Homeಮುಖಪುಟಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್...

ಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

- Advertisement -
- Advertisement -

ಬಿಜೆಪಿ ನಾಯಕ, ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಸಂಸ್ಥೆ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಯುಎಇ ಮತ್ತು ಕತಾರ್‌ಗೆ ಭೇಟಿ ನೀಡುವಾಗ ಬಾಲಿವುಡ್ ತಾರೆ ಶಾರುಖ್ ಖಾನ್ ಅವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಳಿದ್ದಾರೆ. ಅಲ್ಲದೆ ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ  8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಸುಬ್ರಮಣಿಯನ್ ಸ್ವಾಮಿ, ಮೋದಿ ಅವರು ತಮ್ಮೊಂದಿಗೆ ಸಿನಿಮಾ ನಟ ಶಾರುಖ್ ಖಾನ್ ಅವರನ್ನು ಕತಾರ್‌ಗೆ ಕರೆದುಕೊಂಡು ಹೋಗಬೇಕು, ಏಕೆಂದರೆ ವಿದೇಶಾಂಗ ಇಲಾಖೆ ಮತ್ತು NSA ಕತಾರ್‌ನ ಶೇಖ್‌ಗಳನ್ನು ಮನವೊಲಿಸಲು ವಿಫಲವಾದ ನಂತರ, ಮೋದಿ ಖಾನ್‌ಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು ಮತ್ತು ಹೀಗಾಗಿ ನಮ್ಮ ನೌಕಾ ಅಧಿಕಾರಿಗಳನ್ನು ಶಿಕ್ಷೆಯಿಂದ ಮುಕ್ತಗೊಳಿಸಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಕತಾರ್ ಪ್ರವಾಸದ ಬಗ್ಗೆ ಪೋಸ್ಟ್‌ವೊಂದನ್ನು ಹಾಕಿದ್ದರು. ಮುಂದಿನ ಎರಡು ದಿನಗಳಲ್ಲಿ, ನಾನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯುಎಇ ಮತ್ತು ಕತಾರ್‌ಗೆ ಭೇಟಿ ನೀಡಲಿದ್ದೇನೆ, ಇದು ಈ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸುತ್ತದೆ. ಯುಎಇಗೆ ನನ್ನ ಭೇಟಿಯು ಅಧಿಕಾರ ವಹಿಸಿಕೊಂಡ ನಂತರ ನನ್ನ ಏಳನೆಯದಾಗಿದೆ, ಇದು ಬಲವಾದ ಭಾರತ-ಯುಎಇ ಸ್ನೇಹಕ್ಕೆ ನಾವು ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ನನ್ನ ಸಹೋದರ HH @MohamedBinZayed ಅವರನ್ನು ಭೇಟಿಯಾಗಲು ನಾನು ಉತ್ಸುಕನಾಗಿದ್ದೇನೆ. ಯುಎಇಯಲ್ಲಿ ಮೊದಲ ಹಿಂದೂ ಮಂದಿರವನ್ನು ಉದ್ಘಾಟಿಸುವ ಗೌರವ ನನಗಿದೆ. ಅಬುಧಾಬಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ನಾನು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತೇನೆ. ನಾನು @WorldGovSummit ನಲ್ಲಿ ಮಾತನಾಡುತ್ತೇನೆ ಮತ್ತು ದುಬೈನಲ್ಲಿ @HHShkMohd ಅನ್ನು ಭೇಟಿ ಮಾಡುತ್ತೇನೆ. ನಾನು HH ಶೇಖ್ @TamimBinHamad ಅವರನ್ನು ಭೇಟಿ ಮಾಡುತ್ತೇನೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್ ಸ್ವಾಮಿ, ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ  8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಕತಾರ್‌ನಲ್ಲಿ ಗೂಢಚರ್ಯೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಕತಾರ್ ನ್ಯಾಯಾಲಯವು ಎರಡು ದಿನಗಳ ಮೊದಲು ಬಿಡುಗಡೆ ಮಾಡಿತ್ತು. ಕತಾರ್‌ನಲ್ಲಿ ಸೆರೆಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳು ಭಾರತಕ್ಕೆ ಮರಳಿದ್ದಾರೆ.

ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು. ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿತ್ತು. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಕರಣದಲ್ಲಿ 8 ಮಂದಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ದಹ್ರಾ ಗ್ಲೋಬಲ್ ಪ್ರಕರಣವು 8 ಮಂದಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಆದೇಶದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು. ಆ ಬಳಿಕ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳ ಮರಣದಂಡನೆಯನ್ನು ಕತಾರ್‌ನ ಮೇಲ್ಮನವಿ ನ್ಯಾಯಾಲಯವು ಇಳಿಸಿದ್ದು, ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿತ್ತು.

 

 

ಇದನ್ನು ಓದಿ: ಪೂಂಚ್ ಸೇನಾ ಚಿತ್ರಹಿಂಸೆ ಬಗೆಗಿನ ವರದಿಯನ್ನು ತೆಗೆದು ಹಾಕುವಂತೆ ‘ದಿ ಕ್ಯಾರವಾನ್‌’ಗೆ ಸೂಚಿಸಿದ ಕೇಂದ್ರ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...