Homeಮುಖಪುಟನೃಪತುಂಗ ವಿವಿಗೆ ಜಾಗ ಬೇಕೆಂದು ಐತಿಹಾಸಿಕ ಕಲಾ ಕಾಲೇಜು ಒತ್ತುವರಿಗೆ ಯತ್ನ: ವಿದ್ಯಾರ್ಥಿಗಳ ಆರೋಪ

ನೃಪತುಂಗ ವಿವಿಗೆ ಜಾಗ ಬೇಕೆಂದು ಐತಿಹಾಸಿಕ ಕಲಾ ಕಾಲೇಜು ಒತ್ತುವರಿಗೆ ಯತ್ನ: ವಿದ್ಯಾರ್ಥಿಗಳ ಆರೋಪ

ಸಾಹಿತಿ ಡಾ.ಸಿದ್ದಲಿಂಗಯ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆ, ಎಮ್.ಎಲ್.ಸಿ ಪುಟ್ಟಣ್ಣ ಇಂತಹ ಅನೇಕ ಗಣ್ಯರು ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ. ಬಹುತೇಕ ದಲಿತ, ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

- Advertisement -
- Advertisement -

ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜನ್ನು ನೃಪತುಂಗ ವಿಶ್ವವಿದ್ಯಾನಿಲಯವಾಗಿ ಘೋಷಿಸಲಾಗಿದ್ದು, ವಿವಿಗೆ ಬೇಕಾಗಿರುವ ಜಾಗಕ್ಕಾಗಿ ಐತಿಹಾಸಿಕ ಹಿನ್ನೆಲೆ ಇರುವ ಸರ್ಕಾರಿ ಕಲಾ ಕಾಲೇಜನ್ನು ಒತ್ತುವರಿ ಮಾಡಿಕೊಳ್ಳಲಾಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಸರ್ಕಾರದ ನಿರ್ಧಾರವನ್ನು ಖಂಡಿಸಿ  ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಈಚೆಗೆ ಪ್ರತಿಭಟನೆ ನಡೆಸಿದ್ದು, ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ವಿಜ್ಞಾನ ಕಾಲೇಜನ್ನು ಇತ್ತೀಚೆಗೆ ನೃಪತುಂಗ ಯೂನಿವರ್ಸಿಟಿ ಎಂದು ಮಾಡಲಾಗಿದೆ. ಈ ಕಾಲೇಜಿನ ಅಂದಾಜು ಜಾಗ ಕೇವಲ 3.7 ಎಕರೆ ಇದೆ. ಹೀಗಿದ್ದರೂ ಸರ್ಕಾರಿ ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾಲಯವನ್ನಾಗಿ‌ ಮಾಡಿದ್ದಾರೆ. ಒಂದು ಯೂನಿವರ್ಸಿಟಿ ಮಾಡಲು ಕನಿಷ್ಠ 10 ಎಕರೆ ಜಾಗ ಬೇಕು ಎಂದು ರಾಜ್ಯ ಸರ್ಕಾರದ ಆದೇಶ ಇದೆ. ನೃಪತುಂಗ ಯೂನಿವರ್ಸಿಟಿ ಈಗ ಕೇವಲ 3.7 ಎಕರೆ ಜಾಗ ಹೊಂದಿದ್ದು, ಪಕ್ಕದ ಸರ್ಕಾರಿ ಕಲಾ ಕಾಲೇಜಿನ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಮುಂದಾಗಿರುವುದು ದುರದೃಷ್ಟಕರ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ನಮ್ಮ ಕಾಲೇಜಿನ ಜಾಗ ಹೇಗೆ ಒತ್ತುವರಿ ಮಾಡಿಕೊಳ್ಳುತ್ತೀರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಕಾಲೇಜು ತರಗತಿಗಳು ನಡೆಯುತ್ತಿರಲಿಲ್ಲ. ಆಗ ರಾಜ್ಯ ಸರ್ಕಾರ ಸರ್ಕಾರಿ ವಿಜ್ಞಾನ ಕಾಲೇಜನ್ನು ನೃಪತುಂಗ ಯೂನಿವರ್ಸಿಟಿಯನ್ನಾಗಿ ಮಾಡಿದೆ. ಈ ವೇಳೆ ನೃಪತುಂಗ ಯೂನಿವರ್ಸಿಟಿ ಉಪಕುಲಪತಿ ಶ್ರೀನಿವಾಸ್ ಬಳ್ಳಿ ನಕಲಿ ದಾಖಲೆ ಸೃಷ್ಟಿಸಿ ನಮ್ಮದು 11 ಎಕರೆ ಎಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ನೃಪತುಂಗ ಯೂನಿವರ್ಸಿಟಿ ಕುಲಪತಿ ಶ್ರೀನಿವಾಸ ಬಳ್ಳಿ ಸೃಷ್ಟಿಸಿದ ನಕಲಿ‌ ದಾಖಲೆಗಳ ಆಧಾರದ ಮೇರೆಗೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಅಧೀನ ಕಾರ್ಯದರ್ಶಿ ಮಹೇಶ್ ಒಂದು ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಅಧೀನ ಕಾರ್ಯದರ್ಶಿ  ಹೊರಡಿಸಿದ ಆದೇಶ ಪ್ರತಿಯಲ್ಲಿ ಸರ್ಕಾರಿ ಕಲಾ ಕಾಲೇಜು ಜಾಗವನ್ನು ಯೂನಿವರ್ಸಿಟಿಗೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ರಷ್ಯಾದ ವಿವಿಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: 8 ಮಂದಿ ಸಾವು

“ಸರ್ಕಾರಿ ಕಲಾ ಕಾಲೇಜು ಚಿಕ್ಕ ಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರ ಮಾಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಹಿಂದೆಯೇ ಸರ್ಕಾರ ಕಲಾ ಕಾಲೇಜು‌ ಜಾಗದ ಮೇಲೆ ಪ್ರಭಾವಿ ರಾಜಕಾರಣಿಗಳ ಕಣ್ಣು ಬಿದ್ದಿತ್ತು. ಈಗಾಗಲೇ ಸರ್ಕಾರವು ಕಲಾ ಕಾಲೇಜಿನ ಒಂದಷ್ಟು ಜಾಗವನ್ನು ಸಿವಿಲ್ ಕೋರ್ಟ್, ಬೆಂಗಳೂರು ಮೆಟ್ರೋ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಬಿಟ್ಟುಕೊಟ್ಟಿದ್ದಾರೆ. ಈಗ ಸರ್ಕಾರ ಕಲಾ ಕಾಲೇಜಿನಲ್ಲಿ ಇರುವುದು 7 ಎಕರೆ ಜಾಗ. ಈ ಜಾಗವನ್ನು ಅಧಿಕಾರದ ದುರಾಸೆಗಾಗಿ ನೃಪತುಂಗ ಯೂನಿವರ್ಸಿಟಿ ಕುಲಪತಿ ಶ್ರೀನಿವಾಸ್ ಬಳ್ಳಿ ಮತ್ತು ಹಲವು ಅಧಿಕಾರಿಗಳು ಕಬಳಿಸಲು ಮುಂದಾಗಿದ್ದಾರೆ ಎನ್ನುವುದು ವಿದ್ಯಾರ್ಥಿಗಳ ಆಕ್ರೋಶ.

****

ಐತಿಹಾಸಿಕ ಕಾಲೇಜು; ಬಡವರ ಪಾಲಿನ ದೀಪ

ಸರ್ಕಾರಿ ಕಲಾ ಕಾಲೇಜು 1886ರಲ್ಲಿ ಪ್ರಾರಂಭವಾಯಿತು. ಬ್ರಿಟೀಷ್ ಆಳ್ವಿಕೆಯಲ್ಲಿ ಪ್ರೌಢ ಶಾಲೆ ಎಂದು ಕರೆಯಲಾಯಿತು. ಮತ್ತು ಇದನ್ನು 1927ರಲ್ಲಿ ಮಧ್ಯಂತರ ಕಾಲೇಜು ಎಂದು ಕರೆಯಲಾಯಿತು. 1957ರಲ್ಲಿ ಜ್ಞಾನ ಕಾಲೇಜು ಶುರು ಆಯಿತು. ನಂತರ 1971ರಲ್ಲಿ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳಾಗಿ ಇಬ್ಬಾಗವಾಗಿರುತ್ತದೆ.
ಸರ್ಕಾರಿ ಕಲಾ ಕಾಲೇಜು, ಈಗಿನ ಸರ್ಕಾರಿ ಕಾಲೇಜು ಹಿಂದಿನ ಮೈಸೂರು ಸಂಸ್ಥಾನದ ಪ್ರಮುಖ ಎಂಟು ಜಿಲ್ಲೆಗಳಲ್ಲಿ ಒಂದಾಗಿದ್ದ ಬೆಂಗಳೂರು ಜಿಲ್ಲೆಯ ಪ್ರತಿಷ್ಟಿತ ಶೈಕ್ಷಣಿಕ ಸರ್ಕಾರಿ ಪ್ರೌಢ ಶಾಲೆಯಾಗಿ 1916ರಲ್ಲಿರಲ್ಲಿ ಮಹಾರಾಜ ನಾಲ್ವಡಿ ಕೃಷ್ಣ ರಾಜ ಒಡೆಯರು ಅವಧಿಯಲ್ಲಿ ಆರಂಭಗೊಂಡಿದೆ ಎನ್ನುತ್ತಾರೆ ವಿದ್ಯಾರ್ಥಿ ಮುಖಂಡ ಮನೋಜ್‌.

ಈ ಕಾಲೇಜಿನಲ್ಲಿ ಓದಿದಂತಹ ಲಕ್ಷಾಂತರ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸಾಹಿತಿಗಳು, ರಾಜಕಾರಣಿಗಳು, ಅಧಿಕಾರ ಶಾಹಿ ವರ್ಗಗಳಲ್ಲಿ ಸೇವೆ ಸಲ್ಲಿಸಿದ್ದು, ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬದುಕನ್ನು ಕಟ್ಟಿಕೊಂಡಿರುತ್ತಾರೆ. ಸಾಹಿತಿ ಡಾ.ಸಿದ್ದಲಿಂಗಯ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆ, ಎಮ್.ಎಲ್.ಸಿ. ಪುಟ್ಟಣ್ಣ ಇಂತಹ ಅನೇಕ ಗಣ್ಯರು ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ ಎನ್ನುತ್ತಾರೆ ಅವರು.

ಗ್ರಾಮೀಣ, ಹಿಂದುಳಿದ, ಹಾಗೂ ದುರ್ಬಲ ವರ್ಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ರೂಪಿಸಿ, ಜೀವನವನ್ನು ಕಟ್ಟಿಕೊಟ್ಟಂತಹ ಕಾಲೇಜು ಇದಾಗಿದೆ. ಪ್ರಸ್ತುತ ಸರ್ಕಾರಿ ಕಲಾ ಕಾಲೇಜಿನಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುತ್ತಾರೆ. ಇದರಲ್ಲಿ ಶೇ.90ರಷ್ಟು ವಿದ್ಯಾರ್ಥಿಗಳು ಬಡತನ ರೇಖೆಗಿಂತ ಕೆಳಗಿನ ಕುಟುಂಬದವರಾಗಿದ್ದಾರೆ. ಬಹುತೇಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಇಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಈ ಕಾಲೇಜು ಉಳಿಯಬೇಕು ಎಂಬುದು ಮನೋಜ್‌ ಅವರ ಅಭಿಪ್ರಾಯ.


ಇದನ್ನೂ ಓದಿ: ‘ಕಾಲವೆ ಕಥೆ ಹೇಳುತ್ತದೆ!’ – ಐಟಿ ದಾಳಿಗೆ ನಟ ಸೋನು ಸೂದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...