Homeಮುಖಪುಟನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

- Advertisement -
- Advertisement -

ಕೆನಡಾದ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ದಾಖಲಾತಿಯ ಕುರಿತಾದ ದಾಖಲೆಪತ್ರಗಳು ನಕಲಿಯೆಂಬುದನ್ನು ದೇಶದ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಗಡಿಪಾರಿನ ಭೀತಿಯನ್ನು ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೆನಡಾದ ಗಡಿ ಭದ್ರತಾ ಏಜೆನ್ಸಿ (ಸಿಬಿಎಸ್ಎ)ಯಿಂದ ಗಡಿಪಾರು ಪತ್ರಗಳು ಬಂದಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೆನಡಿಯನ್ ಬಾರ್ಡರ್ ಸೆಕ್ಯುರಿಟಿ ಏಜೆನ್ಸಿಯು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಿತು, ಅದು ಅವರ ಪ್ರಸ್ತಾಪ ಪತ್ರಗಳು ಅಧಿಕೃತವಲ್ಲ ಎಂದು ಬಹಿರಂಗಪಡಿಸಿತು.

ಮಾಧ್ಯಮ ವರದಿಗಳ ಪ್ರಕಾರ, ಜಲಂಧರ್‌ನಲ್ಲಿರುವ ಶೈಕ್ಷಣಿಕ ವಲಸೆ ಸೇವಾ ಸಂಸ್ಥೆಯ ಮೂಲಕ ಸುಮಾರು 700 ವಿದ್ಯಾರ್ಥಿಗಳು ಕೆನಡಾದಲ್ಲಿ ಅಧ್ಯಯನ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಬ್ರಿಜೇಶ್ ಮಿಶ್ರಾ ನೇತೃತ್ವದ ಈ ಸಂಸ್ಥೆಯು ಕೆನಡದ ಪ್ರತಿಷ್ಠಿ ಶಿಕ್ಷಣ ಸಂಸ್ಥೆ ಹಂಬರ್ ಕಾಲೇಜ್‌ನಲ್ಲಿ ದಾಖಲಾತಿ ಶುಲ್ಕ ಸೇರಿದಂತೆ ಎಲ್ಲಾ ವೆಚ್ಚಗಳಿಗಾಗಿ 16 ಲಕ್ಷ ರೂ.ಗೂ ಅಧಿಕ ಶುಲ್ಕವನ್ನು ಪ್ರತಿ ವಿದ್ಯಾರ್ಥಿಗೂ ವಿಧಿಸುತ್ತಿತ್ತು. ಆದರೆ ವಿಮಾನಯಾನದರ ಹಾಗೂ ಭದ್ರತಾ ಠೇವಣಿಗಳನ್ನು ಪ್ರತ್ಯೇಕವಾಗಿ ವಿಧಿಸುತ್ತಿತ್ತು.

ಇದನ್ನೂ ಓದಿ: ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

ಈ ವಿದ್ಯಾರ್ಥಿಗಳು ಅಧ್ಯಯನದ ಆಧಾರದಲ್ಲಿ 2018-19ರ ಸಾಲಿನಲ್ಲಿ ಕೆನಡಾಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳು ಕೆನಡಾದಲ್ಲಿ ಖಾಯಂ ವಾಸ್ತವ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ, ಈ ವೀಸಾ ವಂಚನೆ ಬೆಳಕಿಗೆ ಬಂದಿದೆ. ಈ ಸಂದರ್ಭದಲ್ಲಿ ಪ್ರವೇಶ ಪತ್ರಗಳನ್ನು ಕೆನಡಾದ ಗಡಿ ಭದ್ರತಾ ಏಜೆನ್ಸಿ ಪರಿಶೀಲಿಸಿದಾಗ ಅವು ನಕಲಿಯೆಂಬುದು ಬೆಳಕಿಗೆ ಬಂದಿದೆ.

ಈ ವಿದ್ಯಾರ್ಥಿಗಳು ಸಲ್ಲಿಸಿದ ಆಡ್ಮಿಶನ್ ಆಫರ್‌ಗೆ ಸಂಬಂಧಿಸಿದ ದಾಖಲಾತಿ ಪತ್ರಗಳು ನಕಲಿಯೆಂದು ಮನವರಿಕೆಯಾದ ಶಿಕ್ಷಣ ಸಂಸ್ಥೆಗಳು ಅವರನ್ನು ಬೇರೆ ಕಾಲೇಜುಗಳಿಗೆ ಹೋಗುವಂತೆ ಸೂಚನೆ ನೀಡಿದ್ದವು. ಹೀಗೆ ಕಾಲೇಜು ಬದಲಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಯೂ ಗಣನೀಯವಾಗಿದೆ ಎಂಬ ವಿಚಾರವು ಈಗ ಬೆಳಕಿಗೆ ಬಂದಿದೆ.

ಕಳೆದ ಆರು ತಿಂಗಳಿನಿಂದ ಮಿಶ್ರಾ ಅವರ ಕಚೇರಿಯನ್ನು ಮುಚ್ಚಲಾಗಿದೆ ಎಂದು ಜಲಂಧರ್ ಪೊಲೀಸರು ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜಲಂಧರ್ ಡೆಪ್ಯುಟಿ ಕಮಿಷನರ್ ಜಸ್ಪ್ರೀತ್ ಸಿಂಗ್ ಅವರು ಗುರುವಾರ ಶಿಕ್ಷಣ ವಲಸೆ ಸೇವೆಗಳಲ್ಲಿ ಮಿಶ್ರಾ ಅವರ ಪಾಲುದಾರರಲ್ಲಿ ಒಬ್ಬರಾದ ರಾಹುಲ್ ಭಾರ್ಗವ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.

ಈ ಬಗ್ಗೆ ತಜ್ಞರೊಬ್ಬರು ಮಾತನಾಡಿದ್ದು, ”ಈ ರೀತಿಯ ವಂಚನೆ, ಕೆನಡಾದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ. ಕೆನಡಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಉದ್ದೇಶಗಳಿಗಾಗಿ ಅರ್ಜಿ ಹಾಕುತ್ತಾರೆ. ಇದರಿಂದಾಗಿ ಈ ರೀತಿಯ ದೊಡ್ಡ ವಂಚನೆಯಾಗಿದೆ” ಎಂದು ಹೇಳಿದ್ದಾರೆ.

”ಇಂತಹ ವಂಚನೆಗಳಲ್ಲಿ ಕಾಲೇಜುಗಳ ನಕಲಿ ಆಫರ್ ಲೆಟರ್‌ಗಳನ್ನು ಪಡೆಯುವುದರಿಂದ ಹಿಡಿದು ವೀಸಾ ಪಡೆಯಲು ವಿದ್ಯಾರ್ಥಿಗಳಿಗೆ ನಕಲಿ ಶುಲ್ಕ ಪಾವತಿ ರಸೀದಿಗಳನ್ನು ಒದಗಿಸುವವರೆಗೆ ಅನೇಕ ಅಂಶಗಳು ಒಳಗೊಂಡಿವೆ . ಕಾಲೇಜುಗಳಿಗೆ ಶುಲ್ಕವನ್ನು ಪಾವತಿಸಿದ ನಂತರವೇ ವೀಸಾಗಳನ್ನು ನೀಡಲಾಗುತ್ತದೆ” ಎಂದು ಜಲಂಧರ್ ಮೂಲದ ಸಮಾಲೋಚಕರೊಬ್ಬರು” ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...