Homeಮುಖಪುಟನೃಪತುಂಗ ವಿವಿಗೆ ಜಾಗ ಬೇಕೆಂದು ಐತಿಹಾಸಿಕ ಕಲಾ ಕಾಲೇಜು ಒತ್ತುವರಿಗೆ ಯತ್ನ: ವಿದ್ಯಾರ್ಥಿಗಳ ಆರೋಪ

ನೃಪತುಂಗ ವಿವಿಗೆ ಜಾಗ ಬೇಕೆಂದು ಐತಿಹಾಸಿಕ ಕಲಾ ಕಾಲೇಜು ಒತ್ತುವರಿಗೆ ಯತ್ನ: ವಿದ್ಯಾರ್ಥಿಗಳ ಆರೋಪ

ಸಾಹಿತಿ ಡಾ.ಸಿದ್ದಲಿಂಗಯ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆ, ಎಮ್.ಎಲ್.ಸಿ ಪುಟ್ಟಣ್ಣ ಇಂತಹ ಅನೇಕ ಗಣ್ಯರು ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಬಹುತೇಕ ದಲಿತ, ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

- Advertisement -
- Advertisement -

ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜನ್ನು ನೃಪತುಂಗ ವಿಶ್ವವಿದ್ಯಾನಿಲಯವಾಗಿ ಘೋಷಿಸಲಾಗಿದ್ದು, ವಿವಿಗೆ ಬೇಕಾಗಿರುವ ಜಾಗಕ್ಕಾಗಿ ಐತಿಹಾಸಿಕ ಹಿನ್ನೆಲೆ ಇರುವ ಸರ್ಕಾರಿ ಕಲಾ ಕಾಲೇಜನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಸರ್ಕಾರದ ನಿರ್ಧಾರವನ್ನು ಖಂಡಿಸಿ  ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಈಚೆಗೆ ಪ್ರತಿಭಟನೆ ನಡೆಸಿದ್ದು, ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ವಿಜ್ಞಾನ ಕಾಲೇಜನ್ನು ಇತ್ತೀಚೆಗೆ ನೃಪತುಂಗ ಯೂನಿವರ್ಸಿಟಿ ಎಂದು ಮಾಡಲಾಗಿದೆ. ಈ ಕಾಲೇಜಿನ ಅಂದಾಜು ಜಾಗ ಕೇವಲ 3.7 ಎಕರೆ ಇದೆ. ಹೀಗಿದ್ದರೂ ಸರ್ಕಾರಿ ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾಲಯವನ್ನಾಗಿ‌ ಮಾಡಿದ್ದಾರೆ. ಒಂದು ಯೂನಿವರ್ಸಿಟಿ ಮಾಡಲು ಕನಿಷ್ಠ 10 ಎಕರೆ ಜಾಗ ಬೇಕು ಎಂದು ರಾಜ್ಯ ಸರ್ಕಾರದ ಆದೇಶ ಇದೆ. ನೃಪತುಂಗ ಯೂನಿವರ್ಸಿಟಿ ಈಗ ಕೇವಲ 3.7 ಎಕರೆ ಜಾಗ ಹೊಂದಿದ್ದು, ಪಕ್ಕದ ಸರ್ಕಾರಿ ಕಲಾ ಕಾಲೇಜಿನ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಮುಂದಾಗಿರುವುದು ದುರದೃಷ್ಟಕರ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ನಮ್ಮ ಕಾಲೇಜಿನ ಜಾಗ ಹೇಗೆ ಒತ್ತುವರಿ ಮಾಡಿಕೊಳ್ಳುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಕಾಲೇಜು ತರಗತಿಗಳು ನಡೆಯುತ್ತಿರಲಿಲ್ಲ. ಆಗ ರಾಜ್ಯ ಸರ್ಕಾರ ಸರ್ಕಾರಿ ವಿಜ್ಞಾನ ಕಾಲೇಜನ್ನು ನೃಪತುಂಗ ಯೂನಿವರ್ಸಿಟಿಯನ್ನಾಗಿ ಮಾಡಿದೆ. ಈ ವೇಳೆ ನೃಪತುಂಗ ಯೂನಿವರ್ಸಿಟಿ ಉಪಕುಲಪತಿ ಶ್ರೀನಿವಾಸ್ ಬಳ್ಳಿ ನಕಲಿ ದಾಖಲೆ ಸೃಷ್ಟಿಸಿ ನಮ್ಮದು 11 ಎಕರೆ ಎಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ನೃಪತುಂಗ ಯೂನಿವರ್ಸಿಟಿ ಕುಲಪತಿ ಶ್ರೀನಿವಾಸ ಬಳ್ಳಿ ಸೃಷ್ಟಿಸಿದ ನಕಲಿ‌ ದಾಖಲೆಗಳ ಆಧಾರದ ಮೇರೆಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಅಧೀನ ಕಾರ್ಯದರ್ಶಿ ಮಹೇಶ್ ಒಂದು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಅಧೀನ ಕಾರ್ಯದರ್ಶಿ  ಹೊರಡಿಸಿದ ಆದೇಶ ಪ್ರತಿಯಲ್ಲಿ ಸರ್ಕಾರಿ ಕಲಾ ಕಾಲೇಜು ಜಾಗವನ್ನು ಯೂನಿವರ್ಸಿಟಿಗೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ರಷ್ಯಾದ ವಿವಿಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: 8 ಮಂದಿ ಸಾವು

“ಸರ್ಕಾರಿ ಕಲಾ ಕಾಲೇಜು ಚಿಕ್ಕ ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರ ಮಾಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಹಿಂದೆಯೇ ಸರ್ಕಾರ ಕಲಾ ಕಾಲೇಜು‌ ಜಾಗದ ಮೇಲೆ ಪ್ರಭಾವಿ ರಾಜಕಾರಣಿಗಳ ಕಣ್ಣು ಬಿದ್ದಿತ್ತು. ಈಗಾಗಲೇ ಸರ್ಕಾರವು ಕಲಾ ಕಾಲೇಜಿನ ಒಂದಷ್ಟು ಜಾಗವನ್ನು ಸಿವಿಲ್ ಕೋರ್ಟ್, ಬೆಂಗಳೂರು ಮೆಟ್ರೋ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಬಿಟ್ಟುಕೊಟ್ಟಿದ್ದಾರೆ. ಈಗ ಸರ್ಕಾರ ಕಲಾ ಕಾಲೇಜಿನಲ್ಲಿ ಇರುವುದು 7 ಎಕರೆ ಜಾಗ. ಈ ಜಾಗವನ್ನು ಅಧಿಕಾರದ ದುರಾಸೆಗಾಗಿ ನೃಪತುಂಗ ಯೂನಿವರ್ಸಿಟಿ ಕುಲಪತಿ ಶ್ರೀನಿವಾಸ್ ಬಳ್ಳಿ ಮತ್ತು ಹಲವು ಅಧಿಕಾರಿಗಳು ಕಬಳಿಸಲು ಮುಂದಾಗಿದ್ದಾರೆ ಎನ್ನುವುದು ವಿದ್ಯಾರ್ಥಿಗಳ ಆಕ್ರೋಶ.

****

ಐತಿಹಾಸಿಕ ಕಾಲೇಜು; ಬಡವರ ಪಾಲಿನ ದೀಪ

ಸರ್ಕಾರಿ ಕಲಾ ಕಾಲೇಜು 1886ರಲ್ಲಿ ಪ್ರಾರಂಭವಾಯಿತು. ಬ್ರಿಟೀಷ್ ಆಳ್ವಿಕೆಯಲ್ಲಿ ಪ್ರೌಢ ಶಾಲೆ ಎಂದು ಕರೆಯಲಾಯಿತು. ಮತ್ತು ಇದನ್ನು 1927ರಲ್ಲಿ ಮಧ್ಯಂತರ ಕಾಲೇಜು ಎಂದು ಕರೆಯಲಾಯಿತು. 1957ರಲ್ಲಿ ಜ್ಞಾನ ಕಾಲೇಜು ಶುರು ಆಯಿತು. ನಂತರ 1971ರಲ್ಲಿ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಾಗಿ ಇಬ್ಬಾಗವಾಗಿರುತ್ತದೆ.
ಸರ್ಕಾರಿ ಕಲಾ ಕಾಲೇಜು, ಈಗಿನ ಸರ್ಕಾರಿ ಕಾಲೇಜು ಹಿಂದಿನ ಮೈಸೂರು ಸಂಸ್ಥಾನದ ಪ್ರಮುಖ ಎಂಟು ಜಿಲ್ಲೆಗಳಲ್ಲಿ ಒಂದಾಗಿದ್ದ ಬೆಂಗಳೂರು ಜಿಲ್ಲೆಯ ಪ್ರತಿಷ್ಟಿತ ಶೈಕ್ಷಣಿಕ ಸರ್ಕಾರಿ ಪ್ರೌಢ ಶಾಲೆಯಾಗಿ 1916ರಲ್ಲಿರಲ್ಲಿ ಮಹಾರಾಜ ನಾಲ್ವಡಿ ಕೃಷ್ಣ ರಾಜ ಒಡೆಯರು ಅವಧಿಯಲ್ಲಿ ಆರಂಭಗೊಂಡಿದೆ ಎನ್ನುತ್ತಾರೆ ವಿದ್ಯಾರ್ಥಿ ಮುಖಂಡ ಮನೋಜ್‌.

ಈ ಕಾಲೇಜಿನಲ್ಲಿ ಓದಿದಂತಹ ಲಕ್ಷಾಂತರ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸಾಹಿತಿಗಳು, ರಾಜಕಾರಣಿಗಳು, ಅಧಿಕಾರ ಶಾಹಿ ವರ್ಗಗಳಲ್ಲಿ ಸೇವೆ ಸಲ್ಲಿಸಿದ್ದು, ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬದುಕನ್ನು ಕಟ್ಟಿಕೊಂಡಿರುತ್ತಾರೆ. ಸಾಹಿತಿ ಡಾ.ಸಿದ್ದಲಿಂಗಯ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆ, ಎಮ್.ಎಲ್.ಸಿ. ಪುಟ್ಟಣ್ಣ ಇಂತಹ ಅನೇಕ ಗಣ್ಯರು ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ ಎನ್ನುತ್ತಾರೆ ಅವರು.

ಗ್ರಾಮೀಣ, ಹಿಂದುಳಿದ, ಹಾಗೂ ದುರ್ಬಲ ವರ್ಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ರೂಪಿಸಿ, ಜೀವನವನ್ನು ಕಟ್ಟಿಕೊಟ್ಟಂತಹ ಕಾಲೇಜು ಇದಾಗಿದೆ. ಪ್ರಸ್ತುತ ಸರ್ಕಾರಿ ಕಲಾ ಕಾಲೇಜಿನಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುತ್ತಾರೆ. ಇದರಲ್ಲಿ ಶೇ.90ರಷ್ಟು ವಿದ್ಯಾರ್ಥಿಗಳು ಬಡತನ ರೇಖೆಗಿಂತ ಕೆಳಗಿನ ಕುಟುಂಬದವರಾಗಿದ್ದಾರೆ. ಬಹುತೇಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಈ ಕಾಲೇಜು ಉಳಿಯಬೇಕು ಎಂಬುದು ಮನೋಜ್‌ ಅವರ ಅಭಿಪ್ರಾಯ.


ಇದನ್ನೂ ಓದಿ: ‘ಕಾಲವೆ ಕಥೆ ಹೇಳುತ್ತದೆ!’ – ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...