Homeಮುಖಪುಟಶಾಲೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜಾತಿ ದೌರ್ಜನ್ಯ: ಅಧ್ಯಯನದಿಂದ ಬಯಲು

ಶಾಲೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜಾತಿ ದೌರ್ಜನ್ಯ: ಅಧ್ಯಯನದಿಂದ ಬಯಲು

- Advertisement -
- Advertisement -

ಶಾಲಾ-ಕಾಲೇಜುಗಳಲ್ಲಿ ಜಾತಿ ತಾರತಮ್ಯದ ಘಟನೆಗಳು ವ್ಯಾಪಕವಾಗಿ ನಡೆಯುತ್ತಿರುತ್ತದೆ ಆದರೆ ಕೆಲವೇ ಕೆಲವು ಘಟನೆಗಳು ಮಾತ್ರ ಅದರಲ್ಲಿ ಬಹಿರಂಗವಾಗುತ್ತದೆ. ತಮಿಳುನಾಡಿನ ಶಾಲೆಗಳಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರವನ್ನು ವರದಿಯೊಂದು ಬಹಿರಂಗಪಡಿಸಿದೆ. ಟಿಎನ್‌ಯುಇಎಫ್ ವರದಿ ಪ್ರಕಾರ, ತಮಿಳುನಾಡಿನ ಶಾಲಾ-ಕಾಲೇಜುಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ಮತ್ತು ತಾರತಮ್ಯ ವ್ಯಾಪಕವಾಗಿ ನಡೆಯುತ್ತಿದೆ.

ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ಫ್ರಂಟ್ (ಟಿಎನ್‌ಯುಇಎಫ್) ರಾಜ್ಯದ 441 ಶಾಲೆಗಳಲ್ಲಿ ನಡೆಸಿದ ಅಧ್ಯಯನವು ರಾಜ್ಯದ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ಮತ್ತು ತಾರತಮ್ಯ ವ್ಯಾಪಕವಾಗಿ ಇದೆ ಎಂಬುವುದನ್ನು ಪತ್ತೆ ಹಚ್ಚಿದೆ.

ಡಿ.23 ರಂದು ಶನಿವಾರ ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ಫ್ರಂಟ್ ತನ್ನ ವರದಿಯನ್ನು ಬಿಡುಗಡೆಗೊಳಿಸಿದೆ. ಅಧ್ಯಯನವು ಶಿಕ್ಷಕರು ಕೂಡ ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿದ್ದಾರೆ ಎನ್ನುವುದನ್ನು ತಿಳಿಸಿದೆ. ಶಾಲೆಗಳು ಮತ್ತು ಶಿಕ್ಷಕರ ಬಗ್ಗೆ ಹೆಸರುಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸದಿದ್ದರೂ, ತ್ವರಿತ ಕ್ರಮವನ್ನು ಕೋರಿ ರಾಜ್ಯ ಸರ್ಕಾರಕ್ಕೆ ವರದಿಯನ್ನು ನೀಡಲಾಗಿದೆ ಎಂದು ಟಿಎನ್‌ಯುಇಎಫ್ ಹೇಳಿದೆ.

ರಾಜ್ಯದ 36 ಜಿಲ್ಲೆಗಳಲ್ಲಿನ ಒಟ್ಟು 321 ಸರ್ಕಾರಿ ಶಾಲೆಗಳು, 58 ಸರ್ಕಾರಿ ಅನುದಾನಿತ ಶಾಲೆಗಳು ಮತ್ತು 62 ಖಾಸಗಿ ಶಾಲೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. 6 ರಿಂದ 12ನೇ ತರಗತಿಯವರೆಗಿನ 644 ವಿದ್ಯಾರ್ಥಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 333 ಬಾಲಕರು ಮತ್ತು 311 ಬಾಲಕಿಯರು ಸೇರಿದ್ದಾರೆ. ಅಧ್ಯಯನದಲ್ಲಿ ಭಾಗವಹಿಸಿದ ಹೆಚ್ಚಿನ ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ  ಸೇರಿದ್ದಾರೆ. ಸುಮಾರು 10% ವಿದ್ಯಾರ್ಥಿಗಳು ಹಿಂದುಳಿದ ಜಾತಿಗಳು (ಬಿಸಿ) ಮತ್ತು ಅತ್ಯಂತ ಹಿಂದುಳಿದ ವರ್ಗಗಳ ಮಕ್ಕಳು ಇದ್ದರು ಎಂದು ಸಮೀಕ್ಷೆ ನಡೆಸಿದ TNUEFನ ಪ್ರಧಾನ ಕಾರ್ಯದರ್ಶಿ ಸ್ಯಾಮುವೆಲ್ ರಾಜ್ ಹೇಳಿದ್ದಾರೆ.

ಅಧ್ಯಯನದ ಪ್ರಕಾರ, ರಾಮನಾಥಪುರಂ, ಕಡಲೂರು ಮತ್ತು ತಿರುವಣ್ಣಾಮಲೈ ಸೇರಿದಂತೆ ವಿವಿಧ ಜಿಲ್ಲೆಗಳ  25 ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಜಾತಿ ದೌರ್ಜನ್ಯ ವರದಿಯಾಗಿದೆ. ಕನಿಷ್ಠ 23 ಶಾಲೆಗಳಲ್ಲಿ ವಿದ್ಯಾರ್ಥಿಗಳು ಜಾತಿವಾದಿ ಭಾವನೆಗಳನ್ನು ಸಕ್ರಿಯವಾಗಿ ವ್ಯಕ್ತಪಡಿಸುವುದು ಕಂಡುಬಂದಿದೆ. 10 ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಗಳ ಆಧಾರದ ಮೇಲೆ ಪ್ರತ್ಯೇಕ ಗುಂಪುಗಳನ್ನು ರಚಿಸಿದ್ದಾರೆ. ಚೆನ್ನೈ, ಕಡಲೂರು ಮತ್ತು ತಿರುನೆಲ್ವೇಲಿ ಸೇರಿದಂತೆ 20 ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಯನ್ನು ಸೂಚಿಸಲು ನಿರ್ದಿಷ್ಟ ಬಣ್ಣಗಳ ಕರ್ಚೀಫ್‌ಗಳು, ಬಿಂದಿಗಳು, ದಾರಗಳು ಮತ್ತು ಸ್ಟಿಕ್ಕರ್‌ಗಳನ್ನು ಬಳಸುತ್ತಾರೆ. ಇದಲ್ಲದೆ ಇತರ 34 ಜಾತಿ ಸೂಚಕ ಸಂಕೇತಗಳನ್ನು ಮಕ್ಕಳು ಬಳಕೆ ಮಾಡುತ್ತಿದ್ದಾರೆ ಎನ್ನುವುದನ್ನು ಅಧ್ಯಯನವು ಬಹಿರಂಗಪಡಿಸಿದೆ.

15 ಶಾಲೆಗಳಲ್ಲಿ ದಲಿತ ವಿದ್ಯಾರ್ಥಿಗಳ ಕೈಯ್ಯಲ್ಲಿ ಶೌಚಾಲಯಗಳನ್ನು ಶುಚಿಗೊಳಿಸಲಾಗುತ್ತದೆ. 6 ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಯ ಆಧಾರದ ಮೇಲೆ ಪ್ರತ್ಯೇಕ ಸಾಲುಗಳಲ್ಲಿ ನಿಂತು ಮಧ್ಯಾಹ್ನದ ಊಟವನ್ನು ಸ್ವೀಕರಿಸುವಂತೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ವರದಿಯು ಬಹಿರಂಗಪಡಿಸಿದೆ.

ಕನಿಷ್ಠ 3 ಶಾಲೆಗಳಲ್ಲಿ ಶಿಕ್ಷಕರಲ್ಲಿ ಜಾತಿ ಆಧಾರಿತ ತಾರತಮ್ಯವು ಚಾಲ್ತಿಯಲ್ಲಿದೆ ಎಂದು ಅಧ್ಯಯನವು ಬಹಿರಂಗಪಡಿಸಿದೆ. 5 ಶಾಲೆಗಳಲ್ಲಿ ಶಿಕ್ಷಕರು ತರಗತಿಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಸಕ್ರಿಯವಾಗಿ ಪ್ರಚಾರ ಮಾಡುತ್ತಾರೆ. ಒಂದು ಶಾಲೆಯಲ್ಲಿ ಶಿಕ್ಷಕರು ದಲಿತ ವಿದ್ಯಾರ್ಥಿಗಳನ್ನು ಮುಟ್ಟಲು ನಿರಾಕರಿಸಿದ್ದು, 3 ಶಾಲೆಗಳಲ್ಲಿ ದಲಿತ ವಿದ್ಯಾರ್ಥಿಗಳನ್ನು ಅತಿಯಾಗಿ ಶಿಕ್ಷಿಸಿರುವುದು ಕಂಡುಬಂದಿದೆ. ಮದುರೈನ ಶಾಲೆಯೊಂದರಲ್ಲಿ 12 ನೇ ತರಗತಿ ಟಾಪರ್‌ಗಳಿಗೆ ಅಭಿನಂದನಾ ಸಮಾರಂಭವನ್ನು ರದ್ದುಗೊಳಿಸಲಾಗಿದೆ. ಏಕೆಂದರೆ ಮೊದಲ ಮತ್ತು ಎರಡನೇ ರ್ಯಾಂಕ್ ಹೊಂದಿರುವವರು ಇಬ್ಬರೂ ದಲಿತರು. ಅವರಿಗೆ ಬಹುಮಾನ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ ಎನ್ನುವ ಆಘಾತಕಾರಿ ಅಂಶಗಳು ಬಹಿರಂಗವಾಗಿದೆ.

ಈ ಸಮಸ್ಯೆಗಳನ್ನು ನಿವಾರಣೆಗೆ ಸಮೀಕ್ಷೆ ನಡೆಸಿದ TNUEF ಸರ್ಕಾರಕ್ಕೆ 23 ಶಿಫಾರಸುಗಳನ್ನು ಬಿಡುಗಡೆ ಮಾಡಿದೆ. ಜಾತಿವಾದವನ್ನು ಪರಿಹರಿಸಲು ಆಂತರಿಕ ದೂರುಗಳ ಸಮಿತಿಯಂತಹ ಪ್ರತ್ಯೇಕ ಪರಿಹಾರ ವ್ಯವಸ್ಥೆಯನ್ನು ರಾಜ್ಯದಾದ್ಯಂತ ಶಾಲೆಗಳಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿದೆ. ಈ ಬಗ್ಗೆ ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸಮಿತಿಗಳನ್ನು ಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ದೂರು ಪೆಟ್ಟಿಗೆಗಳನ್ನು ಇರಿಸಲು ಅವರು ಸರ್ಕಾರವನ್ನು ಕೋರಿದ್ದಾರೆ. ಮುಂದಿನ ತಿಂಗಳೊಳಗೆ ಶಾಲೆಗಳಲ್ಲಿ ಜಾತಿ ಆಧಾರಿತ ತಾರತಮ್ಯ ಪ್ರವೃತ್ತಿಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಸಂಸ್ಥೆಯು ಶಾಲೆಗಳು ಮತ್ತು ಶಿಕ್ಷಕರ ಹೆಸರನ್ನು ಮಾದ್ಯಮಗಳಿಗೆ ಬಹಿರಂಗಪಡಿಸುತ್ತದೆ ಎಂದು ಸಾಮುವೆಲ್ ಎಚ್ಚರಿಸಿದ್ದಾರೆ.

ಇದನ್ನು ಓದಿ: ರಾಸಾಯನಿಕ ಹೊತ್ತ ಹಡಗಿನ ಮೇಲೆ ಇರಾನ್‌ನಿಂದ ಡ್ರೋನ್‌ ದಾಳಿ: ಗುಜರಾತ್‌ ಬಳಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...