Homeಮುಖಪುಟಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

ಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

- Advertisement -
- Advertisement -

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಕೇಂದ್ರ ಸರ್ಕಾರ ಸಿದ್ದಪಡಿಸಿದ್ದ ಪಟ್ಟಿಯನ್ನು ಕೈಬಿಟ್ಟಿರುವ ತ್ರಿಸದಸ್ಯ ಸಮಿತಿಯು ಈ ಸ್ಥಾನಕ್ಕೆ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ. ಸುಪ್ರೀಂಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ರಮಣ ಅವರು, ಈ ಸ್ಥಾನಕ್ಕೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದರಿಂದ ಕೇಂದ್ರ ತಯಾರಿಸಿದ್ದ ಪಟ್ಟಿಯು ಹಿನ್ನಲೆಗೆ ಸರಿದಿದೆ.

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾಗಿರುವ ಜೈಸ್ವಾಲ್ ಅವರು 1985 ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ. ಅವರು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳ ಮುಖ್ಯಸ್ಥರಾಗಿದ್ದಾರೆ. ಅವರನ್ನು ಈಗ ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಕೇಂದ್ರ ಸರ್ಕಾರವು ಸಿದ್ದಪಡಿಸಿದ್ದ ಪಟ್ಟಿಯಲ್ಲಿ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿ ಅವರ ಹೆಸರುಗಳಿದ್ದವು ಎಂದು ತಿಳಿದು ಬಂದಿದ್ದು, ಈ ಇಬ್ಬರೂ ಬಿಜೆಪಿಗೆ ಆಪ್ತರಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ರಮಣ ಮತ್ತು ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರ ನಡುವೆ ಸರಣಿ ಸಭೆಗಳ ನಂತರ ಮಂಗಳವಾರ ಸಂಜೆ ಸರ್ಕಾರದ ಅಧಿಸೂಚನೆ ಬಂದಿದೆ.

ಸಿಜೆಐ ಉಲ್ಲೇಖಿಸಿದ್ದು ಏನು?

ಸಿಬಿಐ ನಿರ್ದೇಶಕ ಅಥವಾ ಮುಖ್ಯಸ್ಥರನ್ನು ಪ್ರಧಾನಮಂತ್ರಿ, ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯಲ್ಲಿನ ವಿಪಕ್ಷ ನಾಯಕ ಇರುವ ತ್ರಿಸದಸ್ಯರ ಸಮಿತಿ ಆಯ್ಕೆ ಮಾಡುತ್ತದೆ. ಕೇಂದ್ರ ಸರ್ಕಾರ ಮೊದಲೇ ಒಂದು ಪಟ್ಟಿ ಸಿದ್ಧಪಡಿಸಿರುತ್ತದೆ. ಈ ಸಮಿತಿಯ ಮೂವರು ಸೇರಿ ಒಂದು ನಿರ್ಧಾರಕ್ಕೆ ಬರುತ್ತಾರೆ. ಚರ್ಚೆಗಳ ಬಳಿಕ ಮೂವರೂ ಸರ್ವಸಮ್ಮತದಿಂದ ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಇದು ರೂಢಿಗತ ಪ್ರಕ್ರಿಯೆ.

ಫೆಬ್ರವರಿಯಿಂದ ಖಾಲಿಯಿದ್ದ ಸಿಬಿಐ ನಿರ್ದೇಶಕರ ಹುದ್ದೆ ಭರ್ತಿ ಮಾಡಲು ಸೋಮವಾರ ಈ ತ್ರಿಸದಸ್ಯರ ಸಮಿತಿ ಸಬೆ ಸೇರಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮೂರು ಸದಸ್ಯರ ಸಮಿತಿಯ ಸಭೆಯಲ್ಲಿ ಕೇಂದ್ರ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ವಿಪಕ್ಷ ನಾಯಕ ಕಾಂಗ್ರೆಸ್‌ನ ಅಧೀರ್ ಚೌಧರಿ ಭಾಗವಹಿಸಿದ್ದ ಈ ಸಬೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಉಲ್ಲೇಖಿಸಿದ ಸುಪ್ರಿಂಕೋರ್ಟ್‌ನ ಹಳೆ ತೀರ್ಪು ಒಂದು ಕೇಂದ್ರ ಸರ್ಕಾರ ಸೂಚಿಸಿದ್ದ ಪಟ್ಟಿ ಹಿನ್ನಲೆಗೆ ಸರಿಯಿತು ಎನ್ನಲಾಗಿದೆ.

ಇದನ್ನೂ ಓದಿ: ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

90 ನಿಮಿಷ ಕಾಲ ನಡೆದ ಚರ್ಚೆಯಲ್ಲಿ ರಮಣ ಅವರು ಪ್ರಸ್ತಾಪಿಸಿದ ವಿಷಯ ತೀವ್ರ ಚರ್ಚೆಗೆ ಒಳಗಾಯಿತು ಎಂದು ಎನ್‌ಡಿಟಿವಿ ಸೇರಿದಂತೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ನಿರ್ದಿಷ್ಟವಾಗಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ರಮಣ ಅವರು, ಪ್ರಮುಖ ಹುದ್ದೆಗೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಹೊಸ ಸಿಬಿಐ ನಿರ್ದೇಶಕರ ಆಯ್ಕೆಯ ಸಮಯದಲ್ಲಿ ಇಂತಹ ನಿಯಮವನ್ನು ಮೊದಲ ಬಾರಿಗೆ ಮುಂದಿಡಲಾಗಿದೆ ಮತ್ತು ನ್ಯಾಯಮೂರ್ತಿ ರಮಣ ನಿಯಮವನ್ನು ಪಾಲಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಕೂಡ ಇದನ್ನು ಬೆಂಬಲಿಸಿದ್ದಾರೆ.

ಇದರ ಪರಿಣಾಮವಾಗಿ, ಆಗಸ್ಟ್ 31 ರಂದು ನಿವೃತ್ತಿಯಾಗುತ್ತಿರುವ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ಮೇ 31 ರಂದು ನಿವೃತ್ತರಾಗಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿಯ ಹೆಸರುಗಳು ಹಿನ್ನಲೆಗೆ ಸರಿಯಿತು.

ನಂತರ ಸಮಿತಿಯು ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್, ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಮಹಾನಿರ್ದೇಶಕ ಕೆ.ಆರ್. ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿ.ಎಸ್.ಕೆ. ಕೌಮುದಿ ಅವರ ಹೆಸರನ್ನು ಪರಿಗಣಿಸಿ, ಹಿರಿಯರಾದ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಸೋಮವಾರ ಕೇವಲ 16 ಸಂಭಾವ್ಯ ಹೆಸರುಗಳನ್ನು ನೀಡಿದೆ ಎಂದು ಸಮಿತಿ ಸದಸ್ಯ ಕಾಂಗ್ರೆಸ್‌ನ ಚೌಧರಿ ಹೇಳಿದ್ದಾರೆ. ಆದರೆ ಮೇ 11 ರಂದು 109 ಹೆಸರುಗಳ ಪಟ್ಟಿಯನ್ನು ಅವರಿಗೆ ನೀಡಲಾಗಿತ್ತು. ಸಮಿತಿಯ ಸದಸ್ಯರನ್ನು ಬಹಳ ಲಘುವಾಗಿ ತೆಗೆದುಕೊಂಡ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಪಟ್ಟಿಯನ್ನು ಕತ್ತರಿಸಿ 16ಕ್ಕೆ ಇಳಿಸಿದ್ದನ್ನು ಆಕ್ಷೇಪಿಸಿದ್ದಾರೆ. ಆ 16 ಜನರಲ್ಲಿ ಈಗಾಗಲೇ ಐವರು ನಿವೃತ್ತರು ಎಂಬುದನ್ನು ಚೌಧರಿ ಗಮನ ಸೆಳೆದಿದ್ದಾರೆ.

ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಲು, ಚೌಧರಿ ಅವರು ಸಮಿತಿ ಸಭೆಯನ್ನು ಮುಂದೂಡಲು ಪ್ರಯತ್ನಿಸಿದರು. ಆದರೆ, ಅವರ ಬೇಡಿಕೆಯನ್ನು ಸರ್ಕಾರ ಒಪ್ಪಲಿಲ್ಲ. ವಾಸ್ತವವಾಗಿ, ನಾಲ್ಕು ತಿಂಗಳ ವಿಳಂಬದ ನಂತರ ಸಮಿತಿ ಸಭೆ ಸೇರಿತ್ತು. ಸಮಿತಿ ಅಂತಿಮವಾಗಿ ಮೇಲೆ ತಿಳಿಸಿದ ಮೂರು ಹೆಸರುಗಳನ್ನು ಕಿರುಪಟ್ಟಿ ಮಾಡಿತು. ಮಂಗಳವಾರ ಸಂಜೆ ಸುಬೋಧ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಪ್ರಸ್ತುತ ಸುಬೋಧ್ ಅವರು ಸಿಐಎನ್‌ಎಫ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ಈ ವರ್ಷದ ಆರಂಭದಲ್ಲಿ ಕೇಂದ್ರ ಡೆಪ್ಯುಟೇಷನ್‌ಗೆ ಕರೆಸಿಕೊಳ್ಳುವ ಮೊದಲು ಮುಂಬೈ ಪೊಲೀಸ್ ಆಯುಕ್ತ ಮತ್ತು ಮಹಾರಾಷ್ಟ್ರ ಡಿಜಿಪಿ ಹುದ್ದೆಗಳನ್ನು ಅಲಂಕರಿಸಿದ್ದರು. ಸಿಬಿಐನಲ್ಲಿ ಸೇವೆ ಸಲ್ಲಿಸಿದ ಅನುಭವವಿಲ್ಲದಿದ್ದರೂ, ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಅವರು ಸುದೀರ್ಘ ಅವಧಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...