Homeಮುಖಪುಟಶಾಲೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜಾತಿ ದೌರ್ಜನ್ಯ: ಅಧ್ಯಯನದಿಂದ ಬಯಲು

ಶಾಲೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜಾತಿ ದೌರ್ಜನ್ಯ: ಅಧ್ಯಯನದಿಂದ ಬಯಲು

- Advertisement -
- Advertisement -

ಶಾಲಾ-ಕಾಲೇಜುಗಳಲ್ಲಿ ಜಾತಿ ತಾರತಮ್ಯದ ಘಟನೆಗಳು ವ್ಯಾಪಕವಾಗಿ ನಡೆಯುತ್ತಿರುತ್ತದೆ ಆದರೆ ಕೆಲವೇ ಕೆಲವು ಘಟನೆಗಳು ಮಾತ್ರ ಅದರಲ್ಲಿ ಬಹಿರಂಗವಾಗುತ್ತದೆ. ತಮಿಳುನಾಡಿನ ಶಾಲೆಗಳಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರವನ್ನು ವರದಿಯೊಂದು ಬಹಿರಂಗಪಡಿಸಿದೆ. ಟಿಎನ್‌ಯುಇಎಫ್ ವರದಿ ಪ್ರಕಾರ, ತಮಿಳುನಾಡಿನ ಶಾಲಾ-ಕಾಲೇಜುಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ಮತ್ತು ತಾರತಮ್ಯ ವ್ಯಾಪಕವಾಗಿ ನಡೆಯುತ್ತಿದೆ.

ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ಫ್ರಂಟ್ (ಟಿಎನ್‌ಯುಇಎಫ್) ರಾಜ್ಯದ 441 ಶಾಲೆಗಳಲ್ಲಿ ನಡೆಸಿದ ಅಧ್ಯಯನವು ರಾಜ್ಯದ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ಮತ್ತು ತಾರತಮ್ಯ ವ್ಯಾಪಕವಾಗಿ ಇದೆ ಎಂಬುವುದನ್ನು ಪತ್ತೆ ಹಚ್ಚಿದೆ.

ಡಿ.23 ರಂದು ಶನಿವಾರ ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ಫ್ರಂಟ್ ತನ್ನ ವರದಿಯನ್ನು ಬಿಡುಗಡೆಗೊಳಿಸಿದೆ. ಅಧ್ಯಯನವು ಶಿಕ್ಷಕರು ಕೂಡ ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿದ್ದಾರೆ ಎನ್ನುವುದನ್ನು ತಿಳಿಸಿದೆ. ಶಾಲೆಗಳು ಮತ್ತು ಶಿಕ್ಷಕರ ಬಗ್ಗೆ ಹೆಸರುಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸದಿದ್ದರೂ, ತ್ವರಿತ ಕ್ರಮವನ್ನು ಕೋರಿ ರಾಜ್ಯ ಸರ್ಕಾರಕ್ಕೆ ವರದಿಯನ್ನು ನೀಡಲಾಗಿದೆ ಎಂದು ಟಿಎನ್‌ಯುಇಎಫ್ ಹೇಳಿದೆ.

ರಾಜ್ಯದ 36 ಜಿಲ್ಲೆಗಳಲ್ಲಿನ ಒಟ್ಟು 321 ಸರ್ಕಾರಿ ಶಾಲೆಗಳು, 58 ಸರ್ಕಾರಿ ಅನುದಾನಿತ ಶಾಲೆಗಳು ಮತ್ತು 62 ಖಾಸಗಿ ಶಾಲೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. 6 ರಿಂದ 12ನೇ ತರಗತಿಯವರೆಗಿನ 644 ವಿದ್ಯಾರ್ಥಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 333 ಬಾಲಕರು ಮತ್ತು 311 ಬಾಲಕಿಯರು ಸೇರಿದ್ದಾರೆ. ಅಧ್ಯಯನದಲ್ಲಿ ಭಾಗವಹಿಸಿದ ಹೆಚ್ಚಿನ ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ  ಸೇರಿದ್ದಾರೆ. ಸುಮಾರು 10% ವಿದ್ಯಾರ್ಥಿಗಳು ಹಿಂದುಳಿದ ಜಾತಿಗಳು (ಬಿಸಿ) ಮತ್ತು ಅತ್ಯಂತ ಹಿಂದುಳಿದ ವರ್ಗಗಳ ಮಕ್ಕಳು ಇದ್ದರು ಎಂದು ಸಮೀಕ್ಷೆ ನಡೆಸಿದ TNUEFನ ಪ್ರಧಾನ ಕಾರ್ಯದರ್ಶಿ ಸ್ಯಾಮುವೆಲ್ ರಾಜ್ ಹೇಳಿದ್ದಾರೆ.

ಅಧ್ಯಯನದ ಪ್ರಕಾರ, ರಾಮನಾಥಪುರಂ, ಕಡಲೂರು ಮತ್ತು ತಿರುವಣ್ಣಾಮಲೈ ಸೇರಿದಂತೆ ವಿವಿಧ ಜಿಲ್ಲೆಗಳ  25 ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಜಾತಿ ದೌರ್ಜನ್ಯ ವರದಿಯಾಗಿದೆ. ಕನಿಷ್ಠ 23 ಶಾಲೆಗಳಲ್ಲಿ ವಿದ್ಯಾರ್ಥಿಗಳು ಜಾತಿವಾದಿ ಭಾವನೆಗಳನ್ನು ಸಕ್ರಿಯವಾಗಿ ವ್ಯಕ್ತಪಡಿಸುವುದು ಕಂಡುಬಂದಿದೆ. 10 ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಗಳ ಆಧಾರದ ಮೇಲೆ ಪ್ರತ್ಯೇಕ ಗುಂಪುಗಳನ್ನು ರಚಿಸಿದ್ದಾರೆ. ಚೆನ್ನೈ, ಕಡಲೂರು ಮತ್ತು ತಿರುನೆಲ್ವೇಲಿ ಸೇರಿದಂತೆ 20 ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಯನ್ನು ಸೂಚಿಸಲು ನಿರ್ದಿಷ್ಟ ಬಣ್ಣಗಳ ಕರ್ಚೀಫ್‌ಗಳು, ಬಿಂದಿಗಳು, ದಾರಗಳು ಮತ್ತು ಸ್ಟಿಕ್ಕರ್‌ಗಳನ್ನು ಬಳಸುತ್ತಾರೆ. ಇದಲ್ಲದೆ ಇತರ 34 ಜಾತಿ ಸೂಚಕ ಸಂಕೇತಗಳನ್ನು ಮಕ್ಕಳು ಬಳಕೆ ಮಾಡುತ್ತಿದ್ದಾರೆ ಎನ್ನುವುದನ್ನು ಅಧ್ಯಯನವು ಬಹಿರಂಗಪಡಿಸಿದೆ.

15 ಶಾಲೆಗಳಲ್ಲಿ ದಲಿತ ವಿದ್ಯಾರ್ಥಿಗಳ ಕೈಯ್ಯಲ್ಲಿ ಶೌಚಾಲಯಗಳನ್ನು ಶುಚಿಗೊಳಿಸಲಾಗುತ್ತದೆ. 6 ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಯ ಆಧಾರದ ಮೇಲೆ ಪ್ರತ್ಯೇಕ ಸಾಲುಗಳಲ್ಲಿ ನಿಂತು ಮಧ್ಯಾಹ್ನದ ಊಟವನ್ನು ಸ್ವೀಕರಿಸುವಂತೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ವರದಿಯು ಬಹಿರಂಗಪಡಿಸಿದೆ.

ಕನಿಷ್ಠ 3 ಶಾಲೆಗಳಲ್ಲಿ ಶಿಕ್ಷಕರಲ್ಲಿ ಜಾತಿ ಆಧಾರಿತ ತಾರತಮ್ಯವು ಚಾಲ್ತಿಯಲ್ಲಿದೆ ಎಂದು ಅಧ್ಯಯನವು ಬಹಿರಂಗಪಡಿಸಿದೆ. 5 ಶಾಲೆಗಳಲ್ಲಿ ಶಿಕ್ಷಕರು ತರಗತಿಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಸಕ್ರಿಯವಾಗಿ ಪ್ರಚಾರ ಮಾಡುತ್ತಾರೆ. ಒಂದು ಶಾಲೆಯಲ್ಲಿ ಶಿಕ್ಷಕರು ದಲಿತ ವಿದ್ಯಾರ್ಥಿಗಳನ್ನು ಮುಟ್ಟಲು ನಿರಾಕರಿಸಿದ್ದು, 3 ಶಾಲೆಗಳಲ್ಲಿ ದಲಿತ ವಿದ್ಯಾರ್ಥಿಗಳನ್ನು ಅತಿಯಾಗಿ ಶಿಕ್ಷಿಸಿರುವುದು ಕಂಡುಬಂದಿದೆ. ಮದುರೈನ ಶಾಲೆಯೊಂದರಲ್ಲಿ 12 ನೇ ತರಗತಿ ಟಾಪರ್‌ಗಳಿಗೆ ಅಭಿನಂದನಾ ಸಮಾರಂಭವನ್ನು ರದ್ದುಗೊಳಿಸಲಾಗಿದೆ. ಏಕೆಂದರೆ ಮೊದಲ ಮತ್ತು ಎರಡನೇ ರ್ಯಾಂಕ್ ಹೊಂದಿರುವವರು ಇಬ್ಬರೂ ದಲಿತರು. ಅವರಿಗೆ ಬಹುಮಾನ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ ಎನ್ನುವ ಆಘಾತಕಾರಿ ಅಂಶಗಳು ಬಹಿರಂಗವಾಗಿದೆ.

ಈ ಸಮಸ್ಯೆಗಳನ್ನು ನಿವಾರಣೆಗೆ ಸಮೀಕ್ಷೆ ನಡೆಸಿದ TNUEF ಸರ್ಕಾರಕ್ಕೆ 23 ಶಿಫಾರಸುಗಳನ್ನು ಬಿಡುಗಡೆ ಮಾಡಿದೆ. ಜಾತಿವಾದವನ್ನು ಪರಿಹರಿಸಲು ಆಂತರಿಕ ದೂರುಗಳ ಸಮಿತಿಯಂತಹ ಪ್ರತ್ಯೇಕ ಪರಿಹಾರ ವ್ಯವಸ್ಥೆಯನ್ನು ರಾಜ್ಯದಾದ್ಯಂತ ಶಾಲೆಗಳಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿದೆ. ಈ ಬಗ್ಗೆ ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸಮಿತಿಗಳನ್ನು ಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ದೂರು ಪೆಟ್ಟಿಗೆಗಳನ್ನು ಇರಿಸಲು ಅವರು ಸರ್ಕಾರವನ್ನು ಕೋರಿದ್ದಾರೆ. ಮುಂದಿನ ತಿಂಗಳೊಳಗೆ ಶಾಲೆಗಳಲ್ಲಿ ಜಾತಿ ಆಧಾರಿತ ತಾರತಮ್ಯ ಪ್ರವೃತ್ತಿಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಸಂಸ್ಥೆಯು ಶಾಲೆಗಳು ಮತ್ತು ಶಿಕ್ಷಕರ ಹೆಸರನ್ನು ಮಾದ್ಯಮಗಳಿಗೆ ಬಹಿರಂಗಪಡಿಸುತ್ತದೆ ಎಂದು ಸಾಮುವೆಲ್ ಎಚ್ಚರಿಸಿದ್ದಾರೆ.

ಇದನ್ನು ಓದಿ: ರಾಸಾಯನಿಕ ಹೊತ್ತ ಹಡಗಿನ ಮೇಲೆ ಇರಾನ್‌ನಿಂದ ಡ್ರೋನ್‌ ದಾಳಿ: ಗುಜರಾತ್‌ ಬಳಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...