Homeಕರ್ನಾಟಕವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆ: ಎಸ್‌ಪಿಗೆ ದೂರು ನೀಡಿದ ಪೋಷಕರು

ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆ: ಎಸ್‌ಪಿಗೆ ದೂರು ನೀಡಿದ ಪೋಷಕರು

- Advertisement -
- Advertisement -

ತಮ್ಮ ಧಾರ್ಮಿಕ ಆಚರಣೆಯಾದ ಹಿಜಾಬ್‌ ಅನ್ನು ಧರಿಸಿ ಕಾಲೇಜು ಪ್ರವೇಶಕ್ಕೆ ಅನುಮತಿಸುವಂತೆ ಕೋರಿ ಹೋರಾಟ ನಡೆಸುತ್ತಿರುವ ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರ ಪೋಷಕರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ವಿದ್ಯಾರ್ಥಿನಿಯರ ಪೋಷಕರು ತಮ್ಮ ಮಕ್ಕಳ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್‌ ಅವರಿಗೆ ದೂರು ಸಲ್ಲಿಸಿರುವ ಪೋಷಕರು, ಮೊಬೈಲ್ ಸಂಖ್ಯೆ ಸೇರಿದಂತೆ ಬಾಲಕಿಯರ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದ್ದಾರೆ. ಈ ವಿವರಗಳನ್ನು ಬಳಸಿಕೊಂಡು ದುಷ್ಕರ್ಮಿಗಳು ಬಾಲಕಿಯರಿಗೆ ಬೆದರಿಕೆ ಹಾಕಬಹುದು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ ವಿಶೇಷ ವರದಿ: ಬಹುತ್ವ ಸಂಸ್ಕೃತಿಯ ಭಾರತದಲ್ಲಿ ಮತೀಯ ರಾಜಕಾರಣ

ಬಾಲಕಿಯರ ಪೋಷಕರು ತಮಗೆ ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಹೇಳಿದ್ದಾರೆ. ಸೂಕ್ತ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕೇಳಲಾಗಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಹಿಜಾಬ್‌ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿಯ ಬಾಲಕಿಯ ಕಾಲೇಜಿನ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳನ್ನು ಕಾಲೇಜಿನ ಮೂಲಗಳು ಬಹಿರಂಗಪಡಿಸಿವೆ. ಹೀಗಾಗಿ ವಿದ್ಯಾರ್ಥಿನಿಯರು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ದೇಶದ ಖ್ಯಾತ ಸುದ್ದಿ ಮಾಧ್ಯಮ ‘ದಿ ಕ್ವಿಂಟ್’ ವರದಿ ಮಾಡಿತ್ತು.

“ಹಿಜಾಬ್‌ಗಾಗಿ ಹೋರಾಡುತ್ತಿರುವ ಅಲಿಯಾ ಅಸ್ಸಾದಿ ಫೆಬ್ರವರಿ 9ರ ಬುಧವಾರದಂದು ದಿನವಿಡೀ ನಿಂದನೀಯ ಫೋನ್ ಕರೆಗಳನ್ನು ಸ್ವೀಕರಿಸಿದ್ದಾರೆ. ಉಡುಪಿಯ ವಾಟ್ಸಾಪ್ ಗ್ರೂಪ್‌ಗಳಲ್ಲಿ ವಿದ್ಯಾರ್ಥಿನಿಯರ ಫೋನ್ ನಂಬರ್‌‌ಗಳು, ಪೋಷಕರ ಹೆಸರುಗಳು ಮತ್ತು ಮನೆಯ ವಿಳಾಸ ಸೇರಿದಂತೆ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಲಾಗಿದೆ” ಎಂದು ಕ್ವಿಂಟ್‌ ವರದಿ ಹೇಳಿತ್ತು.

ಇದನ್ನೂ ಓದಿ:  ಹಿಜಾಬ್‌ live Updates: ಅಧಿಕೃತ ಮಧ್ಯಂತರ ಆದೇಶ ಪ್ರಕಟಿಸಿದ ಕರ್ನಾಟಕ ಹೈಕೋರ್ಟ್

ಹಿಜಾಬ್ ಧರಿಸುವುದನ್ನು ಮುಂದುವರಿಸುವ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿನಿ ಹಜ್ರಾ ಶಿಫಾ, “ನನ್ನ ಹೆತ್ತವರಿಗೂ ಅಪರಿಚಿತ ನಂಬರ್‌‌ಗಳಿಂದ ಕರೆಗಳು ಬರುತ್ತಿವೆ. ಕರೆಗಳನ್ನು ಸ್ವೀಕರಿಸದಂತೆ ತಿಳಿಸಿದ್ದೇನೆ. ಗೌಪ್ಯ ವಿವರಗಳು ಸಾರ್ವಜನಿಕರಿಗೆ ಹೇಗೆ ತಲುಪಿದವು ಎಂಬುದನ್ನು ವಿವರಿಸಬೇಕೆಂದು ಕಾಲೇಜು ಆಡಳಿತವನ್ನು ಒತ್ತಾಯಿಸಿದ್ದೇವೆ” ಎಂದಿದ್ದಾರೆ.

ಸೋರಿಕೆಯಾದ ಡೇಟಾದ ಬಗ್ಗೆ ಪ್ರತಿಕ್ರಿಯಿಸಲು ಕಾಲೇಜು ನಿರಾಕರಿಸಿದೆ. ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ಅವರನ್ನು ಸಂಪರ್ಕಿಸಲು ‘ನಾನುಗೌರಿ.ಕಾಂ’ ಪ್ರಯತ್ನಿಸಿದೆ. ವಾಟ್ಸ್‌ಆಪ್‌ ಮೂಲಕ ಪ್ರತಿಕ್ರಿಯೆಯನ್ನೂ ನಿರೀಕ್ಷಿಸಲಾಗಿದೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆಯನ್ನು ಪ್ರಾಂಶುಪಾಲರಾದ ರುದ್ರೇಗೌಡ ನೀಡಿಲ್ಲ. ಪ್ರತಿಕ್ರಿಯೆ ನೀಡಿದ್ದಲ್ಲಿ ಅಪ್‌ಡೇಟ್ ಮಾಡಲಾಗುವುದು.

ಇದನ್ನೂ ಓದಿ: ಹಿಜಾಬ್‌: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...