Homeಮುಖಪುಟಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

ಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

- Advertisement -
- Advertisement -

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಕೇಂದ್ರ ಸರ್ಕಾರ ಸಿದ್ದಪಡಿಸಿದ್ದ ಪಟ್ಟಿಯನ್ನು ಕೈಬಿಟ್ಟಿರುವ ತ್ರಿಸದಸ್ಯ ಸಮಿತಿಯು ಈ ಸ್ಥಾನಕ್ಕೆ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ. ಸುಪ್ರೀಂಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ರಮಣ ಅವರು, ಈ ಸ್ಥಾನಕ್ಕೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದರಿಂದ ಕೇಂದ್ರ ತಯಾರಿಸಿದ್ದ ಪಟ್ಟಿಯು ಹಿನ್ನಲೆಗೆ ಸರಿದಿದೆ.

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾಗಿರುವ ಜೈಸ್ವಾಲ್ ಅವರು 1985 ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ. ಅವರು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳ ಮುಖ್ಯಸ್ಥರಾಗಿದ್ದಾರೆ. ಅವರನ್ನು ಈಗ ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಕೇಂದ್ರ ಸರ್ಕಾರವು ಸಿದ್ದಪಡಿಸಿದ್ದ ಪಟ್ಟಿಯಲ್ಲಿ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿ ಅವರ ಹೆಸರುಗಳಿದ್ದವು ಎಂದು ತಿಳಿದು ಬಂದಿದ್ದು, ಈ ಇಬ್ಬರೂ ಬಿಜೆಪಿಗೆ ಆಪ್ತರಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ರಮಣ ಮತ್ತು ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರ ನಡುವೆ ಸರಣಿ ಸಭೆಗಳ ನಂತರ ಮಂಗಳವಾರ ಸಂಜೆ ಸರ್ಕಾರದ ಅಧಿಸೂಚನೆ ಬಂದಿದೆ.

ಸಿಜೆಐ ಉಲ್ಲೇಖಿಸಿದ್ದು ಏನು?

ಸಿಬಿಐ ನಿರ್ದೇಶಕ ಅಥವಾ ಮುಖ್ಯಸ್ಥರನ್ನು ಪ್ರಧಾನಮಂತ್ರಿ, ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯಲ್ಲಿನ ವಿಪಕ್ಷ ನಾಯಕ ಇರುವ ತ್ರಿಸದಸ್ಯರ ಸಮಿತಿ ಆಯ್ಕೆ ಮಾಡುತ್ತದೆ. ಕೇಂದ್ರ ಸರ್ಕಾರ ಮೊದಲೇ ಒಂದು ಪಟ್ಟಿ ಸಿದ್ಧಪಡಿಸಿರುತ್ತದೆ. ಈ ಸಮಿತಿಯ ಮೂವರು ಸೇರಿ ಒಂದು ನಿರ್ಧಾರಕ್ಕೆ ಬರುತ್ತಾರೆ. ಚರ್ಚೆಗಳ ಬಳಿಕ ಮೂವರೂ ಸರ್ವಸಮ್ಮತದಿಂದ ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಇದು ರೂಢಿಗತ ಪ್ರಕ್ರಿಯೆ.

ಫೆಬ್ರವರಿಯಿಂದ ಖಾಲಿಯಿದ್ದ ಸಿಬಿಐ ನಿರ್ದೇಶಕರ ಹುದ್ದೆ ಭರ್ತಿ ಮಾಡಲು ಸೋಮವಾರ ಈ ತ್ರಿಸದಸ್ಯರ ಸಮಿತಿ ಸಬೆ ಸೇರಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮೂರು ಸದಸ್ಯರ ಸಮಿತಿಯ ಸಭೆಯಲ್ಲಿ ಕೇಂದ್ರ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ವಿಪಕ್ಷ ನಾಯಕ ಕಾಂಗ್ರೆಸ್‌ನ ಅಧೀರ್ ಚೌಧರಿ ಭಾಗವಹಿಸಿದ್ದ ಈ ಸಬೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಉಲ್ಲೇಖಿಸಿದ ಸುಪ್ರಿಂಕೋರ್ಟ್‌ನ ಹಳೆ ತೀರ್ಪು ಒಂದು ಕೇಂದ್ರ ಸರ್ಕಾರ ಸೂಚಿಸಿದ್ದ ಪಟ್ಟಿ ಹಿನ್ನಲೆಗೆ ಸರಿಯಿತು ಎನ್ನಲಾಗಿದೆ.

ಇದನ್ನೂ ಓದಿ: ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

90 ನಿಮಿಷ ಕಾಲ ನಡೆದ ಚರ್ಚೆಯಲ್ಲಿ ರಮಣ ಅವರು ಪ್ರಸ್ತಾಪಿಸಿದ ವಿಷಯ ತೀವ್ರ ಚರ್ಚೆಗೆ ಒಳಗಾಯಿತು ಎಂದು ಎನ್‌ಡಿಟಿವಿ ಸೇರಿದಂತೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ನಿರ್ದಿಷ್ಟವಾಗಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ರಮಣ ಅವರು, ಪ್ರಮುಖ ಹುದ್ದೆಗೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಹೊಸ ಸಿಬಿಐ ನಿರ್ದೇಶಕರ ಆಯ್ಕೆಯ ಸಮಯದಲ್ಲಿ ಇಂತಹ ನಿಯಮವನ್ನು ಮೊದಲ ಬಾರಿಗೆ ಮುಂದಿಡಲಾಗಿದೆ ಮತ್ತು ನ್ಯಾಯಮೂರ್ತಿ ರಮಣ ನಿಯಮವನ್ನು ಪಾಲಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಕೂಡ ಇದನ್ನು ಬೆಂಬಲಿಸಿದ್ದಾರೆ.

ಇದರ ಪರಿಣಾಮವಾಗಿ, ಆಗಸ್ಟ್ 31 ರಂದು ನಿವೃತ್ತಿಯಾಗುತ್ತಿರುವ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ಮೇ 31 ರಂದು ನಿವೃತ್ತರಾಗಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿಯ ಹೆಸರುಗಳು ಹಿನ್ನಲೆಗೆ ಸರಿಯಿತು.

ನಂತರ ಸಮಿತಿಯು ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್, ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಮಹಾನಿರ್ದೇಶಕ ಕೆ.ಆರ್. ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿ.ಎಸ್.ಕೆ. ಕೌಮುದಿ ಅವರ ಹೆಸರನ್ನು ಪರಿಗಣಿಸಿ, ಹಿರಿಯರಾದ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಸೋಮವಾರ ಕೇವಲ 16 ಸಂಭಾವ್ಯ ಹೆಸರುಗಳನ್ನು ನೀಡಿದೆ ಎಂದು ಸಮಿತಿ ಸದಸ್ಯ ಕಾಂಗ್ರೆಸ್‌ನ ಚೌಧರಿ ಹೇಳಿದ್ದಾರೆ. ಆದರೆ ಮೇ 11 ರಂದು 109 ಹೆಸರುಗಳ ಪಟ್ಟಿಯನ್ನು ಅವರಿಗೆ ನೀಡಲಾಗಿತ್ತು. ಸಮಿತಿಯ ಸದಸ್ಯರನ್ನು ಬಹಳ ಲಘುವಾಗಿ ತೆಗೆದುಕೊಂಡ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಪಟ್ಟಿಯನ್ನು ಕತ್ತರಿಸಿ 16ಕ್ಕೆ ಇಳಿಸಿದ್ದನ್ನು ಆಕ್ಷೇಪಿಸಿದ್ದಾರೆ. ಆ 16 ಜನರಲ್ಲಿ ಈಗಾಗಲೇ ಐವರು ನಿವೃತ್ತರು ಎಂಬುದನ್ನು ಚೌಧರಿ ಗಮನ ಸೆಳೆದಿದ್ದಾರೆ.

ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಲು, ಚೌಧರಿ ಅವರು ಸಮಿತಿ ಸಭೆಯನ್ನು ಮುಂದೂಡಲು ಪ್ರಯತ್ನಿಸಿದರು. ಆದರೆ, ಅವರ ಬೇಡಿಕೆಯನ್ನು ಸರ್ಕಾರ ಒಪ್ಪಲಿಲ್ಲ. ವಾಸ್ತವವಾಗಿ, ನಾಲ್ಕು ತಿಂಗಳ ವಿಳಂಬದ ನಂತರ ಸಮಿತಿ ಸಭೆ ಸೇರಿತ್ತು. ಸಮಿತಿ ಅಂತಿಮವಾಗಿ ಮೇಲೆ ತಿಳಿಸಿದ ಮೂರು ಹೆಸರುಗಳನ್ನು ಕಿರುಪಟ್ಟಿ ಮಾಡಿತು. ಮಂಗಳವಾರ ಸಂಜೆ ಸುಬೋಧ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಪ್ರಸ್ತುತ ಸುಬೋಧ್ ಅವರು ಸಿಐಎನ್‌ಎಫ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ಈ ವರ್ಷದ ಆರಂಭದಲ್ಲಿ ಕೇಂದ್ರ ಡೆಪ್ಯುಟೇಷನ್‌ಗೆ ಕರೆಸಿಕೊಳ್ಳುವ ಮೊದಲು ಮುಂಬೈ ಪೊಲೀಸ್ ಆಯುಕ್ತ ಮತ್ತು ಮಹಾರಾಷ್ಟ್ರ ಡಿಜಿಪಿ ಹುದ್ದೆಗಳನ್ನು ಅಲಂಕರಿಸಿದ್ದರು. ಸಿಬಿಐನಲ್ಲಿ ಸೇವೆ ಸಲ್ಲಿಸಿದ ಅನುಭವವಿಲ್ಲದಿದ್ದರೂ, ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಅವರು ಸುದೀರ್ಘ ಅವಧಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...