Homeಮುಖಪುಟಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

ಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

- Advertisement -
- Advertisement -

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಕೇಂದ್ರ ಸರ್ಕಾರ ಸಿದ್ದಪಡಿಸಿದ್ದ ಪಟ್ಟಿಯನ್ನು ಕೈಬಿಟ್ಟಿರುವ ತ್ರಿಸದಸ್ಯ ಸಮಿತಿಯು ಈ ಸ್ಥಾನಕ್ಕೆ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ. ಸುಪ್ರೀಂಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ರಮಣ ಅವರು, ಈ ಸ್ಥಾನಕ್ಕೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದರಿಂದ ಕೇಂದ್ರ ತಯಾರಿಸಿದ್ದ ಪಟ್ಟಿಯು ಹಿನ್ನಲೆಗೆ ಸರಿದಿದೆ.

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾಗಿರುವ ಜೈಸ್ವಾಲ್ ಅವರು 1985 ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ. ಅವರು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳ ಮುಖ್ಯಸ್ಥರಾಗಿದ್ದಾರೆ. ಅವರನ್ನು ಈಗ ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಕೇಂದ್ರ ಸರ್ಕಾರವು ಸಿದ್ದಪಡಿಸಿದ್ದ ಪಟ್ಟಿಯಲ್ಲಿ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿ ಅವರ ಹೆಸರುಗಳಿದ್ದವು ಎಂದು ತಿಳಿದು ಬಂದಿದ್ದು, ಈ ಇಬ್ಬರೂ ಬಿಜೆಪಿಗೆ ಆಪ್ತರಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ರಮಣ ಮತ್ತು ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರ ನಡುವೆ ಸರಣಿ ಸಭೆಗಳ ನಂತರ ಮಂಗಳವಾರ ಸಂಜೆ ಸರ್ಕಾರದ ಅಧಿಸೂಚನೆ ಬಂದಿದೆ.

ಸಿಜೆಐ ಉಲ್ಲೇಖಿಸಿದ್ದು ಏನು?

ಸಿಬಿಐ ನಿರ್ದೇಶಕ ಅಥವಾ ಮುಖ್ಯಸ್ಥರನ್ನು ಪ್ರಧಾನಮಂತ್ರಿ, ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯಲ್ಲಿನ ವಿಪಕ್ಷ ನಾಯಕ ಇರುವ ತ್ರಿಸದಸ್ಯರ ಸಮಿತಿ ಆಯ್ಕೆ ಮಾಡುತ್ತದೆ. ಕೇಂದ್ರ ಸರ್ಕಾರ ಮೊದಲೇ ಒಂದು ಪಟ್ಟಿ ಸಿದ್ಧಪಡಿಸಿರುತ್ತದೆ. ಈ ಸಮಿತಿಯ ಮೂವರು ಸೇರಿ ಒಂದು ನಿರ್ಧಾರಕ್ಕೆ ಬರುತ್ತಾರೆ. ಚರ್ಚೆಗಳ ಬಳಿಕ ಮೂವರೂ ಸರ್ವಸಮ್ಮತದಿಂದ ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಇದು ರೂಢಿಗತ ಪ್ರಕ್ರಿಯೆ.

ಫೆಬ್ರವರಿಯಿಂದ ಖಾಲಿಯಿದ್ದ ಸಿಬಿಐ ನಿರ್ದೇಶಕರ ಹುದ್ದೆ ಭರ್ತಿ ಮಾಡಲು ಸೋಮವಾರ ಈ ತ್ರಿಸದಸ್ಯರ ಸಮಿತಿ ಸಬೆ ಸೇರಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮೂರು ಸದಸ್ಯರ ಸಮಿತಿಯ ಸಭೆಯಲ್ಲಿ ಕೇಂದ್ರ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ವಿಪಕ್ಷ ನಾಯಕ ಕಾಂಗ್ರೆಸ್‌ನ ಅಧೀರ್ ಚೌಧರಿ ಭಾಗವಹಿಸಿದ್ದ ಈ ಸಬೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಉಲ್ಲೇಖಿಸಿದ ಸುಪ್ರಿಂಕೋರ್ಟ್‌ನ ಹಳೆ ತೀರ್ಪು ಒಂದು ಕೇಂದ್ರ ಸರ್ಕಾರ ಸೂಚಿಸಿದ್ದ ಪಟ್ಟಿ ಹಿನ್ನಲೆಗೆ ಸರಿಯಿತು ಎನ್ನಲಾಗಿದೆ.

ಇದನ್ನೂ ಓದಿ: ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

90 ನಿಮಿಷ ಕಾಲ ನಡೆದ ಚರ್ಚೆಯಲ್ಲಿ ರಮಣ ಅವರು ಪ್ರಸ್ತಾಪಿಸಿದ ವಿಷಯ ತೀವ್ರ ಚರ್ಚೆಗೆ ಒಳಗಾಯಿತು ಎಂದು ಎನ್‌ಡಿಟಿವಿ ಸೇರಿದಂತೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ನಿರ್ದಿಷ್ಟವಾಗಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ರಮಣ ಅವರು, ಪ್ರಮುಖ ಹುದ್ದೆಗೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಹೊಸ ಸಿಬಿಐ ನಿರ್ದೇಶಕರ ಆಯ್ಕೆಯ ಸಮಯದಲ್ಲಿ ಇಂತಹ ನಿಯಮವನ್ನು ಮೊದಲ ಬಾರಿಗೆ ಮುಂದಿಡಲಾಗಿದೆ ಮತ್ತು ನ್ಯಾಯಮೂರ್ತಿ ರಮಣ ನಿಯಮವನ್ನು ಪಾಲಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಕೂಡ ಇದನ್ನು ಬೆಂಬಲಿಸಿದ್ದಾರೆ.

ಇದರ ಪರಿಣಾಮವಾಗಿ, ಆಗಸ್ಟ್ 31 ರಂದು ನಿವೃತ್ತಿಯಾಗುತ್ತಿರುವ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ಮೇ 31 ರಂದು ನಿವೃತ್ತರಾಗಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿಯ ಹೆಸರುಗಳು ಹಿನ್ನಲೆಗೆ ಸರಿಯಿತು.

ನಂತರ ಸಮಿತಿಯು ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್, ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಮಹಾನಿರ್ದೇಶಕ ಕೆ.ಆರ್. ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿ.ಎಸ್.ಕೆ. ಕೌಮುದಿ ಅವರ ಹೆಸರನ್ನು ಪರಿಗಣಿಸಿ, ಹಿರಿಯರಾದ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಸೋಮವಾರ ಕೇವಲ 16 ಸಂಭಾವ್ಯ ಹೆಸರುಗಳನ್ನು ನೀಡಿದೆ ಎಂದು ಸಮಿತಿ ಸದಸ್ಯ ಕಾಂಗ್ರೆಸ್‌ನ ಚೌಧರಿ ಹೇಳಿದ್ದಾರೆ. ಆದರೆ ಮೇ 11 ರಂದು 109 ಹೆಸರುಗಳ ಪಟ್ಟಿಯನ್ನು ಅವರಿಗೆ ನೀಡಲಾಗಿತ್ತು. ಸಮಿತಿಯ ಸದಸ್ಯರನ್ನು ಬಹಳ ಲಘುವಾಗಿ ತೆಗೆದುಕೊಂಡ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಪಟ್ಟಿಯನ್ನು ಕತ್ತರಿಸಿ 16ಕ್ಕೆ ಇಳಿಸಿದ್ದನ್ನು ಆಕ್ಷೇಪಿಸಿದ್ದಾರೆ. ಆ 16 ಜನರಲ್ಲಿ ಈಗಾಗಲೇ ಐವರು ನಿವೃತ್ತರು ಎಂಬುದನ್ನು ಚೌಧರಿ ಗಮನ ಸೆಳೆದಿದ್ದಾರೆ.

ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಲು, ಚೌಧರಿ ಅವರು ಸಮಿತಿ ಸಭೆಯನ್ನು ಮುಂದೂಡಲು ಪ್ರಯತ್ನಿಸಿದರು. ಆದರೆ, ಅವರ ಬೇಡಿಕೆಯನ್ನು ಸರ್ಕಾರ ಒಪ್ಪಲಿಲ್ಲ. ವಾಸ್ತವವಾಗಿ, ನಾಲ್ಕು ತಿಂಗಳ ವಿಳಂಬದ ನಂತರ ಸಮಿತಿ ಸಭೆ ಸೇರಿತ್ತು. ಸಮಿತಿ ಅಂತಿಮವಾಗಿ ಮೇಲೆ ತಿಳಿಸಿದ ಮೂರು ಹೆಸರುಗಳನ್ನು ಕಿರುಪಟ್ಟಿ ಮಾಡಿತು. ಮಂಗಳವಾರ ಸಂಜೆ ಸುಬೋಧ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಪ್ರಸ್ತುತ ಸುಬೋಧ್ ಅವರು ಸಿಐಎನ್‌ಎಫ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ಈ ವರ್ಷದ ಆರಂಭದಲ್ಲಿ ಕೇಂದ್ರ ಡೆಪ್ಯುಟೇಷನ್‌ಗೆ ಕರೆಸಿಕೊಳ್ಳುವ ಮೊದಲು ಮುಂಬೈ ಪೊಲೀಸ್ ಆಯುಕ್ತ ಮತ್ತು ಮಹಾರಾಷ್ಟ್ರ ಡಿಜಿಪಿ ಹುದ್ದೆಗಳನ್ನು ಅಲಂಕರಿಸಿದ್ದರು. ಸಿಬಿಐನಲ್ಲಿ ಸೇವೆ ಸಲ್ಲಿಸಿದ ಅನುಭವವಿಲ್ಲದಿದ್ದರೂ, ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಅವರು ಸುದೀರ್ಘ ಅವಧಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...