Homeಮುಖಪುಟಸಾವಿರಕ್ಕೂ ಅಧಿಕ 'ನಕಲಿ ಮತದಾರರು' ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

ಸಾವಿರಕ್ಕೂ ಅಧಿಕ ‘ನಕಲಿ ಮತದಾರರು’ ಪತ್ತೆ : ಮಹತ್ವದ ಅಧ್ಯಯನ ವರದಿ ಬಿಡುಗಡೆ

- Advertisement -
- Advertisement -

ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಶಾಸಕ ಮಗಂತಿ ಗೋಪಿನಾಥ್ ಅವರ ನಿಧನದಿಂದ ತೆರವಾದ ಹೈದರಾಬಾದ್‌ನ ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ (ನ.11) ಉಪ ಚುನಾವಣೆ ನಡೆಯಿತು.

ಉಪ ಚುನಾವಣೆಗೆ ಬಿಆರ್‌ಎಸ್‌ ಪಕ್ಷ ಮಗಂತಿ ಗೋಪಿನಾಥ್ ಅವರ ಪತ್ನಿ ಮಗಂತಿ ಸುನಿತಾ ಅವರನ್ನು ಕಣಕ್ಕಿಳಿಸಿದ್ದು, ಅನುಕಂಪದ ಆಧಾರದಲ್ಲಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಕಾಂಗ್ರೆಸ್ ವಿ. ನವೀನ್ ಯಾದವ್ ಅವರಿಗೆ ಟಿಕೆಟ್ ನೀಡಿದ್ದು, ಇವರಿಗೆ ಎಐಎಂಐಎಂ ಬೆಂಬಲ ಇದೆ ಎಂದು ವರದಿಯಾಗಿದೆ. ಇನ್ನು ಬಿಜೆಪಿಯಿಂದ ಲಂಕಲ ದೀಪಕ್ ರೆಡ್ಡಿ ಎಂಬವರು ಸ್ಪರ್ಧೆ ಮಾಡಿದ್ದಾರೆ.

ಮತದಾನಕ್ಕೂ ಮುನ್ನ ‘ಮತಗಳ್ಳತನ’ ಬಯಲು

ಜುಲಿಬಿ ಹಿಲ್ಸ್ ಉಪ ಚುನಾವಣೆಯ ಮತದಾನಕ್ಕೂ ಮುನ್ನಾದಿನ, ಅಂದರೆ ನವೆಂಬರ್ 10, 2025ರಂದು ‘ಪೊಲಿ ಇಂಟೆಲ್ ಲ್ಯಾಬ್’ ಎಂಬ ಸಂಸ್ಥೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 1,609 ನಕಲಿ ಮತದಾರರನ್ನು ಗುರುತಿಸಿರುವುದಾಗಿ ವೈಜ್ಞಾನಿಕ ಮತ್ತು ತಾಂತ್ರಿಕ ದಾಖಲೆಗಳೊಂದಿಗೆ ವರದಿ ಬಿಡುಗಡೆ ಮಾಡಿದೆ.

ಜುಬಿಲಿ ಹಿಲ್ಸ್ ಕ್ಷೇತ್ರದ 407 ಮತಗಟ್ಟೆಗಳಲ್ಲಿ 1,609 ನಕಲಿ ಮತದಾರರ ನೋಂದಣಿಗಳನ್ನು ಸಮಗ್ರ ವಿಶ್ಲೇಷಣೆಯು ಬಹಿರಂಗಪಡಿಸಿದೆ. ಇದನ್ನು ಎಪಿಕ್ (ಮತದಾರರ ಗುರುತಿನ ಚೀಟಿ) ಹೊಂದಾಣಿಕೆ ಮತ್ತು ಹಸ್ತಚಾಲಿತ (ಮ್ಯಾನುಯೆಲ್) ಪರಿಶೀಲನೆಯ ಮೂಲಕ ಪತ್ತೆ ಹಚ್ಚಲಾಗಿದೆ ಎಂದು ವರದಿ ಹೇಳಿದೆ.

407 ಮತಗಟ್ಟೆಗಳ ಪೈಕಿ 321 ಮತಗಟ್ಟೆಗಳಲ್ಲಿ (ಶೇ.79) ಕನಿಷ್ಠ 1ರಿಂದ ಗರಿಷ್ಠ 19ರವರೆಗೆ ನಕಲಿ ಮತದಾರರು ಪತ್ತೆಯಾಗಿದ್ದಾರೆ. ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ-115ರಲ್ಲಿ ಗರಿಷ್ಠ 19, ಹಬೀಬ್ ಫಾತಿಮಾ ನಗರದ ಮತಗಟ್ಟೆ ಸಂಖ್ಯೆ -103ರಲ್ಲಿ 18 ನಕಲಿ ಮತದಾರರು ಪತ್ತೆಯಾಗಿದ್ದಾರೆ ಎಂದು ವರದಿ ವಿವರಿಸಿದೆ.

ಚುನಾವಣಾ ಆಯೋಗದ ಪ್ರಕಾರ, ಜುಬಿಲಿ ಹಿಲ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,01,379 ಮತದಾರರಿದ್ದಾರೆ. ಈ ಪೈಕಿ 2,08,558 ಪುರುಷರು ಮತ್ತು 1,92,795 ಮಹಿಳೆಯರು ಒಳಗೊಂಡಿದ್ದಾರೆ.

ಇವರಲ್ಲಿ, “ಒಂದು ಮತಗಟ್ಟೆಯಲ್ಲಿ ಒಬ್ಬ ವ್ಯಕ್ತಿಯ ಹೆಸರು ಅಥವಾ ಮಾಹಿತಿ ಒಂದಕ್ಕಿಂತ ಹೆಚ್ಚು ಬಾರಿ ಕಾಣಿಸಿಕೊಂಡಿರುವುದು, ಒಬ್ಬ ವ್ಯಕ್ತಿಯ ಮಾಹಿತಿ ವಿವಿಧ ಮತಗಟ್ಟೆಗಳಲ್ಲಿ ಪುನರಾವರ್ತನೆಯಾಗಿರುವುದು, ಒಬ್ಬರ ಹೆಸರು ಅಥವಾ ಮಾಹಿತಿ ಒಂದೇ ಮತಗಟ್ಟೆಯಲ್ಲಿ ಮೂರು ಬಾರಿ ದಾಖಲಾಗಿರುವುದು ಮತ್ತು ಒಬ್ಬ ವ್ಯಕ್ತಿಯ ಮಾಹಿತಿ ಹಲವು ವಿಭಿನ್ನ ಮತಗಟ್ಟೆಗಳಲ್ಲಿ ಹಲವು ಬಾರಿಗೆ ಕಾಣಿಸಿಕೊಂಡಿರುವುದು” ಹೀಗೆ ನಾಲ್ಕು ವಿಧದಲ್ಲಿ ನಕಲಿ ಮತದಾರರನ್ನು ಪತ್ತೆ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.

ಒಂದೇ ರೀತಿಯ ಹೆಸರುಗಳು, ತಂದೆ, ತಾಯಿ, ಗಂಡ, ಹೆಂಡತಿಯ ಸಂಬಂಧಗಳು ಒಂದೇ ರೀತಿ ಇರುವುದು, ಸಂಬಂಧಿಕರ ಹೆಸರು ಒಂದೇ ರೀತಿ ಇರುವುದು, ಮನೆ ಸಂಖ್ಯೆ, ವಯಸ್ಸು ಮತ್ತು ಲಿಂಗ ಒಂದೇ ರೀತಿ ಇರುವುದನ್ನು ನಕಲಿ ಮತದಾರರ ಪತ್ತೆಗೆ ಪರಿಗಣಿಸಲಾಗಿದೆ ಎಂದು ಹೇಳಿದೆ.

ಎಲ್ಲಾ ನಕಲಿ ಮತದಾರರ ವಿವರವಾದ ಮಾಹಿತಿ, ಒಂದೇ ರೀತಿಯ ಗುರುತಿನ ಚೀಟಿಗಳ ಹೋಲಿಕೆಯ ದಾಖಲೆ ಮತ್ತು ಸಂಬಂಧಗಳು ಒಂದೇ ರೀತಿ ಇರುವ ಮಾಹಿತಿಯ ದಾಖಲೆಗಳನ್ನು ಸಂಸ್ಥೆ ಬಹಿರಂಗಪಡಿಸಿದೆ.

ಪೈಥಾನ್ ಪ್ರೋಗ್ರಾಮ್, ಸುಧಾರಿತ ಅಕ್ಷರ ಗುರುತಿಸುವ ತಂತ್ರ (advanced text-recognition algorithm) ಮತ್ತು ಮತದಾರರ ಗುರುತಿನ ಚೀಟಿ ಹೋಲಿಕೆ ತಂತ್ರ (EPIC matching techniques) ಇವುಗಳ ಮೂಲಕ ವೈಜ್ಞಾನಿಕವಾಗಿ ನಕಲಿ ಮತಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲಿ ಇಂಟೆಲ್ ಲ್ಯಾಬ್ ಸಂಸ್ಥೆ ತಿಳಿಸಿದೆ.

ಹರಿಯಾಣ ಮತಗಳ್ಳತನ : ರಾಹುಲ್ ಗಾಂಧಿ ಮಾಡಿರುವ ಪ್ರಮುಖ ಆರೋಪಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...