರಿ ಹೋರಾಟ ನಡೆಸುತ್ತಿರುವ ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರ ಪೋಷಕರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ವಿದ್ಯಾರ್ಥಿನಿಯರ ಪೋಷಕರು ತಮ್ಮ ಮಕ್ಕಳ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್‌ ಅವರಿಗೆ ದೂರು ಸಲ್ಲಿಸಿರುವ ಪೋಷಕರು, ಮೊಬೈಲ್ ಸಂಖ್ಯೆ ಸೇರಿದಂತೆ ಬಾಲಕಿಯರ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದ್ದಾರೆ. ಈ ವಿವರಗಳನ್ನು ಬಳಸಿಕೊಂಡು ದುಷ್ಕರ್ಮಿಗಳು ಬಾಲಕಿಯರಿಗೆ ಬೆದರಿಕೆ ಹಾಕಬಹುದು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ ವಿಶೇಷ ವರದಿ: ಬಹುತ್ವ ಸಂಸ್ಕೃತಿಯ ಭಾರತದಲ್ಲಿ ಮತೀಯ ರಾಜಕಾರಣ

ಬಾಲಕಿಯರ ಪೋಷಕರು ತಮಗೆ ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಹೇಳಿದ್ದಾರೆ. ಸೂಕ್ತ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕೇಳಲಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಹಿಜಾಬ್‌ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿಯ ಬಾಲಕಿಯ ಕಾಲೇಜಿನ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳನ್ನು ಕಾಲೇಜಿನ ಮೂಲಗಳು ಬಹಿರಂಗಪಡಿಸಿವೆ. ಹೀಗಾಗಿ ವಿದ್ಯಾರ್ಥಿನಿಯರು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ದೇಶದ ಖ್ಯಾತ ಸುದ್ದಿ ಮಾಧ್ಯಮ ‘ದಿ ಕ್ವಿಂಟ್’ ವರದಿ ಮಾಡಿತ್ತು.

“ಹಿಜಾಬ್‌ಗಾಗಿ ಹೋರಾಡುತ್ತಿರುವ ಅಲಿಯಾ ಅಸ್ಸಾದಿ ಫೆಬ್ರವರಿ 9ರ ಬುಧವಾರದಂದು ದಿನವಿಡೀ ನಿಂದನೀಯ ಫೋನ್ ಕರೆಗಳನ್ನು ಸ್ವೀಕರಿಸಿದ್ದಾರೆ. ಉಡುಪಿಯ ವಾಟ್ಸಾಪ್ ಗ್ರೂಪ್‌ಗಳಲ್ಲಿ ವಿದ್ಯಾರ್ಥಿನಿಯರ ಫೋನ್ ನಂಬರ್‌‌ಗಳು, ಪೋಷಕರ ಹೆಸರುಗಳು ಮತ್ತು ಮನೆಯ ವಿಳಾಸ ಸೇರಿದಂತೆ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಲಾಗಿದೆ” ಎಂದು ಕ್ವಿಂಟ್‌ ವರದಿ ಹೇಳಿತ್ತು.

ಇದನ್ನೂ ಓದಿ:  ಹಿಜಾಬ್‌ live Updates: ಅಧಿಕೃತ ಮಧ್ಯಂತರ ಆದೇಶ ಪ್ರಕಟಿಸಿದ ಕರ್ನಾಟಕ ಹೈಕೋರ್ಟ್

ಹಿಜಾಬ್ ಧರಿಸುವುದನ್ನು ಮುಂದುವರಿಸುವ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿನಿ ಹಜ್ರಾ ಶಿಫಾ, “ನನ್ನ ಹೆತ್ತವರಿಗೂ ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದಿದ್ದಾರೆ.

ಸೋರಿಕೆಯಾದ ಡೇಟಾದ ಬಗ್ಗೆ ಪ್ರತಿಕ್ರಿಯಿಸಲು ಕಾಲೇಜು ನಿರಾಕರಿಸಿದೆ. ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ಅವರನ್ನು ಸಂಪರ್ಕಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ವಾಟ್ಸ್‌ಆಪ್‌ ಮೂಲಕ ಪ್ರತಿಕ್ರಿಯೆಯನ್ನೂ ನಿರೀಕ್ಷಿಸಲಾಗಿದೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆಯನ್ನು ಪ್ರಾಂಶುಪಾಲರಾದ ರುದ್ರೇಗೌಡ ನೀಡಿಲ್ಲ. ಪ್ರತಿಕ್ರಿಯೆ ನೀಡಿದ್ದಲ್ಲಿ ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ಹಿಜಾಬ್‌: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...