Homeಮುಖಪುಟಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

ಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

- Advertisement -
- Advertisement -

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಕೇಂದ್ರ ಸರ್ಕಾರ ಸಿದ್ದಪಡಿಸಿದ್ದ ಪಟ್ಟಿಯನ್ನು ಕೈಬಿಟ್ಟಿರುವ ತ್ರಿಸದಸ್ಯ ಸಮಿತಿಯು ಈ ಸ್ಥಾನಕ್ಕೆ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ. ಸುಪ್ರೀಂಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ರಮಣ ಅವರು, ಈ ಸ್ಥಾನಕ್ಕೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದರಿಂದ ಕೇಂದ್ರ ತಯಾರಿಸಿದ್ದ ಪಟ್ಟಿಯು ಹಿನ್ನಲೆಗೆ ಸರಿದಿದೆ.

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾಗಿರುವ ಜೈಸ್ವಾಲ್ ಅವರು 1985 ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ. ಅವರು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳ ಮುಖ್ಯಸ್ಥರಾಗಿದ್ದಾರೆ. ಅವರನ್ನು ಈಗ ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಕೇಂದ್ರ ಸರ್ಕಾರವು ಸಿದ್ದಪಡಿಸಿದ್ದ ಪಟ್ಟಿಯಲ್ಲಿ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿ ಅವರ ಹೆಸರುಗಳಿದ್ದವು ಎಂದು ತಿಳಿದು ಬಂದಿದ್ದು, ಈ ಇಬ್ಬರೂ ಬಿಜೆಪಿಗೆ ಆಪ್ತರಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ರಮಣ ಮತ್ತು ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರ ನಡುವೆ ಸರಣಿ ಸಭೆಗಳ ನಂತರ ಮಂಗಳವಾರ ಸಂಜೆ ಸರ್ಕಾರದ ಅಧಿಸೂಚನೆ ಬಂದಿದೆ.

ಸಿಜೆಐ ಉಲ್ಲೇಖಿಸಿದ್ದು ಏನು?

ಸಿಬಿಐ ನಿರ್ದೇಶಕ ಅಥವಾ ಮುಖ್ಯಸ್ಥರನ್ನು ಪ್ರಧಾನಮಂತ್ರಿ, ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯಲ್ಲಿನ ವಿಪಕ್ಷ ನಾಯಕ ಇರುವ ತ್ರಿಸದಸ್ಯರ ಸಮಿತಿ ಆಯ್ಕೆ ಮಾಡುತ್ತದೆ. ಕೇಂದ್ರ ಸರ್ಕಾರ ಮೊದಲೇ ಒಂದು ಪಟ್ಟಿ ಸಿದ್ಧಪಡಿಸಿರುತ್ತದೆ. ಈ ಸಮಿತಿಯ ಮೂವರು ಸೇರಿ ಒಂದು ನಿರ್ಧಾರಕ್ಕೆ ಬರುತ್ತಾರೆ. ಚರ್ಚೆಗಳ ಬಳಿಕ ಮೂವರೂ ಸರ್ವಸಮ್ಮತದಿಂದ ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಇದು ರೂಢಿಗತ ಪ್ರಕ್ರಿಯೆ.

ಫೆಬ್ರವರಿಯಿಂದ ಖಾಲಿಯಿದ್ದ ಸಿಬಿಐ ನಿರ್ದೇಶಕರ ಹುದ್ದೆ ಭರ್ತಿ ಮಾಡಲು ಸೋಮವಾರ ಈ ತ್ರಿಸದಸ್ಯರ ಸಮಿತಿ ಸಬೆ ಸೇರಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮೂರು ಸದಸ್ಯರ ಸಮಿತಿಯ ಸಭೆಯಲ್ಲಿ ಕೇಂದ್ರ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ವಿಪಕ್ಷ ನಾಯಕ ಕಾಂಗ್ರೆಸ್‌ನ ಅಧೀರ್ ಚೌಧರಿ ಭಾಗವಹಿಸಿದ್ದ ಈ ಸಬೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಉಲ್ಲೇಖಿಸಿದ ಸುಪ್ರಿಂಕೋರ್ಟ್‌ನ ಹಳೆ ತೀರ್ಪು ಒಂದು ಕೇಂದ್ರ ಸರ್ಕಾರ ಸೂಚಿಸಿದ್ದ ಪಟ್ಟಿ ಹಿನ್ನಲೆಗೆ ಸರಿಯಿತು ಎನ್ನಲಾಗಿದೆ.

ಇದನ್ನೂ ಓದಿ: ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

90 ನಿಮಿಷ ಕಾಲ ನಡೆದ ಚರ್ಚೆಯಲ್ಲಿ ರಮಣ ಅವರು ಪ್ರಸ್ತಾಪಿಸಿದ ವಿಷಯ ತೀವ್ರ ಚರ್ಚೆಗೆ ಒಳಗಾಯಿತು ಎಂದು ಎನ್‌ಡಿಟಿವಿ ಸೇರಿದಂತೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ನಿರ್ದಿಷ್ಟವಾಗಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ರಮಣ ಅವರು, ಪ್ರಮುಖ ಹುದ್ದೆಗೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಹೊಸ ಸಿಬಿಐ ನಿರ್ದೇಶಕರ ಆಯ್ಕೆಯ ಸಮಯದಲ್ಲಿ ಇಂತಹ ನಿಯಮವನ್ನು ಮೊದಲ ಬಾರಿಗೆ ಮುಂದಿಡಲಾಗಿದೆ ಮತ್ತು ನ್ಯಾಯಮೂರ್ತಿ ರಮಣ ನಿಯಮವನ್ನು ಪಾಲಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಕೂಡ ಇದನ್ನು ಬೆಂಬಲಿಸಿದ್ದಾರೆ.

ಇದರ ಪರಿಣಾಮವಾಗಿ, ಆಗಸ್ಟ್ 31 ರಂದು ನಿವೃತ್ತಿಯಾಗುತ್ತಿರುವ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ಮೇ 31 ರಂದು ನಿವೃತ್ತರಾಗಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿಯ ಹೆಸರುಗಳು ಹಿನ್ನಲೆಗೆ ಸರಿಯಿತು.

ನಂತರ ಸಮಿತಿಯು ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್, ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಮಹಾನಿರ್ದೇಶಕ ಕೆ.ಆರ್. ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿ.ಎಸ್.ಕೆ. ಕೌಮುದಿ ಅವರ ಹೆಸರನ್ನು ಪರಿಗಣಿಸಿ, ಹಿರಿಯರಾದ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಸೋಮವಾರ ಕೇವಲ 16 ಸಂಭಾವ್ಯ ಹೆಸರುಗಳನ್ನು ನೀಡಿದೆ ಎಂದು ಸಮಿತಿ ಸದಸ್ಯ ಕಾಂಗ್ರೆಸ್‌ನ ಚೌಧರಿ ಹೇಳಿದ್ದಾರೆ. ಆದರೆ ಮೇ 11 ರಂದು 109 ಹೆಸರುಗಳ ಪಟ್ಟಿಯನ್ನು ಅವರಿಗೆ ನೀಡಲಾಗಿತ್ತು. ಸಮಿತಿಯ ಸದಸ್ಯರನ್ನು ಬಹಳ ಲಘುವಾಗಿ ತೆಗೆದುಕೊಂಡ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಪಟ್ಟಿಯನ್ನು ಕತ್ತರಿಸಿ 16ಕ್ಕೆ ಇಳಿಸಿದ್ದನ್ನು ಆಕ್ಷೇಪಿಸಿದ್ದಾರೆ. ಆ 16 ಜನರಲ್ಲಿ ಈಗಾಗಲೇ ಐವರು ನಿವೃತ್ತರು ಎಂಬುದನ್ನು ಚೌಧರಿ ಗಮನ ಸೆಳೆದಿದ್ದಾರೆ.

ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಲು, ಚೌಧರಿ ಅವರು ಸಮಿತಿ ಸಭೆಯನ್ನು ಮುಂದೂಡಲು ಪ್ರಯತ್ನಿಸಿದರು. ಆದರೆ, ಅವರ ಬೇಡಿಕೆಯನ್ನು ಸರ್ಕಾರ ಒಪ್ಪಲಿಲ್ಲ. ವಾಸ್ತವವಾಗಿ, ನಾಲ್ಕು ತಿಂಗಳ ವಿಳಂಬದ ನಂತರ ಸಮಿತಿ ಸಭೆ ಸೇರಿತ್ತು. ಸಮಿತಿ ಅಂತಿಮವಾಗಿ ಮೇಲೆ ತಿಳಿಸಿದ ಮೂರು ಹೆಸರುಗಳನ್ನು ಕಿರುಪಟ್ಟಿ ಮಾಡಿತು. ಮಂಗಳವಾರ ಸಂಜೆ ಸುಬೋಧ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಪ್ರಸ್ತುತ ಸುಬೋಧ್ ಅವರು ಸಿಐಎನ್‌ಎಫ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ಈ ವರ್ಷದ ಆರಂಭದಲ್ಲಿ ಕೇಂದ್ರ ಡೆಪ್ಯುಟೇಷನ್‌ಗೆ ಕರೆಸಿಕೊಳ್ಳುವ ಮೊದಲು ಮುಂಬೈ ಪೊಲೀಸ್ ಆಯುಕ್ತ ಮತ್ತು ಮಹಾರಾಷ್ಟ್ರ ಡಿಜಿಪಿ ಹುದ್ದೆಗಳನ್ನು ಅಲಂಕರಿಸಿದ್ದರು. ಸಿಬಿಐನಲ್ಲಿ ಸೇವೆ ಸಲ್ಲಿಸಿದ ಅನುಭವವಿಲ್ಲದಿದ್ದರೂ, ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಅವರು ಸುದೀರ್ಘ ಅವಧಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...