Homeಮುಖಪುಟವಿದೇಶಗಳಲ್ಲಿ ವ್ಯಾಸಂಗ: ಜಾತಿ ವ್ಯವಸ್ಥೆ, ಭಾರತೀಯ ಸಂಸ್ಕೃತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ನೀಡಲ್ಲ!

ವಿದೇಶಗಳಲ್ಲಿ ವ್ಯಾಸಂಗ: ಜಾತಿ ವ್ಯವಸ್ಥೆ, ಭಾರತೀಯ ಸಂಸ್ಕೃತಿ ಅಧ್ಯಯನಕ್ಕೆ ಕೇಂದ್ರ ಸರ್ಕಾರ ವಿದ್ಯಾರ್ಥಿವೇತನ ನೀಡಲ್ಲ!

ಕಳೆದ ಏಳು ದಶಕಗಳಿಂದ ಕೇಂದ್ರ ಸರ್ಕಾರ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸಾಗರೋತ್ತರ ವಿದ್ಯಾರ್ಥಿವೇತನ ನೀಡುತ್ತಿದೆ. ಅಂಬೇಡ್ಕರ್‌ ಆಶಯದಂತೆ ಜಾರಿಗೆ ಬಂದ ಈ ಯೋಜನೆಗೆ ಈಗ ಬಿಜೆಪಿ ಸರ್ಕಾರ ಹಲವು ನಿರ್ಬಂಧಗಳನ್ನು ಹೇರುತ್ತಿದೆ!

- Advertisement -
- Advertisement -

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ಯೋಜನೆಯು (NOS) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಯ ಪಂಗಡ, ಭೂರಹಿತ ಕೃಷಿ ಕಾರ್ಮಿಕ ಕುಟುಂಬಗಳ ವಿದ್ಯಾರ್ಥಿಗಳಿಗಾಗಿ 1954ರಿಂದಲೂ ಜಾರಿಯಲ್ಲಿದೆ.

ಭಾರತದಾಚೆಯ ಉನ್ನತ-ಶ್ರೇಣಿಯ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಶಿಕ್ಷಣವನ್ನು (ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿಗಳು) ಪಡೆಯಲು ಈ ಯೋಜನೆಯಡಿ ಸಂಬಂಧಪಟ್ಟ ವಿದ್ಯಾರ್ಥಿಗಳು ಧನಸಹಾಯ ಪಡೆಯಬಹುದು. ಈ ವಿದ್ಯಾರ್ಥಿವೇತನ ಕಾರ್ಯಕ್ರಮವು 1954ರಲ್ಲಿ ಪ್ರಾರಂಭವಾಗಿ ಸುಮಾರು ಏಳು ದಶಕಗಳಿಂದ ಚಾಲ್ತಿಯಲ್ಲಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಸುಮಾರು 5.53 ಲಕ್ಷ ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಅಧ್ಯಯನ ಮಾಡುತ್ತಾರೆ. ಇದಕ್ಕೆ ಹೋಲಿಸಿದರೆ, NOS ಕಾರ್ಯಕ್ರಮದ ಗುರಿಯು ಕೇವಲ 100 ವಿದ್ಯಾರ್ಥಿಗಳಿಗೆ ಮಾತ್ರ ಇದೆ.

ಕಳೆದ ವರ್ಷದವರೆಗೆ, NOS ವಿದ್ಯಾರ್ಥಿವೇತನ ಕಾರ್ಯಕ್ರಮವು ಎಲ್ಲಾ ಪ್ರಮುಖ ವಿಭಾಗಗಳಿಗೂ ಅನ್ವಯವಾಗುತ್ತಿತ್ತು. ಆದರೆ ಈ ವರ್ಷ ಹೊರಡಿಸಲಾದ ಹೊಸ ನಿಯಮದ ಪ್ರಕಾರ, “ಭಾರತೀಯ ಸಂಸ್ಕೃತಿ, ಪರಂಪರೆ, ಇತಿಹಾಸ”ದ ಮೇಲಿನ ಸಾಮಾಜಿಕ ಅಧ್ಯಯನಗಳಿಗೆ ಸಂಬಂಧಿಸಿದ ವಿಷಯಗಳು ಅಥವಾ ಕೋರ್ಸ್‌ಗಳಿಗೆ ಸಾಗರೋತ್ತರ ವಿದ್ಯಾರ್ಥಿ ವೇತನ ಅನ್ವಯವಾಗುವುದಿಲ್ಲ.

ಇದನ್ನೂ ಓದಿರಿ: ರಾಜಧಾನಿಯಲ್ಲಿ ಭೋರ್ಗರೆದ ’ಭೀಮ ಸಾಗರ’: ರ್‍ಯಾಲಿಯನ್ನು ಚಿತ್ರಗಳಲ್ಲಿ ನೋಡಿ

ಇದಲ್ಲದೆ, ಯಾವ ವಿಷಯವು ಈ ವರ್ಗಗಳ ಅಡಿಯಲ್ಲಿ ಬರುತ್ತದೆ ಎಂಬುದರ ಕುರಿತು “NOSನ ಆಯ್ಕೆ ಮತ್ತು ಪರಿಶೀಲನಾ ಸಮಿತಿ ನಿರ್ಧರಿಸುತ್ತದೆ. ಈ ಹಠಾತ್ ಬದಲಾವಣೆಯನ್ನು ಅರ್ಜಿ ಸಲ್ಲಿಸಲು ಕೇವಲ ಎರಡು ತಿಂಗಳು ಬಾಕಿ ಇರುವ ಮೊದಲು ಮಾಡಲಾಗಿದೆ. ಮುಂಬರುವ ಶೈಕ್ಷಣಿಕ ವರ್ಷಕ್ಕೆ ಈ ವಿದ್ಯಾರ್ಥಿವೇತನವನ್ನು ಪಡೆಯಲು ಇಚ್ಛಿಸಿರುವವರಿಗೆ ದೊಡ್ಡ ಪೆಟ್ಟು ನೀಡಲಾಗಿದೆ.

ಈ ಹೊಸ ನಿಯಮವು ಭಾರತ ಜಾತಿ ವ್ಯವಸ್ಥೆ, ಹಿಂದೂಧರ್ಮ, ಭಾರತದಲ್ಲಿನ ಲಿಂಗ ತಾರತಮ್ಯ, ಬ್ರಾಹ್ಮಣ ಸಂಸ್ಕೃತಿ ಮತ್ತು ಸಂಪ್ರದಾಯ, ಜಾತಿಗೆ ಅಂಟಿಕೊಂಡ ಬಡತನ ಇತ್ಯಾದಿ ವಿಷಯಗಳ ಕುರಿತು ವಿದೇಶಿ ವಿವಿಗಳಲ್ಲಿ ಅಧ್ಯಯನ ಮಾಡದಂತೆ ತಡೆಯುತ್ತದೆ ಎಂದು ಅಂಬೇಡ್ಕರ್‌ವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿನ ಜಾತಿ ಮತ್ತು ಲಿಂಗ ತಾರತಮ್ಯವು ವಿದೇಶದಲ್ಲಿ ಟೀಕೆಗಳಿಗೆ ಒಳಗಾಗುತ್ತಿರುವಾಗ, ಪಾಶ್ಚಿಮಾತ್ಯ ದೇಶಗಳಲ್ಲಿ ಚರ್ಚೆಗಳನ್ನು ಹುಟ್ಟುಹಾಕಿರುವ ಸಂದರ್ಭದಲ್ಲಿ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನದ ಕುರಿತಾದ ಚರ್ಚೆಯು ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ‘ಅಂಬೇಡ್ಕರ್‌ರಿಗೆ ಅವಮಾನವಾದರೆ ಶೋಷಿತ ಸಮುದಾಯ ಸುಮ್ಮನಿರುವುದಿಲ್ಲ’

2021-22ರವರೆಗೆ ಈ ನಿಬಂಧನೆ ಇರಲಿಲ್ಲ. ಯಾವುದೇ ವಿಷಯದ ಅಧ್ಯಯನಕ್ಕೆ ವಿದ್ಯಾರ್ಥಿವೇತನವನ್ನು ಈವರೆಗೆ ನೀಡಲಾಗುತ್ತಿತ್ತು. ಮುಖ್ಯವಾಗಿ ವಿಷಯದ ಆಯ್ಕೆ ಈಗ ಪರಿಶೀಲನಾ ಸಮಿತಿಯ ಮುಂದೆ ಬರುತ್ತದೆ.

ವಿದ್ಯಾರ್ಥಿವೇತನವು 2021-22 ರವರೆಗೆ ಅಂತಹ ಷರತ್ತುಗಳನ್ನು ಹೊಂದಿರಲಿಲ್ಲ. 2021-22ರ ಯೋಜನಾ ಮಾರ್ಗಸೂಚಿಯು ಯಾವುದೇ ಅಧ್ಯಯನ ಕ್ಷೇತ್ರಕ್ಕೆ ವಿದ್ಯಾರ್ಥಿವೇತನ ಲಭ್ಯವಿದೆ ಎಂದು ಹೇಳಿತ್ತು.

ಸಂಶೋಧನಾ ವಿಷಯಗಳ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಪರಿಶೀಲನಾ ಸಮಿತಿಯಿಂದಾಗಿ ಯೋಜನೆಯ ವ್ಯಾಪ್ತಿಯನ್ನು ಮತ್ತಷ್ಟು ಕುಗ್ಗಿಸಬಹುದು ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯಂ ಅವರಿಗೆ ಇಮೇಲ್ ಕಳುಹಿಸಿರುವ ದಿ ಟೆಲಿಗ್ರಾಫ್‌ ಪತ್ರಿಕೆಯು, “ಸರ್ಕಾರವು ಎತ್ತಿರುವ ಕಾಳಜಿಗಳ ಬಗ್ಗೆ ಸವಿವರವಾಗಿ ಹೇಳಬೇಕು” ಎಂದು ಒತ್ತಾಯಿಸಿದೆ. ಆದರೆ ಪ್ರತಿಕ್ರಿಯೆ ಈವರೆಗೆ ಬಂದಿಲ್ಲ ಎಂದು ಪತ್ರಿಕಾ ವರದಿ ಹೇಳಿದೆ.

ಕಳೆದ ವರ್ಷದವರೆಗೆ ಯೋಜನೆಯಡಿಯಲ್ಲಿ ಒಟ್ಟು ವಿದ್ಯಾರ್ಥಿವೇತನಗಳ ಸಂಖ್ಯೆ 100 ಆಗಿತ್ತು, ಇದನ್ನು 2022-23 ಅವಧಿಯಲ್ಲಿ 125ಕ್ಕೆ ಹೆಚ್ಚಿಸಲಾಗಿದೆ. ಕುಟುಂಬದ ವಾರ್ಷಿಕ ಆದಾಯ ರೂ. 8 ಲಕ್ಷಕ್ಕಿಂತ ಕಡಿಮೆ ಇರುವವರು ಅರ್ಜಿ ಸಲ್ಲಿಸಬಹುದು. ಸಚಿವಾಲಯವು ಅಭ್ಯರ್ಥಿಗಳಿಂದ ಮಾರ್ಚ್ 31ರವರೆಗೆ ಅರ್ಜಿಗಳನ್ನು ಕೋರಿದೆ.

ಯುಎಸ್‌ನಲ್ಲಿ ಸಂಶೋಧನೆಗೆ ಅರ್ಜಿ ಸಲ್ಲಿಸುವವರಿಗೆ, ಭಾರತ ಸರ್ಕಾರ ಸಂಪೂರ್ಣ ಬೋಧನಾ ಶುಲ್ಕವನ್ನು ಪಾವತಿಸುತ್ತದೆ. ಜೊತೆಗೆ 15,400 ಡಾಲರ್‌‌ ವಾರ್ಷಿಕ ನಿರ್ವಹಣೆ, 1,500 ಡಾಲರ್‌ ಕಾಂಟಿಜೆನ್ಸಿ ಭತ್ಯೆ, ವೈದ್ಯಕೀಯ ವಿಮೆ, ವಿಸಾ ಖರ್ಚು ವೆಚ್ಚಗಳನ್ನು ಭರಿಸುತ್ತದೆ.

ಐಐಎಂ ಬೆಂಗಳೂರಿನ ಪ್ರೊ.ದೀಪಕ್ ಮಲ್ಘನ್ ಅವರು “ಸರ್ಕಾರವು ಇಲ್ಲಿ ಸ್ಪಷ್ಟವಾಗಿ ಮತಿಭ್ರಮಣೆಯಾಗಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕರೊಬ್ಬರು, “ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಆಶಯದಂತೆ ಸಾಗರೋತ್ತರ ವಿದ್ಯಾರ್ಥಿವೇತನವನ್ನು ಅಂದಿನ ಪ್ರಧಾನಿ ಜವಹರಲಾಲ್‌ ನೆಹರೂ ಜಾರಿಗೆ ತಂದಿದ್ದರು. ಇಲ್ಲಿಯವರೆಗೂ ಧನ ಸಹಾಯವನ್ನು ಸರ್ಕಾರ ಯಾವುದೇ ಅಡತಡೆ ಇಲ್ಲದೆ ಮಾಡುತ್ತಿತ್ತು. ಇಂಥದ್ದೇ ಸಂಶೋಧನೆ ಮಾಡಬೇಕು ಎಂದು ಸರ್ಕಾರ ಇಲ್ಲಿಯವರೆಗೆ ನಿರ್ಬಂಧ ವಿಧಿಸಿರಲಿಲ್ಲ. ಆದರೆ ಈಗ ಕೆಲವು ಮಾನವಿಕ ಹಾಗೂ ವಿಜ್ಞಾನ ವಿಷಯಗಳಿಗೆ ನಿರ್ಬಂಧ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಯಾವುದೇ ವಿದ್ಯಾರ್ಥಿಗೆ ಈ ವಿಷಯವನ್ನು ಓದಬಾರದೆಂದು ಈ ಸರ್ಕಾರ ಹೇಗೆ ನಿರ್ಬಂಧ ವಿಧಿಸಲು ಸಾಧ್ಯ?” ಎಂದು ಅವರು ಪ್ರಶ್ನಿಸಿದರು.


ಇದನ್ನೂ ಓದಿರಿ: ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...