Homeಮುಖಪುಟನಾಳೆಯೊಳಗೆ ಎರಡು ಪತ್ರಗಳನ್ನು ಸಲ್ಲಿಸಿ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸುಪ್ರೀಂ ಸೂಚನೆ

ನಾಳೆಯೊಳಗೆ ಎರಡು ಪತ್ರಗಳನ್ನು ಸಲ್ಲಿಸಿ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸುಪ್ರೀಂ ಸೂಚನೆ

- Advertisement -
- Advertisement -

ಮಹಾರಾಷ್ಟ್ರ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿರುವ ಪತ್ರ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ನೀಡಿರುವ ಬೆಂಬಲ ಪತ್ರಗಳನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸಾಲಿಸಿಟರ್‌ ತುಷಾರ ಮೆಹ್ತಾ ಅವರಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಇದೇ ವೇಳೆ ಮಹಾರಾಷ್ಟ್ರ ಸರ್ಕಾರ, ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಸುಪ್ರೀಂಕೋರ್ಟ್ ನೋಟೀಸ್ ನೀಡಿದೆ.

ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿಲ್ಲ. ಇದರಿಂದ ದೇವೇಂದ್ರ ಫಡ್ನಾವಿಸ್‌ರವರಿಗೆ ದೊಡ್ಡ ರಿಲೀಫ್‌ ತಂದುಕೊಟ್ಟಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿನ ರಾಜ್ಯಪಾಲರು ಅಮಿತ್ ಶಾರವರ ಹಿಟ್‌ಮ್ಯಾನ್ ಆಗಿದ್ದಾರೆ: ಕಾಂಗ್ರೆಸ್‌ನ 10 ಪ್ರಶ್ನೆಗಳು
“ವಿಶ್ವಾಸಮತ ಸಾಬೀತುಪಡಿಸುವುದೇ ಪ್ರಜಾಪ್ರಭುತ್ವದ ಹಾಲ್‌ಮಾರ್ಕ್‌ ಆಗಿದೆ. ಅದನ್ನು ಹೊರತುಪಡಿಸಿ ಬೇರೆ ಔಪಚಾರಿಕತೆಯ ಅಗತ್ಯವಿಲ್ಲ” ಎಂದು ಕಾಂಗ್ರೆಸ್ ಪ್ರತಿನಿಧಿಸಿದ ಅಭಿಷೇಕ್ ಸಿಂಗ್ವಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ಅದಕ್ಕೆ ವಿರುದ್ಧವಾಗಿ, ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸುವ ಅಗತ್ಯವಿಲ್ಲ ಎಂದು ವಾದ ಮಂಡಿಸಿತು. ಸುಪ್ರೀಂ ಸೂಚಿಸಿದ ಆ ಎರಡು ಪತ್ರಗಳನ್ನು ಹಾಜರುಪಡಿಸಲು ಹೆಚ್ಚಿನ ಸಮಯವನ್ನು ಬಿಜೆಪಿ ಕೇಳಿದರೂ ಕೂಡ, ನ್ಯಾಯಾಲಯ ಅದನ್ನು ತಿರಸ್ಕರಿಸಿದೆ.

ಎನ್‌ಸಿಪಿಯ 54 ಶಾಸಕರ ಬೆಂಬಲ ಬಿಜೆಪಿಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಇದು ಸಂಪೂರ್ಣ ಸುಳ್ಳು ಎಂದು ಎನ್‌ಸಿಪಿ ವಾದಿಸಿದೆ. ಮಾತ್ರವಲ್ಲದೇ ತನ್ನೊಂದಿಗೆ 50 ಶಾಸಕರು ಇದ್ದಾರೆ ಎಂದು ಎನ್‌ಸಿಪಿ ಹೇಳಿದೆ. ಅವರಲ್ಲಿ ಹೆಚ್ಚಿನವರು ನಿನ್ನೆ ಸಂಜೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು, ಸಭೆಯಲ್ಲಿ ಅಜಿತ್ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕ ಹುದ್ದೆಯಿಂದ ಕೆಳಗಿಳಿಸಲಾಗಿದೆ.

ಬಿಜೆಪಿ ಶಾಸಕರು ಮತ್ತು ಇಬ್ಬರು ಸ್ವತಂತ್ರರ ಪರವಾಗಿ ಹಾಜರಾದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರು ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯಪಾಲರು 361 ನೇ ವಿಧಿ ಅನ್ವಯ ವಿನಾಯಿತಿ ಹೊಂದಿದ್ದಾರೆ. ರಾಜ್ಯಪಾಲರ ವಿರುದ್ಧ ಯಾವುದೇ ಕ್ರಮಕ್ಕೆ ಸಂಪೂರ್ಣ ನಿರ್ಬಂಧವಿದೆ” ಎಂದು ಅವರು ಹೇಳಿದರು.

2018 ರಲ್ಲಿ ಕರ್ನಾಟಕದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಸುಪ್ರೀಂ ಕೋರ್ಟ್ ವಿಶ್ವಾಸಮತಯಾಚನೆಗೆ ಆದೇಶಿಸಿದ ನಂತರ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು ತಮ್ಮ ಬಳಿ ಅಗತ್ಯ ಶಾಸಕರ ಬೆಂಬಲ ಇಲ್ಲವೆಂದು ಹೇಳಿ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ರಚನೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

154 ಶಾಸಕರನ್ನು ಒಟ್ಟಿಗೆ ಹೊಂದಿರುವ ಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್, ಸರ್ಕಾರ ರಚಿಸುವ ಹಕ್ಕನ್ನು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. “ಗೌರವಾನ್ವಿತ ರಾಜ್ಯಪಾಲರು ಪಕ್ಷಪಾತದ ರೀತಿಯಲ್ಲಿ ವರ್ತಿಸಿದ್ದಾರೆ ಮತ್ತು ರಾಜ್ಯಪಾಲರ ಉನ್ನತ ಕಚೇರಿಯನ್ನು ಅಪಹಾಸ್ಯ ಮಾಡಿದ್ದಾರೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಎನ್.ಸಿ.ಪಿ. ಮುಖಂಡ ನವಾಜ್ ಮಲ್ಲಿಕ್, ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ನಮ್ಮ ಪಕ್ಷದ ಶಾಸಕರು ವಾಪಸ್ ಬಂದಿದ್ದಾರೆ. ಶರದ್ ಪವಾರ್ ಶಾಸಕರನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಅಲ್ಪಮತದ ಸರ್ಕಾರವೆಂಬ ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕು. ಗೌರವಯುತವಾಗಿ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ ನಾಪತ್ತೆಯಾಗಿದ್ದ ಶಾಸಕ ದೌಲತ್ ದರೋಡ ಪತ್ತಯಾಗಿದ್ದಾರೆ. ನಾನು ಸುರಕ್ಷಿತವಾಗಿದ್ದೇನೆ. ಎನ್.ಸಿ.ಪಿ ಪಕ್ಷದ ಗಡಿಯಾರದ ಗುರುತಿನ ಮೇಲೆ ಗೆದ್ದು ಬಂದು ಶಾಸಕನಾಗಿದ್ದೇನೆ. ಪಕ್ಷವನ್ನು ಬದಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಶರದ್ ಪವಾರ್ ಏನೇ ನಿರ್ಧಾರ ತೆಗೆದುಕೊಂಡರೂ ಅವರ ಜೊತೆ ಇರುತ್ತೇನೆ. ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...