Homeಮುಖಪುಟನಾಳೆಯೊಳಗೆ ಎರಡು ಪತ್ರಗಳನ್ನು ಸಲ್ಲಿಸಿ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸುಪ್ರೀಂ ಸೂಚನೆ

ನಾಳೆಯೊಳಗೆ ಎರಡು ಪತ್ರಗಳನ್ನು ಸಲ್ಲಿಸಿ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸುಪ್ರೀಂ ಸೂಚನೆ

- Advertisement -
- Advertisement -

ಮಹಾರಾಷ್ಟ್ರ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿರುವ ಪತ್ರ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ನೀಡಿರುವ ಬೆಂಬಲ ಪತ್ರಗಳನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸಾಲಿಸಿಟರ್‌ ತುಷಾರ ಮೆಹ್ತಾ ಅವರಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಇದೇ ವೇಳೆ ಮಹಾರಾಷ್ಟ್ರ ಸರ್ಕಾರ, ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಸುಪ್ರೀಂಕೋರ್ಟ್ ನೋಟೀಸ್ ನೀಡಿದೆ.

ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿಲ್ಲ. ಇದರಿಂದ ದೇವೇಂದ್ರ ಫಡ್ನಾವಿಸ್‌ರವರಿಗೆ ದೊಡ್ಡ ರಿಲೀಫ್‌ ತಂದುಕೊಟ್ಟಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿನ ರಾಜ್ಯಪಾಲರು ಅಮಿತ್ ಶಾರವರ ಹಿಟ್‌ಮ್ಯಾನ್ ಆಗಿದ್ದಾರೆ: ಕಾಂಗ್ರೆಸ್‌ನ 10 ಪ್ರಶ್ನೆಗಳು
“ವಿಶ್ವಾಸಮತ ಸಾಬೀತುಪಡಿಸುವುದೇ ಪ್ರಜಾಪ್ರಭುತ್ವದ ಹಾಲ್‌ಮಾರ್ಕ್‌ ಆಗಿದೆ. ಅದನ್ನು ಹೊರತುಪಡಿಸಿ ಬೇರೆ ಔಪಚಾರಿಕತೆಯ ಅಗತ್ಯವಿಲ್ಲ” ಎಂದು ಕಾಂಗ್ರೆಸ್ ಪ್ರತಿನಿಧಿಸಿದ ಅಭಿಷೇಕ್ ಸಿಂಗ್ವಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ಅದಕ್ಕೆ ವಿರುದ್ಧವಾಗಿ, ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸುವ ಅಗತ್ಯವಿಲ್ಲ ಎಂದು ವಾದ ಮಂಡಿಸಿತು. ಸುಪ್ರೀಂ ಸೂಚಿಸಿದ ಆ ಎರಡು ಪತ್ರಗಳನ್ನು ಹಾಜರುಪಡಿಸಲು ಹೆಚ್ಚಿನ ಸಮಯವನ್ನು ಬಿಜೆಪಿ ಕೇಳಿದರೂ ಕೂಡ, ನ್ಯಾಯಾಲಯ ಅದನ್ನು ತಿರಸ್ಕರಿಸಿದೆ.

ಎನ್‌ಸಿಪಿಯ 54 ಶಾಸಕರ ಬೆಂಬಲ ಬಿಜೆಪಿಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಇದು ಸಂಪೂರ್ಣ ಸುಳ್ಳು ಎಂದು ಎನ್‌ಸಿಪಿ ವಾದಿಸಿದೆ. ಮಾತ್ರವಲ್ಲದೇ ತನ್ನೊಂದಿಗೆ 50 ಶಾಸಕರು ಇದ್ದಾರೆ ಎಂದು ಎನ್‌ಸಿಪಿ ಹೇಳಿದೆ. ಅವರಲ್ಲಿ ಹೆಚ್ಚಿನವರು ನಿನ್ನೆ ಸಂಜೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು, ಸಭೆಯಲ್ಲಿ ಅಜಿತ್ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕ ಹುದ್ದೆಯಿಂದ ಕೆಳಗಿಳಿಸಲಾಗಿದೆ.

ಬಿಜೆಪಿ ಶಾಸಕರು ಮತ್ತು ಇಬ್ಬರು ಸ್ವತಂತ್ರರ ಪರವಾಗಿ ಹಾಜರಾದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರು ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯಪಾಲರು 361 ನೇ ವಿಧಿ ಅನ್ವಯ ವಿನಾಯಿತಿ ಹೊಂದಿದ್ದಾರೆ. ರಾಜ್ಯಪಾಲರ ವಿರುದ್ಧ ಯಾವುದೇ ಕ್ರಮಕ್ಕೆ ಸಂಪೂರ್ಣ ನಿರ್ಬಂಧವಿದೆ” ಎಂದು ಅವರು ಹೇಳಿದರು.

2018 ರಲ್ಲಿ ಕರ್ನಾಟಕದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಸುಪ್ರೀಂ ಕೋರ್ಟ್ ವಿಶ್ವಾಸಮತಯಾಚನೆಗೆ ಆದೇಶಿಸಿದ ನಂತರ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು ತಮ್ಮ ಬಳಿ ಅಗತ್ಯ ಶಾಸಕರ ಬೆಂಬಲ ಇಲ್ಲವೆಂದು ಹೇಳಿ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ರಚನೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

154 ಶಾಸಕರನ್ನು ಒಟ್ಟಿಗೆ ಹೊಂದಿರುವ ಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್, ಸರ್ಕಾರ ರಚಿಸುವ ಹಕ್ಕನ್ನು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. “ಗೌರವಾನ್ವಿತ ರಾಜ್ಯಪಾಲರು ಪಕ್ಷಪಾತದ ರೀತಿಯಲ್ಲಿ ವರ್ತಿಸಿದ್ದಾರೆ ಮತ್ತು ರಾಜ್ಯಪಾಲರ ಉನ್ನತ ಕಚೇರಿಯನ್ನು ಅಪಹಾಸ್ಯ ಮಾಡಿದ್ದಾರೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಎನ್.ಸಿ.ಪಿ. ಮುಖಂಡ ನವಾಜ್ ಮಲ್ಲಿಕ್, ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ನಮ್ಮ ಪಕ್ಷದ ಶಾಸಕರು ವಾಪಸ್ ಬಂದಿದ್ದಾರೆ. ಶರದ್ ಪವಾರ್ ಶಾಸಕರನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಅಲ್ಪಮತದ ಸರ್ಕಾರವೆಂಬ ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕು. ಗೌರವಯುತವಾಗಿ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ ನಾಪತ್ತೆಯಾಗಿದ್ದ ಶಾಸಕ ದೌಲತ್ ದರೋಡ ಪತ್ತಯಾಗಿದ್ದಾರೆ. ನಾನು ಸುರಕ್ಷಿತವಾಗಿದ್ದೇನೆ. ಎನ್.ಸಿ.ಪಿ ಪಕ್ಷದ ಗಡಿಯಾರದ ಗುರುತಿನ ಮೇಲೆ ಗೆದ್ದು ಬಂದು ಶಾಸಕನಾಗಿದ್ದೇನೆ. ಪಕ್ಷವನ್ನು ಬದಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಶರದ್ ಪವಾರ್ ಏನೇ ನಿರ್ಧಾರ ತೆಗೆದುಕೊಂಡರೂ ಅವರ ಜೊತೆ ಇರುತ್ತೇನೆ. ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...