Homeಮುಖಪುಟಸಂಸ್ಕೃತ ಪ್ರೊಫೆಸರ್‌ ಫಿರೋಜ್‌ ಖಾನ್‌ರನ್ನು ಬೆಂಬಲಿಸಿ ವಿದ್ಯಾರ್ಥಿಗಳ ರ್‍ಯಾಲಿ: ಧರ್ಮ ತಾರತಮ್ಯಕ್ಕೆ ಖಂಡನೆ

ಸಂಸ್ಕೃತ ಪ್ರೊಫೆಸರ್‌ ಫಿರೋಜ್‌ ಖಾನ್‌ರನ್ನು ಬೆಂಬಲಿಸಿ ವಿದ್ಯಾರ್ಥಿಗಳ ರ್‍ಯಾಲಿ: ಧರ್ಮ ತಾರತಮ್ಯಕ್ಕೆ ಖಂಡನೆ

- Advertisement -
- Advertisement -

ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ವಿಭಾಗಕ್ಕೆ ನೇಮಕಗೊಂಡಿದ್ದ ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಅವರಿಗೆ ಬೆಂಬಲ ಸೂಚಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಫಿರೋಜ್‌ ಮುಸ್ಲಿಂ ಧರ್ಮದವರು ಎನ್ನುವ ಕಾರಣಕ್ಕೆ ಸಂಸ್ಕೃತ ವಿಭಾಗದ 30 ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರಿಂದ ಪಾಠ ಕೇಳಲು ನಿರಾಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಧರ್ಮ ತಾರತಮ್ಯವನ್ನು ಖಂಡಿಸಿ, ಫಿರೋಜ್‌ ಖಾನ್‌ ಅವರನ್ನು ವಿದ್ಯಾರ್ಥಿಗಳು ಸ್ವೀಕರಿಸಬೇಕು. ಮತ್ತೆ ನೇಮಕ ಮಾಡಿಕೊಳ್ಳಬೇಕು ಎಂದು ನೂರಾರು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಜಂಟಿ ಕ್ರಿಯಾ ಸಮಿತಿ ಬ್ಯಾನರ್ ಅಡಿಯಲ್ಲಿ, ಎಬಿವಿಪಿ ವಿದ್ಯಾರ್ಥಿ ಸಂಘಟನೆಯನ್ನು ಹೊರತುಪಡಿಸಿ, ಉಳಿದ ವಿದ್ಯಾರ್ಥಿಗಳ ಗುಂಪು ಫಿರೋಜ್‌ ಖಾನ್‌ ಅವರಿಗೆ ಬೆಂಬಲ ಸೂಚಿಸಿತು. ಕೈಯಲ್ಲಿ ಫಿರೋಜ್‌ ಖಾನ್‌ ಪರ ಭಿತ್ತಿಪತ್ರ, ಬ್ಯಾನರ್‌ ಹಿಡಿದು ಪ್ರತಿಭಟನೆ ನಡೆಸಿದರು. ನವೆಂಬರ್‌ 5ರಂದು ಫಿರೋಜ್‌ ಖಾನ್‌, ಸಂಸ್ಕೃತ ವಿದ್ಯಾಧರ್ಮ ವಿಜ್ಞಾನ ವಿಭಾಗದ ಇಲಾಖೆಯ ಉಪ ಪ್ರಾಧ್ಯಾಪಕ ಹುದ್ದೆಗೆ ನೇಮಕಗೊಂಡಿದ್ದರು. ಆದರೆ ಸಂಸ್ಕೃತ ವಿಭಾಗ ವಿದ್ಯಾರ್ಥಿಗಳು ಫಿರೋಜ್‌, ಮುಸ್ಲಿಂ ಎಂಬ ಕಾರಣದಿಂದ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕ್ರಮವನ್ನು ಖಂಡಿಸಿ, ಇತರೆ ವಿದ್ಯಾರ್ಥಿಗಳು ಖಂಡಿಸಿದ್ದಾರೆ.

ಲಂಕಾ ಗೇಟ್‌ನಿಂದ ರವಿದಾಸ್‌ ಗೇಟ್‌ವರೆಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ’ನಾವು ನಿಮ್ಮೊಂದಿಗೆ ಇದ್ದೇವೆ. ಭಾಷೆಗೆ ಧರ್ಮದ ನಂಟಿಲ್ಲ’. ಯಾರು ಬೇಕಾದರೂ ಯಾವ ಭಾಷೆಯನ್ನಾದರೂ ಕಲಿಯಬಹುದು ಮತ್ತು ಕಲಿಸಬಹುದು ಎಂದು ಘೋಷಣೆ ಕೂಗುತ್ತ, ಬ್ಯಾನರ್‌ ಹಿಡಿದು, ಫಿರೋಜ್‌ ಖಾನ್‌ ಅವರಿಗೆ ಬೆಂಬಲ ಸೂಚಿಸಿದರು.

ಧರ್ಮ ಮತ್ತು ಜಾತಿ ಆಧಾರಿಸಿ ವಿಶ್ವವಿದ್ಯಾಲಯಗಳಲ್ಲಿ ತಾರತಮ್ಯ ಮಾಡುವುದು ಅಸಾಂವಿಧಾನಿಕ ಕ್ರಮ. ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ಸಂಸ್ಥಾಪಕ ಮದನ್‌ ಮೋಹನ್‌ ಮಾಳವಿಯಾ ಸಹ ಭಾರತ ಕೇವಲ ಹಿಂದೂಗಳದ್ದಲ್ಲ ಇಲ್ಲಿ ಮುಸ್ಲಿಂ, ಸಿಖ್ಖ್‌, ಕ್ರಿಶ್ಚಿಯನ್‌, ಜೈನ್‌ ಅವರನ್ನೂ ಒಳಗೊಂಡಿದ್ದು, ಎಲ್ಲರ ಭಾರತ ಎಂದಿದ್ದರು ಎಂದು ರಾಜ್‌ ಅಭಿಶೇಕ್‌ ಹೇಳಿದರು.

ಇದನ್ನೂ ಓದಿ: ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಖಾನ್‌ ಅವರು ವಿದ್ಯಾರ್ಥಿಗಳಿಗೆ ಕಲಿಸಲು ಸಾಧ್ಯವಾಗಿಲ್ಲ. ನವೆಂಬರ್‌ 7ರಿಂದಲೇ ವಿಭಾಗದ ಗೇಟ್‌ ಬಂದ್‌ ಮಾಡಲಾಗಿದೆ. ವಿಭಾಗದ ಡೀನ್‌ ಮಾತನಾಡಿ, ಯಾರೂ ಪ್ರತಿಭಟನೆಯಲ್ಲಿ ಭಾಗಿಯಾಗಬೇಡಿ. ತರಗತಿಗಳನ್ನು ತೆಗೆದುಕೊಳ್ಳಿ, ಪರೀಕ್ಷೆ ಸಮಯ ಹತ್ತಿರವಾಗುತ್ತಿದೆ ಎಂದು ಮನವಿ ಮಾಡಿದ್ದಾರೆ. ಆದರೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸಲಾವಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...