Homeಮುಖಪುಟತಮಿಳುನಾಡಿನಲ್ಲಿ ಹೋರ್ಡಿಂಗ್‌ ಬಿದ್ದು ಯುವತಿ ಸಾವು: ಗಾಳಿಯ ಮೇಲೆ ಕೇಸು ಹಾಕಿ ಎಂದ ರಾಜಕಾರಣಿ...

ತಮಿಳುನಾಡಿನಲ್ಲಿ ಹೋರ್ಡಿಂಗ್‌ ಬಿದ್ದು ಯುವತಿ ಸಾವು: ಗಾಳಿಯ ಮೇಲೆ ಕೇಸು ಹಾಕಿ ಎಂದ ರಾಜಕಾರಣಿ…

- Advertisement -
- Advertisement -

ಕಳೆದ ತಿಂಗಳು ಸೆಪ್ಟೆಂಬರ್ 12 ರಂದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಭಾಶ್ರಿ ರವಿಯವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಅಕ್ರಮವಾಗಿ ನಿರ್ಮಿಸಲಾದ ಹೋರ್ಡಿಂಗ್ ತನ್ನ ಮೇಲೆ ಬಿದ್ದ ಪರಿಣಾಮ ಸಾವನಪ್ಪಿದ್ದರು. ಅವರ ದುರಂತ ಸಾವಿಗೆ ತಮಿಳುನಾಡಿನ ಹಿರಿಯ ರಾಜಕಾರಣಿ ಪೊನ್ನಯ್ಯನ್ “ಗಾಳಿಯನ್ನು ಶಿಕ್ಷಿಸಿ” ಎಂದು ವಿಲಕ್ಷಣ ಹೇಳಿಕೆ ನೀಡಿದ್ದಾರೆ.

ಸ್ಥಳೀಯ ಸುದ್ದಿವಾಹಿನಿಯೊಂದಿಗೆ ಮಾತನಾಡಿದ AIADMK ಮುಖಂಡ ಪೊನ್ನಯ್ಯನ್, ಹೋರ್ಡಿಂಗ್ ನಿರ್ಮಿಸಿದ ವ್ಯಕ್ತಿಯನ್ನು ಮಹಿಳೆಯ ಸಾವಿಗೆ ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಮತ್ತು ಕೇಸು ದಾಖಲಿಬೇಕಾದರೆ ಗಾಳಿಯ ಮೇಲೆ ದಾಖಲಿಸಿ ಶಿಕ್ಷಿಸಿ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಚೆನ್ನೈನಿಂದ 320 ಕಿಲೋಮೀಟರ್ ದೂರದಲ್ಲಿರುವ ಕೃಷ್ಣಗಿರಿ ಜಿಲ್ಲೆಯಲ್ಲಿ ಮೂರು ವಾರಗಳ ನಂತರ ಬಂಧನಕ್ಕೊಳಗಾದ ಆಡಳಿತಾರೂಡ AIADMK ಸದಸ್ಯ ಜಯಗೋಪಾಲ್ ಅವರು ಈ ಹೋರ್ಡಿಂಗ್ ಅನ್ನು ನಿರ್ಮಿಸಿದ್ದರು.

“ಬ್ಯಾನರ್ ಇಟ್ಟುಕೊಂಡ ವ್ಯಕ್ತಿ ಅವಳನ್ನು ಸಾವಿಗೆ ತಳ್ಳಲಿಲ್ಲ. ಯಾವುದೇ ಪ್ರಕರಣವನ್ನು ದಾಖಲಿಸಬೇಕಾದರೆ, ಗಾಳಿಯನ್ನು ಹೊಣೆಗಾರರನ್ನಾಗಿ ಮಾಡಿ ”ಎಂದು ಅವರು ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 12 ರಂದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಭಾಶ್ರಿ ರವಿ (23) ಹೆಲ್ಮೆಟ್ ಧರಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಪ್ರಮುಖ ನಗರದ ರಸ್ತೆಯೊಂದರಲ್ಲಿ ಹೋಗುತ್ತಿದ್ದರು. ಆಗ ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸಾಮಿ ಮತ್ತು ಮಾಜಿ ಮುಖ್ಯಮಂತ್ರಿ ಜಯಲಲಿತಾರವರ ಫೋಟೊ ಇದ್ದ ಭಾರೀ ಗಾತ್ರದ ಕಟೌಟ್ ಆಕೆಯ ಸ್ಕೂಟರ್‍ ಮೇಲೆ ಬಿದ್ದಿತು. ಇದರಿಂದ ಗಾಬರಿಗೊಳಗಾದ ಆಕೆ ಆಯಾತಪ್ಪಿ ವಾಟರ್ ಟ್ಯಾಂಕರ್ ಸ್ಕೂಟರ್‌ನಿಂದ ಡಿಕ್ಕಿ ಹೊಡೆದಾಗ ಅವಳ ತಲೆಗೆ ಗಾಯವಾಯಿತು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

ಈ ಘಟನೆಯು ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ನಟ ಮತ್ತು ರಾಜಕಾರಣಿ ಕಮಲ್ ಹಾಸನ್  ರಾಜಕಾರಣಿಗಳನ್ನು ಕಟುವಾಗಿ ಟೀಕಿಸಿದ್ದರು. ರಾಜಕೀಯ ಪಕ್ಷಗಳು ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ನಿರ್ಮಿಸುವುದನ್ನು ನಿಷೇಧಿಸಿದ ಮದ್ರಾಸ್ ಹೈಕೋರ್ಟ್, “ರಾಜ್ಯವು ಅಕ್ರಮ ಹೋರ್ಡಿಂಗ್‌ಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೆ “ಇನ್ನೂ ಎಷ್ಟು ಲೀಟರ್ ರಕ್ತ” ಚೆಲ್ಲುಬೇಕು ಎಂದು ಪ್ರಶ್ನಿಸಿತ್ತು.

ಆದರೆ, ಚೆನ್ನೈನಿಂದ 60 ಕಿಲೋಮೀಟರ್ ದೂರದಲ್ಲಿರುವ ಐತಿಹಾಸಿಕ ಪಟ್ಟಣವಾದ ಮಾಮಲ್ಲಾಪುರಂನಲ್ಲಿ ನಡೆದ ಅನೌಪಚಾರಿಕ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸ್ವಾಗತಿಸಲು ಗುರುವಾರ ನ್ಯಾಯಾಲಯವು, 30 ಬ್ಯಾನರ್‌ಗಳನ್ನು ಹಾಕಲು ಅನುಮತಿ ನೀಡಿತು. ಭಾರತ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ನಡುವೆ ವ್ಯತ್ಯಾಸವಿದೆ ಎಂದು ನ್ಯಾಯಾಲಯ ವಾದಿಸಿತು.

ಆದರೆ ಈ ಘಟನೆಯನ್ನು ಡಿಎಂಕೆ ಮುಖಂಡ ಕಮಲ್ ಹಾಸನ್‌ ತೀವ್ರವಾಗಿ ಖಂಡಿಸಿದ್ದರು. ಅನಧಿಕೃತವಾಗಿ ಹೋರ್ಡಿಂಗ್‌ ಹಾಕಿರುವವರ ಮೇಲೆ ಸೂಕ್ತ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದರು.

ನಾಲ್ಕು ಬಾರಿ ಶಾಸಕರಾದ ಪೊನ್ನಯ್ಯನ್ “ಎಂ.ಕೆ. ಸ್ಟಾಲಿನ್ ಈ ಬಗ್ಗೆ ಸುಳ್ಳು ಹೇಳುತ್ತಾರೆ ಮತ್ತು ಉತ್ಪ್ರೇಕ್ಷೆ ಮಾಡುತ್ತಾರೆ. ಪ್ರಕರಣವು ಸುಪ್ರೀಂ ಕೋರ್ಟ್‌ಗೆ ಹೋಗಲಿ. ಅವರು ತೀರ್ಮಾನಿಸಲಿ. ಕರುಣಾನಿಧಿಯ ಆಡಳಿತ ದಿನಗಳಿಂದ ಎಷ್ಟು ಬ್ಯಾನರ್‌ಗಳನ್ನು ಹಾಕಿದ್ದರೆಂದು ಗೊತ್ತಾಗುತ್ತದೆ ಎಂದು ಅವರ “ಬ್ಯಾನರ್ ಒಂದು ಸಂವಹನ ರೂಪವಾಗಿದೆ ” ಎಂದು ತಿಳಿಸಿದ್ದಾರೆ.

ನವೆಂಬರ್ 2017 ರಲ್ಲಿ, 30 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್, ತಮಿಳುನಾಡಿನ ಕೊಯಮತ್ತೂರಿನಲ್ಲಿ ಸ್ನೇಹಿತರನ್ನು ಭೇಟಿಯಾಗಿ ವಾಪಸ್ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅವರ ಬೈಕ್‌ಗೆ ಮರದ ಹೋರ್ಡಿಂಗ್‌ ಡಿಕ್ಕಿ ಹೊಡೆದು ಮೃತಪಟ್ಟರು. ಆಡಳಿತಾರೂಡ AIADMK ಎಂಜಿಆರ್‌ರವರ ಶತಮಾನೋತ್ಸವಕ್ಕಾಗಿ ಆ ಹೋರ್ಡಿಂಗ್‌ಅನ್ನು ರಸ್ತೆಯಲ್ಲಿ ಸ್ಥಾಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...