Homeಮುಖಪುಟತಮಿಳುನಾಡಿನಲ್ಲಿ ಹೋರ್ಡಿಂಗ್‌ ಬಿದ್ದು ಯುವತಿ ಸಾವು: ಗಾಳಿಯ ಮೇಲೆ ಕೇಸು ಹಾಕಿ ಎಂದ ರಾಜಕಾರಣಿ...

ತಮಿಳುನಾಡಿನಲ್ಲಿ ಹೋರ್ಡಿಂಗ್‌ ಬಿದ್ದು ಯುವತಿ ಸಾವು: ಗಾಳಿಯ ಮೇಲೆ ಕೇಸು ಹಾಕಿ ಎಂದ ರಾಜಕಾರಣಿ…

- Advertisement -
- Advertisement -

ಕಳೆದ ತಿಂಗಳು ಸೆಪ್ಟೆಂಬರ್ 12 ರಂದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಭಾಶ್ರಿ ರವಿಯವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಅಕ್ರಮವಾಗಿ ನಿರ್ಮಿಸಲಾದ ಹೋರ್ಡಿಂಗ್ ತನ್ನ ಮೇಲೆ ಬಿದ್ದ ಪರಿಣಾಮ ಸಾವನಪ್ಪಿದ್ದರು. ಅವರ ದುರಂತ ಸಾವಿಗೆ ತಮಿಳುನಾಡಿನ ಹಿರಿಯ ರಾಜಕಾರಣಿ ಪೊನ್ನಯ್ಯನ್ “ಗಾಳಿಯನ್ನು ಶಿಕ್ಷಿಸಿ” ಎಂದು ವಿಲಕ್ಷಣ ಹೇಳಿಕೆ ನೀಡಿದ್ದಾರೆ.

ಸ್ಥಳೀಯ ಸುದ್ದಿವಾಹಿನಿಯೊಂದಿಗೆ ಮಾತನಾಡಿದ AIADMK ಮುಖಂಡ ಪೊನ್ನಯ್ಯನ್, ಹೋರ್ಡಿಂಗ್ ನಿರ್ಮಿಸಿದ ವ್ಯಕ್ತಿಯನ್ನು ಮಹಿಳೆಯ ಸಾವಿಗೆ ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಮತ್ತು ಕೇಸು ದಾಖಲಿಬೇಕಾದರೆ ಗಾಳಿಯ ಮೇಲೆ ದಾಖಲಿಸಿ ಶಿಕ್ಷಿಸಿ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಚೆನ್ನೈನಿಂದ 320 ಕಿಲೋಮೀಟರ್ ದೂರದಲ್ಲಿರುವ ಕೃಷ್ಣಗಿರಿ ಜಿಲ್ಲೆಯಲ್ಲಿ ಮೂರು ವಾರಗಳ ನಂತರ ಬಂಧನಕ್ಕೊಳಗಾದ ಆಡಳಿತಾರೂಡ AIADMK ಸದಸ್ಯ ಜಯಗೋಪಾಲ್ ಅವರು ಈ ಹೋರ್ಡಿಂಗ್ ಅನ್ನು ನಿರ್ಮಿಸಿದ್ದರು.

“ಬ್ಯಾನರ್ ಇಟ್ಟುಕೊಂಡ ವ್ಯಕ್ತಿ ಅವಳನ್ನು ಸಾವಿಗೆ ತಳ್ಳಲಿಲ್ಲ. ಯಾವುದೇ ಪ್ರಕರಣವನ್ನು ದಾಖಲಿಸಬೇಕಾದರೆ, ಗಾಳಿಯನ್ನು ಹೊಣೆಗಾರರನ್ನಾಗಿ ಮಾಡಿ ”ಎಂದು ಅವರು ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 12 ರಂದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಭಾಶ್ರಿ ರವಿ (23) ಹೆಲ್ಮೆಟ್ ಧರಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಪ್ರಮುಖ ನಗರದ ರಸ್ತೆಯೊಂದರಲ್ಲಿ ಹೋಗುತ್ತಿದ್ದರು. ಆಗ ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸಾಮಿ ಮತ್ತು ಮಾಜಿ ಮುಖ್ಯಮಂತ್ರಿ ಜಯಲಲಿತಾರವರ ಫೋಟೊ ಇದ್ದ ಭಾರೀ ಗಾತ್ರದ ಕಟೌಟ್ ಆಕೆಯ ಸ್ಕೂಟರ್‍ ಮೇಲೆ ಬಿದ್ದಿತು. ಇದರಿಂದ ಗಾಬರಿಗೊಳಗಾದ ಆಕೆ ಆಯಾತಪ್ಪಿ ವಾಟರ್ ಟ್ಯಾಂಕರ್ ಸ್ಕೂಟರ್‌ನಿಂದ ಡಿಕ್ಕಿ ಹೊಡೆದಾಗ ಅವಳ ತಲೆಗೆ ಗಾಯವಾಯಿತು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

ಈ ಘಟನೆಯು ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ನಟ ಮತ್ತು ರಾಜಕಾರಣಿ ಕಮಲ್ ಹಾಸನ್  ರಾಜಕಾರಣಿಗಳನ್ನು ಕಟುವಾಗಿ ಟೀಕಿಸಿದ್ದರು. ರಾಜಕೀಯ ಪಕ್ಷಗಳು ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ನಿರ್ಮಿಸುವುದನ್ನು ನಿಷೇಧಿಸಿದ ಮದ್ರಾಸ್ ಹೈಕೋರ್ಟ್, “ರಾಜ್ಯವು ಅಕ್ರಮ ಹೋರ್ಡಿಂಗ್‌ಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೆ “ಇನ್ನೂ ಎಷ್ಟು ಲೀಟರ್ ರಕ್ತ” ಚೆಲ್ಲುಬೇಕು ಎಂದು ಪ್ರಶ್ನಿಸಿತ್ತು.

ಆದರೆ, ಚೆನ್ನೈನಿಂದ 60 ಕಿಲೋಮೀಟರ್ ದೂರದಲ್ಲಿರುವ ಐತಿಹಾಸಿಕ ಪಟ್ಟಣವಾದ ಮಾಮಲ್ಲಾಪುರಂನಲ್ಲಿ ನಡೆದ ಅನೌಪಚಾರಿಕ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸ್ವಾಗತಿಸಲು ಗುರುವಾರ ನ್ಯಾಯಾಲಯವು, 30 ಬ್ಯಾನರ್‌ಗಳನ್ನು ಹಾಕಲು ಅನುಮತಿ ನೀಡಿತು. ಭಾರತ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ನಡುವೆ ವ್ಯತ್ಯಾಸವಿದೆ ಎಂದು ನ್ಯಾಯಾಲಯ ವಾದಿಸಿತು.

ಆದರೆ ಈ ಘಟನೆಯನ್ನು ಡಿಎಂಕೆ ಮುಖಂಡ ಕಮಲ್ ಹಾಸನ್‌ ತೀವ್ರವಾಗಿ ಖಂಡಿಸಿದ್ದರು. ಅನಧಿಕೃತವಾಗಿ ಹೋರ್ಡಿಂಗ್‌ ಹಾಕಿರುವವರ ಮೇಲೆ ಸೂಕ್ತ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದರು.

ನಾಲ್ಕು ಬಾರಿ ಶಾಸಕರಾದ ಪೊನ್ನಯ್ಯನ್ “ಎಂ.ಕೆ. ಸ್ಟಾಲಿನ್ ಈ ಬಗ್ಗೆ ಸುಳ್ಳು ಹೇಳುತ್ತಾರೆ ಮತ್ತು ಉತ್ಪ್ರೇಕ್ಷೆ ಮಾಡುತ್ತಾರೆ. ಪ್ರಕರಣವು ಸುಪ್ರೀಂ ಕೋರ್ಟ್‌ಗೆ ಹೋಗಲಿ. ಅವರು ತೀರ್ಮಾನಿಸಲಿ. ಕರುಣಾನಿಧಿಯ ಆಡಳಿತ ದಿನಗಳಿಂದ ಎಷ್ಟು ಬ್ಯಾನರ್‌ಗಳನ್ನು ಹಾಕಿದ್ದರೆಂದು ಗೊತ್ತಾಗುತ್ತದೆ ಎಂದು ಅವರ “ಬ್ಯಾನರ್ ಒಂದು ಸಂವಹನ ರೂಪವಾಗಿದೆ ” ಎಂದು ತಿಳಿಸಿದ್ದಾರೆ.

ನವೆಂಬರ್ 2017 ರಲ್ಲಿ, 30 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್, ತಮಿಳುನಾಡಿನ ಕೊಯಮತ್ತೂರಿನಲ್ಲಿ ಸ್ನೇಹಿತರನ್ನು ಭೇಟಿಯಾಗಿ ವಾಪಸ್ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅವರ ಬೈಕ್‌ಗೆ ಮರದ ಹೋರ್ಡಿಂಗ್‌ ಡಿಕ್ಕಿ ಹೊಡೆದು ಮೃತಪಟ್ಟರು. ಆಡಳಿತಾರೂಡ AIADMK ಎಂಜಿಆರ್‌ರವರ ಶತಮಾನೋತ್ಸವಕ್ಕಾಗಿ ಆ ಹೋರ್ಡಿಂಗ್‌ಅನ್ನು ರಸ್ತೆಯಲ್ಲಿ ಸ್ಥಾಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...