Homeಮುಖಪುಟನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

- Advertisement -
- Advertisement -

ಕೆನಡಾದ ಶಿಕ್ಷಣ ಸಂಸ್ಥೆಗಳಲ್ಲಿ ತಮ್ಮ ದಾಖಲಾತಿಯ ಕುರಿತಾದ ದಾಖಲೆಪತ್ರಗಳು ನಕಲಿಯೆಂಬುದನ್ನು ದೇಶದ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು ಗಡಿಪಾರಿನ ಭೀತಿಯನ್ನು ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಕೆನಡಾದ ಗಡಿ ಭದ್ರತಾ ಏಜೆನ್ಸಿ (ಸಿಬಿಎಸ್ಎ)ಯಿಂದ ಗಡಿಪಾರು ಪತ್ರಗಳು ಬಂದಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೆನಡಿಯನ್ ಬಾರ್ಡರ್ ಸೆಕ್ಯುರಿಟಿ ಏಜೆನ್ಸಿಯು ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಿತು, ಅದು ಅವರ ಪ್ರಸ್ತಾಪ ಪತ್ರಗಳು ಅಧಿಕೃತವಲ್ಲ ಎಂದು ಬಹಿರಂಗಪಡಿಸಿತು.

ಮಾಧ್ಯಮ ವರದಿಗಳ ಪ್ರಕಾರ, ಜಲಂಧರ್‌ನಲ್ಲಿರುವ ಶೈಕ್ಷಣಿಕ ವಲಸೆ ಸೇವಾ ಸಂಸ್ಥೆಯ ಮೂಲಕ ಸುಮಾರು 700 ವಿದ್ಯಾರ್ಥಿಗಳು ಕೆನಡಾದಲ್ಲಿ ಅಧ್ಯಯನ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಬ್ರಿಜೇಶ್ ಮಿಶ್ರಾ ನೇತೃತ್ವದ ಈ ಸಂಸ್ಥೆಯು ಕೆನಡದ ಪ್ರತಿಷ್ಠಿ ಶಿಕ್ಷಣ ಸಂಸ್ಥೆ ಹಂಬರ್ ಕಾಲೇಜ್‌ನಲ್ಲಿ ದಾಖಲಾತಿ ಶುಲ್ಕ ಸೇರಿದಂತೆ ಎಲ್ಲಾ ವೆಚ್ಚಗಳಿಗಾಗಿ 16 ಲಕ್ಷ ರೂ.ಗೂ ಅಧಿಕ ಶುಲ್ಕವನ್ನು ಪ್ರತಿ ವಿದ್ಯಾರ್ಥಿಗೂ ವಿಧಿಸುತ್ತಿತ್ತು. ಆದರೆ ವಿಮಾನಯಾನದರ ಹಾಗೂ ಭದ್ರತಾ ಠೇವಣಿಗಳನ್ನು ಪ್ರತ್ಯೇಕವಾಗಿ ವಿಧಿಸುತ್ತಿತ್ತು.

ಇದನ್ನೂ ಓದಿ: ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ಬಯಲಿಗೆಳೆದ ಪೊಲೀಸರು

ಈ ವಿದ್ಯಾರ್ಥಿಗಳು ಅಧ್ಯಯನದ ಆಧಾರದಲ್ಲಿ 2018-19ರ ಸಾಲಿನಲ್ಲಿ ಕೆನಡಾಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳು ಕೆನಡಾದಲ್ಲಿ ಖಾಯಂ ವಾಸ್ತವ್ಯಕ್ಕಾಗಿ ಅರ್ಜಿ ಸಲ್ಲಿಸಿದಾಗ, ಈ ವೀಸಾ ವಂಚನೆ ಬೆಳಕಿಗೆ ಬಂದಿದೆ. ಈ ಸಂದರ್ಭದಲ್ಲಿ ಪ್ರವೇಶ ಪತ್ರಗಳನ್ನು ಕೆನಡಾದ ಗಡಿ ಭದ್ರತಾ ಏಜೆನ್ಸಿ ಪರಿಶೀಲಿಸಿದಾಗ ಅವು ನಕಲಿಯೆಂಬುದು ಬೆಳಕಿಗೆ ಬಂದಿದೆ.

ಈ ವಿದ್ಯಾರ್ಥಿಗಳು ಸಲ್ಲಿಸಿದ ಆಡ್ಮಿಶನ್ ಆಫರ್‌ಗೆ ಸಂಬಂಧಿಸಿದ ದಾಖಲಾತಿ ಪತ್ರಗಳು ನಕಲಿಯೆಂದು ಮನವರಿಕೆಯಾದ ಶಿಕ್ಷಣ ಸಂಸ್ಥೆಗಳು ಅವರನ್ನು ಬೇರೆ ಕಾಲೇಜುಗಳಿಗೆ ಹೋಗುವಂತೆ ಸೂಚನೆ ನೀಡಿದ್ದವು. ಹೀಗೆ ಕಾಲೇಜು ಬದಲಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಯೂ ಗಣನೀಯವಾಗಿದೆ ಎಂಬ ವಿಚಾರವು ಈಗ ಬೆಳಕಿಗೆ ಬಂದಿದೆ.

ಕಳೆದ ಆರು ತಿಂಗಳಿನಿಂದ ಮಿಶ್ರಾ ಅವರ ಕಚೇರಿಯನ್ನು ಮುಚ್ಚಲಾಗಿದೆ ಎಂದು ಜಲಂಧರ್ ಪೊಲೀಸರು ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜಲಂಧರ್ ಡೆಪ್ಯುಟಿ ಕಮಿಷನರ್ ಜಸ್ಪ್ರೀತ್ ಸಿಂಗ್ ಅವರು ಗುರುವಾರ ಶಿಕ್ಷಣ ವಲಸೆ ಸೇವೆಗಳಲ್ಲಿ ಮಿಶ್ರಾ ಅವರ ಪಾಲುದಾರರಲ್ಲಿ ಒಬ್ಬರಾದ ರಾಹುಲ್ ಭಾರ್ಗವ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.

ಈ ಬಗ್ಗೆ ತಜ್ಞರೊಬ್ಬರು ಮಾತನಾಡಿದ್ದು, ”ಈ ರೀತಿಯ ವಂಚನೆ, ಕೆನಡಾದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ. ಕೆನಡಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ವಿವಿಧ ಉದ್ದೇಶಗಳಿಗಾಗಿ ಅರ್ಜಿ ಹಾಕುತ್ತಾರೆ. ಇದರಿಂದಾಗಿ ಈ ರೀತಿಯ ದೊಡ್ಡ ವಂಚನೆಯಾಗಿದೆ” ಎಂದು ಹೇಳಿದ್ದಾರೆ.

”ಇಂತಹ ವಂಚನೆಗಳಲ್ಲಿ ಕಾಲೇಜುಗಳ ನಕಲಿ ಆಫರ್ ಲೆಟರ್‌ಗಳನ್ನು ಪಡೆಯುವುದರಿಂದ ಹಿಡಿದು ವೀಸಾ ಪಡೆಯಲು ವಿದ್ಯಾರ್ಥಿಗಳಿಗೆ ನಕಲಿ ಶುಲ್ಕ ಪಾವತಿ ರಸೀದಿಗಳನ್ನು ಒದಗಿಸುವವರೆಗೆ ಅನೇಕ ಅಂಶಗಳು ಒಳಗೊಂಡಿವೆ . ಕಾಲೇಜುಗಳಿಗೆ ಶುಲ್ಕವನ್ನು ಪಾವತಿಸಿದ ನಂತರವೇ ವೀಸಾಗಳನ್ನು ನೀಡಲಾಗುತ್ತದೆ” ಎಂದು ಜಲಂಧರ್ ಮೂಲದ ಸಮಾಲೋಚಕರೊಬ್ಬರು” ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...