Homeಮುಖಪುಟಸಾವಿರಕ್ಕೂ ಅಧಿಕ 'ನಕಲಿ ಮತದಾರರು' ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

- Advertisement -
- Advertisement -

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ಮಗಂತಿ ಗೋಪಿನಾಥ್ ಅವರ ನಿಧನದಿಂದ ತೆರವಾದ ಹೈದರಾಬಾದ್‌ನ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ (ನ.11) ಉಪ ಚುನಾವಣೆ ನಡೆಯಿತು.

ಉಪ ಚುನಾವಣೆಗೆ ಬಿಆರ್‌ಎಸ್‌ ಪಕ್ಷ ಮಗಂತಿ ಗೋಪಿನಾಥ್ ಅವರ ಪತ್ನಿ ಮಗಂತಿ ಸುನಿತಾ ಅವರನ್ನು ಕಣಕ್ಕಿಳಿಸಿದ್ದು, ಅನುಕಂಪದ ಆಧಾರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಕಾಂಗ್ರೆಸ್ ವಿ. ನವೀನ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದು, ಇವರಿಗೆ ಎಐಎಂಐಎಂ ಬೆಂಬಲ ಇದೆ ಎಂದು ವರದಿಯಾಗಿದೆ. ಇನ್ನು ಬಿಜೆಪಿಯಿಂದ ಲಂಕಲ ದೀಪಕ್ ರೆಡ್ಡಿ ಎಂಬವರು ಸ್ಪರ್ಧೆ ಮಾಡಿದ್ದಾರೆ.

ಮತದಾನಕ್ಕೂ ಮುನ್ನ ‘ಮತಗಳ್ಳತನ’ ಬಯಲು

ಜುಲಿಬಿ ಹಿಲ್ಸ್ ಉಪ ಚುನಾವಣೆಯ ಮತದಾನಕ್ಕೂ ಮುನ್ನಾದಿನ, ಅಂದರೆ ನವೆಂಬರ್ 10, 2025ರಂದು ‘ಪೊಲಿ ಇಂಟೆಲ್ ಲ್ಯಾಬ್’ ಎಂಬ ಸಂಸ್ಥೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 1,609 ನಕಲಿ ಮತದಾರರನ್ನು ಗುರುತಿಸಿರುವುದಾಗಿ ವೈಜ್ಞಾನಿಕ ಮತ್ತು ತಾಂತ್ರಿಕ ದಾಖಲೆಗಳೊಂದಿಗೆ ವರದಿ ಬಿಡುಗಡೆ ಮಾಡಿದೆ.

ಜುಬಿಲಿ ಹಿಲ್ಸ್ ಕ್ಷೇತ್ರದ 407 ಮತಗಟ್ಟೆಗಳಲ್ಲಿ 1,609 ನಕಲಿ ಮತದಾರರ ನೋಂದಣಿಗಳನ್ನು ಸಮಗ್ರ ವಿಶ್ಲೇಷಣೆಯು ಬಹಿರಂಗಪಡಿಸಿದೆ. ಇದನ್ನು ಎಪಿಕ್ (ಮತದಾರರ ಗುರುತಿನ ಚೀಟಿ) ಹೊಂದಾಣಿಕೆ ಮತ್ತು ಹಸ್ತಚಾಲಿತ (ಮ್ಯಾನುಯೆಲ್) ಪರಿಶೀಲನೆಯ ಮೂಲಕ ಪತ್ತೆ ಹಚ್ಚಲಾಗಿದೆ ಎಂದು ವರದಿ ಹೇಳಿದೆ.

407 ಮತಗಟ್ಟೆಗಳ ಪೈಕಿ 321 ಮತಗಟ್ಟೆಗಳಲ್ಲಿ (ಶೇ.79) ಕನಿಷ್ಠ 1ರಿಂದ ಗರಿಷ್ಠ 19ರವರೆಗೆ ನಕಲಿ ಮತದಾರರು ಪತ್ತೆಯಾಗಿದ್ದಾರೆ. ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ-115ರಲ್ಲಿ ಗರಿಷ್ಠ 19, ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ -103ರಲ್ಲಿ 18 ನಕಲಿ ಮತದಾರರು ಪತ್ತೆಯಾಗಿದ್ದಾರೆ ಎಂದು ವರದಿ ವಿವರಿಸಿದೆ.

ಚುನಾವಣಾ ಆಯೋಗದ ಪ್ರಕಾರ, ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,01,379 ಮತದಾರರಿದ್ದಾರೆ. ಈ ಪೈಕಿ 2,08,558 ಪುರುಷರು ಮತ್ತು 1,92,795 ಮಹಿಳೆಯರು ಒಳಗೊಂಡಿದ್ದಾರೆ.

ಇವರಲ್ಲಿ, “ಒಂದು ಮತಗಟ್ಟೆಯಲ್ಲಿ ಒಬ್ಬ ವ್ಯಕ್ತಿಯ ಹೆಸರು ಅಥವಾ ಮಾಹಿತಿ ಒಂದಕ್ಕಿಂತ ಹೆಚ್ಚು ಬಾರಿ ಕಾಣಿಸಿಕೊಂಡಿರುವುದು, ಒಬ್ಬ ವ್ಯಕ್ತಿಯ ಮಾಹಿತಿ ವಿವಿಧ ಮತಗಟ್ಟೆಗಳಲ್ಲಿ ಪುನರಾವರ್ತನೆಯಾಗಿರುವುದು, ಒಬ್ಬರ ಹೆಸರು ಅಥವಾ ಮಾಹಿತಿ ಒಂದೇ ಮತಗಟ್ಟೆಯಲ್ಲಿ ಮೂರು ಬಾರಿ ದಾಖಲಾಗಿರುವುದು ಮತ್ತು ಒಬ್ಬ ವ್ಯಕ್ತಿಯ ಮಾಹಿತಿ ಹಲವು ವಿಭಿನ್ನ ಮತಗಟ್ಟೆಗಳಲ್ಲಿ ಹಲವು ಬಾರಿಗೆ ಕಾಣಿಸಿಕೊಂಡಿರುವುದು” ಹೀಗೆ ನಾಲ್ಕು ವಿಧದಲ್ಲಿ ನಕಲಿ ಮತದಾರರನ್ನು ಪತ್ತೆ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.

ಒಂದೇ ರೀತಿಯ ಹೆಸರುಗಳು, ತಂದೆ, ತಾಯಿ, ಗಂಡ, ಹೆಂಡತಿಯ ಸಂಬಂಧಗಳು ಒಂದೇ ರೀತಿ ಇರುವುದು, ಸಂಬಂಧಿಕರ ಹೆಸರು ಒಂದೇ ರೀತಿ ಇರುವುದು, ಮನೆ ಸಂಖ್ಯೆ, ವಯಸ್ಸು ಮತ್ತು ಲಿಂಗ ಒಂದೇ ರೀತಿ ಇರುವುದನ್ನು ನಕಲಿ ಮತದಾರರ ಪತ್ತೆಗೆ ಪರಿಗಣಿಸಲಾಗಿದೆ ಎಂದು ಹೇಳಿದೆ.

ಎಲ್ಲಾ ನಕಲಿ ಮತದಾರರ ವಿವರವಾದ ಮಾಹಿತಿ, ಒಂದೇ ರೀತಿಯ ಗುರುತಿನ ಚೀಟಿಗಳ ಹೋಲಿಕೆಯ ದಾಖಲೆ ಮತ್ತು ಸಂಬಂಧಗಳು ಒಂದೇ ರೀತಿ ಇರುವ ಮಾಹಿತಿಯ ದಾಖಲೆಗಳನ್ನು ಸಂಸ್ಥೆ ಬಹಿರಂಗಪಡಿಸಿದೆ.

ಪೈಥಾನ್ ಪ್ರೋಗ್ರಾಮ್, ಸುಧಾರಿತ ಅಕ್ಷರ ಗುರುತಿಸುವ ತಂತ್ರ (advanced text-recognition algorithm) ಮತ್ತು ಮತದಾರರ ಗುರುತಿನ ಚೀಟಿ ಹೋಲಿಕೆ ತಂತ್ರ (EPIC matching techniques) ಇವುಗಳ ಮೂಲಕ ವೈಜ್ಞಾನಿಕವಾಗಿ ನಕಲಿ ಮತಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲಿ ಇಂಟೆಲ್ ಲ್ಯಾಬ್ ಸಂಸ್ಥೆ ತಿಳಿಸಿದೆ.

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...