Homeಮುಖಪುಟಸಂಸ್ಕೃತ ಪ್ರೊಫೆಸರ್‌ ಫಿರೋಜ್‌ ಖಾನ್‌ರನ್ನು ಬೆಂಬಲಿಸಿ ವಿದ್ಯಾರ್ಥಿಗಳ ರ್‍ಯಾಲಿ: ಧರ್ಮ ತಾರತಮ್ಯಕ್ಕೆ ಖಂಡನೆ

ಸಂಸ್ಕೃತ ಪ್ರೊಫೆಸರ್‌ ಫಿರೋಜ್‌ ಖಾನ್‌ರನ್ನು ಬೆಂಬಲಿಸಿ ವಿದ್ಯಾರ್ಥಿಗಳ ರ್‍ಯಾಲಿ: ಧರ್ಮ ತಾರತಮ್ಯಕ್ಕೆ ಖಂಡನೆ

- Advertisement -
- Advertisement -

ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ವಿಭಾಗಕ್ಕೆ ನೇಮಕಗೊಂಡಿದ್ದ ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಅವರಿಗೆ ಬೆಂಬಲ ಸೂಚಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಫಿರೋಜ್‌ ಮುಸ್ಲಿಂ ಧರ್ಮದವರು ಎನ್ನುವ ಕಾರಣಕ್ಕೆ ಸಂಸ್ಕೃತ ವಿಭಾಗದ 30 ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರಿಂದ ಪಾಠ ಕೇಳಲು ನಿರಾಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಧರ್ಮ ತಾರತಮ್ಯವನ್ನು ಖಂಡಿಸಿ, ಫಿರೋಜ್‌ ಖಾನ್‌ ಅವರನ್ನು ವಿದ್ಯಾರ್ಥಿಗಳು ಸ್ವೀಕರಿಸಬೇಕು. ಮತ್ತೆ ನೇಮಕ ಮಾಡಿಕೊಳ್ಳಬೇಕು ಎಂದು ನೂರಾರು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಜಂಟಿ ಕ್ರಿಯಾ ಸಮಿತಿ ಬ್ಯಾನರ್ ಅಡಿಯಲ್ಲಿ, ಎಬಿವಿಪಿ ವಿದ್ಯಾರ್ಥಿ ಸಂಘಟನೆಯನ್ನು ಹೊರತುಪಡಿಸಿ, ಉಳಿದ ವಿದ್ಯಾರ್ಥಿಗಳ ಗುಂಪು ಫಿರೋಜ್‌ ಖಾನ್‌ ಅವರಿಗೆ ಬೆಂಬಲ ಸೂಚಿಸಿತು. ಕೈಯಲ್ಲಿ ಫಿರೋಜ್‌ ಖಾನ್‌ ಪರ ಭಿತ್ತಿಪತ್ರ, ಬ್ಯಾನರ್‌ ಹಿಡಿದು ಪ್ರತಿಭಟನೆ ನಡೆಸಿದರು. ನವೆಂಬರ್‌ 5ರಂದು ಫಿರೋಜ್‌ ಖಾನ್‌, ಸಂಸ್ಕೃತ ವಿದ್ಯಾಧರ್ಮ ವಿಜ್ಞಾನ ವಿಭಾಗದ ಇಲಾಖೆಯ ಉಪ ಪ್ರಾಧ್ಯಾಪಕ ಹುದ್ದೆಗೆ ನೇಮಕಗೊಂಡಿದ್ದರು. ಆದರೆ ಸಂಸ್ಕೃತ ವಿಭಾಗ ವಿದ್ಯಾರ್ಥಿಗಳು ಫಿರೋಜ್‌, ಮುಸ್ಲಿಂ ಎಂಬ ಕಾರಣದಿಂದ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕ್ರಮವನ್ನು ಖಂಡಿಸಿ, ಇತರೆ ವಿದ್ಯಾರ್ಥಿಗಳು ಖಂಡಿಸಿದ್ದಾರೆ.

ಲಂಕಾ ಗೇಟ್‌ನಿಂದ ರವಿದಾಸ್‌ ಗೇಟ್‌ವರೆಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ’ನಾವು ನಿಮ್ಮೊಂದಿಗೆ ಇದ್ದೇವೆ. ಭಾಷೆಗೆ ಧರ್ಮದ ನಂಟಿಲ್ಲ’. ಯಾರು ಬೇಕಾದರೂ ಯಾವ ಭಾಷೆಯನ್ನಾದರೂ ಕಲಿಯಬಹುದು ಮತ್ತು ಕಲಿಸಬಹುದು ಎಂದು ಘೋಷಣೆ ಕೂಗುತ್ತ, ಬ್ಯಾನರ್‌ ಹಿಡಿದು, ಫಿರೋಜ್‌ ಖಾನ್‌ ಅವರಿಗೆ ಬೆಂಬಲ ಸೂಚಿಸಿದರು.

ಧರ್ಮ ಮತ್ತು ಜಾತಿ ಆಧಾರಿಸಿ ವಿಶ್ವವಿದ್ಯಾಲಯಗಳಲ್ಲಿ ತಾರತಮ್ಯ ಮಾಡುವುದು ಅಸಾಂವಿಧಾನಿಕ ಕ್ರಮ. ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ಸಂಸ್ಥಾಪಕ ಮದನ್‌ ಮೋಹನ್‌ ಮಾಳವಿಯಾ ಸಹ ಭಾರತ ಕೇವಲ ಹಿಂದೂಗಳದ್ದಲ್ಲ ಇಲ್ಲಿ ಮುಸ್ಲಿಂ, ಸಿಖ್ಖ್‌, ಕ್ರಿಶ್ಚಿಯನ್‌, ಜೈನ್‌ ಅವರನ್ನೂ ಒಳಗೊಂಡಿದ್ದು, ಎಲ್ಲರ ಭಾರತ ಎಂದಿದ್ದರು ಎಂದು ರಾಜ್‌ ಅಭಿಶೇಕ್‌ ಹೇಳಿದರು.

ಇದನ್ನೂ ಓದಿ: ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಖಾನ್‌ ಅವರು ವಿದ್ಯಾರ್ಥಿಗಳಿಗೆ ಕಲಿಸಲು ಸಾಧ್ಯವಾಗಿಲ್ಲ. ನವೆಂಬರ್‌ 7ರಿಂದಲೇ ವಿಭಾಗದ ಗೇಟ್‌ ಬಂದ್‌ ಮಾಡಲಾಗಿದೆ. ವಿಭಾಗದ ಡೀನ್‌ ಮಾತನಾಡಿ, ಯಾರೂ ಪ್ರತಿಭಟನೆಯಲ್ಲಿ ಭಾಗಿಯಾಗಬೇಡಿ. ತರಗತಿಗಳನ್ನು ತೆಗೆದುಕೊಳ್ಳಿ, ಪರೀಕ್ಷೆ ಸಮಯ ಹತ್ತಿರವಾಗುತ್ತಿದೆ ಎಂದು ಮನವಿ ಮಾಡಿದ್ದಾರೆ. ಆದರೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸಲಾವಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...