Homeಚಳವಳಿವಿದ್ಯಾರ್ಥಿಗಳ ಈ ಹೋರಾಟಕ್ಕೆ ಎಲ್ಲರ ದನಿ ಬೇಕು

ವಿದ್ಯಾರ್ಥಿಗಳ ಈ ಹೋರಾಟಕ್ಕೆ ಎಲ್ಲರ ದನಿ ಬೇಕು

- Advertisement -
- Advertisement -

ಇತ್ತೀಚೆಗೆ ಬೆಂಗಳೂರಿನಲ್ಲಿ ಒಂದು ಬೃಹತ್ ಪ್ರತಿಭಟನೆ ನಡೆಯಿತು. ಬಹುಶಃ ಸಮ್ಮಿಶ್ರ ಸರ್ಕಾರದ ವಿರುದ್ಧ ನಡೆದ ಮೊದಲ ಜನಪರ ಪ್ರತಿಭಟನೆ ಇದು ಅನ್ನಿಸುತ್ತೆ. ಆದರೆ ಈ ಪ್ರತಿಭಟನೆ ನಡೆಯಲು ಕಾರಣವಾದದ್ದು, ಇವೆರಡೂ ಪಕ್ಷಗಳಲ್ಲ. ಬದಲಿಗೆ ಇವುಗಳ ಕಾಮನ್ ಎದುರಾಳಿಯಾದ ಬಿಜೆಪಿ ಸೃಷ್ಟಿಸಿಹೋದ ಶೈಕ್ಷಣಿಕ ನೀತಿ. ಅಂದಹಾಗೆ, ಆ ಪ್ರತಿಭಟನೆ ನಡೆಸುತ್ತಿರೋದು ಕೃಷಿ ವಿಜ್ಞಾನ ವಿದ್ಯಾರ್ಥಿಗಳು.
ನಮ್ಮ ನೆಲದ ಕೃಷಿಗೆ ಪೂರಕವಾದ ಕ್ಷೇತ್ರಗಳು ಈಗಾಗಲೇ ಖಾಸಗಿಯವರ ತೆಕ್ಕೆ ಸೇರಿವೆ. ಕೃಷಿ ಸಂಶೋಧನೆಯ ಹಲವು ವಿಭಾಗಗಳೂ ಪರೋಕ್ಷವಾಗಿ ಖಾಸಗಿಯವರ ನಿಯಂತ್ರಣದಲ್ಲಿವೆಯಾದರು ಕೃಷಿ ಶಿಕ್ಷಣವನ್ನು ಸಾರಾಸಗಟಾಗಿ ಖಾಸಗಿಯವರು ಆಕ್ರಮಿಸಿಕೊಂಡಿರಲಿಲ್ಲ. ಆದರೆ 2009ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮಾಡಿದ ಒಂದು ತಿದ್ದುಪಡಿಯಿಂದಾಗಿ ಇವತ್ತು ಕೃಷಿ ಶಿಕ್ಷಣ ಸಂಸ್ಥೆಗಳೂ ಖಾಸಗಿಯವರ ಪಾಲಾಗುವ ಅಪಾಯದಲ್ಲಿವೆ. ಇದರ ವಿರುದ್ಧವೇ ರಾಜ್ಯದ ಎಲ್ಲಾ ಕೃಷಿ ವಿದ್ಯಾರ್ಥಿಗಳು ಕಳೆದ ಹತ್ತು ದಿನಗಳಿಂದ ಹೋರಾಟ ಮಾಡುತ್ತಿರೋದು.
ರಾಜ್ಯದಲ್ಲಿ 1963ರ ಕೃಷಿ ವಿಶ್ವವಿದ್ಯಾಲಯಗಳ ಕಾಯ್ದೆಯ ಮೂಲಕ ಅಸ್ತಿತ್ವಕ್ಕೆ ಬಂದ ಬೆಂಗಳೂರು, ಧಾರವಾಡ, ರಾಯಚೂರು, ಶಿವಮೊಗ್ಗ, ಬಾಗಲಕೋಟೆ, ಬೀದರ್ ಕೃಷಿ ಮತ್ತು ಪಶುಸಂಗೋಪನೆಯ ವಿಶ್ವವಿದ್ಯಾಲಯಗಳು ಹಾಗೂ ವಿವಿಧ ಜಿಲ್ಲೆಗಳಲ್ಲಿರುವ ಅವುಗಳ ವಿಸ್ತರಣಾ ಕೇಂದ್ರಗಳು ರಾಜ್ಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿವೆ. ಲಕ್ಷಾಂತರ ರೈತರ, ಬಡವರ ಮಕ್ಕಳು ಇದರ ಉಪಯೋಗ ಪಡೆದಿದ್ದಾರೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ (ಐ.ಸಿ.ಎ.ಆರ್.) ಅಡಿಯಲ್ಲಿ ಕಾರ್ಯ ನಿರ್ವಹಿಸುವ ಇಂತಹ ಎಲ್ಲಾ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿಯೆ ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳು ಶಿಕ್ಷಣ ಮತ್ತು ಸಂಶೋಧನೆಗೆ ಹೆಸರುವಾಸಿಯಾಗಿವೆ.
ಆದರೆ ರಾಜ್ಯ ಸರ್ಕಾರವು 2009ರಲ್ಲಿ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತಂದು ಮೊದಲ ಬಾರಿಗೆ ಖಾಸಗಿ ಕೃಷಿ ಕಾಲೇಜುಗಳನ್ನು ಸ್ಥಾಪಿಸಲು ಅನುಮತಿ ನೀಡಿತು. ಇದರ ಪರಿಣಾಮವಾಗಿ ಸದ್ಯ ರಾಜ್ಯದಲ್ಲಿ ಹತ್ತಕ್ಕೂ ಹೆಚ್ಚು ಖಾಸಗಿ ಕೃಷಿ ಕಾಲೇಜುಗಳು ತಲೆ ಎತ್ತಿ ನಿಂತಿವೆ. ಲಾಭವನ್ನೇ ಉದ್ದೇಶ ಮಾಡಿಕೊಂಡಿರುವ ಈ ಖಾಸಗಿ ಕೃಷಿ ಕಾಲೇಜುಗಳು ಐ.ಸಿ.ಎ.ಆರ್.ನ ನಿಯಮಗಳನ್ನು ಪಾಲಿಸುತ್ತಿಲ್ಲ. ಐ.ಸಿ.ಎ.ಆರ್. ನಿಯಮದ ಪ್ರಕಾರ ಕೃಷಿ ಕಾಲೇಜುಗಳನ್ನು ಪ್ರಾರಂಭಿಸಲು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಕನಿಷ್ಠ 75 ಎಕರೆ ಭೂಮಿ ಇರಬೇಕು. ಆದರೆ ಯಾವ ಖಾಸಗಿ ಕೃಷಿ ಕಾಲೇಜುಗಳು ಇಷ್ಟು ಭೂಮಿಯನ್ನು ಹೊಂದಿಲ್ಲ ಮತ್ತು ನುರಿತ ಶಿಕ್ಷಕರಿಲ್ಲ, ಸಮರ್ಪಕ ಪ್ರಯೋಗಾಲಯಗಳಿಲ್ಲ, ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಗೆ ಮಿತಿ ಇಲ್ಲ, ಐ.ಸಿ.ಎ.ಆರ್.ಇಂದ ಮಾನ್ಯತೆ ಹೊಂದಿಲ್ಲ, ಅನಿಯಮಿತ ಶುಲ್ಕಗಳು, ಗುಣಮಟ್ಟವನ್ನು ಕಾಯ್ದುಕೊಂಡಿಲ್ಲ, ಮೂಲಭೂತ ಸೌಕರ್ಯಗಳಿಲ್ಲ….. ಸರ್ಕಾರಿ ಕೃಷಿ ವಿ.ವಿ.ಯ ವಿದ್ಯಾರ್ಥಿಗಳು ಸಿಇಟಿ ರ್ಯಾಂಕ್ ಆಧಾರದ ಮೇಲೆ ಪ್ರವೇಶವನ್ನು ಪಡೆದಿರುತ್ತಾರೆ. ಈ ಖಾಸಗಿ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಲು ಸಿಇಟಿಯ ಅಗತ್ಯವೂ ಇಲ್ಲ. ಅವರು ಕೇಳಿದಷ್ಟು ಡೊನೇಷನ್ ಕೊಟ್ಟರೆ ಸಾಕು.
ಈ ಖಾಸಗಿ ಕೃಷಿ ಕಾಲೇಜುಗಳು ಯಾವ ಪರಿ ಆವರಿಸಿಕೊಂಡಿವೆಯೆಂದರೆ ಅಜಮಾಸು ಐದು ಸರ್ಕಾರಿ ಕಾಲೇಜುಗಳಲ್ಲಿ ಇರಬೇಕಾದಷ್ಟು ವಿದ್ಯಾರ್ಥಿಗಳನ್ನ ದೊಡ್ಡಬಳ್ಳಾಪುರ ಬಳಿಯ ರೈಟೆಕ್ ಎಂಬ ಒಂದೇ ಒಂದು ಖಾಸಗಿ ಕಾಲೇಜು ಭರ್ತಿ ಮಾಡಿಕೊಂಡಿದೆ. ಐ.ಸಿ.ಎ.ಆರ್. ಮತ್ತು ಕೃಷಿ ವಿವಿಗಳ ಅಫಿಲಿಯೇಷನ್ ಪಡೆಯದೆ ನೀಡಲಾಗುತ್ತಿರುವ ಇವರ ಪದವಿಗಳನ್ನು ಕೃಷಿ ಇಲಾಖೆಯು ಯಾವ ಹುದ್ದೆಗಳಿಗೂ ಪರಿಗಣಿಸುವಂತಿಲ್ಲ. ಈ ರೀತಿ ಮಾನ್ಯತೆ ಹೊಂದಿರದ ಪದವಿ ಪತ್ರಗಳ ವಿರುದ್ಧ ಅಲ್ಲಿನ ವಿದ್ಯಾರ್ಥಿಗಳು ಮತ್ತು ಪೋಷಕರು ದೂರು ದಾಖಲಿಸಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಖಾಸಗಿಯವರು ನಡೆಸುತ್ತಿರುವ ಚೆಲ್ಲಾಟವಲ್ಲದೇ ಮತ್ತಿನ್ನೇನು.
ಪೋಷಕರ ಇಂತಹ ದೂರುಗಳಿಗೆ ಬೆದರಿಯೇ ಇವತ್ತು ಖಾಸಗಿ ಕಾಲೇಜುಗಳು ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ ಅಫಿಲಿಯೇಷನ್ ನೀಡುವಂತೆ ಒತ್ತಡ ತರುತ್ತಿವೆ. ಆದರೆ ಈ ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. 2016ರಲ್ಲಿ ಜಿಕೆವಿಕೆಯಲ್ಲಿ ನಡೆದ ಕೃಷಿ ವಿದ್ಯಾರ್ಥಿಗಳ ಹೋರಾಟದ ಸ್ಥಳಕ್ಕೆ ಬಂದ ಹೆಚ್.ಡಿ.ಕುಮಾರಸ್ವಾಮಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಖಾಸಗಿ ಕೃಷಿ ಕಾಲೇಜುಗಳನ್ನು ನಿಷೇಧಿಸುವಂತೆ ಸರ್ಕಾರದ ಮೇಲೆ ಒತ್ತಡ ತರುತ್ತೇನೆ ಎಂದು ಹೇಳಿದ್ದರು. ಅಂದಿನ ಕೃಷಿ ಮಂತ್ರಿಗಳಾದ ಕೃಷ್ಣ ಭೈರೇಗೌಡರು ಸಹ ಖಾಸಗಿ ಕೃಷಿ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಮಿತಿ ರಚಿಸಿದ್ದರು. ಆದರೆ ಆ ಸಮಿತಿ ಕಾರ್ಯನಿರ್ವಹಿಸಲೇ ಇಲ್ಲ. ಯಾವ ಕ್ರಮಗಳನ್ನೂ ಕೈಗೊಳ್ಳಲಿಲ್ಲ. ಈ ನೀತಿಯನ್ನು ಜಾರಿಗೆ ತಂದಿದ್ದು ಬಿಜೆಪಿ ಸರ್ಕಾರವಾದರೂ, ಅದನ್ನು ಪಕ್ಕಕ್ಕೆ ಸರಿಸುವಲ್ಲಿ ವಿಫಲವಾಗುತ್ತಿರುವ ಉಳಿದ ಪಕ್ಷಗಳ ನೀತಿಗಳ ಮೇಲೂ ಸಂದೇಹ ಬಾರದಿರದು.
ಖಾಸಗಿ ಕಾಲೇಜುಗಳು ಕೃಷಿ ವಿಶ್ವವಿದ್ಯಾಲಯದ ಅಫಿಲಿಯೇಷನ್ ಕೇಳುತ್ತಿರುವುದರಿಂದ ಈಗ ಕೃಷಿ ವಿದ್ಯಾರ್ಥಿಗಳು ಕಳೆದ ಹತ್ತು ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ರಾಜ್ಯದಲ್ಲಿ ಹೋರಾಟ ಶುರು ಮಾಡಿರೋದು ಇಂತಹ ಖಾಸಗಿ ಕಾಲೇಜುಗಳ ಅಫಿಲಿಯೇಷನ್ ಒತ್ತಡದ ವಿರುದ್ಧ. ಜೂನ್ 19ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ವಿದ್ಯಾರ್ಥಿಗಳ ಬಳಿ ಬಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಾಂತ್ವನದ ಮಾತಾಡಿ ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿದ್ಯಾರ್ಥಿ ಮುಖಂಡರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಾದ 2009ರ ಕೃಷಿ ಕಾಲೇಜು ಕಾಯ್ದೆ ತಿದ್ದುಪಡಿಯನ್ನು ರದ್ದು ಮಾಡಬೇಕು, ಖಾಸಗಿ ಕಾಲೇಜುಗಳಿಗೆ ಕೃಷಿ ವಿಶ್ವವಿದ್ಯಾಲಯದ ಅಪಿಲಿಯೇಷನ್ ನೀಡಬಾರದು, ರೈಟೆಕ್ ಖಾಸಗಿ ಕಾಲೇಜನ್ನು ಮುಚ್ಚಬೇಕು ಎಂಬ ಬೇಡಿಕೆಗಳೇ ಪ್ರತಿಧ್ವನಿಸಿದವು. ಇದನ್ನು ಚರ್ಚಿಸಲು ಅಧಿವೇಶನ ಶುರುವಾಗುವವರೆಗೆ ಕಾಯಬೇಕಾಗುತ್ತೆ ಅಂತ ಸರ್ಕಾರ ನೆಪ ಹೇಳಿ ನುಣುಚಿಕೊಳ್ಳೋದಕ್ಕೆ ಯತ್ನಿಸಿತ್ತು. ಜಗ್ಗದ ವಿದ್ಯಾರ್ಥಿಗಳು ಈಗ ಹೋರಾಟ ಮುಂದುವರೆಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ನಾಡಿನ ರೈತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಕರ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿ ನಿಂತಿದ್ದಾರೆ. ಸದ್ಯದಲ್ಲೇ ಮಂಡ್ಯದಲ್ಲಿ ರೈತಸಂಘ, ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸೇರಿದಂತೆ ಹಲವರು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತು ಕಾರ್ಯಕ್ರಮ ರೂಪಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಒಟ್ಟಿನಲ್ಲಿ ಇವತ್ತಿನ ವಿದ್ಯಾರ್ಥಿ ಸಮೂಹಕ್ಕೆ ಸಾಮಾಜಿಕ ಜವಾಬ್ಧಾರಿ ಇಲ್ಲ ಎಂಬ ಮೂದಲಿಕೆಯನ್ನೂ ಈ ಹೋರಾಟ ಹುಸಿಗೊಳಿಸಿದೆ. ಇನ್ನೇನಿದ್ದರು, ಹೊಸ ಸರ್ಕಾರ ಶಿಕ್ಷಣದ ಖಾಸಗಿಯವರ ಲಾಬಿಗೆ ಮಣಿಯದೆ ತನ್ನ ದಿಟ್ಟತೆಯನ್ನು ತೋರಬೇಕಿದೆ.
ಅವರಿಗಿಂತ ಇವರು ಭಿನ್ನವೇ?
ಹೌದು, ಬಿಜೆಪಿ ಪಕ್ಷವು ಖಾಸಗೀಕರಣದ ಪರ. ಹೆಚ್ಚೆಚ್ಚು ಕಾರ್ಪೊರೇಟ್ ಸಂಸ್ಥೆಗಳ ಕೈಗೆ ದೇಶವನ್ನೊಪ್ಪಿಸುವುದು ಪ್ರಧಾನಿ ಮೋದಿಯವರ ಸಿದ್ಧಾಂತದ ಭಾಗವೇ ಆಗಿದೆ. ಮೋದಿಯವರು ದೇಶಪ್ರೇಮದ ಮಾತಾಡುತ್ತಲೇ ಇಡೀ ದೇಶವನ್ನು ಕಾರ್ಪೊರೇಟ್ ಸಂಸ್ಥೆಗಳ ಪಾಲು ಮಾಡುತ್ತಿರುವುದನ್ನು ಉಳಿದ ಪಕ್ಷಗಳು ವಿರೋಧಿಸುವ ಮಾತನಾಡುತ್ತಿವೆ. ಆದರೆ, ಅದನ್ನು ಸಾಬೀತು ಪಡಿಸಲು ಇದೊಂದು ಅವಕಾಶ. ಆ ಮೂಲಕ ತಮ್ಮದೇ ಹಿಂದಿನ ತಪ್ಪುಗಳನ್ನು ತಿದ್ದಿಕೊಳ್ಳಲೂ ಆಗುತ್ತದೆ. ಏಕೆಂದರೆ, ಖಾಸಗಿ ಸಂಸ್ಥೆಗಳಿಗೆ ಅವಕಾಶ ಮಾಡಿಕೊಡುವ ಕಾನೂನು ತಿದ್ದುಪಡಿಯ ಪ್ರಸ್ತಾಪ ಮೊದಲು ಹೊರಟಿದ್ದೇ ಕುಮಾರಸ್ವಾಮಿಯವರು ಮೊದಲ ಸಾರಿ ಮುಖ್ಯಮಂತ್ರಿಯಾಗಿದ್ದಾಗ. 2007ರಲ್ಲಿ ಅವರ ಕ್ಯಾಬಿನೆಟ್ಟೇ ಇದನ್ನು ಆರಂಭಿಸಿದ್ದು. ಜಾರಿ ಮಾಡಿದವರು ಬಿಜೆಪಿಯವರು, ಮುಂದುವರೆಸಿಕೊಂಡು ಹೋದವರು ಕಾಂಗ್ರೆಸ್ಸಿನವರು.
ಈಗ ಸಮ್ಮಿಶ್ರ ಸರ್ಕಾರವು ವಿದ್ಯಾರ್ಥಿಗಳ ಹೋರಾಟದ ಪರ ನಿಂತರೆ ಮಾತ್ರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೋದಿಯವರ ಮೋಸದ ನೀತಿಯ ವಿರುದ್ಧ ನಿಜವಾಗಲೂ ಇದ್ದಾರೆ ಎಂದು ನಂಬಬಹುದು.

– ಸಂಜಯ್,
ಕರ್ನಾಟಕ ವಿದ್ಯಾರ್ಥಿ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...