Homeಮುಖಪುಟಬಿಲ್ಕಿಸ್ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿದ ದಾಖಲೆಗಳನ್ನು ಸಲ್ಲಿಸಿ: ಗುಜರಾತ್ ಸರ್ಕಾರಕ್ಕೆ ಸುಪ್ರಿಂ ತಾಕೀತು

ಬಿಲ್ಕಿಸ್ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿದ ದಾಖಲೆಗಳನ್ನು ಸಲ್ಲಿಸಿ: ಗುಜರಾತ್ ಸರ್ಕಾರಕ್ಕೆ ಸುಪ್ರಿಂ ತಾಕೀತು

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಅಪರಾಧಿಗಳಿಗೆ ಶಿಕ್ಷೆಯಿಂದ ವಿನಾಯಿತಿ ನೀಡಿದ ದಾಖಲೆಗಳನ್ನು ಏಪ್ರಿಲ್ 18 ರಂದು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ತಾಕೀತು ಮಾಡಿದೆ.

ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರನ್ನೊಳಗೊಂಡ ಪೀಠವು ಬಿಲ್ಕಿಸ್ ಬಾನೊ ಅತ್ಯಾಚಾರ ಅಪರಾಧಿಗಳನ್ನು ಮುಂಚಿತ ಬಿಡುಗಡೆ ಮಾಡಿದ್ದು ಹಲವು ಸಮಸ್ಯೆಗಳನ್ನು ಹೊಂದಿದೆ. ಹಾಗಾಗಿ ಇದನ್ನು ವಿವರವಾಗಿ ಆಲಿಸುವ ಅಗತ್ಯವಿದೆ. ಅಲ್ಲದೆ ನ್ಯಾಯಪೀಠವು ಈ ಪ್ರಕರಣದಲ್ಲಿ ಭಾವನೆಗಳಲ್ಲಿ ಮುಳುಗಿಹೋಗಿದೆ ಕಾನೂನಿನ ಪ್ರಕಾರವೇ ವರ್ತಿಸುತ್ತದೆ ಎಂದು ಸ್ಪಷ್ಪಪಡಿಸಿದೆ.

ಕ್ಷಮಾಧಾನ ನೀಡಿದ್ದುರ ಕುರಿತಾಗಿ ಕೇಂದ್ರ ಮತ್ತು ಸರ್ಕಾರ ಮತ್ತು ಗುಜರಾತ್ ಸರ್ಕಾರಗಳು ತಮ್ಮ ಪ್ರತಿಕ್ರಿಯೆನ್ನು ಸಲ್ಲಿಸಬೇಕು ಎಂದು ಸಹ ಪೀಠ ನಿರ್ದೇಶಿಸಿದೆ.

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಮುಂಚಿತ ಬಿಡುಗಡೆ ಪ್ರಶ್ನಿಸಿ, ಬಿಲ್ಕಿಸ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಆ ಕುರಿತ ವಿಚಾರಣೆಗೆ ವಿಶೇ‍ಷ ಪೀಠ ರಚಿಸಿದೆ.

2002 ರ ಗುಜರಾತ್‌ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರು ಗರ್ಭಿಣಿಯಾಗಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದು, ಮಾತ್ರವಲ್ಲದೆ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬಿಕರನ್ನು ಕೊಲೆ ಮಾಡಲಾಗಿತ್ತು. ಒಟ್ಟು 11 ಜನರು ಈ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ 2008 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದರೂ ಈ ವರ್ಷ ಆಗಸ್ಟ್ 15 ರಂದು ಗುಜರಾತ್ ಸರ್ಕಾರವು ಅವರನ್ನು ಬಿಡುಗಡೆ ಮಾಡಿದೆ.

ಬಿಲ್ಕಿಸ್ ಬಾನೊ ಅತ್ಯಾಚಾರ  ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳಲ್ಲಿ ಶೈಲೇಶ್ ಚಿಮನ್‌ಲಾಲ್ ಭಟ್ ಕಳೆದ ವರ್ಷ ಅವಧಿಗೂ ಮುನ್ನ ಬಿಡುಗಡೆಯಾಗಿದ್ದು, ಶನಿವಾರ, ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇಬ್ಬರು ಬಿಜೆಪಿ ಶಾಸಕರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾಡಾ’ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

0
ಡೋಪಿಂಗ್ ಪರೀಕ್ಷೆ (ಮಾದಕವಸ್ತು ಪತ್ತೆ ಪರೀಕ್ಷೆ)ಗೆ ಸರಿಯಾದ ಸಮಯಕ್ಕೆ ಮೂತ್ರದ ಮಾದರಿಯನ್ನು ನೀಡದ ಆರೋಪದ ಮೇಲೆ ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ...