Homeಕರ್ನಾಟಕನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ - ಎ.ಕೆ.ಸುಬ್ಬಯ್ಯ

ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ – ಎ.ಕೆ.ಸುಬ್ಬಯ್ಯ

- Advertisement -
ಎ.ಕೆ.ಸುಬ್ಬಯ್ಯ, ಹಿರಿಯ ಚಿಂತಕರು. 
ನರೇಂದ್ರ ಮೋದಿ ಮತ್ತು ಅವರ ಪರಿವಾರದವರ ಕೈಯಲ್ಲಿ ಈ ದೇಶದ ಆಡಳಿತ ಇರುವುದಕ್ಕಿಂತ  ಅಪಾಯಕಾರಿ ಸಂದರ್ಭ ಈ ದೇಶಕ್ಕೆ ಹಿಂದೆಂದೂ ಬಂದಿರಲಿಲ್ಲ. ಈ ಚುನಾವಣಾ ಸಮಯದಲ್ಲಿ ಇನ್‍ಕಂ ಟ್ಯಾಕ್ಸ್ ಇಲಾಖೆಯ ದಾಳಿಗಳೇ ದೊಡ್ಡ ಭ್ರಷ್ಟಾಚಾರವಾಗಿದೆ.
ಮೋದಿಯವರು ಮೊನ್ನೆ ಬೆಂಗಳೂರಿನ ಭಾಷಣದಲ್ಲಿ ಎರಡು ತಪ್ಪು ಸಂದೇಶಗಳನ್ನು ಕೊಡುವುದಕ್ಕೆ ಬುದ್ಧಿಪೂರ್ವಕ ಪ್ರಯತ್ನವನ್ನು ಮಾಡಿದ್ದಾರೆ. ಮೊದಲನೆಯದು ಮೋದಿಯನ್ನು ಟೀಕೆ ಮಾಡುವವರೆಲ್ಲರೂ ದೇಶ ದ್ರೋಹಿಗಳು. ಅವರು ದೇಶದ ವಿರುದ್ಧ ಮಾತಾಡುತ್ತಾರೆ. ಎರಡನೆಯದು ತನ್ನ ಭ್ರಷ್ಟಾಚಾರದ ಹೋರಾಟ. ಈ ಉದ್ಯಮಿಗಳ ಮನೆ ಮೇಲೆ  ಇನ್‍ಕಂಟ್ಯಾಕ್ಸ್ ನವರು ಏನು ದಾಳಿ ನಡೆಸುತ್ತಿದ್ದಾರೆ, ಅದು ಭ್ರಷ್ಟಾಚಾರದ ಹೋರಾಟ. ಅದರಿಂದ ವಿರೋಧ ಪಕ್ಷಗಳು ಗಾಬರಿ ಆಗುತ್ತಿದ್ದಾರೆ. ಒಂದು ಕಡೆ ಭ್ರಷ್ಟಾಚಾರದ ಹೋರಾಟ, ಇನ್ನೊಂದು ಕಡೆ ತಾನೇ ದೇಶಭಕ್ತ, ತನ್ನ ಪರಿವಾರದವೇ ದೇಶಭಕ್ತರು ಎಂಬ ತಪ್ಪು ಸಂದೇಶವನ್ನು ಜನರಿಗೆ ಕೊಡುವ ಮೂಲಕ ಜನರ ದಾರಿ ತಪ್ಪಿಸುವ ಬುದ್ಧಿಪೂರ್ವಕ ಪ್ರಯತ್ನವನ್ನು ನರೇಂದ್ರ ಮೋದಿಯವರು ಇಲ್ಲಿ ಮಾಡಿದ್ದಾರೆ. ಈ ಎರಡೂ ಸಹ ಸುಳ್ಳುಗಳು. ಒಂದು ದೇಶ ಅಂದ್ರೆ ಏನು? ನರೇಂದ್ರ  ಮೋದಿಯ ಮಾತಿನ ಪ್ರಕಾರವೇ ದೇಶವೆಂದರೆ ನರೇಂದ್ರ ಮೋದಿ, ಮೋದಿ ಬಿಟ್ಟು ದೇಶ ಇಲ್ಲ.  ನರೇಂದ್ರ ಮೋದಿಯನ್ನ  ಟೀಕೆ ಮಾಡುವ ಎಲ್ಲರೂ ದೇಶದ್ರೋಹಿಗಳು. ಇಂತಹ ಒಂದು ಸಂದೇಶವನ್ನು ಆತ ಜನಕ್ಕೆ ಕೊಡುತ್ತಿದ್ದಾನೆ.
ದೇಶಕ್ಕಾಗಿ ನಾವು ಎಂಬ ಆಂದೋಲನ ನಡೆಸುತ್ತಿರುವವರ ಪೈಕಿ ನಾನೂ ಒಬ್ಬ. ನಮಗೆ ದೇಶ ಅಂದರೆ, ಈ ಭಾರತದ ಭೂಪಟದಲ್ಲಿ ವಿಶಾಲವಾದ ಭೂ ಪ್ರದೇಶ. ಅಲ್ಲಿ ಇರುವಂತ ವೈವಿಧ್ಯಮಯವಾದಂತಹ ಜನರ ಸೌಹಾರ್ದಯುತವಾದಂತಹ ಬದುಕು. ವೈವಿಧ್ಯಮಯವಾದ ಜೀವ ಸಂಸ್ಕøತಿ. ಇವೆಲ್ಲವೂ ಸೇರಿ ನಮಗೆ ದೇಶ.  ಅವೆಲ್ಲವನ್ನೂ ಉಳಿಸಿಕೊಳ್ಳಲಿಕ್ಕಾಗಿ ದೇಶಕ್ಕಾಗಿ ನಾವು ಜನಾಂದೋಲನವನ್ನು ಮಾಡುತ್ತಿದ್ದೇವೆ. ನಾವು ಯಾವುದೇ ಕ್ಷುಲ್ಲಕವಾದಂತಹ ಚಳವಳಿಯೂ ಅಲ್ಲ. .. .. ಸ್ವಾರ್ಥದಿಂದ ಮಾಡುತ್ತಿರುವ ಚಳವಳಿಯೂ ಅಲ್ಲ. ಇದು ನಮ್ಮ ನಿಜವಾದ ದೇಶವನ್ನು ಉಳಿಸಿಕೊಳ್ಳಬೇಕು ಎಂದು ಮಾಡುತ್ತಿರುವ ಚಳವಳಿ ಇದಾಗಿದೆ. ನಮ್ಮ ದೇಶದ ಪರಿಕಲ್ಪನೆ ನರೇಂದ್ರ ಮೋದಿ ದೇಶದ ಪರಿಕಲ್ಪನೆಯಂತಲ್ಲ. ನಮ್ಮ ದೃಷ್ಟಿಯಲ್ಲಿ ಅತ್ಯಂತ ದೇಶದ್ರೋಹಿಗಳು ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ  ಮತ್ತು ಅವನ ಪರಿವಾರದವರು.
ನಮಗೆ ಮಹಾತ್ಮ ಗಾಂಧಿ ದೇಶದ ಶ್ರೇಷ್ಠ ಮಾರ್ಗದರ್ಶಕ. ನರೇಂದ್ರ ಮೋದಿಗೆ ಮಹಾತ್ಮ ಗಾಂಧಿಯನ್ನು ಕೊಂದವರು ದೇಶಭಕ್ತರು. ನಮಗೆ ಮಹಾತ್ಮ ಗಾಂಧಿ ದೇಶಭಕ್ತ. ನಮಗೆ ವಿವೇಕಾನಂದರ ದೇಶ ಬೇಕು. ನರೇಂದ್ರ ಮೋದಿಗೆ ಗೋಡ್ಸೆಯ ದೇಶ ಬೇಕು. ನಮಗೆ ನಾರಾಯಣ ಗುರು, ಮಹಾತ್ಮ ಫುಲೆ, ಬಾಬಾ ಸಾಹೆಬ್ ಅಂಬೇಢ್ಕರ್, ಗೌತಮ ಬುದ್ದ ಇಂತಹ ಮಹಾ ಮಾನವರ ಜೀವಪರ ವ್ಯಕ್ತಿಗಳ ದೇಶ ಬೇಕು. ಈ ದೇಶವನ್ನು ಉಳಿಸಲಿಕ್ಕೆ ನಾವು ದೇಶಭಕ್ತಿಯ ಚಳವಳಿಯನ್ನು ನಾವು ಮಾಡುತ್ತಿದ್ದೇವೆ.
ಆದರೆ ಈ ದೇಶವನ್ನ ಗಾಂಧಿಯವರನ್ನು ಕೊಂದವರ ದೇಶ ಮಾಡಬೇಕು. ಗೌರಿ ಲಂಕೇಶರನ್ನು  ಕೊಂದವರ ದೇಶವನ್ನಾಗಿ ಮಾಡಬೇಕು, ಹಾಗೆಯೇ ಧಾಬೋಲ್ಕರ್, ಪನ್ಸಾರೆ, ಕಲ್ಬುರ್ಗಿಯವರನ್ನ ಕೊಂದವರ  ರೀತಿಯ ದೇಶ ಮಾಡಲು ಹೊರಟಿದ್ದಾರೆ. ನರೇಂದ್ರ ಮೋದಿ ಮತ್ತು ಅವರ ಪರಿವಾರದವರ ಕೈಯಲ್ಲಿ ಈ ದೇಶದ ಆಡಳಿತ ಇರುವುದಕ್ಕಿಂತ  ಅಪಾಯಕಾರಿ ಸಂದರ್ಭ ಈ ದೇಶಕ್ಕೆ ಹಿಂದೆಂದೂ ಬಂದಿರಲಿಲ್ಲ ಅನ್ನಿಸುತ್ತೆ. ಇಂದು ನಮ್ಮ ದೇಶದ ಮುಂದೆ  ಇಂತ ಅಪಾಯದಿಂದ ಇಡೀ ದೇಶವನ್ನು ಪಾರುಮಾಡುವಂತಹ ಹೊಣೆಗಾರಿಕೆ  ಬೇರೆ ಬೇರೆ ರಾಜಕೀಯ ಪಕ್ಷಗಳಿಗಿಂತ  ಹೆಚ್ಚಾಗಿ ನಮ್ಮಂತೆ ಚಿಂತನೆ ಮಾಡುವವರ ಹೆಗಲ ಮೇಲೆ ಹೆಚ್ಚಾಗಿ ಇದೆ. ಅದರಿಂದಾಗಿ ನಾವು ವಿಚಲಿತರಾಗಿದ್ದೇವೆ.
ಚುನಾವಣೆಯ ಸಂಧರ್ಭದಲ್ಲಿ ನಡೆಯುತ್ತಿರುವ ಐಟಿ ದಾಳಿಗಳನ್ನೇ  ಭ್ರಷ್ಟಾಚಾರಿ ವಿರೋಧಿ ಹೋರಾಟ ಮತ್ತು ತಾನೇ ಮಾಡಿಸುತ್ತಿದ್ದೇನೆ ಎಂದು ಪರೋಕ್ಷವಾಗಿ  ಹೇಳುತ್ತಿದ್ದಾರೆ. ಐಟಿ ಸಂಸ್ಥೆ ಇಲಾಖೆಯ ವತಿಯಿಂದ ಅದರ ಪಾಡಿಗೆ ಅದರ ಕೆಲಸ ಮಾಡುತ್ತಿದೆ ಎಂದು ಹೇಳುತ್ತಿಲ್ಲ. ಇದನ್ನು ವಿರೋಧಿಸಿದವರು ದೇಶದ್ರೋಹಿಗಳು. ನರೇಂದ್ರ ಮೋದಿ ಈ ದಾಳಿಗಳನ್ನು ಮಾಡಿಸುತ್ತಿರುವುದಾದರೂ ಏಕೆ. ವಿರೋಧ ಪಕ್ಷಗಳಿಗೆ ಚುನಾವಣಾ ಪ್ರಚಾರ ಮಾಡಲು ಸಾಧ್ಯವಾಗದಂತಹ ಏಕಮಾತ್ರ ಬಿಕ್ಕಟ್ಟು ನಿರ್ಮಾಣ ಮಾಡುವ ಏಕಮಾತ್ರ ಉದ್ದೇಶದಿಂದ ಈ ದಾಳಿಗಳನ್ನು ನಡೆಸುತ್ತಿದ್ದಾರೆ. ಇಂತಹ ದಾಳಿಗಳನ್ನು ಚುನಾವಣೆಗೆ ಮೊದಲು ಮುಗಿಸಬಹುದಿತ್ತು. ಚುನಾವಣೆಯ ನಂತರದ ಇಪ್ಪತ್ತು ದಿನ ಕಾದಿದ್ದರೂ ಆಕಾಶವೇನೂ ಕೆಳಗೆ ಬೀಳುತ್ತಿರಲಿಲ್ಲ. ಚುನಾವಣೆಯಲ್ಲಿ ಹಣದ ದುವ್ರ್ಯವಹಾರಗಳು ನಡೆಯುತ್ತಿದ್ದರೆ, ಚುನಾವಣಾ ಆಯೋಗ ದಾಳಿಗಳನ್ನು ಮಾಡಬಹುದಿತ್ತು. ಇನ್‍ಕಂ ಟ್ಯಾಕ್ಸ್‍ನವರು ಬರುವ ಅವಶ್ಯಕತೆ ಏನಿತ್ತು. ಈ ಚುನಾವಣಾ ಸಮಯದಲ್ಲಿ ಇನ್‍ಕಂ ಟ್ಯಾಕ್ಸ್ ಇಲಾಖೆಯ ದಾಳಿಗಳೇ ದೊಡ್ಡ ಭ್ರಷ್ಟಾಚಾರವಾಗಿದೆ. ಇದು  ಭ್ರಷ್ಟಾಚಾರ ತಡೆಯುವುದಲ್ಲ. ಆದರೆ ಮೋದಿ ಯತಾ ಪ್ರಕಾರ ಇದನ್ನು ಭ್ರಷ್ಟಾಚಾರ ವಿರೋಧಿ ಚಳವಳಿ ಎಂದು ಬಿಂಬಿಸಲು ಹೊರಟಿದ್ದಾರೆ. ಆದರೆ ನಮ್ಮ ದೇಶದ ಜನ ಅಷ್ಟು ದಡ್ಡರಲ್ಲ. ಜನರ ಮೇಲೆ ಭರವಸೆ ಇಟ್ಟೇ ನಾವು ದೇಶಕ್ಕಾಗಿ ನಾವು ಚಳವಳಿಯನ್ನು ಮುಂದುವರೆಸುತ್ತೇವೆ. ಈ ರೀತಿ ಯೋಚನೆ ಮಾಡುವಂತ ಇಡೀ ದೇಶದ ಪ್ರಗತಿಪರ ಮತದಾರರು, ಈ ಚುನಾವಣೆಯಲ್ಲಿ ತಮ್ಮಿಂದ ತಾವೇ ಇದನ್ನು ಅರಿತು ತನು, ಮನ, ಧನಗಳನ್ನು ಅರ್ಪಿಸಿ ಈ ನರೇಂದ್ರ ಮೋದಿಯಂತಹ ದೇಶದ್ರೋಹಿ ಕೋಮು ಶಕ್ತಿಗಳಿಂದ  ದೇಶವನ್ನು ಈ ಚುನಾವಣೆಯಲ್ಲಿ ಪಾರು ಮಾಡುವಂತಹ ಸುವರ್ಣ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಾನು ಪ್ರಾರ್ಥನೆ ಮಾಡುತ್ತೇನೆ.
(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...