Homeಮುಖಪುಟಸಾವಿರಕ್ಕೂ ಅಧಿಕ 'ನಕಲಿ ಮತದಾರರು' ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

- Advertisement -
- Advertisement -

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ಮಗಂತಿ ಗೋಪಿನಾಥ್ ಅವರ ನಿಧನದಿಂದ ತೆರವಾದ ಹೈದರಾಬಾದ್‌ನ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ (ನ.11) ಉಪ ಚುನಾವಣೆ ನಡೆಯಿತು.

ಉಪ ಚುನಾವಣೆಗೆ ಬಿಆರ್‌ಎಸ್‌ ಪಕ್ಷ ಮಗಂತಿ ಗೋಪಿನಾಥ್ ಅವರ ಪತ್ನಿ ಮಗಂತಿ ಸುನಿತಾ ಅವರನ್ನು ಕಣಕ್ಕಿಳಿಸಿದ್ದು, ಅನುಕಂಪದ ಆಧಾರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಕಾಂಗ್ರೆಸ್ ವಿ. ನವೀನ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದು, ಇವರಿಗೆ ಎಐಎಂಐಎಂ ಬೆಂಬಲ ಇದೆ ಎಂದು ವರದಿಯಾಗಿದೆ. ಇನ್ನು ಬಿಜೆಪಿಯಿಂದ ಲಂಕಲ ದೀಪಕ್ ರೆಡ್ಡಿ ಎಂಬವರು ಸ್ಪರ್ಧೆ ಮಾಡಿದ್ದಾರೆ.

ಮತದಾನಕ್ಕೂ ಮುನ್ನ ‘ಮತಗಳ್ಳತನ’ ಬಯಲು

ಜುಲಿಬಿ ಹಿಲ್ಸ್ ಉಪ ಚುನಾವಣೆಯ ಮತದಾನಕ್ಕೂ ಮುನ್ನಾದಿನ, ಅಂದರೆ ನವೆಂಬರ್ 10, 2025ರಂದು ‘ಪೊಲಿ ಇಂಟೆಲ್ ಲ್ಯಾಬ್’ ಎಂಬ ಸಂಸ್ಥೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 1,609 ನಕಲಿ ಮತದಾರರನ್ನು ಗುರುತಿಸಿರುವುದಾಗಿ ವೈಜ್ಞಾನಿಕ ಮತ್ತು ತಾಂತ್ರಿಕ ದಾಖಲೆಗಳೊಂದಿಗೆ ವರದಿ ಬಿಡುಗಡೆ ಮಾಡಿದೆ.

ಜುಬಿಲಿ ಹಿಲ್ಸ್ ಕ್ಷೇತ್ರದ 407 ಮತಗಟ್ಟೆಗಳಲ್ಲಿ 1,609 ನಕಲಿ ಮತದಾರರ ನೋಂದಣಿಗಳನ್ನು ಸಮಗ್ರ ವಿಶ್ಲೇಷಣೆಯು ಬಹಿರಂಗಪಡಿಸಿದೆ. ಇದನ್ನು ಎಪಿಕ್ (ಮತದಾರರ ಗುರುತಿನ ಚೀಟಿ) ಹೊಂದಾಣಿಕೆ ಮತ್ತು ಹಸ್ತಚಾಲಿತ (ಮ್ಯಾನುಯೆಲ್) ಪರಿಶೀಲನೆಯ ಮೂಲಕ ಪತ್ತೆ ಹಚ್ಚಲಾಗಿದೆ ಎಂದು ವರದಿ ಹೇಳಿದೆ.

407 ಮತಗಟ್ಟೆಗಳ ಪೈಕಿ 321 ಮತಗಟ್ಟೆಗಳಲ್ಲಿ (ಶೇ.79) ಕನಿಷ್ಠ 1ರಿಂದ ಗರಿಷ್ಠ 19ರವರೆಗೆ ನಕಲಿ ಮತದಾರರು ಪತ್ತೆಯಾಗಿದ್ದಾರೆ. ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ-115ರಲ್ಲಿ ಗರಿಷ್ಠ 19, ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ -103ರಲ್ಲಿ 18 ನಕಲಿ ಮತದಾರರು ಪತ್ತೆಯಾಗಿದ್ದಾರೆ ಎಂದು ವರದಿ ವಿವರಿಸಿದೆ.

ಚುನಾವಣಾ ಆಯೋಗದ ಪ್ರಕಾರ, ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,01,379 ಮತದಾರರಿದ್ದಾರೆ. ಈ ಪೈಕಿ 2,08,558 ಪುರುಷರು ಮತ್ತು 1,92,795 ಮಹಿಳೆಯರು ಒಳಗೊಂಡಿದ್ದಾರೆ.

ಇವರಲ್ಲಿ, “ಒಂದು ಮತಗಟ್ಟೆಯಲ್ಲಿ ಒಬ್ಬ ವ್ಯಕ್ತಿಯ ಹೆಸರು ಅಥವಾ ಮಾಹಿತಿ ಒಂದಕ್ಕಿಂತ ಹೆಚ್ಚು ಬಾರಿ ಕಾಣಿಸಿಕೊಂಡಿರುವುದು, ಒಬ್ಬ ವ್ಯಕ್ತಿಯ ಮಾಹಿತಿ ವಿವಿಧ ಮತಗಟ್ಟೆಗಳಲ್ಲಿ ಪುನರಾವರ್ತನೆಯಾಗಿರುವುದು, ಒಬ್ಬರ ಹೆಸರು ಅಥವಾ ಮಾಹಿತಿ ಒಂದೇ ಮತಗಟ್ಟೆಯಲ್ಲಿ ಮೂರು ಬಾರಿ ದಾಖಲಾಗಿರುವುದು ಮತ್ತು ಒಬ್ಬ ವ್ಯಕ್ತಿಯ ಮಾಹಿತಿ ಹಲವು ವಿಭಿನ್ನ ಮತಗಟ್ಟೆಗಳಲ್ಲಿ ಹಲವು ಬಾರಿಗೆ ಕಾಣಿಸಿಕೊಂಡಿರುವುದು” ಹೀಗೆ ನಾಲ್ಕು ವಿಧದಲ್ಲಿ ನಕಲಿ ಮತದಾರರನ್ನು ಪತ್ತೆ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.

ಒಂದೇ ರೀತಿಯ ಹೆಸರುಗಳು, ತಂದೆ, ತಾಯಿ, ಗಂಡ, ಹೆಂಡತಿಯ ಸಂಬಂಧಗಳು ಒಂದೇ ರೀತಿ ಇರುವುದು, ಸಂಬಂಧಿಕರ ಹೆಸರು ಒಂದೇ ರೀತಿ ಇರುವುದು, ಮನೆ ಸಂಖ್ಯೆ, ವಯಸ್ಸು ಮತ್ತು ಲಿಂಗ ಒಂದೇ ರೀತಿ ಇರುವುದನ್ನು ನಕಲಿ ಮತದಾರರ ಪತ್ತೆಗೆ ಪರಿಗಣಿಸಲಾಗಿದೆ ಎಂದು ಹೇಳಿದೆ.

ಎಲ್ಲಾ ನಕಲಿ ಮತದಾರರ ವಿವರವಾದ ಮಾಹಿತಿ, ಒಂದೇ ರೀತಿಯ ಗುರುತಿನ ಚೀಟಿಗಳ ಹೋಲಿಕೆಯ ದಾಖಲೆ ಮತ್ತು ಸಂಬಂಧಗಳು ಒಂದೇ ರೀತಿ ಇರುವ ಮಾಹಿತಿಯ ದಾಖಲೆಗಳನ್ನು ಸಂಸ್ಥೆ ಬಹಿರಂಗಪಡಿಸಿದೆ.

ಪೈಥಾನ್ ಪ್ರೋಗ್ರಾಮ್, ಸುಧಾರಿತ ಅಕ್ಷರ ಗುರುತಿಸುವ ತಂತ್ರ (advanced text-recognition algorithm) ಮತ್ತು ಮತದಾರರ ಗುರುತಿನ ಚೀಟಿ ಹೋಲಿಕೆ ತಂತ್ರ (EPIC matching techniques) ಇವುಗಳ ಮೂಲಕ ವೈಜ್ಞಾನಿಕವಾಗಿ ನಕಲಿ ಮತಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲಿ ಇಂಟೆಲ್ ಲ್ಯಾಬ್ ಸಂಸ್ಥೆ ತಿಳಿಸಿದೆ.

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...