Homeಮುಖಪುಟನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

- Advertisement -
- Advertisement -

ಕೆನಡಾದ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ದಾಖಲಾತಿಯ ಕುರಿತಾದ ದಾಖಲೆಪತ್ರಗಳು ನಕಲಿಯೆಂಬುದನ್ನು ದೇಶದ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಗಡಿಪಾರಿನ ಭೀತಿಯನ್ನು ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೆನಡಾದ ಗಡಿ ಭದ್ರತಾ ಏಜೆನ್ಸಿ (ಸಿಬಿಎಸ್ಎ)ಯಿಂದ ಗಡಿಪಾರು ಪತ್ರಗಳು ಬಂದಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೆನಡಿಯನ್ ಬಾರ್ಡರ್ ಸೆಕ್ಯುರಿಟಿ ಏಜೆನ್ಸಿಯು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಿತು, ಅದು ಅವರ ಪ್ರಸ್ತಾಪ ಪತ್ರಗಳು ಅಧಿಕೃತವಲ್ಲ ಎಂದು ಬಹಿರಂಗಪಡಿಸಿತು.

ಮಾಧ್ಯಮ ವರದಿಗಳ ಪ್ರಕಾರ, ಜಲಂಧರ್‌ನಲ್ಲಿರುವ ಶೈಕ್ಷಣಿಕ ವಲಸೆ ಸೇವಾ ಸಂಸ್ಥೆಯ ಮೂಲಕ ಸುಮಾರು 700 ವಿದ್ಯಾರ್ಥಿಗಳು ಕೆನಡಾದಲ್ಲಿ ಅಧ್ಯಯನ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಬ್ರಿಜೇಶ್ ಮಿಶ್ರಾ ನೇತೃತ್ವದ ಈ ಸಂಸ್ಥೆಯು ಕೆನಡದ ಪ್ರತಿಷ್ಠಿ ಶಿಕ್ಷಣ ಸಂಸ್ಥೆ ಹಂಬರ್ ಕಾಲೇಜ್‌ನಲ್ಲಿ ದಾಖಲಾತಿ ಶುಲ್ಕ ಸೇರಿದಂತೆ ಎಲ್ಲಾ ವೆಚ್ಚಗಳಿಗಾಗಿ 16 ಲಕ್ಷ ರೂ.ಗೂ ಅಧಿಕ ಶುಲ್ಕವನ್ನು ಪ್ರತಿ ವಿದ್ಯಾರ್ಥಿಗೂ ವಿಧಿಸುತ್ತಿತ್ತು. ಆದರೆ ವಿಮಾನಯಾನದರ ಹಾಗೂ ಭದ್ರತಾ ಠೇವಣಿಗಳನ್ನು ಪ್ರತ್ಯೇಕವಾಗಿ ವಿಧಿಸುತ್ತಿತ್ತು.

ಇದನ್ನೂ ಓದಿ: ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

ಈ ವಿದ್ಯಾರ್ಥಿಗಳು ಅಧ್ಯಯನದ ಆಧಾರದಲ್ಲಿ 2018-19ರ ಸಾಲಿನಲ್ಲಿ ಕೆನಡಾಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳು ಕೆನಡಾದಲ್ಲಿ ಖಾಯಂ ವಾಸ್ತವ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ, ಈ ವೀಸಾ ವಂಚನೆ ಬೆಳಕಿಗೆ ಬಂದಿದೆ. ಈ ಸಂದರ್ಭದಲ್ಲಿ ಪ್ರವೇಶ ಪತ್ರಗಳನ್ನು ಕೆನಡಾದ ಗಡಿ ಭದ್ರತಾ ಏಜೆನ್ಸಿ ಪರಿಶೀಲಿಸಿದಾಗ ಅವು ನಕಲಿಯೆಂಬುದು ಬೆಳಕಿಗೆ ಬಂದಿದೆ.

ಈ ವಿದ್ಯಾರ್ಥಿಗಳು ಸಲ್ಲಿಸಿದ ಆಡ್ಮಿಶನ್ ಆಫರ್‌ಗೆ ಸಂಬಂಧಿಸಿದ ದಾಖಲಾತಿ ಪತ್ರಗಳು ನಕಲಿಯೆಂದು ಮನವರಿಕೆಯಾದ ಶಿಕ್ಷಣ ಸಂಸ್ಥೆಗಳು ಅವರನ್ನು ಬೇರೆ ಕಾಲೇಜುಗಳಿಗೆ ಹೋಗುವಂತೆ ಸೂಚನೆ ನೀಡಿದ್ದವು. ಹೀಗೆ ಕಾಲೇಜು ಬದಲಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಯೂ ಗಣನೀಯವಾಗಿದೆ ಎಂಬ ವಿಚಾರವು ಈಗ ಬೆಳಕಿಗೆ ಬಂದಿದೆ.

ಕಳೆದ ಆರು ತಿಂಗಳಿನಿಂದ ಮಿಶ್ರಾ ಅವರ ಕಚೇರಿಯನ್ನು ಮುಚ್ಚಲಾಗಿದೆ ಎಂದು ಜಲಂಧರ್ ಪೊಲೀಸರು ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜಲಂಧರ್ ಡೆಪ್ಯುಟಿ ಕಮಿಷನರ್ ಜಸ್ಪ್ರೀತ್ ಸಿಂಗ್ ಅವರು ಗುರುವಾರ ಶಿಕ್ಷಣ ವಲಸೆ ಸೇವೆಗಳಲ್ಲಿ ಮಿಶ್ರಾ ಅವರ ಪಾಲುದಾರರಲ್ಲಿ ಒಬ್ಬರಾದ ರಾಹುಲ್ ಭಾರ್ಗವ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.

ಈ ಬಗ್ಗೆ ತಜ್ಞರೊಬ್ಬರು ಮಾತನಾಡಿದ್ದು, ”ಈ ರೀತಿಯ ವಂಚನೆ, ಕೆನಡಾದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ. ಕೆನಡಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಉದ್ದೇಶಗಳಿಗಾಗಿ ಅರ್ಜಿ ಹಾಕುತ್ತಾರೆ. ಇದರಿಂದಾಗಿ ಈ ರೀತಿಯ ದೊಡ್ಡ ವಂಚನೆಯಾಗಿದೆ” ಎಂದು ಹೇಳಿದ್ದಾರೆ.

”ಇಂತಹ ವಂಚನೆಗಳಲ್ಲಿ ಕಾಲೇಜುಗಳ ನಕಲಿ ಆಫರ್ ಲೆಟರ್‌ಗಳನ್ನು ಪಡೆಯುವುದರಿಂದ ಹಿಡಿದು ವೀಸಾ ಪಡೆಯಲು ವಿದ್ಯಾರ್ಥಿಗಳಿಗೆ ನಕಲಿ ಶುಲ್ಕ ಪಾವತಿ ರಸೀದಿಗಳನ್ನು ಒದಗಿಸುವವರೆಗೆ ಅನೇಕ ಅಂಶಗಳು ಒಳಗೊಂಡಿವೆ . ಕಾಲೇಜುಗಳಿಗೆ ಶುಲ್ಕವನ್ನು ಪಾವತಿಸಿದ ನಂತರವೇ ವೀಸಾಗಳನ್ನು ನೀಡಲಾಗುತ್ತದೆ” ಎಂದು ಜಲಂಧರ್ ಮೂಲದ ಸಮಾಲೋಚಕರೊಬ್ಬರು” ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...