Homeಮುಖಪುಟನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

- Advertisement -
- Advertisement -

ಕೆನಡಾದ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ದಾಖಲಾತಿಯ ಕುರಿತಾದ ದಾಖಲೆಪತ್ರಗಳು ನಕಲಿಯೆಂಬುದನ್ನು ದೇಶದ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಗಡಿಪಾರಿನ ಭೀತಿಯನ್ನು ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೆನಡಾದ ಗಡಿ ಭದ್ರತಾ ಏಜೆನ್ಸಿ (ಸಿಬಿಎಸ್ಎ)ಯಿಂದ ಗಡಿಪಾರು ಪತ್ರಗಳು ಬಂದಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೆನಡಿಯನ್ ಬಾರ್ಡರ್ ಸೆಕ್ಯುರಿಟಿ ಏಜೆನ್ಸಿಯು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಿತು, ಅದು ಅವರ ಪ್ರಸ್ತಾಪ ಪತ್ರಗಳು ಅಧಿಕೃತವಲ್ಲ ಎಂದು ಬಹಿರಂಗಪಡಿಸಿತು.

ಮಾಧ್ಯಮ ವರದಿಗಳ ಪ್ರಕಾರ, ಜಲಂಧರ್‌ನಲ್ಲಿರುವ ಶೈಕ್ಷಣಿಕ ವಲಸೆ ಸೇವಾ ಸಂಸ್ಥೆಯ ಮೂಲಕ ಸುಮಾರು 700 ವಿದ್ಯಾರ್ಥಿಗಳು ಕೆನಡಾದಲ್ಲಿ ಅಧ್ಯಯನ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಬ್ರಿಜೇಶ್ ಮಿಶ್ರಾ ನೇತೃತ್ವದ ಈ ಸಂಸ್ಥೆಯು ಕೆನಡದ ಪ್ರತಿಷ್ಠಿ ಶಿಕ್ಷಣ ಸಂಸ್ಥೆ ಹಂಬರ್ ಕಾಲೇಜ್‌ನಲ್ಲಿ ದಾಖಲಾತಿ ಶುಲ್ಕ ಸೇರಿದಂತೆ ಎಲ್ಲಾ ವೆಚ್ಚಗಳಿಗಾಗಿ 16 ಲಕ್ಷ ರೂ.ಗೂ ಅಧಿಕ ಶುಲ್ಕವನ್ನು ಪ್ರತಿ ವಿದ್ಯಾರ್ಥಿಗೂ ವಿಧಿಸುತ್ತಿತ್ತು. ಆದರೆ ವಿಮಾನಯಾನದರ ಹಾಗೂ ಭದ್ರತಾ ಠೇವಣಿಗಳನ್ನು ಪ್ರತ್ಯೇಕವಾಗಿ ವಿಧಿಸುತ್ತಿತ್ತು.

ಇದನ್ನೂ ಓದಿ: ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

ಈ ವಿದ್ಯಾರ್ಥಿಗಳು ಅಧ್ಯಯನದ ಆಧಾರದಲ್ಲಿ 2018-19ರ ಸಾಲಿನಲ್ಲಿ ಕೆನಡಾಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳು ಕೆನಡಾದಲ್ಲಿ ಖಾಯಂ ವಾಸ್ತವ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ, ಈ ವೀಸಾ ವಂಚನೆ ಬೆಳಕಿಗೆ ಬಂದಿದೆ. ಈ ಸಂದರ್ಭದಲ್ಲಿ ಪ್ರವೇಶ ಪತ್ರಗಳನ್ನು ಕೆನಡಾದ ಗಡಿ ಭದ್ರತಾ ಏಜೆನ್ಸಿ ಪರಿಶೀಲಿಸಿದಾಗ ಅವು ನಕಲಿಯೆಂಬುದು ಬೆಳಕಿಗೆ ಬಂದಿದೆ.

ಈ ವಿದ್ಯಾರ್ಥಿಗಳು ಸಲ್ಲಿಸಿದ ಆಡ್ಮಿಶನ್ ಆಫರ್‌ಗೆ ಸಂಬಂಧಿಸಿದ ದಾಖಲಾತಿ ಪತ್ರಗಳು ನಕಲಿಯೆಂದು ಮನವರಿಕೆಯಾದ ಶಿಕ್ಷಣ ಸಂಸ್ಥೆಗಳು ಅವರನ್ನು ಬೇರೆ ಕಾಲೇಜುಗಳಿಗೆ ಹೋಗುವಂತೆ ಸೂಚನೆ ನೀಡಿದ್ದವು. ಹೀಗೆ ಕಾಲೇಜು ಬದಲಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಯೂ ಗಣನೀಯವಾಗಿದೆ ಎಂಬ ವಿಚಾರವು ಈಗ ಬೆಳಕಿಗೆ ಬಂದಿದೆ.

ಕಳೆದ ಆರು ತಿಂಗಳಿನಿಂದ ಮಿಶ್ರಾ ಅವರ ಕಚೇರಿಯನ್ನು ಮುಚ್ಚಲಾಗಿದೆ ಎಂದು ಜಲಂಧರ್ ಪೊಲೀಸರು ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜಲಂಧರ್ ಡೆಪ್ಯುಟಿ ಕಮಿಷನರ್ ಜಸ್ಪ್ರೀತ್ ಸಿಂಗ್ ಅವರು ಗುರುವಾರ ಶಿಕ್ಷಣ ವಲಸೆ ಸೇವೆಗಳಲ್ಲಿ ಮಿಶ್ರಾ ಅವರ ಪಾಲುದಾರರಲ್ಲಿ ಒಬ್ಬರಾದ ರಾಹುಲ್ ಭಾರ್ಗವ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.

ಈ ಬಗ್ಗೆ ತಜ್ಞರೊಬ್ಬರು ಮಾತನಾಡಿದ್ದು, ”ಈ ರೀತಿಯ ವಂಚನೆ, ಕೆನಡಾದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ. ಕೆನಡಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಉದ್ದೇಶಗಳಿಗಾಗಿ ಅರ್ಜಿ ಹಾಕುತ್ತಾರೆ. ಇದರಿಂದಾಗಿ ಈ ರೀತಿಯ ದೊಡ್ಡ ವಂಚನೆಯಾಗಿದೆ” ಎಂದು ಹೇಳಿದ್ದಾರೆ.

”ಇಂತಹ ವಂಚನೆಗಳಲ್ಲಿ ಕಾಲೇಜುಗಳ ನಕಲಿ ಆಫರ್ ಲೆಟರ್‌ಗಳನ್ನು ಪಡೆಯುವುದರಿಂದ ಹಿಡಿದು ವೀಸಾ ಪಡೆಯಲು ವಿದ್ಯಾರ್ಥಿಗಳಿಗೆ ನಕಲಿ ಶುಲ್ಕ ಪಾವತಿ ರಸೀದಿಗಳನ್ನು ಒದಗಿಸುವವರೆಗೆ ಅನೇಕ ಅಂಶಗಳು ಒಳಗೊಂಡಿವೆ . ಕಾಲೇಜುಗಳಿಗೆ ಶುಲ್ಕವನ್ನು ಪಾವತಿಸಿದ ನಂತರವೇ ವೀಸಾಗಳನ್ನು ನೀಡಲಾಗುತ್ತದೆ” ಎಂದು ಜಲಂಧರ್ ಮೂಲದ ಸಮಾಲೋಚಕರೊಬ್ಬರು” ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...