Homeಚಳವಳಿಹೈದರಾಬಾದ್‌‌ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಿಸಿದ ವಿದ್ಯಾರ್ಥಿಗಳು

ಹೈದರಾಬಾದ್‌‌ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಿಸಿದ ವಿದ್ಯಾರ್ಥಿಗಳು

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಬಿಬಿಸಿ ತಯಾರಿಸಿರುವ, ‘ಇಂಡಿಯಾ – ದಿ ಮೋದಿ ಕ್ವಶ್ಚನ್‌’ ಸಾಕ್ಷ್ಯಚಿತ್ರದ ವಿರುದ್ಧ ವಿಧಿಸಿದ ಸೆನ್ಸಾರ್ಶಿಪ್ ಅನ್ನು ವಿರೋಧಿಸಿ, ಹಲವಾರು ವಿದ್ಯಾರ್ಥಿ ಸಂಘಟನೆಗಳು ದೇಶಾದ್ಯಂತ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಪ್ರದರ್ಶನಗಳನ್ನು ಆಯೋಜಿಸುತ್ತಿವೆ.

ಜನವರಿ 26ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯ (EFLU) ಮತ್ತು ಹೈದರಾಬಾದ್ ವಿಶ್ವವಿದ್ಯಾಲಯ (UoH) ವಿದ್ಯಾರ್ಥಿ ಸಂಘಟನೆಗಳು ತಮ್ಮ ಕ್ಯಾಂಪಸ್ ಆವರಣದಲ್ಲಿ ನಿಷೇಧಿತ ಸಾಕ್ಷ್ಯಚಿತ್ರವನ್ನು ವೀಕ್ಷಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುಮಾರು 60-70 ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಜಮಾಯಿಸಿ ತಮ್ಮ ಸೆಲ್ ಫೋನ್ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು ಎಂದು EFLU ನ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಕಾರ್ಯಕ್ರಮವನ್ನು  ಪೂರ್ವಸಿದ್ಧತೆಯಿಲ್ಲದೆ ಯೋಜಿಸಲಾಗಿದ್ದು, ವಿಶ್ವವಿದ್ಯಾಲಯದ ಆಡಳಿತವು ತಡೆಯಬಹುದಾಗಿದ್ದರಿಂದ ಕಾರ್ಯಕ್ರಮದ ಬಗ್ಗೆ ಹೆಚ್ಚು ಪ್ರಚಾರ ಮಾಡಲಾಗಿಲ್ಲ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಚಿತ್ರ ಪ್ರದರ್ಶನದ ನಂತರ, ಸಾಕ್ಷ್ಯಚಿತ್ರದ ಬಗ್ಗೆ ಸಂವಾದ ನಡೆಸಲಾಗಿದೆ ಎಂದು ವಿದ್ಯಾರ್ಥಿ ಹೇಳಿದ್ದಾರೆ. ಇಷ್ಟೆ ಅಲ್ಲದೆ, ಸೆನ್ಸಾರ್‌ಶಿಪ್‌ನಿಂದಾಗಿ ಉಂಟಾಗುವ ಸಮಸ್ಯೆಗಳು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಗಳು ಮತ್ತು ವಿಶ್ವವಿದ್ಯಾಲಯದಲ್ಲಿ ದಮನ ಸಂಸ್ಕೃತಿಯ ಕುರಿತು ಚರ್ಚೆ ನಡೆಯಿತು ಎಂದು ವಿದ್ಯಾರ್ಥಿ ಹೇಳಿದ್ದಾರೆ.

ಅದೇ ರೀತಿ, ಹೈದರಾಬಾದ್ ವಿಶ್ವವಿದ್ಯಾನಿಲಯದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಘಟಕವು ಗುರುವಾರ ಕ್ಯಾಂಪಸ್‌ನ ಲೇಡಿಸ್ ಹಾಸ್ಟೆಲ್‌ನಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿತ್ತು. ಇದಕ್ಕೆ ಪ್ರತೀಕಾರವಾಗಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರು ಕ್ಯಾಂಪಸ್‌ನ ಬೇರೆ ಸ್ಥಳದಲ್ಲಿ ದಿ ಕಾಶ್ಮೀರ ಫೈಲ್ಸ್ ಅನ್ನು ಪ್ರದರ್ಶಿಸಿದರು. ಎರಡು ಪ್ರದರ್ಶನಗಳೂ ಯಾವುದೇ ಗೊಂದಲವಿಲ್ಲದೆ ಶಾಂತಿಯುತವಾಗಿ ಮುಕ್ತಾಯಗೊಂಡಿವೆ.

ಇದಕ್ಕೂ ಮೊದಲು, ಫ್ರಟರ್ನಿಟಿ ಮೂವ್‌ಮೆಂಟ್ ಸಂಘಟನೆಗೆ ಸೇರಿದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದರು. ಹೀಗಾಗಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಚಾರಣೆಯನ್ನು ಪ್ರಾರಂಭಿಸಿತ್ತು.

ಬಿಬಿಸಿ ಸಾಕ್ಷ್ಯಚಿತ್ರವು 2002 ರ ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿಯವರ ಪಾತ್ರವನ್ನು ವಿಮರ್ಶಾತ್ಮಕವಾಗಿ ಚರ್ಚಿಸಿದೆ. ಗಲಭೆ ವೇಳೆ ಪ್ರಧಾನಿ ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಸಾಕ್ಷ್ಯಚಿತ್ರವು 2002 ರ ಹಿಂಸಾಚಾರವನ್ನು ಸ್ವತಂತ್ರವಾಗಿ ತನಿಖೆ ನಡೆಸಿದ್ದ ಇಂಗ್ಲೇಂಡ್‌ನ ಅಧಿಕಾರಿಗಳನ್ನು ಸಂದರ್ಶಿಸಿತ್ತು, ಜೊತೆಗೆ ಗಲಭೆಯನ್ನು ವರದಿ ಮಾಡಿದ್ದ ಬಿಬಿಸಿ ಪತ್ರಕರ್ತರನ್ನು ಕೂಡಾ ಸಂದರ್ಶಿಸಿದೆ.

ಇದನ್ನೂ ಓದಿ: ‘ಜನರ ಮೇಲಿನ ಹಿಂದಿ ಹೇರಿಕೆಯನ್ನು ವಿರೋಧಿಸುತ್ತೇವೆ’: ಕೇಂದ್ರದ ವಿರುದ್ಧ ಗುಡುಗಿದ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...