Homeಮುಖಪುಟಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

ಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

- Advertisement -
- Advertisement -

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಕೇಂದ್ರ ಸರ್ಕಾರ ಸಿದ್ದಪಡಿಸಿದ್ದ ಪಟ್ಟಿಯನ್ನು ಕೈಬಿಟ್ಟಿರುವ ತ್ರಿಸದಸ್ಯ ಸಮಿತಿಯು ಈ ಸ್ಥಾನಕ್ಕೆ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ. ಸುಪ್ರೀಂಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ರಮಣ ಅವರು, ಈ ಸ್ಥಾನಕ್ಕೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದರಿಂದ ಕೇಂದ್ರ ತಯಾರಿಸಿದ್ದ ಪಟ್ಟಿಯು ಹಿನ್ನಲೆಗೆ ಸರಿದಿದೆ.

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾಗಿರುವ ಜೈಸ್ವಾಲ್ ಅವರು 1985 ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ. ಅವರು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳ ಮುಖ್ಯಸ್ಥರಾಗಿದ್ದಾರೆ. ಅವರನ್ನು ಈಗ ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಕೇಂದ್ರ ಸರ್ಕಾರವು ಸಿದ್ದಪಡಿಸಿದ್ದ ಪಟ್ಟಿಯಲ್ಲಿ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿ ಅವರ ಹೆಸರುಗಳಿದ್ದವು ಎಂದು ತಿಳಿದು ಬಂದಿದ್ದು, ಈ ಇಬ್ಬರೂ ಬಿಜೆಪಿಗೆ ಆಪ್ತರಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ರಮಣ ಮತ್ತು ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರ ನಡುವೆ ಸರಣಿ ಸಭೆಗಳ ನಂತರ ಮಂಗಳವಾರ ಸಂಜೆ ಸರ್ಕಾರದ ಅಧಿಸೂಚನೆ ಬಂದಿದೆ.

ಸಿಜೆಐ ಉಲ್ಲೇಖಿಸಿದ್ದು ಏನು?

ಸಿಬಿಐ ನಿರ್ದೇಶಕ ಅಥವಾ ಮುಖ್ಯಸ್ಥರನ್ನು ಪ್ರಧಾನಮಂತ್ರಿ, ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯಲ್ಲಿನ ವಿಪಕ್ಷ ನಾಯಕ ಇರುವ ತ್ರಿಸದಸ್ಯರ ಸಮಿತಿ ಆಯ್ಕೆ ಮಾಡುತ್ತದೆ. ಕೇಂದ್ರ ಸರ್ಕಾರ ಮೊದಲೇ ಒಂದು ಪಟ್ಟಿ ಸಿದ್ಧಪಡಿಸಿರುತ್ತದೆ. ಈ ಸಮಿತಿಯ ಮೂವರು ಸೇರಿ ಒಂದು ನಿರ್ಧಾರಕ್ಕೆ ಬರುತ್ತಾರೆ. ಚರ್ಚೆಗಳ ಬಳಿಕ ಮೂವರೂ ಸರ್ವಸಮ್ಮತದಿಂದ ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಇದು ರೂಢಿಗತ ಪ್ರಕ್ರಿಯೆ.

ಫೆಬ್ರವರಿಯಿಂದ ಖಾಲಿಯಿದ್ದ ಸಿಬಿಐ ನಿರ್ದೇಶಕರ ಹುದ್ದೆ ಭರ್ತಿ ಮಾಡಲು ಸೋಮವಾರ ಈ ತ್ರಿಸದಸ್ಯರ ಸಮಿತಿ ಸಬೆ ಸೇರಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮೂರು ಸದಸ್ಯರ ಸಮಿತಿಯ ಸಭೆಯಲ್ಲಿ ಕೇಂದ್ರ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ವಿಪಕ್ಷ ನಾಯಕ ಕಾಂಗ್ರೆಸ್‌ನ ಅಧೀರ್ ಚೌಧರಿ ಭಾಗವಹಿಸಿದ್ದ ಈ ಸಬೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಉಲ್ಲೇಖಿಸಿದ ಸುಪ್ರಿಂಕೋರ್ಟ್‌ನ ಹಳೆ ತೀರ್ಪು ಒಂದು ಕೇಂದ್ರ ಸರ್ಕಾರ ಸೂಚಿಸಿದ್ದ ಪಟ್ಟಿ ಹಿನ್ನಲೆಗೆ ಸರಿಯಿತು ಎನ್ನಲಾಗಿದೆ.

ಇದನ್ನೂ ಓದಿ: ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

90 ನಿಮಿಷ ಕಾಲ ನಡೆದ ಚರ್ಚೆಯಲ್ಲಿ ರಮಣ ಅವರು ಪ್ರಸ್ತಾಪಿಸಿದ ವಿಷಯ ತೀವ್ರ ಚರ್ಚೆಗೆ ಒಳಗಾಯಿತು ಎಂದು ಎನ್‌ಡಿಟಿವಿ ಸೇರಿದಂತೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ನಿರ್ದಿಷ್ಟವಾಗಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ರಮಣ ಅವರು, ಪ್ರಮುಖ ಹುದ್ದೆಗೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಹೊಸ ಸಿಬಿಐ ನಿರ್ದೇಶಕರ ಆಯ್ಕೆಯ ಸಮಯದಲ್ಲಿ ಇಂತಹ ನಿಯಮವನ್ನು ಮೊದಲ ಬಾರಿಗೆ ಮುಂದಿಡಲಾಗಿದೆ ಮತ್ತು ನ್ಯಾಯಮೂರ್ತಿ ರಮಣ ನಿಯಮವನ್ನು ಪಾಲಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಕೂಡ ಇದನ್ನು ಬೆಂಬಲಿಸಿದ್ದಾರೆ.

ಇದರ ಪರಿಣಾಮವಾಗಿ, ಆಗಸ್ಟ್ 31 ರಂದು ನಿವೃತ್ತಿಯಾಗುತ್ತಿರುವ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ಮೇ 31 ರಂದು ನಿವೃತ್ತರಾಗಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿಯ ಹೆಸರುಗಳು ಹಿನ್ನಲೆಗೆ ಸರಿಯಿತು.

ನಂತರ ಸಮಿತಿಯು ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್, ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಮಹಾನಿರ್ದೇಶಕ ಕೆ.ಆರ್. ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿ.ಎಸ್.ಕೆ. ಕೌಮುದಿ ಅವರ ಹೆಸರನ್ನು ಪರಿಗಣಿಸಿ, ಹಿರಿಯರಾದ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಸೋಮವಾರ ಕೇವಲ 16 ಸಂಭಾವ್ಯ ಹೆಸರುಗಳನ್ನು ನೀಡಿದೆ ಎಂದು ಸಮಿತಿ ಸದಸ್ಯ ಕಾಂಗ್ರೆಸ್‌ನ ಚೌಧರಿ ಹೇಳಿದ್ದಾರೆ. ಆದರೆ ಮೇ 11 ರಂದು 109 ಹೆಸರುಗಳ ಪಟ್ಟಿಯನ್ನು ಅವರಿಗೆ ನೀಡಲಾಗಿತ್ತು. ಸಮಿತಿಯ ಸದಸ್ಯರನ್ನು ಬಹಳ ಲಘುವಾಗಿ ತೆಗೆದುಕೊಂಡ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಪಟ್ಟಿಯನ್ನು ಕತ್ತರಿಸಿ 16ಕ್ಕೆ ಇಳಿಸಿದ್ದನ್ನು ಆಕ್ಷೇಪಿಸಿದ್ದಾರೆ. ಆ 16 ಜನರಲ್ಲಿ ಈಗಾಗಲೇ ಐವರು ನಿವೃತ್ತರು ಎಂಬುದನ್ನು ಚೌಧರಿ ಗಮನ ಸೆಳೆದಿದ್ದಾರೆ.

ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಲು, ಚೌಧರಿ ಅವರು ಸಮಿತಿ ಸಭೆಯನ್ನು ಮುಂದೂಡಲು ಪ್ರಯತ್ನಿಸಿದರು. ಆದರೆ, ಅವರ ಬೇಡಿಕೆಯನ್ನು ಸರ್ಕಾರ ಒಪ್ಪಲಿಲ್ಲ. ವಾಸ್ತವವಾಗಿ, ನಾಲ್ಕು ತಿಂಗಳ ವಿಳಂಬದ ನಂತರ ಸಮಿತಿ ಸಭೆ ಸೇರಿತ್ತು. ಸಮಿತಿ ಅಂತಿಮವಾಗಿ ಮೇಲೆ ತಿಳಿಸಿದ ಮೂರು ಹೆಸರುಗಳನ್ನು ಕಿರುಪಟ್ಟಿ ಮಾಡಿತು. ಮಂಗಳವಾರ ಸಂಜೆ ಸುಬೋಧ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಪ್ರಸ್ತುತ ಸುಬೋಧ್ ಅವರು ಸಿಐಎನ್‌ಎಫ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ಈ ವರ್ಷದ ಆರಂಭದಲ್ಲಿ ಕೇಂದ್ರ ಡೆಪ್ಯುಟೇಷನ್‌ಗೆ ಕರೆಸಿಕೊಳ್ಳುವ ಮೊದಲು ಮುಂಬೈ ಪೊಲೀಸ್ ಆಯುಕ್ತ ಮತ್ತು ಮಹಾರಾಷ್ಟ್ರ ಡಿಜಿಪಿ ಹುದ್ದೆಗಳನ್ನು ಅಲಂಕರಿಸಿದ್ದರು. ಸಿಬಿಐನಲ್ಲಿ ಸೇವೆ ಸಲ್ಲಿಸಿದ ಅನುಭವವಿಲ್ಲದಿದ್ದರೂ, ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಅವರು ಸುದೀರ್ಘ ಅವಧಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...