Homeಕರ್ನಾಟಕನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ - ಎ.ಕೆ.ಸುಬ್ಬಯ್ಯ

ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ – ಎ.ಕೆ.ಸುಬ್ಬಯ್ಯ

- Advertisement -
ಎ.ಕೆ.ಸುಬ್ಬಯ್ಯ, ಹಿರಿಯ ಚಿಂತಕರು. 
ನರೇಂದ್ರ ಮೋದಿ ಮತ್ತು ಅವರ ಪರಿವಾರದವರ ಕೈಯಲ್ಲಿ ಈ ದೇಶದ ಆಡಳಿತ ಇರುವುದಕ್ಕಿಂತ  ಅಪಾಯಕಾರಿ ಸಂದರ್ಭ ಈ ದೇಶಕ್ಕೆ ಹಿಂದೆಂದೂ ಬಂದಿರಲಿಲ್ಲ. ಈ ಚುನಾವಣಾ ಸಮಯದಲ್ಲಿ ಇನ್‍ಕಂ ಟ್ಯಾಕ್ಸ್ ಇಲಾಖೆಯ ದಾಳಿಗಳೇ ದೊಡ್ಡ ಭ್ರಷ್ಟಾಚಾರವಾಗಿದೆ.
ಮೋದಿಯವರು ಮೊನ್ನೆ ಬೆಂಗಳೂರಿನ ಭಾಷಣದಲ್ಲಿ ಎರಡು ತಪ್ಪು ಸಂದೇಶಗಳನ್ನು ಕೊಡುವುದಕ್ಕೆ ಬುದ್ಧಿಪೂರ್ವಕ ಪ್ರಯತ್ನವನ್ನು ಮಾಡಿದ್ದಾರೆ. ಮೊದಲನೆಯದು ಮೋದಿಯನ್ನು ಟೀಕೆ ಮಾಡುವವರೆಲ್ಲರೂ ದೇಶ ದ್ರೋಹಿಗಳು. ಅವರು ದೇಶದ ವಿರುದ್ಧ ಮಾತಾಡುತ್ತಾರೆ. ಎರಡನೆಯದು ತನ್ನ ಭ್ರಷ್ಟಾಚಾರದ ಹೋರಾಟ. ಈ ಉದ್ಯಮಿಗಳ ಮನೆ ಮೇಲೆ  ಇನ್‍ಕಂಟ್ಯಾಕ್ಸ್ ನವರು ಏನು ದಾಳಿ ನಡೆಸುತ್ತಿದ್ದಾರೆ, ಅದು ಭ್ರಷ್ಟಾಚಾರದ ಹೋರಾಟ. ಅದರಿಂದ ವಿರೋಧ ಪಕ್ಷಗಳು ಗಾಬರಿ ಆಗುತ್ತಿದ್ದಾರೆ. ಒಂದು ಕಡೆ ಭ್ರಷ್ಟಾಚಾರದ ಹೋರಾಟ, ಇನ್ನೊಂದು ಕಡೆ ತಾನೇ ದೇಶಭಕ್ತ, ತನ್ನ ಪರಿವಾರದವೇ ದೇಶಭಕ್ತರು ಎಂಬ ತಪ್ಪು ಸಂದೇಶವನ್ನು ಜನರಿಗೆ ಕೊಡುವ ಮೂಲಕ ಜನರ ದಾರಿ ತಪ್ಪಿಸುವ ಬುದ್ಧಿಪೂರ್ವಕ ಪ್ರಯತ್ನವನ್ನು ನರೇಂದ್ರ ಮೋದಿಯವರು ಇಲ್ಲಿ ಮಾಡಿದ್ದಾರೆ. ಈ ಎರಡೂ ಸಹ ಸುಳ್ಳುಗಳು. ಒಂದು ದೇಶ ಅಂದ್ರೆ ಏನು? ನರೇಂದ್ರ  ಮೋದಿಯ ಮಾತಿನ ಪ್ರಕಾರವೇ ದೇಶವೆಂದರೆ ನರೇಂದ್ರ ಮೋದಿ, ಮೋದಿ ಬಿಟ್ಟು ದೇಶ ಇಲ್ಲ.  ನರೇಂದ್ರ ಮೋದಿಯನ್ನ  ಟೀಕೆ ಮಾಡುವ ಎಲ್ಲರೂ ದೇಶದ್ರೋಹಿಗಳು. ಇಂತಹ ಒಂದು ಸಂದೇಶವನ್ನು ಆತ ಜನಕ್ಕೆ ಕೊಡುತ್ತಿದ್ದಾನೆ.
ದೇಶಕ್ಕಾಗಿ ನಾವು ಎಂಬ ಆಂದೋಲನ ನಡೆಸುತ್ತಿರುವವರ ಪೈಕಿ ನಾನೂ ಒಬ್ಬ. ನಮಗೆ ದೇಶ ಅಂದರೆ, ಈ ಭಾರತದ ಭೂಪಟದಲ್ಲಿ ವಿಶಾಲವಾದ ಭೂ ಪ್ರದೇಶ. ಅಲ್ಲಿ ಇರುವಂತ ವೈವಿಧ್ಯಮಯವಾದಂತಹ ಜನರ ಸೌಹಾರ್ದಯುತವಾದಂತಹ ಬದುಕು. ವೈವಿಧ್ಯಮಯವಾದ ಜೀವ ಸಂಸ್ಕøತಿ. ಇವೆಲ್ಲವೂ ಸೇರಿ ನಮಗೆ ದೇಶ.  ಅವೆಲ್ಲವನ್ನೂ ಉಳಿಸಿಕೊಳ್ಳಲಿಕ್ಕಾಗಿ ದೇಶಕ್ಕಾಗಿ ನಾವು ಜನಾಂದೋಲನವನ್ನು ಮಾಡುತ್ತಿದ್ದೇವೆ. ನಾವು ಯಾವುದೇ ಕ್ಷುಲ್ಲಕವಾದಂತಹ ಚಳವಳಿಯೂ ಅಲ್ಲ. .. .. ಸ್ವಾರ್ಥದಿಂದ ಮಾಡುತ್ತಿರುವ ಚಳವಳಿಯೂ ಅಲ್ಲ. ಇದು ನಮ್ಮ ನಿಜವಾದ ದೇಶವನ್ನು ಉಳಿಸಿಕೊಳ್ಳಬೇಕು ಎಂದು ಮಾಡುತ್ತಿರುವ ಚಳವಳಿ ಇದಾಗಿದೆ. ನಮ್ಮ ದೇಶದ ಪರಿಕಲ್ಪನೆ ನರೇಂದ್ರ ಮೋದಿ ದೇಶದ ಪರಿಕಲ್ಪನೆಯಂತಲ್ಲ. ನಮ್ಮ ದೃಷ್ಟಿಯಲ್ಲಿ ಅತ್ಯಂತ ದೇಶದ್ರೋಹಿಗಳು ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ  ಮತ್ತು ಅವನ ಪರಿವಾರದವರು.
ನಮಗೆ ಮಹಾತ್ಮ ಗಾಂಧಿ ದೇಶದ ಶ್ರೇಷ್ಠ ಮಾರ್ಗದರ್ಶಕ. ನರೇಂದ್ರ ಮೋದಿಗೆ ಮಹಾತ್ಮ ಗಾಂಧಿಯನ್ನು ಕೊಂದವರು ದೇಶಭಕ್ತರು. ನಮಗೆ ಮಹಾತ್ಮ ಗಾಂಧಿ ದೇಶಭಕ್ತ. ನಮಗೆ ವಿವೇಕಾನಂದರ ದೇಶ ಬೇಕು. ನರೇಂದ್ರ ಮೋದಿಗೆ ಗೋಡ್ಸೆಯ ದೇಶ ಬೇಕು. ನಮಗೆ ನಾರಾಯಣ ಗುರು, ಮಹಾತ್ಮ ಫುಲೆ, ಬಾಬಾ ಸಾಹೆಬ್ ಅಂಬೇಢ್ಕರ್, ಗೌತಮ ಬುದ್ದ ಇಂತಹ ಮಹಾ ಮಾನವರ ಜೀವಪರ ವ್ಯಕ್ತಿಗಳ ದೇಶ ಬೇಕು. ಈ ದೇಶವನ್ನು ಉಳಿಸಲಿಕ್ಕೆ ನಾವು ದೇಶಭಕ್ತಿಯ ಚಳವಳಿಯನ್ನು ನಾವು ಮಾಡುತ್ತಿದ್ದೇವೆ.
ಆದರೆ ಈ ದೇಶವನ್ನ ಗಾಂಧಿಯವರನ್ನು ಕೊಂದವರ ದೇಶ ಮಾಡಬೇಕು. ಗೌರಿ ಲಂಕೇಶರನ್ನು  ಕೊಂದವರ ದೇಶವನ್ನಾಗಿ ಮಾಡಬೇಕು, ಹಾಗೆಯೇ ಧಾಬೋಲ್ಕರ್, ಪನ್ಸಾರೆ, ಕಲ್ಬುರ್ಗಿಯವರನ್ನ ಕೊಂದವರ  ರೀತಿಯ ದೇಶ ಮಾಡಲು ಹೊರಟಿದ್ದಾರೆ. ನರೇಂದ್ರ ಮೋದಿ ಮತ್ತು ಅವರ ಪರಿವಾರದವರ ಕೈಯಲ್ಲಿ ಈ ದೇಶದ ಆಡಳಿತ ಇರುವುದಕ್ಕಿಂತ  ಅಪಾಯಕಾರಿ ಸಂದರ್ಭ ಈ ದೇಶಕ್ಕೆ ಹಿಂದೆಂದೂ ಬಂದಿರಲಿಲ್ಲ ಅನ್ನಿಸುತ್ತೆ. ಇಂದು ನಮ್ಮ ದೇಶದ ಮುಂದೆ  ಇಂತ ಅಪಾಯದಿಂದ ಇಡೀ ದೇಶವನ್ನು ಪಾರುಮಾಡುವಂತಹ ಹೊಣೆಗಾರಿಕೆ  ಬೇರೆ ಬೇರೆ ರಾಜಕೀಯ ಪಕ್ಷಗಳಿಗಿಂತ  ಹೆಚ್ಚಾಗಿ ನಮ್ಮಂತೆ ಚಿಂತನೆ ಮಾಡುವವರ ಹೆಗಲ ಮೇಲೆ ಹೆಚ್ಚಾಗಿ ಇದೆ. ಅದರಿಂದಾಗಿ ನಾವು ವಿಚಲಿತರಾಗಿದ್ದೇವೆ.
ಚುನಾವಣೆಯ ಸಂಧರ್ಭದಲ್ಲಿ ನಡೆಯುತ್ತಿರುವ ಐಟಿ ದಾಳಿಗಳನ್ನೇ  ಭ್ರಷ್ಟಾಚಾರಿ ವಿರೋಧಿ ಹೋರಾಟ ಮತ್ತು ತಾನೇ ಮಾಡಿಸುತ್ತಿದ್ದೇನೆ ಎಂದು ಪರೋಕ್ಷವಾಗಿ  ಹೇಳುತ್ತಿದ್ದಾರೆ. ಐಟಿ ಸಂಸ್ಥೆ ಇಲಾಖೆಯ ವತಿಯಿಂದ ಅದರ ಪಾಡಿಗೆ ಅದರ ಕೆಲಸ ಮಾಡುತ್ತಿದೆ ಎಂದು ಹೇಳುತ್ತಿಲ್ಲ. ಇದನ್ನು ವಿರೋಧಿಸಿದವರು ದೇಶದ್ರೋಹಿಗಳು. ನರೇಂದ್ರ ಮೋದಿ ಈ ದಾಳಿಗಳನ್ನು ಮಾಡಿಸುತ್ತಿರುವುದಾದರೂ ಏಕೆ. ವಿರೋಧ ಪಕ್ಷಗಳಿಗೆ ಚುನಾವಣಾ ಪ್ರಚಾರ ಮಾಡಲು ಸಾಧ್ಯವಾಗದಂತಹ ಏಕಮಾತ್ರ ಬಿಕ್ಕಟ್ಟು ನಿರ್ಮಾಣ ಮಾಡುವ ಏಕಮಾತ್ರ ಉದ್ದೇಶದಿಂದ ಈ ದಾಳಿಗಳನ್ನು ನಡೆಸುತ್ತಿದ್ದಾರೆ. ಇಂತಹ ದಾಳಿಗಳನ್ನು ಚುನಾವಣೆಗೆ ಮೊದಲು ಮುಗಿಸಬಹುದಿತ್ತು. ಚುನಾವಣೆಯ ನಂತರದ ಇಪ್ಪತ್ತು ದಿನ ಕಾದಿದ್ದರೂ ಆಕಾಶವೇನೂ ಕೆಳಗೆ ಬೀಳುತ್ತಿರಲಿಲ್ಲ. ಚುನಾವಣೆಯಲ್ಲಿ ಹಣದ ದುವ್ರ್ಯವಹಾರಗಳು ನಡೆಯುತ್ತಿದ್ದರೆ, ಚುನಾವಣಾ ಆಯೋಗ ದಾಳಿಗಳನ್ನು ಮಾಡಬಹುದಿತ್ತು. ಇನ್‍ಕಂ ಟ್ಯಾಕ್ಸ್‍ನವರು ಬರುವ ಅವಶ್ಯಕತೆ ಏನಿತ್ತು. ಈ ಚುನಾವಣಾ ಸಮಯದಲ್ಲಿ ಇನ್‍ಕಂ ಟ್ಯಾಕ್ಸ್ ಇಲಾಖೆಯ ದಾಳಿಗಳೇ ದೊಡ್ಡ ಭ್ರಷ್ಟಾಚಾರವಾಗಿದೆ. ಇದು  ಭ್ರಷ್ಟಾಚಾರ ತಡೆಯುವುದಲ್ಲ. ಆದರೆ ಮೋದಿ ಯತಾ ಪ್ರಕಾರ ಇದನ್ನು ಭ್ರಷ್ಟಾಚಾರ ವಿರೋಧಿ ಚಳವಳಿ ಎಂದು ಬಿಂಬಿಸಲು ಹೊರಟಿದ್ದಾರೆ. ಆದರೆ ನಮ್ಮ ದೇಶದ ಜನ ಅಷ್ಟು ದಡ್ಡರಲ್ಲ. ಜನರ ಮೇಲೆ ಭರವಸೆ ಇಟ್ಟೇ ನಾವು ದೇಶಕ್ಕಾಗಿ ನಾವು ಚಳವಳಿಯನ್ನು ಮುಂದುವರೆಸುತ್ತೇವೆ. ಈ ರೀತಿ ಯೋಚನೆ ಮಾಡುವಂತ ಇಡೀ ದೇಶದ ಪ್ರಗತಿಪರ ಮತದಾರರು, ಈ ಚುನಾವಣೆಯಲ್ಲಿ ತಮ್ಮಿಂದ ತಾವೇ ಇದನ್ನು ಅರಿತು ತನು, ಮನ, ಧನಗಳನ್ನು ಅರ್ಪಿಸಿ ಈ ನರೇಂದ್ರ ಮೋದಿಯಂತಹ ದೇಶದ್ರೋಹಿ ಕೋಮು ಶಕ್ತಿಗಳಿಂದ  ದೇಶವನ್ನು ಈ ಚುನಾವಣೆಯಲ್ಲಿ ಪಾರು ಮಾಡುವಂತಹ ಸುವರ್ಣ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಾನು ಪ್ರಾರ್ಥನೆ ಮಾಡುತ್ತೇನೆ.
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...