Homeಚಳವಳಿವಿದ್ಯಾರ್ಥಿಗಳ ಈ ಹೋರಾಟಕ್ಕೆ ಎಲ್ಲರ ದನಿ ಬೇಕು

ವಿದ್ಯಾರ್ಥಿಗಳ ಈ ಹೋರಾಟಕ್ಕೆ ಎಲ್ಲರ ದನಿ ಬೇಕು

- Advertisement -
- Advertisement -

ಇತ್ತೀಚೆಗೆ ಬೆಂಗಳೂರಿನಲ್ಲಿ ಒಂದು ಬೃಹತ್ ಪ್ರತಿಭಟನೆ ನಡೆಯಿತು. ಬಹುಶಃ ಸಮ್ಮಿಶ್ರ ಸರ್ಕಾರದ ವಿರುದ್ಧ ನಡೆದ ಮೊದಲ ಜನಪರ ಪ್ರತಿಭಟನೆ ಇದು ಅನ್ನಿಸುತ್ತೆ. ಆದರೆ ಈ ಪ್ರತಿಭಟನೆ ನಡೆಯಲು ಕಾರಣವಾದದ್ದು, ಇವೆರಡೂ ಪಕ್ಷಗಳಲ್ಲ. ಬದಲಿಗೆ ಇವುಗಳ ಕಾಮನ್ ಎದುರಾಳಿಯಾದ ಬಿಜೆಪಿ ಸೃಷ್ಟಿಸಿಹೋದ ಶೈಕ್ಷಣಿಕ ನೀತಿ. ಅಂದಹಾಗೆ, ಆ ಪ್ರತಿಭಟನೆ ನಡೆಸುತ್ತಿರೋದು ಕೃಷಿ ವಿಜ್ಞಾನ ವಿದ್ಯಾರ್ಥಿಗಳು.
ನಮ್ಮ ನೆಲದ ಕೃಷಿಗೆ ಪೂರಕವಾದ ಕ್ಷೇತ್ರಗಳು ಈಗಾಗಲೇ ಖಾಸಗಿಯವರ ತೆಕ್ಕೆ ಸೇರಿವೆ. ಕೃಷಿ ಸಂಶೋಧನೆಯ ಹಲವು ವಿಭಾಗಗಳೂ ಪರೋಕ್ಷವಾಗಿ ಖಾಸಗಿಯವರ ನಿಯಂತ್ರಣದಲ್ಲಿವೆಯಾದರು ಕೃಷಿ ಶಿಕ್ಷಣವನ್ನು ಸಾರಾಸಗಟಾಗಿ ಖಾಸಗಿಯವರು ಆಕ್ರಮಿಸಿಕೊಂಡಿರಲಿಲ್ಲ. ಆದರೆ 2009ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮಾಡಿದ ಒಂದು ತಿದ್ದುಪಡಿಯಿಂದಾಗಿ ಇವತ್ತು ಕೃಷಿ ಶಿಕ್ಷಣ ಸಂಸ್ಥೆಗಳೂ ಖಾಸಗಿಯವರ ಪಾಲಾಗುವ ಅಪಾಯದಲ್ಲಿವೆ. ಇದರ ವಿರುದ್ಧವೇ ರಾಜ್ಯದ ಎಲ್ಲಾ ಕೃಷಿ ವಿದ್ಯಾರ್ಥಿಗಳು ಕಳೆದ ಹತ್ತು ದಿನಗಳಿಂದ ಹೋರಾಟ ಮಾಡುತ್ತಿರೋದು.
ರಾಜ್ಯದಲ್ಲಿ 1963ರ ಕೃಷಿ ವಿಶ್ವವಿದ್ಯಾಲಯಗಳ ಕಾಯ್ದೆಯ ಮೂಲಕ ಅಸ್ತಿತ್ವಕ್ಕೆ ಬಂದ ಬೆಂಗಳೂರು, ಧಾರವಾಡ, ರಾಯಚೂರು, ಶಿವಮೊಗ್ಗ, ಬಾಗಲಕೋಟೆ, ಬೀದರ್ ಕೃಷಿ ಮತ್ತು ಪಶುಸಂಗೋಪನೆಯ ವಿಶ್ವವಿದ್ಯಾಲಯಗಳು ಹಾಗೂ ವಿವಿಧ ಜಿಲ್ಲೆಗಳಲ್ಲಿರುವ ಅವುಗಳ ವಿಸ್ತರಣಾ ಕೇಂದ್ರಗಳು ರಾಜ್ಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿವೆ. ಲಕ್ಷಾಂತರ ರೈತರ, ಬಡವರ ಮಕ್ಕಳು ಇದರ ಉಪಯೋಗ ಪಡೆದಿದ್ದಾರೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ (ಐ.ಸಿ.ಎ.ಆರ್.) ಅಡಿಯಲ್ಲಿ ಕಾರ್ಯ ನಿರ್ವಹಿಸುವ ಇಂತಹ ಎಲ್ಲಾ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿಯೆ ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳು ಶಿಕ್ಷಣ ಮತ್ತು ಸಂಶೋಧನೆಗೆ ಹೆಸರುವಾಸಿಯಾಗಿವೆ.
ಆದರೆ ರಾಜ್ಯ ಸರ್ಕಾರವು 2009ರಲ್ಲಿ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತಂದು ಮೊದಲ ಬಾರಿಗೆ ಖಾಸಗಿ ಕೃಷಿ ಕಾಲೇಜುಗಳನ್ನು ಸ್ಥಾಪಿಸಲು ಅನುಮತಿ ನೀಡಿತು. ಇದರ ಪರಿಣಾಮವಾಗಿ ಸದ್ಯ ರಾಜ್ಯದಲ್ಲಿ ಹತ್ತಕ್ಕೂ ಹೆಚ್ಚು ಖಾಸಗಿ ಕೃಷಿ ಕಾಲೇಜುಗಳು ತಲೆ ಎತ್ತಿ ನಿಂತಿವೆ. ಲಾಭವನ್ನೇ ಉದ್ದೇಶ ಮಾಡಿಕೊಂಡಿರುವ ಈ ಖಾಸಗಿ ಕೃಷಿ ಕಾಲೇಜುಗಳು ಐ.ಸಿ.ಎ.ಆರ್.ನ ನಿಯಮಗಳನ್ನು ಪಾಲಿಸುತ್ತಿಲ್ಲ. ಐ.ಸಿ.ಎ.ಆರ್. ನಿಯಮದ ಪ್ರಕಾರ ಕೃಷಿ ಕಾಲೇಜುಗಳನ್ನು ಪ್ರಾರಂಭಿಸಲು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಕನಿಷ್ಠ 75 ಎಕರೆ ಭೂಮಿ ಇರಬೇಕು. ಆದರೆ ಯಾವ ಖಾಸಗಿ ಕೃಷಿ ಕಾಲೇಜುಗಳು ಇಷ್ಟು ಭೂಮಿಯನ್ನು ಹೊಂದಿಲ್ಲ ಮತ್ತು ನುರಿತ ಶಿಕ್ಷಕರಿಲ್ಲ, ಸಮರ್ಪಕ ಪ್ರಯೋಗಾಲಯಗಳಿಲ್ಲ, ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಗೆ ಮಿತಿ ಇಲ್ಲ, ಐ.ಸಿ.ಎ.ಆರ್.ಇಂದ ಮಾನ್ಯತೆ ಹೊಂದಿಲ್ಲ, ಅನಿಯಮಿತ ಶುಲ್ಕಗಳು, ಗುಣಮಟ್ಟವನ್ನು ಕಾಯ್ದುಕೊಂಡಿಲ್ಲ, ಮೂಲಭೂತ ಸೌಕರ್ಯಗಳಿಲ್ಲ….. ಸರ್ಕಾರಿ ಕೃಷಿ ವಿ.ವಿ.ಯ ವಿದ್ಯಾರ್ಥಿಗಳು ಸಿಇಟಿ ರ್ಯಾಂಕ್ ಆಧಾರದ ಮೇಲೆ ಪ್ರವೇಶವನ್ನು ಪಡೆದಿರುತ್ತಾರೆ. ಈ ಖಾಸಗಿ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಲು ಸಿಇಟಿಯ ಅಗತ್ಯವೂ ಇಲ್ಲ. ಅವರು ಕೇಳಿದಷ್ಟು ಡೊನೇಷನ್ ಕೊಟ್ಟರೆ ಸಾಕು.
ಈ ಖಾಸಗಿ ಕೃಷಿ ಕಾಲೇಜುಗಳು ಯಾವ ಪರಿ ಆವರಿಸಿಕೊಂಡಿವೆಯೆಂದರೆ ಅಜಮಾಸು ಐದು ಸರ್ಕಾರಿ ಕಾಲೇಜುಗಳಲ್ಲಿ ಇರಬೇಕಾದಷ್ಟು ವಿದ್ಯಾರ್ಥಿಗಳನ್ನ ದೊಡ್ಡಬಳ್ಳಾಪುರ ಬಳಿಯ ರೈಟೆಕ್ ಎಂಬ ಒಂದೇ ಒಂದು ಖಾಸಗಿ ಕಾಲೇಜು ಭರ್ತಿ ಮಾಡಿಕೊಂಡಿದೆ. ಐ.ಸಿ.ಎ.ಆರ್. ಮತ್ತು ಕೃಷಿ ವಿವಿಗಳ ಅಫಿಲಿಯೇಷನ್ ಪಡೆಯದೆ ನೀಡಲಾಗುತ್ತಿರುವ ಇವರ ಪದವಿಗಳನ್ನು ಕೃಷಿ ಇಲಾಖೆಯು ಯಾವ ಹುದ್ದೆಗಳಿಗೂ ಪರಿಗಣಿಸುವಂತಿಲ್ಲ. ಈ ರೀತಿ ಮಾನ್ಯತೆ ಹೊಂದಿರದ ಪದವಿ ಪತ್ರಗಳ ವಿರುದ್ಧ ಅಲ್ಲಿನ ವಿದ್ಯಾರ್ಥಿಗಳು ಮತ್ತು ಪೋಷಕರು ದೂರು ದಾಖಲಿಸಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಖಾಸಗಿಯವರು ನಡೆಸುತ್ತಿರುವ ಚೆಲ್ಲಾಟವಲ್ಲದೇ ಮತ್ತಿನ್ನೇನು.
ಪೋಷಕರ ಇಂತಹ ದೂರುಗಳಿಗೆ ಬೆದರಿಯೇ ಇವತ್ತು ಖಾಸಗಿ ಕಾಲೇಜುಗಳು ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ ಅಫಿಲಿಯೇಷನ್ ನೀಡುವಂತೆ ಒತ್ತಡ ತರುತ್ತಿವೆ. ಆದರೆ ಈ ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. 2016ರಲ್ಲಿ ಜಿಕೆವಿಕೆಯಲ್ಲಿ ನಡೆದ ಕೃಷಿ ವಿದ್ಯಾರ್ಥಿಗಳ ಹೋರಾಟದ ಸ್ಥಳಕ್ಕೆ ಬಂದ ಹೆಚ್.ಡಿ.ಕುಮಾರಸ್ವಾಮಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಖಾಸಗಿ ಕೃಷಿ ಕಾಲೇಜುಗಳನ್ನು ನಿಷೇಧಿಸುವಂತೆ ಸರ್ಕಾರದ ಮೇಲೆ ಒತ್ತಡ ತರುತ್ತೇನೆ ಎಂದು ಹೇಳಿದ್ದರು. ಅಂದಿನ ಕೃಷಿ ಮಂತ್ರಿಗಳಾದ ಕೃಷ್ಣ ಭೈರೇಗೌಡರು ಸಹ ಖಾಸಗಿ ಕೃಷಿ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಮಿತಿ ರಚಿಸಿದ್ದರು. ಆದರೆ ಆ ಸಮಿತಿ ಕಾರ್ಯನಿರ್ವಹಿಸಲೇ ಇಲ್ಲ. ಯಾವ ಕ್ರಮಗಳನ್ನೂ ಕೈಗೊಳ್ಳಲಿಲ್ಲ. ಈ ನೀತಿಯನ್ನು ಜಾರಿಗೆ ತಂದಿದ್ದು ಬಿಜೆಪಿ ಸರ್ಕಾರವಾದರೂ, ಅದನ್ನು ಪಕ್ಕಕ್ಕೆ ಸರಿಸುವಲ್ಲಿ ವಿಫಲವಾಗುತ್ತಿರುವ ಉಳಿದ ಪಕ್ಷಗಳ ನೀತಿಗಳ ಮೇಲೂ ಸಂದೇಹ ಬಾರದಿರದು.
ಖಾಸಗಿ ಕಾಲೇಜುಗಳು ಕೃಷಿ ವಿಶ್ವವಿದ್ಯಾಲಯದ ಅಫಿಲಿಯೇಷನ್ ಕೇಳುತ್ತಿರುವುದರಿಂದ ಈಗ ಕೃಷಿ ವಿದ್ಯಾರ್ಥಿಗಳು ಕಳೆದ ಹತ್ತು ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ರಾಜ್ಯದಲ್ಲಿ ಹೋರಾಟ ಶುರು ಮಾಡಿರೋದು ಇಂತಹ ಖಾಸಗಿ ಕಾಲೇಜುಗಳ ಅಫಿಲಿಯೇಷನ್ ಒತ್ತಡದ ವಿರುದ್ಧ. ಜೂನ್ 19ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ವಿದ್ಯಾರ್ಥಿಗಳ ಬಳಿ ಬಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಾಂತ್ವನದ ಮಾತಾಡಿ ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿದ್ಯಾರ್ಥಿ ಮುಖಂಡರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಾದ 2009ರ ಕೃಷಿ ಕಾಲೇಜು ಕಾಯ್ದೆ ತಿದ್ದುಪಡಿಯನ್ನು ರದ್ದು ಮಾಡಬೇಕು, ಖಾಸಗಿ ಕಾಲೇಜುಗಳಿಗೆ ಕೃಷಿ ವಿಶ್ವವಿದ್ಯಾಲಯದ ಅಪಿಲಿಯೇಷನ್ ನೀಡಬಾರದು, ರೈಟೆಕ್ ಖಾಸಗಿ ಕಾಲೇಜನ್ನು ಮುಚ್ಚಬೇಕು ಎಂಬ ಬೇಡಿಕೆಗಳೇ ಪ್ರತಿಧ್ವನಿಸಿದವು. ಇದನ್ನು ಚರ್ಚಿಸಲು ಅಧಿವೇಶನ ಶುರುವಾಗುವವರೆಗೆ ಕಾಯಬೇಕಾಗುತ್ತೆ ಅಂತ ಸರ್ಕಾರ ನೆಪ ಹೇಳಿ ನುಣುಚಿಕೊಳ್ಳೋದಕ್ಕೆ ಯತ್ನಿಸಿತ್ತು. ಜಗ್ಗದ ವಿದ್ಯಾರ್ಥಿಗಳು ಈಗ ಹೋರಾಟ ಮುಂದುವರೆಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ನಾಡಿನ ರೈತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಕರ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿ ನಿಂತಿದ್ದಾರೆ. ಸದ್ಯದಲ್ಲೇ ಮಂಡ್ಯದಲ್ಲಿ ರೈತಸಂಘ, ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸೇರಿದಂತೆ ಹಲವರು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತು ಕಾರ್ಯಕ್ರಮ ರೂಪಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಒಟ್ಟಿನಲ್ಲಿ ಇವತ್ತಿನ ವಿದ್ಯಾರ್ಥಿ ಸಮೂಹಕ್ಕೆ ಸಾಮಾಜಿಕ ಜವಾಬ್ಧಾರಿ ಇಲ್ಲ ಎಂಬ ಮೂದಲಿಕೆಯನ್ನೂ ಈ ಹೋರಾಟ ಹುಸಿಗೊಳಿಸಿದೆ. ಇನ್ನೇನಿದ್ದರು, ಹೊಸ ಸರ್ಕಾರ ಶಿಕ್ಷಣದ ಖಾಸಗಿಯವರ ಲಾಬಿಗೆ ಮಣಿಯದೆ ತನ್ನ ದಿಟ್ಟತೆಯನ್ನು ತೋರಬೇಕಿದೆ.
ಅವರಿಗಿಂತ ಇವರು ಭಿನ್ನವೇ?
ಹೌದು, ಬಿಜೆಪಿ ಪಕ್ಷವು ಖಾಸಗೀಕರಣದ ಪರ. ಹೆಚ್ಚೆಚ್ಚು ಕಾರ್ಪೊರೇಟ್ ಸಂಸ್ಥೆಗಳ ಕೈಗೆ ದೇಶವನ್ನೊಪ್ಪಿಸುವುದು ಪ್ರಧಾನಿ ಮೋದಿಯವರ ಸಿದ್ಧಾಂತದ ಭಾಗವೇ ಆಗಿದೆ. ಮೋದಿಯವರು ದೇಶಪ್ರೇಮದ ಮಾತಾಡುತ್ತಲೇ ಇಡೀ ದೇಶವನ್ನು ಕಾರ್ಪೊರೇಟ್ ಸಂಸ್ಥೆಗಳ ಪಾಲು ಮಾಡುತ್ತಿರುವುದನ್ನು ಉಳಿದ ಪಕ್ಷಗಳು ವಿರೋಧಿಸುವ ಮಾತನಾಡುತ್ತಿವೆ. ಆದರೆ, ಅದನ್ನು ಸಾಬೀತು ಪಡಿಸಲು ಇದೊಂದು ಅವಕಾಶ. ಆ ಮೂಲಕ ತಮ್ಮದೇ ಹಿಂದಿನ ತಪ್ಪುಗಳನ್ನು ತಿದ್ದಿಕೊಳ್ಳಲೂ ಆಗುತ್ತದೆ. ಏಕೆಂದರೆ, ಖಾಸಗಿ ಸಂಸ್ಥೆಗಳಿಗೆ ಅವಕಾಶ ಮಾಡಿಕೊಡುವ ಕಾನೂನು ತಿದ್ದುಪಡಿಯ ಪ್ರಸ್ತಾಪ ಮೊದಲು ಹೊರಟಿದ್ದೇ ಕುಮಾರಸ್ವಾಮಿಯವರು ಮೊದಲ ಸಾರಿ ಮುಖ್ಯಮಂತ್ರಿಯಾಗಿದ್ದಾಗ. 2007ರಲ್ಲಿ ಅವರ ಕ್ಯಾಬಿನೆಟ್ಟೇ ಇದನ್ನು ಆರಂಭಿಸಿದ್ದು. ಜಾರಿ ಮಾಡಿದವರು ಬಿಜೆಪಿಯವರು, ಮುಂದುವರೆಸಿಕೊಂಡು ಹೋದವರು ಕಾಂಗ್ರೆಸ್ಸಿನವರು.
ಈಗ ಸಮ್ಮಿಶ್ರ ಸರ್ಕಾರವು ವಿದ್ಯಾರ್ಥಿಗಳ ಹೋರಾಟದ ಪರ ನಿಂತರೆ ಮಾತ್ರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೋದಿಯವರ ಮೋಸದ ನೀತಿಯ ವಿರುದ್ಧ ನಿಜವಾಗಲೂ ಇದ್ದಾರೆ ಎಂದು ನಂಬಬಹುದು.

– ಸಂಜಯ್,
ಕರ್ನಾಟಕ ವಿದ್ಯಾರ್ಥಿ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...