Homeಮುಖಪುಟಸಾವಿರಕ್ಕೂ ಅಧಿಕ 'ನಕಲಿ ಮತದಾರರು' ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

- Advertisement -
- Advertisement -

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ಮಗಂತಿ ಗೋಪಿನಾಥ್ ಅವರ ನಿಧನದಿಂದ ತೆರವಾದ ಹೈದರಾಬಾದ್‌ನ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ (ನ.11) ಉಪ ಚುನಾವಣೆ ನಡೆಯಿತು.

ಉಪ ಚುನಾವಣೆಗೆ ಬಿಆರ್‌ಎಸ್‌ ಪಕ್ಷ ಮಗಂತಿ ಗೋಪಿನಾಥ್ ಅವರ ಪತ್ನಿ ಮಗಂತಿ ಸುನಿತಾ ಅವರನ್ನು ಕಣಕ್ಕಿಳಿಸಿದ್ದು, ಅನುಕಂಪದ ಆಧಾರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಕಾಂಗ್ರೆಸ್ ವಿ. ನವೀನ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದು, ಇವರಿಗೆ ಎಐಎಂಐಎಂ ಬೆಂಬಲ ಇದೆ ಎಂದು ವರದಿಯಾಗಿದೆ. ಇನ್ನು ಬಿಜೆಪಿಯಿಂದ ಲಂಕಲ ದೀಪಕ್ ರೆಡ್ಡಿ ಎಂಬವರು ಸ್ಪರ್ಧೆ ಮಾಡಿದ್ದಾರೆ.

ಮತದಾನಕ್ಕೂ ಮುನ್ನ ‘ಮತಗಳ್ಳತನ’ ಬಯಲು

ಜುಲಿಬಿ ಹಿಲ್ಸ್ ಉಪ ಚುನಾವಣೆಯ ಮತದಾನಕ್ಕೂ ಮುನ್ನಾದಿನ, ಅಂದರೆ ನವೆಂಬರ್ 10, 2025ರಂದು ‘ಪೊಲಿ ಇಂಟೆಲ್ ಲ್ಯಾಬ್’ ಎಂಬ ಸಂಸ್ಥೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 1,609 ನಕಲಿ ಮತದಾರರನ್ನು ಗುರುತಿಸಿರುವುದಾಗಿ ವೈಜ್ಞಾನಿಕ ಮತ್ತು ತಾಂತ್ರಿಕ ದಾಖಲೆಗಳೊಂದಿಗೆ ವರದಿ ಬಿಡುಗಡೆ ಮಾಡಿದೆ.

ಜುಬಿಲಿ ಹಿಲ್ಸ್ ಕ್ಷೇತ್ರದ 407 ಮತಗಟ್ಟೆಗಳಲ್ಲಿ 1,609 ನಕಲಿ ಮತದಾರರ ನೋಂದಣಿಗಳನ್ನು ಸಮಗ್ರ ವಿಶ್ಲೇಷಣೆಯು ಬಹಿರಂಗಪಡಿಸಿದೆ. ಇದನ್ನು ಎಪಿಕ್ (ಮತದಾರರ ಗುರುತಿನ ಚೀಟಿ) ಹೊಂದಾಣಿಕೆ ಮತ್ತು ಹಸ್ತಚಾಲಿತ (ಮ್ಯಾನುಯೆಲ್) ಪರಿಶೀಲನೆಯ ಮೂಲಕ ಪತ್ತೆ ಹಚ್ಚಲಾಗಿದೆ ಎಂದು ವರದಿ ಹೇಳಿದೆ.

407 ಮತಗಟ್ಟೆಗಳ ಪೈಕಿ 321 ಮತಗಟ್ಟೆಗಳಲ್ಲಿ (ಶೇ.79) ಕನಿಷ್ಠ 1ರಿಂದ ಗರಿಷ್ಠ 19ರವರೆಗೆ ನಕಲಿ ಮತದಾರರು ಪತ್ತೆಯಾಗಿದ್ದಾರೆ. ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ-115ರಲ್ಲಿ ಗರಿಷ್ಠ 19, ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ -103ರಲ್ಲಿ 18 ನಕಲಿ ಮತದಾರರು ಪತ್ತೆಯಾಗಿದ್ದಾರೆ ಎಂದು ವರದಿ ವಿವರಿಸಿದೆ.

ಚುನಾವಣಾ ಆಯೋಗದ ಪ್ರಕಾರ, ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,01,379 ಮತದಾರರಿದ್ದಾರೆ. ಈ ಪೈಕಿ 2,08,558 ಪುರುಷರು ಮತ್ತು 1,92,795 ಮಹಿಳೆಯರು ಒಳಗೊಂಡಿದ್ದಾರೆ.

ಇವರಲ್ಲಿ, “ಒಂದು ಮತಗಟ್ಟೆಯಲ್ಲಿ ಒಬ್ಬ ವ್ಯಕ್ತಿಯ ಹೆಸರು ಅಥವಾ ಮಾಹಿತಿ ಒಂದಕ್ಕಿಂತ ಹೆಚ್ಚು ಬಾರಿ ಕಾಣಿಸಿಕೊಂಡಿರುವುದು, ಒಬ್ಬ ವ್ಯಕ್ತಿಯ ಮಾಹಿತಿ ವಿವಿಧ ಮತಗಟ್ಟೆಗಳಲ್ಲಿ ಪುನರಾವರ್ತನೆಯಾಗಿರುವುದು, ಒಬ್ಬರ ಹೆಸರು ಅಥವಾ ಮಾಹಿತಿ ಒಂದೇ ಮತಗಟ್ಟೆಯಲ್ಲಿ ಮೂರು ಬಾರಿ ದಾಖಲಾಗಿರುವುದು ಮತ್ತು ಒಬ್ಬ ವ್ಯಕ್ತಿಯ ಮಾಹಿತಿ ಹಲವು ವಿಭಿನ್ನ ಮತಗಟ್ಟೆಗಳಲ್ಲಿ ಹಲವು ಬಾರಿಗೆ ಕಾಣಿಸಿಕೊಂಡಿರುವುದು” ಹೀಗೆ ನಾಲ್ಕು ವಿಧದಲ್ಲಿ ನಕಲಿ ಮತದಾರರನ್ನು ಪತ್ತೆ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.

ಒಂದೇ ರೀತಿಯ ಹೆಸರುಗಳು, ತಂದೆ, ತಾಯಿ, ಗಂಡ, ಹೆಂಡತಿಯ ಸಂಬಂಧಗಳು ಒಂದೇ ರೀತಿ ಇರುವುದು, ಸಂಬಂಧಿಕರ ಹೆಸರು ಒಂದೇ ರೀತಿ ಇರುವುದು, ಮನೆ ಸಂಖ್ಯೆ, ವಯಸ್ಸು ಮತ್ತು ಲಿಂಗ ಒಂದೇ ರೀತಿ ಇರುವುದನ್ನು ನಕಲಿ ಮತದಾರರ ಪತ್ತೆಗೆ ಪರಿಗಣಿಸಲಾಗಿದೆ ಎಂದು ಹೇಳಿದೆ.

ಎಲ್ಲಾ ನಕಲಿ ಮತದಾರರ ವಿವರವಾದ ಮಾಹಿತಿ, ಒಂದೇ ರೀತಿಯ ಗುರುತಿನ ಚೀಟಿಗಳ ಹೋಲಿಕೆಯ ದಾಖಲೆ ಮತ್ತು ಸಂಬಂಧಗಳು ಒಂದೇ ರೀತಿ ಇರುವ ಮಾಹಿತಿಯ ದಾಖಲೆಗಳನ್ನು ಸಂಸ್ಥೆ ಬಹಿರಂಗಪಡಿಸಿದೆ.

ಪೈಥಾನ್ ಪ್ರೋಗ್ರಾಮ್, ಸುಧಾರಿತ ಅಕ್ಷರ ಗುರುತಿಸುವ ತಂತ್ರ (advanced text-recognition algorithm) ಮತ್ತು ಮತದಾರರ ಗುರುತಿನ ಚೀಟಿ ಹೋಲಿಕೆ ತಂತ್ರ (EPIC matching techniques) ಇವುಗಳ ಮೂಲಕ ವೈಜ್ಞಾನಿಕವಾಗಿ ನಕಲಿ ಮತಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲಿ ಇಂಟೆಲ್ ಲ್ಯಾಬ್ ಸಂಸ್ಥೆ ತಿಳಿಸಿದೆ.

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...