Homeಮುಖಪುಟನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

- Advertisement -
- Advertisement -

ಕೆನಡಾದ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ದಾಖಲಾತಿಯ ಕುರಿತಾದ ದಾಖಲೆಪತ್ರಗಳು ನಕಲಿಯೆಂಬುದನ್ನು ದೇಶದ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಗಡಿಪಾರಿನ ಭೀತಿಯನ್ನು ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೆನಡಾದ ಗಡಿ ಭದ್ರತಾ ಏಜೆನ್ಸಿ (ಸಿಬಿಎಸ್ಎ)ಯಿಂದ ಗಡಿಪಾರು ಪತ್ರಗಳು ಬಂದಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೆನಡಿಯನ್ ಬಾರ್ಡರ್ ಸೆಕ್ಯುರಿಟಿ ಏಜೆನ್ಸಿಯು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಿತು, ಅದು ಅವರ ಪ್ರಸ್ತಾಪ ಪತ್ರಗಳು ಅಧಿಕೃತವಲ್ಲ ಎಂದು ಬಹಿರಂಗಪಡಿಸಿತು.

ಮಾಧ್ಯಮ ವರದಿಗಳ ಪ್ರಕಾರ, ಜಲಂಧರ್‌ನಲ್ಲಿರುವ ಶೈಕ್ಷಣಿಕ ವಲಸೆ ಸೇವಾ ಸಂಸ್ಥೆಯ ಮೂಲಕ ಸುಮಾರು 700 ವಿದ್ಯಾರ್ಥಿಗಳು ಕೆನಡಾದಲ್ಲಿ ಅಧ್ಯಯನ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಬ್ರಿಜೇಶ್ ಮಿಶ್ರಾ ನೇತೃತ್ವದ ಈ ಸಂಸ್ಥೆಯು ಕೆನಡದ ಪ್ರತಿಷ್ಠಿ ಶಿಕ್ಷಣ ಸಂಸ್ಥೆ ಹಂಬರ್ ಕಾಲೇಜ್‌ನಲ್ಲಿ ದಾಖಲಾತಿ ಶುಲ್ಕ ಸೇರಿದಂತೆ ಎಲ್ಲಾ ವೆಚ್ಚಗಳಿಗಾಗಿ 16 ಲಕ್ಷ ರೂ.ಗೂ ಅಧಿಕ ಶುಲ್ಕವನ್ನು ಪ್ರತಿ ವಿದ್ಯಾರ್ಥಿಗೂ ವಿಧಿಸುತ್ತಿತ್ತು. ಆದರೆ ವಿಮಾನಯಾನದರ ಹಾಗೂ ಭದ್ರತಾ ಠೇವಣಿಗಳನ್ನು ಪ್ರತ್ಯೇಕವಾಗಿ ವಿಧಿಸುತ್ತಿತ್ತು.

ಇದನ್ನೂ ಓದಿ: ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

ಈ ವಿದ್ಯಾರ್ಥಿಗಳು ಅಧ್ಯಯನದ ಆಧಾರದಲ್ಲಿ 2018-19ರ ಸಾಲಿನಲ್ಲಿ ಕೆನಡಾಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳು ಕೆನಡಾದಲ್ಲಿ ಖಾಯಂ ವಾಸ್ತವ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ, ಈ ವೀಸಾ ವಂಚನೆ ಬೆಳಕಿಗೆ ಬಂದಿದೆ. ಈ ಸಂದರ್ಭದಲ್ಲಿ ಪ್ರವೇಶ ಪತ್ರಗಳನ್ನು ಕೆನಡಾದ ಗಡಿ ಭದ್ರತಾ ಏಜೆನ್ಸಿ ಪರಿಶೀಲಿಸಿದಾಗ ಅವು ನಕಲಿಯೆಂಬುದು ಬೆಳಕಿಗೆ ಬಂದಿದೆ.

ಈ ವಿದ್ಯಾರ್ಥಿಗಳು ಸಲ್ಲಿಸಿದ ಆಡ್ಮಿಶನ್ ಆಫರ್‌ಗೆ ಸಂಬಂಧಿಸಿದ ದಾಖಲಾತಿ ಪತ್ರಗಳು ನಕಲಿಯೆಂದು ಮನವರಿಕೆಯಾದ ಶಿಕ್ಷಣ ಸಂಸ್ಥೆಗಳು ಅವರನ್ನು ಬೇರೆ ಕಾಲೇಜುಗಳಿಗೆ ಹೋಗುವಂತೆ ಸೂಚನೆ ನೀಡಿದ್ದವು. ಹೀಗೆ ಕಾಲೇಜು ಬದಲಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಯೂ ಗಣನೀಯವಾಗಿದೆ ಎಂಬ ವಿಚಾರವು ಈಗ ಬೆಳಕಿಗೆ ಬಂದಿದೆ.

ಕಳೆದ ಆರು ತಿಂಗಳಿನಿಂದ ಮಿಶ್ರಾ ಅವರ ಕಚೇರಿಯನ್ನು ಮುಚ್ಚಲಾಗಿದೆ ಎಂದು ಜಲಂಧರ್ ಪೊಲೀಸರು ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜಲಂಧರ್ ಡೆಪ್ಯುಟಿ ಕಮಿಷನರ್ ಜಸ್ಪ್ರೀತ್ ಸಿಂಗ್ ಅವರು ಗುರುವಾರ ಶಿಕ್ಷಣ ವಲಸೆ ಸೇವೆಗಳಲ್ಲಿ ಮಿಶ್ರಾ ಅವರ ಪಾಲುದಾರರಲ್ಲಿ ಒಬ್ಬರಾದ ರಾಹುಲ್ ಭಾರ್ಗವ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.

ಈ ಬಗ್ಗೆ ತಜ್ಞರೊಬ್ಬರು ಮಾತನಾಡಿದ್ದು, ”ಈ ರೀತಿಯ ವಂಚನೆ, ಕೆನಡಾದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ. ಕೆನಡಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಉದ್ದೇಶಗಳಿಗಾಗಿ ಅರ್ಜಿ ಹಾಕುತ್ತಾರೆ. ಇದರಿಂದಾಗಿ ಈ ರೀತಿಯ ದೊಡ್ಡ ವಂಚನೆಯಾಗಿದೆ” ಎಂದು ಹೇಳಿದ್ದಾರೆ.

”ಇಂತಹ ವಂಚನೆಗಳಲ್ಲಿ ಕಾಲೇಜುಗಳ ನಕಲಿ ಆಫರ್ ಲೆಟರ್‌ಗಳನ್ನು ಪಡೆಯುವುದರಿಂದ ಹಿಡಿದು ವೀಸಾ ಪಡೆಯಲು ವಿದ್ಯಾರ್ಥಿಗಳಿಗೆ ನಕಲಿ ಶುಲ್ಕ ಪಾವತಿ ರಸೀದಿಗಳನ್ನು ಒದಗಿಸುವವರೆಗೆ ಅನೇಕ ಅಂಶಗಳು ಒಳಗೊಂಡಿವೆ . ಕಾಲೇಜುಗಳಿಗೆ ಶುಲ್ಕವನ್ನು ಪಾವತಿಸಿದ ನಂತರವೇ ವೀಸಾಗಳನ್ನು ನೀಡಲಾಗುತ್ತದೆ” ಎಂದು ಜಲಂಧರ್ ಮೂಲದ ಸಮಾಲೋಚಕರೊಬ್ಬರು” ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...