Homeಮುಖಪುಟತಮಿಳುನಾಡಿನಲ್ಲಿ ಹೋರ್ಡಿಂಗ್‌ ಬಿದ್ದು ಯುವತಿ ಸಾವು: ಗಾಳಿಯ ಮೇಲೆ ಕೇಸು ಹಾಕಿ ಎಂದ ರಾಜಕಾರಣಿ...

ತಮಿಳುನಾಡಿನಲ್ಲಿ ಹೋರ್ಡಿಂಗ್‌ ಬಿದ್ದು ಯುವತಿ ಸಾವು: ಗಾಳಿಯ ಮೇಲೆ ಕೇಸು ಹಾಕಿ ಎಂದ ರಾಜಕಾರಣಿ…

- Advertisement -
- Advertisement -

ಕಳೆದ ತಿಂಗಳು ಸೆಪ್ಟೆಂಬರ್ 12 ರಂದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಭಾಶ್ರಿ ರವಿಯವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಅಕ್ರಮವಾಗಿ ನಿರ್ಮಿಸಲಾದ ಹೋರ್ಡಿಂಗ್ ತನ್ನ ಮೇಲೆ ಬಿದ್ದ ಪರಿಣಾಮ ಸಾವನಪ್ಪಿದ್ದರು. ಅವರ ದುರಂತ ಸಾವಿಗೆ ತಮಿಳುನಾಡಿನ ಹಿರಿಯ ರಾಜಕಾರಣಿ ಪೊನ್ನಯ್ಯನ್ “ಗಾಳಿಯನ್ನು ಶಿಕ್ಷಿಸಿ” ಎಂದು ವಿಲಕ್ಷಣ ಹೇಳಿಕೆ ನೀಡಿದ್ದಾರೆ.

ಸ್ಥಳೀಯ ಸುದ್ದಿವಾಹಿನಿಯೊಂದಿಗೆ ಮಾತನಾಡಿದ AIADMK ಮುಖಂಡ ಪೊನ್ನಯ್ಯನ್, ಹೋರ್ಡಿಂಗ್ ನಿರ್ಮಿಸಿದ ವ್ಯಕ್ತಿಯನ್ನು ಮಹಿಳೆಯ ಸಾವಿಗೆ ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಮತ್ತು ಕೇಸು ದಾಖಲಿಬೇಕಾದರೆ ಗಾಳಿಯ ಮೇಲೆ ದಾಖಲಿಸಿ ಶಿಕ್ಷಿಸಿ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಚೆನ್ನೈನಿಂದ 320 ಕಿಲೋಮೀಟರ್ ದೂರದಲ್ಲಿರುವ ಕೃಷ್ಣಗಿರಿ ಜಿಲ್ಲೆಯಲ್ಲಿ ಮೂರು ವಾರಗಳ ನಂತರ ಬಂಧನಕ್ಕೊಳಗಾದ ಆಡಳಿತಾರೂಡ AIADMK ಸದಸ್ಯ ಜಯಗೋಪಾಲ್ ಅವರು ಈ ಹೋರ್ಡಿಂಗ್ ಅನ್ನು ನಿರ್ಮಿಸಿದ್ದರು.

“ಬ್ಯಾನರ್ ಇಟ್ಟುಕೊಂಡ ವ್ಯಕ್ತಿ ಅವಳನ್ನು ಸಾವಿಗೆ ತಳ್ಳಲಿಲ್ಲ. ಯಾವುದೇ ಪ್ರಕರಣವನ್ನು ದಾಖಲಿಸಬೇಕಾದರೆ, ಗಾಳಿಯನ್ನು ಹೊಣೆಗಾರರನ್ನಾಗಿ ಮಾಡಿ ”ಎಂದು ಅವರು ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 12 ರಂದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಭಾಶ್ರಿ ರವಿ (23) ಹೆಲ್ಮೆಟ್ ಧರಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಪ್ರಮುಖ ನಗರದ ರಸ್ತೆಯೊಂದರಲ್ಲಿ ಹೋಗುತ್ತಿದ್ದರು. ಆಗ ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸಾಮಿ ಮತ್ತು ಮಾಜಿ ಮುಖ್ಯಮಂತ್ರಿ ಜಯಲಲಿತಾರವರ ಫೋಟೊ ಇದ್ದ ಭಾರೀ ಗಾತ್ರದ ಕಟೌಟ್ ಆಕೆಯ ಸ್ಕೂಟರ್‍ ಮೇಲೆ ಬಿದ್ದಿತು. ಇದರಿಂದ ಗಾಬರಿಗೊಳಗಾದ ಆಕೆ ಆಯಾತಪ್ಪಿ ವಾಟರ್ ಟ್ಯಾಂಕರ್ ಸ್ಕೂಟರ್‌ನಿಂದ ಡಿಕ್ಕಿ ಹೊಡೆದಾಗ ಅವಳ ತಲೆಗೆ ಗಾಯವಾಯಿತು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

ಈ ಘಟನೆಯು ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ನಟ ಮತ್ತು ರಾಜಕಾರಣಿ ಕಮಲ್ ಹಾಸನ್  ರಾಜಕಾರಣಿಗಳನ್ನು ಕಟುವಾಗಿ ಟೀಕಿಸಿದ್ದರು. ರಾಜಕೀಯ ಪಕ್ಷಗಳು ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ನಿರ್ಮಿಸುವುದನ್ನು ನಿಷೇಧಿಸಿದ ಮದ್ರಾಸ್ ಹೈಕೋರ್ಟ್, “ರಾಜ್ಯವು ಅಕ್ರಮ ಹೋರ್ಡಿಂಗ್‌ಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೆ “ಇನ್ನೂ ಎಷ್ಟು ಲೀಟರ್ ರಕ್ತ” ಚೆಲ್ಲುಬೇಕು ಎಂದು ಪ್ರಶ್ನಿಸಿತ್ತು.

ಆದರೆ, ಚೆನ್ನೈನಿಂದ 60 ಕಿಲೋಮೀಟರ್ ದೂರದಲ್ಲಿರುವ ಐತಿಹಾಸಿಕ ಪಟ್ಟಣವಾದ ಮಾಮಲ್ಲಾಪುರಂನಲ್ಲಿ ನಡೆದ ಅನೌಪಚಾರಿಕ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸ್ವಾಗತಿಸಲು ಗುರುವಾರ ನ್ಯಾಯಾಲಯವು, 30 ಬ್ಯಾನರ್‌ಗಳನ್ನು ಹಾಕಲು ಅನುಮತಿ ನೀಡಿತು. ಭಾರತ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ನಡುವೆ ವ್ಯತ್ಯಾಸವಿದೆ ಎಂದು ನ್ಯಾಯಾಲಯ ವಾದಿಸಿತು.

ಆದರೆ ಈ ಘಟನೆಯನ್ನು ಡಿಎಂಕೆ ಮುಖಂಡ ಕಮಲ್ ಹಾಸನ್‌ ತೀವ್ರವಾಗಿ ಖಂಡಿಸಿದ್ದರು. ಅನಧಿಕೃತವಾಗಿ ಹೋರ್ಡಿಂಗ್‌ ಹಾಕಿರುವವರ ಮೇಲೆ ಸೂಕ್ತ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದರು.

ನಾಲ್ಕು ಬಾರಿ ಶಾಸಕರಾದ ಪೊನ್ನಯ್ಯನ್ “ಎಂ.ಕೆ. ಸ್ಟಾಲಿನ್ ಈ ಬಗ್ಗೆ ಸುಳ್ಳು ಹೇಳುತ್ತಾರೆ ಮತ್ತು ಉತ್ಪ್ರೇಕ್ಷೆ ಮಾಡುತ್ತಾರೆ. ಪ್ರಕರಣವು ಸುಪ್ರೀಂ ಕೋರ್ಟ್‌ಗೆ ಹೋಗಲಿ. ಅವರು ತೀರ್ಮಾನಿಸಲಿ. ಕರುಣಾನಿಧಿಯ ಆಡಳಿತ ದಿನಗಳಿಂದ ಎಷ್ಟು ಬ್ಯಾನರ್‌ಗಳನ್ನು ಹಾಕಿದ್ದರೆಂದು ಗೊತ್ತಾಗುತ್ತದೆ ಎಂದು ಅವರ “ಬ್ಯಾನರ್ ಒಂದು ಸಂವಹನ ರೂಪವಾಗಿದೆ ” ಎಂದು ತಿಳಿಸಿದ್ದಾರೆ.

ನವೆಂಬರ್ 2017 ರಲ್ಲಿ, 30 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್, ತಮಿಳುನಾಡಿನ ಕೊಯಮತ್ತೂರಿನಲ್ಲಿ ಸ್ನೇಹಿತರನ್ನು ಭೇಟಿಯಾಗಿ ವಾಪಸ್ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅವರ ಬೈಕ್‌ಗೆ ಮರದ ಹೋರ್ಡಿಂಗ್‌ ಡಿಕ್ಕಿ ಹೊಡೆದು ಮೃತಪಟ್ಟರು. ಆಡಳಿತಾರೂಡ AIADMK ಎಂಜಿಆರ್‌ರವರ ಶತಮಾನೋತ್ಸವಕ್ಕಾಗಿ ಆ ಹೋರ್ಡಿಂಗ್‌ಅನ್ನು ರಸ್ತೆಯಲ್ಲಿ ಸ್ಥಾಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...