Homeಮುಖಪುಟಸಾವಿರಕ್ಕೂ ಅಧಿಕ 'ನಕಲಿ ಮತದಾರರು' ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

- Advertisement -
- Advertisement -

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ಮಗಂತಿ ಗೋಪಿನಾಥ್ ಅವರ ನಿಧನದಿಂದ ತೆರವಾದ ಹೈದರಾಬಾದ್‌ನ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ (ನ.11) ಉಪ ಚುನಾವಣೆ ನಡೆಯಿತು.

ಉಪ ಚುನಾವಣೆಗೆ ಬಿಆರ್‌ಎಸ್‌ ಪಕ್ಷ ಮಗಂತಿ ಗೋಪಿನಾಥ್ ಅವರ ಪತ್ನಿ ಮಗಂತಿ ಸುನಿತಾ ಅವರನ್ನು ಕಣಕ್ಕಿಳಿಸಿದ್ದು, ಅನುಕಂಪದ ಆಧಾರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಕಾಂಗ್ರೆಸ್ ವಿ. ನವೀನ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದು, ಇವರಿಗೆ ಎಐಎಂಐಎಂ ಬೆಂಬಲ ಇದೆ ಎಂದು ವರದಿಯಾಗಿದೆ. ಇನ್ನು ಬಿಜೆಪಿಯಿಂದ ಲಂಕಲ ದೀಪಕ್ ರೆಡ್ಡಿ ಎಂಬವರು ಸ್ಪರ್ಧೆ ಮಾಡಿದ್ದಾರೆ.

ಮತದಾನಕ್ಕೂ ಮುನ್ನ ‘ಮತಗಳ್ಳತನ’ ಬಯಲು

ಜುಲಿಬಿ ಹಿಲ್ಸ್ ಉಪ ಚುನಾವಣೆಯ ಮತದಾನಕ್ಕೂ ಮುನ್ನಾದಿನ, ಅಂದರೆ ನವೆಂಬರ್ 10, 2025ರಂದು ‘ಪೊಲಿ ಇಂಟೆಲ್ ಲ್ಯಾಬ್’ ಎಂಬ ಸಂಸ್ಥೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 1,609 ನಕಲಿ ಮತದಾರರನ್ನು ಗುರುತಿಸಿರುವುದಾಗಿ ವೈಜ್ಞಾನಿಕ ಮತ್ತು ತಾಂತ್ರಿಕ ದಾಖಲೆಗಳೊಂದಿಗೆ ವರದಿ ಬಿಡುಗಡೆ ಮಾಡಿದೆ.

ಜುಬಿಲಿ ಹಿಲ್ಸ್ ಕ್ಷೇತ್ರದ 407 ಮತಗಟ್ಟೆಗಳಲ್ಲಿ 1,609 ನಕಲಿ ಮತದಾರರ ನೋಂದಣಿಗಳನ್ನು ಸಮಗ್ರ ವಿಶ್ಲೇಷಣೆಯು ಬಹಿರಂಗಪಡಿಸಿದೆ. ಇದನ್ನು ಎಪಿಕ್ (ಮತದಾರರ ಗುರುತಿನ ಚೀಟಿ) ಹೊಂದಾಣಿಕೆ ಮತ್ತು ಹಸ್ತಚಾಲಿತ (ಮ್ಯಾನುಯೆಲ್) ಪರಿಶೀಲನೆಯ ಮೂಲಕ ಪತ್ತೆ ಹಚ್ಚಲಾಗಿದೆ ಎಂದು ವರದಿ ಹೇಳಿದೆ.

407 ಮತಗಟ್ಟೆಗಳ ಪೈಕಿ 321 ಮತಗಟ್ಟೆಗಳಲ್ಲಿ (ಶೇ.79) ಕನಿಷ್ಠ 1ರಿಂದ ಗರಿಷ್ಠ 19ರವರೆಗೆ ನಕಲಿ ಮತದಾರರು ಪತ್ತೆಯಾಗಿದ್ದಾರೆ. ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ-115ರಲ್ಲಿ ಗರಿಷ್ಠ 19, ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ -103ರಲ್ಲಿ 18 ನಕಲಿ ಮತದಾರರು ಪತ್ತೆಯಾಗಿದ್ದಾರೆ ಎಂದು ವರದಿ ವಿವರಿಸಿದೆ.

ಚುನಾವಣಾ ಆಯೋಗದ ಪ್ರಕಾರ, ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,01,379 ಮತದಾರರಿದ್ದಾರೆ. ಈ ಪೈಕಿ 2,08,558 ಪುರುಷರು ಮತ್ತು 1,92,795 ಮಹಿಳೆಯರು ಒಳಗೊಂಡಿದ್ದಾರೆ.

ಇವರಲ್ಲಿ, “ಒಂದು ಮತಗಟ್ಟೆಯಲ್ಲಿ ಒಬ್ಬ ವ್ಯಕ್ತಿಯ ಹೆಸರು ಅಥವಾ ಮಾಹಿತಿ ಒಂದಕ್ಕಿಂತ ಹೆಚ್ಚು ಬಾರಿ ಕಾಣಿಸಿಕೊಂಡಿರುವುದು, ಒಬ್ಬ ವ್ಯಕ್ತಿಯ ಮಾಹಿತಿ ವಿವಿಧ ಮತಗಟ್ಟೆಗಳಲ್ಲಿ ಪುನರಾವರ್ತನೆಯಾಗಿರುವುದು, ಒಬ್ಬರ ಹೆಸರು ಅಥವಾ ಮಾಹಿತಿ ಒಂದೇ ಮತಗಟ್ಟೆಯಲ್ಲಿ ಮೂರು ಬಾರಿ ದಾಖಲಾಗಿರುವುದು ಮತ್ತು ಒಬ್ಬ ವ್ಯಕ್ತಿಯ ಮಾಹಿತಿ ಹಲವು ವಿಭಿನ್ನ ಮತಗಟ್ಟೆಗಳಲ್ಲಿ ಹಲವು ಬಾರಿಗೆ ಕಾಣಿಸಿಕೊಂಡಿರುವುದು” ಹೀಗೆ ನಾಲ್ಕು ವಿಧದಲ್ಲಿ ನಕಲಿ ಮತದಾರರನ್ನು ಪತ್ತೆ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.

ಒಂದೇ ರೀತಿಯ ಹೆಸರುಗಳು, ತಂದೆ, ತಾಯಿ, ಗಂಡ, ಹೆಂಡತಿಯ ಸಂಬಂಧಗಳು ಒಂದೇ ರೀತಿ ಇರುವುದು, ಸಂಬಂಧಿಕರ ಹೆಸರು ಒಂದೇ ರೀತಿ ಇರುವುದು, ಮನೆ ಸಂಖ್ಯೆ, ವಯಸ್ಸು ಮತ್ತು ಲಿಂಗ ಒಂದೇ ರೀತಿ ಇರುವುದನ್ನು ನಕಲಿ ಮತದಾರರ ಪತ್ತೆಗೆ ಪರಿಗಣಿಸಲಾಗಿದೆ ಎಂದು ಹೇಳಿದೆ.

ಎಲ್ಲಾ ನಕಲಿ ಮತದಾರರ ವಿವರವಾದ ಮಾಹಿತಿ, ಒಂದೇ ರೀತಿಯ ಗುರುತಿನ ಚೀಟಿಗಳ ಹೋಲಿಕೆಯ ದಾಖಲೆ ಮತ್ತು ಸಂಬಂಧಗಳು ಒಂದೇ ರೀತಿ ಇರುವ ಮಾಹಿತಿಯ ದಾಖಲೆಗಳನ್ನು ಸಂಸ್ಥೆ ಬಹಿರಂಗಪಡಿಸಿದೆ.

ಪೈಥಾನ್ ಪ್ರೋಗ್ರಾಮ್, ಸುಧಾರಿತ ಅಕ್ಷರ ಗುರುತಿಸುವ ತಂತ್ರ (advanced text-recognition algorithm) ಮತ್ತು ಮತದಾರರ ಗುರುತಿನ ಚೀಟಿ ಹೋಲಿಕೆ ತಂತ್ರ (EPIC matching techniques) ಇವುಗಳ ಮೂಲಕ ವೈಜ್ಞಾನಿಕವಾಗಿ ನಕಲಿ ಮತಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲಿ ಇಂಟೆಲ್ ಲ್ಯಾಬ್ ಸಂಸ್ಥೆ ತಿಳಿಸಿದೆ.

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...