Homeಚಳವಳಿವಿದ್ಯಾರ್ಥಿಗಳ ಈ ಹೋರಾಟಕ್ಕೆ ಎಲ್ಲರ ದನಿ ಬೇಕು

ವಿದ್ಯಾರ್ಥಿಗಳ ಈ ಹೋರಾಟಕ್ಕೆ ಎಲ್ಲರ ದನಿ ಬೇಕು

- Advertisement -
- Advertisement -

ಇತ್ತೀಚೆಗೆ ಬೆಂಗಳೂರಿನಲ್ಲಿ ಒಂದು ಬೃಹತ್ ಪ್ರತಿಭಟನೆ ನಡೆಯಿತು. ಬಹುಶಃ ಸಮ್ಮಿಶ್ರ ಸರ್ಕಾರದ ವಿರುದ್ಧ ನಡೆದ ಮೊದಲ ಜನಪರ ಪ್ರತಿಭಟನೆ ಇದು ಅನ್ನಿಸುತ್ತೆ. ಆದರೆ ಈ ಪ್ರತಿಭಟನೆ ನಡೆಯಲು ಕಾರಣವಾದದ್ದು, ಇವೆರಡೂ ಪಕ್ಷಗಳಲ್ಲ. ಬದಲಿಗೆ ಇವುಗಳ ಕಾಮನ್ ಎದುರಾಳಿಯಾದ ಬಿಜೆಪಿ ಸೃಷ್ಟಿಸಿಹೋದ ಶೈಕ್ಷಣಿಕ ನೀತಿ. ಅಂದಹಾಗೆ, ಆ ಪ್ರತಿಭಟನೆ ನಡೆಸುತ್ತಿರೋದು ಕೃಷಿ ವಿಜ್ಞಾನ ವಿದ್ಯಾರ್ಥಿಗಳು.
ನಮ್ಮ ನೆಲದ ಕೃಷಿಗೆ ಪೂರಕವಾದ ಕ್ಷೇತ್ರಗಳು ಈಗಾಗಲೇ ಖಾಸಗಿಯವರ ತೆಕ್ಕೆ ಸೇರಿವೆ. ಕೃಷಿ ಸಂಶೋಧನೆಯ ಹಲವು ವಿಭಾಗಗಳೂ ಪರೋಕ್ಷವಾಗಿ ಖಾಸಗಿಯವರ ನಿಯಂತ್ರಣದಲ್ಲಿವೆಯಾದರು ಕೃಷಿ ಶಿಕ್ಷಣವನ್ನು ಸಾರಾಸಗಟಾಗಿ ಖಾಸಗಿಯವರು ಆಕ್ರಮಿಸಿಕೊಂಡಿರಲಿಲ್ಲ. ಆದರೆ 2009ರಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮಾಡಿದ ಒಂದು ತಿದ್ದುಪಡಿಯಿಂದಾಗಿ ಇವತ್ತು ಕೃಷಿ ಶಿಕ್ಷಣ ಸಂಸ್ಥೆಗಳೂ ಖಾಸಗಿಯವರ ಪಾಲಾಗುವ ಅಪಾಯದಲ್ಲಿವೆ. ಇದರ ವಿರುದ್ಧವೇ ರಾಜ್ಯದ ಎಲ್ಲಾ ಕೃಷಿ ವಿದ್ಯಾರ್ಥಿಗಳು ಕಳೆದ ಹತ್ತು ದಿನಗಳಿಂದ ಹೋರಾಟ ಮಾಡುತ್ತಿರೋದು.
ರಾಜ್ಯದಲ್ಲಿ 1963ರ ಕೃಷಿ ವಿಶ್ವವಿದ್ಯಾಲಯಗಳ ಕಾಯ್ದೆಯ ಮೂಲಕ ಅಸ್ತಿತ್ವಕ್ಕೆ ಬಂದ ಬೆಂಗಳೂರು, ಧಾರವಾಡ, ರಾಯಚೂರು, ಶಿವಮೊಗ್ಗ, ಬಾಗಲಕೋಟೆ, ಬೀದರ್ ಕೃಷಿ ಮತ್ತು ಪಶುಸಂಗೋಪನೆಯ ವಿಶ್ವವಿದ್ಯಾಲಯಗಳು ಹಾಗೂ ವಿವಿಧ ಜಿಲ್ಲೆಗಳಲ್ಲಿರುವ ಅವುಗಳ ವಿಸ್ತರಣಾ ಕೇಂದ್ರಗಳು ರಾಜ್ಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿವೆ. ಲಕ್ಷಾಂತರ ರೈತರ, ಬಡವರ ಮಕ್ಕಳು ಇದರ ಉಪಯೋಗ ಪಡೆದಿದ್ದಾರೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ (ಐ.ಸಿ.ಎ.ಆರ್.) ಅಡಿಯಲ್ಲಿ ಕಾರ್ಯ ನಿರ್ವಹಿಸುವ ಇಂತಹ ಎಲ್ಲಾ ಸಂಸ್ಥೆಗಳು/ವಿಶ್ವವಿದ್ಯಾಲಯಗಳಲ್ಲಿಯೆ ಕರ್ನಾಟಕದ ಕೃಷಿ ವಿಶ್ವವಿದ್ಯಾಲಯಗಳು ಶಿಕ್ಷಣ ಮತ್ತು ಸಂಶೋಧನೆಗೆ ಹೆಸರುವಾಸಿಯಾಗಿವೆ.
ಆದರೆ ರಾಜ್ಯ ಸರ್ಕಾರವು 2009ರಲ್ಲಿ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ತಂದು ಮೊದಲ ಬಾರಿಗೆ ಖಾಸಗಿ ಕೃಷಿ ಕಾಲೇಜುಗಳನ್ನು ಸ್ಥಾಪಿಸಲು ಅನುಮತಿ ನೀಡಿತು. ಇದರ ಪರಿಣಾಮವಾಗಿ ಸದ್ಯ ರಾಜ್ಯದಲ್ಲಿ ಹತ್ತಕ್ಕೂ ಹೆಚ್ಚು ಖಾಸಗಿ ಕೃಷಿ ಕಾಲೇಜುಗಳು ತಲೆ ಎತ್ತಿ ನಿಂತಿವೆ. ಲಾಭವನ್ನೇ ಉದ್ದೇಶ ಮಾಡಿಕೊಂಡಿರುವ ಈ ಖಾಸಗಿ ಕೃಷಿ ಕಾಲೇಜುಗಳು ಐ.ಸಿ.ಎ.ಆರ್.ನ ನಿಯಮಗಳನ್ನು ಪಾಲಿಸುತ್ತಿಲ್ಲ. ಐ.ಸಿ.ಎ.ಆರ್. ನಿಯಮದ ಪ್ರಕಾರ ಕೃಷಿ ಕಾಲೇಜುಗಳನ್ನು ಪ್ರಾರಂಭಿಸಲು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಕನಿಷ್ಠ 75 ಎಕರೆ ಭೂಮಿ ಇರಬೇಕು. ಆದರೆ ಯಾವ ಖಾಸಗಿ ಕೃಷಿ ಕಾಲೇಜುಗಳು ಇಷ್ಟು ಭೂಮಿಯನ್ನು ಹೊಂದಿಲ್ಲ ಮತ್ತು ನುರಿತ ಶಿಕ್ಷಕರಿಲ್ಲ, ಸಮರ್ಪಕ ಪ್ರಯೋಗಾಲಯಗಳಿಲ್ಲ, ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಗೆ ಮಿತಿ ಇಲ್ಲ, ಐ.ಸಿ.ಎ.ಆರ್.ಇಂದ ಮಾನ್ಯತೆ ಹೊಂದಿಲ್ಲ, ಅನಿಯಮಿತ ಶುಲ್ಕಗಳು, ಗುಣಮಟ್ಟವನ್ನು ಕಾಯ್ದುಕೊಂಡಿಲ್ಲ, ಮೂಲಭೂತ ಸೌಕರ್ಯಗಳಿಲ್ಲ….. ಸರ್ಕಾರಿ ಕೃಷಿ ವಿ.ವಿ.ಯ ವಿದ್ಯಾರ್ಥಿಗಳು ಸಿಇಟಿ ರ್ಯಾಂಕ್ ಆಧಾರದ ಮೇಲೆ ಪ್ರವೇಶವನ್ನು ಪಡೆದಿರುತ್ತಾರೆ. ಈ ಖಾಸಗಿ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಲು ಸಿಇಟಿಯ ಅಗತ್ಯವೂ ಇಲ್ಲ. ಅವರು ಕೇಳಿದಷ್ಟು ಡೊನೇಷನ್ ಕೊಟ್ಟರೆ ಸಾಕು.
ಈ ಖಾಸಗಿ ಕೃಷಿ ಕಾಲೇಜುಗಳು ಯಾವ ಪರಿ ಆವರಿಸಿಕೊಂಡಿವೆಯೆಂದರೆ ಅಜಮಾಸು ಐದು ಸರ್ಕಾರಿ ಕಾಲೇಜುಗಳಲ್ಲಿ ಇರಬೇಕಾದಷ್ಟು ವಿದ್ಯಾರ್ಥಿಗಳನ್ನ ದೊಡ್ಡಬಳ್ಳಾಪುರ ಬಳಿಯ ರೈಟೆಕ್ ಎಂಬ ಒಂದೇ ಒಂದು ಖಾಸಗಿ ಕಾಲೇಜು ಭರ್ತಿ ಮಾಡಿಕೊಂಡಿದೆ. ಐ.ಸಿ.ಎ.ಆರ್. ಮತ್ತು ಕೃಷಿ ವಿವಿಗಳ ಅಫಿಲಿಯೇಷನ್ ಪಡೆಯದೆ ನೀಡಲಾಗುತ್ತಿರುವ ಇವರ ಪದವಿಗಳನ್ನು ಕೃಷಿ ಇಲಾಖೆಯು ಯಾವ ಹುದ್ದೆಗಳಿಗೂ ಪರಿಗಣಿಸುವಂತಿಲ್ಲ. ಈ ರೀತಿ ಮಾನ್ಯತೆ ಹೊಂದಿರದ ಪದವಿ ಪತ್ರಗಳ ವಿರುದ್ಧ ಅಲ್ಲಿನ ವಿದ್ಯಾರ್ಥಿಗಳು ಮತ್ತು ಪೋಷಕರು ದೂರು ದಾಖಲಿಸಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಖಾಸಗಿಯವರು ನಡೆಸುತ್ತಿರುವ ಚೆಲ್ಲಾಟವಲ್ಲದೇ ಮತ್ತಿನ್ನೇನು.
ಪೋಷಕರ ಇಂತಹ ದೂರುಗಳಿಗೆ ಬೆದರಿಯೇ ಇವತ್ತು ಖಾಸಗಿ ಕಾಲೇಜುಗಳು ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ ಅಫಿಲಿಯೇಷನ್ ನೀಡುವಂತೆ ಒತ್ತಡ ತರುತ್ತಿವೆ. ಆದರೆ ಈ ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. 2016ರಲ್ಲಿ ಜಿಕೆವಿಕೆಯಲ್ಲಿ ನಡೆದ ಕೃಷಿ ವಿದ್ಯಾರ್ಥಿಗಳ ಹೋರಾಟದ ಸ್ಥಳಕ್ಕೆ ಬಂದ ಹೆಚ್.ಡಿ.ಕುಮಾರಸ್ವಾಮಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಖಾಸಗಿ ಕೃಷಿ ಕಾಲೇಜುಗಳನ್ನು ನಿಷೇಧಿಸುವಂತೆ ಸರ್ಕಾರದ ಮೇಲೆ ಒತ್ತಡ ತರುತ್ತೇನೆ ಎಂದು ಹೇಳಿದ್ದರು. ಅಂದಿನ ಕೃಷಿ ಮಂತ್ರಿಗಳಾದ ಕೃಷ್ಣ ಭೈರೇಗೌಡರು ಸಹ ಖಾಸಗಿ ಕೃಷಿ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸಮಿತಿ ರಚಿಸಿದ್ದರು. ಆದರೆ ಆ ಸಮಿತಿ ಕಾರ್ಯನಿರ್ವಹಿಸಲೇ ಇಲ್ಲ. ಯಾವ ಕ್ರಮಗಳನ್ನೂ ಕೈಗೊಳ್ಳಲಿಲ್ಲ. ಈ ನೀತಿಯನ್ನು ಜಾರಿಗೆ ತಂದಿದ್ದು ಬಿಜೆಪಿ ಸರ್ಕಾರವಾದರೂ, ಅದನ್ನು ಪಕ್ಕಕ್ಕೆ ಸರಿಸುವಲ್ಲಿ ವಿಫಲವಾಗುತ್ತಿರುವ ಉಳಿದ ಪಕ್ಷಗಳ ನೀತಿಗಳ ಮೇಲೂ ಸಂದೇಹ ಬಾರದಿರದು.
ಖಾಸಗಿ ಕಾಲೇಜುಗಳು ಕೃಷಿ ವಿಶ್ವವಿದ್ಯಾಲಯದ ಅಫಿಲಿಯೇಷನ್ ಕೇಳುತ್ತಿರುವುದರಿಂದ ಈಗ ಕೃಷಿ ವಿದ್ಯಾರ್ಥಿಗಳು ಕಳೆದ ಹತ್ತು ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ರಾಜ್ಯದಲ್ಲಿ ಹೋರಾಟ ಶುರು ಮಾಡಿರೋದು ಇಂತಹ ಖಾಸಗಿ ಕಾಲೇಜುಗಳ ಅಫಿಲಿಯೇಷನ್ ಒತ್ತಡದ ವಿರುದ್ಧ. ಜೂನ್ 19ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ವಿದ್ಯಾರ್ಥಿಗಳ ಬಳಿ ಬಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಾಂತ್ವನದ ಮಾತಾಡಿ ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿದ್ಯಾರ್ಥಿ ಮುಖಂಡರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳಾದ 2009ರ ಕೃಷಿ ಕಾಲೇಜು ಕಾಯ್ದೆ ತಿದ್ದುಪಡಿಯನ್ನು ರದ್ದು ಮಾಡಬೇಕು, ಖಾಸಗಿ ಕಾಲೇಜುಗಳಿಗೆ ಕೃಷಿ ವಿಶ್ವವಿದ್ಯಾಲಯದ ಅಪಿಲಿಯೇಷನ್ ನೀಡಬಾರದು, ರೈಟೆಕ್ ಖಾಸಗಿ ಕಾಲೇಜನ್ನು ಮುಚ್ಚಬೇಕು ಎಂಬ ಬೇಡಿಕೆಗಳೇ ಪ್ರತಿಧ್ವನಿಸಿದವು. ಇದನ್ನು ಚರ್ಚಿಸಲು ಅಧಿವೇಶನ ಶುರುವಾಗುವವರೆಗೆ ಕಾಯಬೇಕಾಗುತ್ತೆ ಅಂತ ಸರ್ಕಾರ ನೆಪ ಹೇಳಿ ನುಣುಚಿಕೊಳ್ಳೋದಕ್ಕೆ ಯತ್ನಿಸಿತ್ತು. ಜಗ್ಗದ ವಿದ್ಯಾರ್ಥಿಗಳು ಈಗ ಹೋರಾಟ ಮುಂದುವರೆಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ನಾಡಿನ ರೈತ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಕರ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿ ನಿಂತಿದ್ದಾರೆ. ಸದ್ಯದಲ್ಲೇ ಮಂಡ್ಯದಲ್ಲಿ ರೈತಸಂಘ, ಜನಶಕ್ತಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸೇರಿದಂತೆ ಹಲವರು ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತು ಕಾರ್ಯಕ್ರಮ ರೂಪಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಒಟ್ಟಿನಲ್ಲಿ ಇವತ್ತಿನ ವಿದ್ಯಾರ್ಥಿ ಸಮೂಹಕ್ಕೆ ಸಾಮಾಜಿಕ ಜವಾಬ್ಧಾರಿ ಇಲ್ಲ ಎಂಬ ಮೂದಲಿಕೆಯನ್ನೂ ಈ ಹೋರಾಟ ಹುಸಿಗೊಳಿಸಿದೆ. ಇನ್ನೇನಿದ್ದರು, ಹೊಸ ಸರ್ಕಾರ ಶಿಕ್ಷಣದ ಖಾಸಗಿಯವರ ಲಾಬಿಗೆ ಮಣಿಯದೆ ತನ್ನ ದಿಟ್ಟತೆಯನ್ನು ತೋರಬೇಕಿದೆ.
ಅವರಿಗಿಂತ ಇವರು ಭಿನ್ನವೇ?
ಹೌದು, ಬಿಜೆಪಿ ಪಕ್ಷವು ಖಾಸಗೀಕರಣದ ಪರ. ಹೆಚ್ಚೆಚ್ಚು ಕಾರ್ಪೊರೇಟ್ ಸಂಸ್ಥೆಗಳ ಕೈಗೆ ದೇಶವನ್ನೊಪ್ಪಿಸುವುದು ಪ್ರಧಾನಿ ಮೋದಿಯವರ ಸಿದ್ಧಾಂತದ ಭಾಗವೇ ಆಗಿದೆ. ಮೋದಿಯವರು ದೇಶಪ್ರೇಮದ ಮಾತಾಡುತ್ತಲೇ ಇಡೀ ದೇಶವನ್ನು ಕಾರ್ಪೊರೇಟ್ ಸಂಸ್ಥೆಗಳ ಪಾಲು ಮಾಡುತ್ತಿರುವುದನ್ನು ಉಳಿದ ಪಕ್ಷಗಳು ವಿರೋಧಿಸುವ ಮಾತನಾಡುತ್ತಿವೆ. ಆದರೆ, ಅದನ್ನು ಸಾಬೀತು ಪಡಿಸಲು ಇದೊಂದು ಅವಕಾಶ. ಆ ಮೂಲಕ ತಮ್ಮದೇ ಹಿಂದಿನ ತಪ್ಪುಗಳನ್ನು ತಿದ್ದಿಕೊಳ್ಳಲೂ ಆಗುತ್ತದೆ. ಏಕೆಂದರೆ, ಖಾಸಗಿ ಸಂಸ್ಥೆಗಳಿಗೆ ಅವಕಾಶ ಮಾಡಿಕೊಡುವ ಕಾನೂನು ತಿದ್ದುಪಡಿಯ ಪ್ರಸ್ತಾಪ ಮೊದಲು ಹೊರಟಿದ್ದೇ ಕುಮಾರಸ್ವಾಮಿಯವರು ಮೊದಲ ಸಾರಿ ಮುಖ್ಯಮಂತ್ರಿಯಾಗಿದ್ದಾಗ. 2007ರಲ್ಲಿ ಅವರ ಕ್ಯಾಬಿನೆಟ್ಟೇ ಇದನ್ನು ಆರಂಭಿಸಿದ್ದು. ಜಾರಿ ಮಾಡಿದವರು ಬಿಜೆಪಿಯವರು, ಮುಂದುವರೆಸಿಕೊಂಡು ಹೋದವರು ಕಾಂಗ್ರೆಸ್ಸಿನವರು.
ಈಗ ಸಮ್ಮಿಶ್ರ ಸರ್ಕಾರವು ವಿದ್ಯಾರ್ಥಿಗಳ ಹೋರಾಟದ ಪರ ನಿಂತರೆ ಮಾತ್ರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೋದಿಯವರ ಮೋಸದ ನೀತಿಯ ವಿರುದ್ಧ ನಿಜವಾಗಲೂ ಇದ್ದಾರೆ ಎಂದು ನಂಬಬಹುದು.

– ಸಂಜಯ್,
ಕರ್ನಾಟಕ ವಿದ್ಯಾರ್ಥಿ ಸಂಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...