Homeಮುಖಪುಟನೃಪತುಂಗ ವಿವಿಗೆ ಜಾಗ ಬೇಕೆಂದು ಐತಿಹಾಸಿಕ ಕಲಾ ಕಾಲೇಜು ಒತ್ತುವರಿಗೆ ಯತ್ನ: ವಿದ್ಯಾರ್ಥಿಗಳ ಆರೋಪ

ನೃಪತುಂಗ ವಿವಿಗೆ ಜಾಗ ಬೇಕೆಂದು ಐತಿಹಾಸಿಕ ಕಲಾ ಕಾಲೇಜು ಒತ್ತುವರಿಗೆ ಯತ್ನ: ವಿದ್ಯಾರ್ಥಿಗಳ ಆರೋಪ

ಸಾಹಿತಿ ಡಾ.ಸಿದ್ದಲಿಂಗಯ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆ, ಎಮ್.ಎಲ್.ಸಿ ಪುಟ್ಟಣ್ಣ ಇಂತಹ ಅನೇಕ ಗಣ್ಯರು ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಬಹುತೇಕ ದಲಿತ, ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

- Advertisement -
- Advertisement -

ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜನ್ನು ನೃಪತುಂಗ ವಿಶ್ವವಿದ್ಯಾನಿಲಯವಾಗಿ ಘೋಷಿಸಲಾಗಿದ್ದು, ವಿವಿಗೆ ಬೇಕಾಗಿರುವ ಜಾಗಕ್ಕಾಗಿ ಐತಿಹಾಸಿಕ ಹಿನ್ನೆಲೆ ಇರುವ ಸರ್ಕಾರಿ ಕಲಾ ಕಾಲೇಜನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಸರ್ಕಾರದ ನಿರ್ಧಾರವನ್ನು ಖಂಡಿಸಿ  ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಈಚೆಗೆ ಪ್ರತಿಭಟನೆ ನಡೆಸಿದ್ದು, ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ವಿಜ್ಞಾನ ಕಾಲೇಜನ್ನು ಇತ್ತೀಚೆಗೆ ನೃಪತುಂಗ ಯೂನಿವರ್ಸಿಟಿ ಎಂದು ಮಾಡಲಾಗಿದೆ. ಈ ಕಾಲೇಜಿನ ಅಂದಾಜು ಜಾಗ ಕೇವಲ 3.7 ಎಕರೆ ಇದೆ. ಹೀಗಿದ್ದರೂ ಸರ್ಕಾರಿ ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾಲಯವನ್ನಾಗಿ‌ ಮಾಡಿದ್ದಾರೆ. ಒಂದು ಯೂನಿವರ್ಸಿಟಿ ಮಾಡಲು ಕನಿಷ್ಠ 10 ಎಕರೆ ಜಾಗ ಬೇಕು ಎಂದು ರಾಜ್ಯ ಸರ್ಕಾರದ ಆದೇಶ ಇದೆ. ನೃಪತುಂಗ ಯೂನಿವರ್ಸಿಟಿ ಈಗ ಕೇವಲ 3.7 ಎಕರೆ ಜಾಗ ಹೊಂದಿದ್ದು, ಪಕ್ಕದ ಸರ್ಕಾರಿ ಕಲಾ ಕಾಲೇಜಿನ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಮುಂದಾಗಿರುವುದು ದುರದೃಷ್ಟಕರ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ನಮ್ಮ ಕಾಲೇಜಿನ ಜಾಗ ಹೇಗೆ ಒತ್ತುವರಿ ಮಾಡಿಕೊಳ್ಳುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಕಾಲೇಜು ತರಗತಿಗಳು ನಡೆಯುತ್ತಿರಲಿಲ್ಲ. ಆಗ ರಾಜ್ಯ ಸರ್ಕಾರ ಸರ್ಕಾರಿ ವಿಜ್ಞಾನ ಕಾಲೇಜನ್ನು ನೃಪತುಂಗ ಯೂನಿವರ್ಸಿಟಿಯನ್ನಾಗಿ ಮಾಡಿದೆ. ಈ ವೇಳೆ ನೃಪತುಂಗ ಯೂನಿವರ್ಸಿಟಿ ಉಪಕುಲಪತಿ ಶ್ರೀನಿವಾಸ್ ಬಳ್ಳಿ ನಕಲಿ ದಾಖಲೆ ಸೃಷ್ಟಿಸಿ ನಮ್ಮದು 11 ಎಕರೆ ಎಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ನೃಪತುಂಗ ಯೂನಿವರ್ಸಿಟಿ ಕುಲಪತಿ ಶ್ರೀನಿವಾಸ ಬಳ್ಳಿ ಸೃಷ್ಟಿಸಿದ ನಕಲಿ‌ ದಾಖಲೆಗಳ ಆಧಾರದ ಮೇರೆಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಅಧೀನ ಕಾರ್ಯದರ್ಶಿ ಮಹೇಶ್ ಒಂದು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಅಧೀನ ಕಾರ್ಯದರ್ಶಿ  ಹೊರಡಿಸಿದ ಆದೇಶ ಪ್ರತಿಯಲ್ಲಿ ಸರ್ಕಾರಿ ಕಲಾ ಕಾಲೇಜು ಜಾಗವನ್ನು ಯೂನಿವರ್ಸಿಟಿಗೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ರಷ್ಯಾದ ವಿವಿಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: 8 ಮಂದಿ ಸಾವು

“ಸರ್ಕಾರಿ ಕಲಾ ಕಾಲೇಜು ಚಿಕ್ಕ ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರ ಮಾಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಹಿಂದೆಯೇ ಸರ್ಕಾರ ಕಲಾ ಕಾಲೇಜು‌ ಜಾಗದ ಮೇಲೆ ಪ್ರಭಾವಿ ರಾಜಕಾರಣಿಗಳ ಕಣ್ಣು ಬಿದ್ದಿತ್ತು. ಈಗಾಗಲೇ ಸರ್ಕಾರವು ಕಲಾ ಕಾಲೇಜಿನ ಒಂದಷ್ಟು ಜಾಗವನ್ನು ಸಿವಿಲ್ ಕೋರ್ಟ್, ಬೆಂಗಳೂರು ಮೆಟ್ರೋ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಬಿಟ್ಟುಕೊಟ್ಟಿದ್ದಾರೆ. ಈಗ ಸರ್ಕಾರ ಕಲಾ ಕಾಲೇಜಿನಲ್ಲಿ ಇರುವುದು 7 ಎಕರೆ ಜಾಗ. ಈ ಜಾಗವನ್ನು ಅಧಿಕಾರದ ದುರಾಸೆಗಾಗಿ ನೃಪತುಂಗ ಯೂನಿವರ್ಸಿಟಿ ಕುಲಪತಿ ಶ್ರೀನಿವಾಸ್ ಬಳ್ಳಿ ಮತ್ತು ಹಲವು ಅಧಿಕಾರಿಗಳು ಕಬಳಿಸಲು ಮುಂದಾಗಿದ್ದಾರೆ ಎನ್ನುವುದು ವಿದ್ಯಾರ್ಥಿಗಳ ಆಕ್ರೋಶ.

****

ಐತಿಹಾಸಿಕ ಕಾಲೇಜು; ಬಡವರ ಪಾಲಿನ ದೀಪ

ಸರ್ಕಾರಿ ಕಲಾ ಕಾಲೇಜು 1886ರಲ್ಲಿ ಪ್ರಾರಂಭವಾಯಿತು. ಬ್ರಿಟೀಷ್ ಆಳ್ವಿಕೆಯಲ್ಲಿ ಪ್ರೌಢ ಶಾಲೆ ಎಂದು ಕರೆಯಲಾಯಿತು. ಮತ್ತು ಇದನ್ನು 1927ರಲ್ಲಿ ಮಧ್ಯಂತರ ಕಾಲೇಜು ಎಂದು ಕರೆಯಲಾಯಿತು. 1957ರಲ್ಲಿ ಜ್ಞಾನ ಕಾಲೇಜು ಶುರು ಆಯಿತು. ನಂತರ 1971ರಲ್ಲಿ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಾಗಿ ಇಬ್ಬಾಗವಾಗಿರುತ್ತದೆ.
ಸರ್ಕಾರಿ ಕಲಾ ಕಾಲೇಜು, ಈಗಿನ ಸರ್ಕಾರಿ ಕಾಲೇಜು ಹಿಂದಿನ ಮೈಸೂರು ಸಂಸ್ಥಾನದ ಪ್ರಮುಖ ಎಂಟು ಜಿಲ್ಲೆಗಳಲ್ಲಿ ಒಂದಾಗಿದ್ದ ಬೆಂಗಳೂರು ಜಿಲ್ಲೆಯ ಪ್ರತಿಷ್ಟಿತ ಶೈಕ್ಷಣಿಕ ಸರ್ಕಾರಿ ಪ್ರೌಢ ಶಾಲೆಯಾಗಿ 1916ರಲ್ಲಿರಲ್ಲಿ ಮಹಾರಾಜ ನಾಲ್ವಡಿ ಕೃಷ್ಣ ರಾಜ ಒಡೆಯರು ಅವಧಿಯಲ್ಲಿ ಆರಂಭಗೊಂಡಿದೆ ಎನ್ನುತ್ತಾರೆ ವಿದ್ಯಾರ್ಥಿ ಮುಖಂಡ ಮನೋಜ್‌.

ಈ ಕಾಲೇಜಿನಲ್ಲಿ ಓದಿದಂತಹ ಲಕ್ಷಾಂತರ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸಾಹಿತಿಗಳು, ರಾಜಕಾರಣಿಗಳು, ಅಧಿಕಾರ ಶಾಹಿ ವರ್ಗಗಳಲ್ಲಿ ಸೇವೆ ಸಲ್ಲಿಸಿದ್ದು, ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬದುಕನ್ನು ಕಟ್ಟಿಕೊಂಡಿರುತ್ತಾರೆ. ಸಾಹಿತಿ ಡಾ.ಸಿದ್ದಲಿಂಗಯ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆ, ಎಮ್.ಎಲ್.ಸಿ. ಪುಟ್ಟಣ್ಣ ಇಂತಹ ಅನೇಕ ಗಣ್ಯರು ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ ಎನ್ನುತ್ತಾರೆ ಅವರು.

ಗ್ರಾಮೀಣ, ಹಿಂದುಳಿದ, ಹಾಗೂ ದುರ್ಬಲ ವರ್ಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ರೂಪಿಸಿ, ಜೀವನವನ್ನು ಕಟ್ಟಿಕೊಟ್ಟಂತಹ ಕಾಲೇಜು ಇದಾಗಿದೆ. ಪ್ರಸ್ತುತ ಸರ್ಕಾರಿ ಕಲಾ ಕಾಲೇಜಿನಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುತ್ತಾರೆ. ಇದರಲ್ಲಿ ಶೇ.90ರಷ್ಟು ವಿದ್ಯಾರ್ಥಿಗಳು ಬಡತನ ರೇಖೆಗಿಂತ ಕೆಳಗಿನ ಕುಟುಂಬದವರಾಗಿದ್ದಾರೆ. ಬಹುತೇಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಈ ಕಾಲೇಜು ಉಳಿಯಬೇಕು ಎಂಬುದು ಮನೋಜ್‌ ಅವರ ಅಭಿಪ್ರಾಯ.


ಇದನ್ನೂ ಓದಿ: ‘ಕಾಲವೆ ಕಥೆ ಹೇಳುತ್ತದೆ!’ – ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...