Homeಮುಖಪುಟಸಾವಿರಕ್ಕೂ ಅಧಿಕ 'ನಕಲಿ ಮತದಾರರು' ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

- Advertisement -
- Advertisement -

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ಮಗಂತಿ ಗೋಪಿನಾಥ್ ಅವರ ನಿಧನದಿಂದ ತೆರವಾದ ಹೈದರಾಬಾದ್‌ನ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ (ನ.11) ಉಪ ಚುನಾವಣೆ ನಡೆಯಿತು.

ಉಪ ಚುನಾವಣೆಗೆ ಬಿಆರ್‌ಎಸ್‌ ಪಕ್ಷ ಮಗಂತಿ ಗೋಪಿನಾಥ್ ಅವರ ಪತ್ನಿ ಮಗಂತಿ ಸುನಿತಾ ಅವರನ್ನು ಕಣಕ್ಕಿಳಿಸಿದ್ದು, ಅನುಕಂಪದ ಆಧಾರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಕಾಂಗ್ರೆಸ್ ವಿ. ನವೀನ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದು, ಇವರಿಗೆ ಎಐಎಂಐಎಂ ಬೆಂಬಲ ಇದೆ ಎಂದು ವರದಿಯಾಗಿದೆ. ಇನ್ನು ಬಿಜೆಪಿಯಿಂದ ಲಂಕಲ ದೀಪಕ್ ರೆಡ್ಡಿ ಎಂಬವರು ಸ್ಪರ್ಧೆ ಮಾಡಿದ್ದಾರೆ.

ಮತದಾನಕ್ಕೂ ಮುನ್ನ ‘ಮತಗಳ್ಳತನ’ ಬಯಲು

ಜುಲಿಬಿ ಹಿಲ್ಸ್ ಉಪ ಚುನಾವಣೆಯ ಮತದಾನಕ್ಕೂ ಮುನ್ನಾದಿನ, ಅಂದರೆ ನವೆಂಬರ್ 10, 2025ರಂದು ‘ಪೊಲಿ ಇಂಟೆಲ್ ಲ್ಯಾಬ್’ ಎಂಬ ಸಂಸ್ಥೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 1,609 ನಕಲಿ ಮತದಾರರನ್ನು ಗುರುತಿಸಿರುವುದಾಗಿ ವೈಜ್ಞಾನಿಕ ಮತ್ತು ತಾಂತ್ರಿಕ ದಾಖಲೆಗಳೊಂದಿಗೆ ವರದಿ ಬಿಡುಗಡೆ ಮಾಡಿದೆ.

ಜುಬಿಲಿ ಹಿಲ್ಸ್ ಕ್ಷೇತ್ರದ 407 ಮತಗಟ್ಟೆಗಳಲ್ಲಿ 1,609 ನಕಲಿ ಮತದಾರರ ನೋಂದಣಿಗಳನ್ನು ಸಮಗ್ರ ವಿಶ್ಲೇಷಣೆಯು ಬಹಿರಂಗಪಡಿಸಿದೆ. ಇದನ್ನು ಎಪಿಕ್ (ಮತದಾರರ ಗುರುತಿನ ಚೀಟಿ) ಹೊಂದಾಣಿಕೆ ಮತ್ತು ಹಸ್ತಚಾಲಿತ (ಮ್ಯಾನುಯೆಲ್) ಪರಿಶೀಲನೆಯ ಮೂಲಕ ಪತ್ತೆ ಹಚ್ಚಲಾಗಿದೆ ಎಂದು ವರದಿ ಹೇಳಿದೆ.

407 ಮತಗಟ್ಟೆಗಳ ಪೈಕಿ 321 ಮತಗಟ್ಟೆಗಳಲ್ಲಿ (ಶೇ.79) ಕನಿಷ್ಠ 1ರಿಂದ ಗರಿಷ್ಠ 19ರವರೆಗೆ ನಕಲಿ ಮತದಾರರು ಪತ್ತೆಯಾಗಿದ್ದಾರೆ. ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ-115ರಲ್ಲಿ ಗರಿಷ್ಠ 19, ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ -103ರಲ್ಲಿ 18 ನಕಲಿ ಮತದಾರರು ಪತ್ತೆಯಾಗಿದ್ದಾರೆ ಎಂದು ವರದಿ ವಿವರಿಸಿದೆ.

ಚುನಾವಣಾ ಆಯೋಗದ ಪ್ರಕಾರ, ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,01,379 ಮತದಾರರಿದ್ದಾರೆ. ಈ ಪೈಕಿ 2,08,558 ಪುರುಷರು ಮತ್ತು 1,92,795 ಮಹಿಳೆಯರು ಒಳಗೊಂಡಿದ್ದಾರೆ.

ಇವರಲ್ಲಿ, “ಒಂದು ಮತಗಟ್ಟೆಯಲ್ಲಿ ಒಬ್ಬ ವ್ಯಕ್ತಿಯ ಹೆಸರು ಅಥವಾ ಮಾಹಿತಿ ಒಂದಕ್ಕಿಂತ ಹೆಚ್ಚು ಬಾರಿ ಕಾಣಿಸಿಕೊಂಡಿರುವುದು, ಒಬ್ಬ ವ್ಯಕ್ತಿಯ ಮಾಹಿತಿ ವಿವಿಧ ಮತಗಟ್ಟೆಗಳಲ್ಲಿ ಪುನರಾವರ್ತನೆಯಾಗಿರುವುದು, ಒಬ್ಬರ ಹೆಸರು ಅಥವಾ ಮಾಹಿತಿ ಒಂದೇ ಮತಗಟ್ಟೆಯಲ್ಲಿ ಮೂರು ಬಾರಿ ದಾಖಲಾಗಿರುವುದು ಮತ್ತು ಒಬ್ಬ ವ್ಯಕ್ತಿಯ ಮಾಹಿತಿ ಹಲವು ವಿಭಿನ್ನ ಮತಗಟ್ಟೆಗಳಲ್ಲಿ ಹಲವು ಬಾರಿಗೆ ಕಾಣಿಸಿಕೊಂಡಿರುವುದು” ಹೀಗೆ ನಾಲ್ಕು ವಿಧದಲ್ಲಿ ನಕಲಿ ಮತದಾರರನ್ನು ಪತ್ತೆ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.

ಒಂದೇ ರೀತಿಯ ಹೆಸರುಗಳು, ತಂದೆ, ತಾಯಿ, ಗಂಡ, ಹೆಂಡತಿಯ ಸಂಬಂಧಗಳು ಒಂದೇ ರೀತಿ ಇರುವುದು, ಸಂಬಂಧಿಕರ ಹೆಸರು ಒಂದೇ ರೀತಿ ಇರುವುದು, ಮನೆ ಸಂಖ್ಯೆ, ವಯಸ್ಸು ಮತ್ತು ಲಿಂಗ ಒಂದೇ ರೀತಿ ಇರುವುದನ್ನು ನಕಲಿ ಮತದಾರರ ಪತ್ತೆಗೆ ಪರಿಗಣಿಸಲಾಗಿದೆ ಎಂದು ಹೇಳಿದೆ.

ಎಲ್ಲಾ ನಕಲಿ ಮತದಾರರ ವಿವರವಾದ ಮಾಹಿತಿ, ಒಂದೇ ರೀತಿಯ ಗುರುತಿನ ಚೀಟಿಗಳ ಹೋಲಿಕೆಯ ದಾಖಲೆ ಮತ್ತು ಸಂಬಂಧಗಳು ಒಂದೇ ರೀತಿ ಇರುವ ಮಾಹಿತಿಯ ದಾಖಲೆಗಳನ್ನು ಸಂಸ್ಥೆ ಬಹಿರಂಗಪಡಿಸಿದೆ.

ಪೈಥಾನ್ ಪ್ರೋಗ್ರಾಮ್, ಸುಧಾರಿತ ಅಕ್ಷರ ಗುರುತಿಸುವ ತಂತ್ರ (advanced text-recognition algorithm) ಮತ್ತು ಮತದಾರರ ಗುರುತಿನ ಚೀಟಿ ಹೋಲಿಕೆ ತಂತ್ರ (EPIC matching techniques) ಇವುಗಳ ಮೂಲಕ ವೈಜ್ಞಾನಿಕವಾಗಿ ನಕಲಿ ಮತಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲಿ ಇಂಟೆಲ್ ಲ್ಯಾಬ್ ಸಂಸ್ಥೆ ತಿಳಿಸಿದೆ.

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...