Homeಮುಖಪುಟಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್...

ಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

- Advertisement -
- Advertisement -

ಬಿಜೆಪಿ ನಾಯಕ, ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಸಂಸ್ಥೆ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಯುಎಇ ಮತ್ತು ಕತಾರ್‌ಗೆ ಭೇಟಿ ನೀಡುವಾಗ ಬಾಲಿವುಡ್ ತಾರೆ ಶಾರುಖ್ ಖಾನ್ ಅವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಳಿದ್ದಾರೆ. ಅಲ್ಲದೆ ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ  8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಸುಬ್ರಮಣಿಯನ್ ಸ್ವಾಮಿ, ಮೋದಿ ಅವರು ತಮ್ಮೊಂದಿಗೆ ಸಿನಿಮಾ ನಟ ಶಾರುಖ್ ಖಾನ್ ಅವರನ್ನು ಕತಾರ್‌ಗೆ ಕರೆದುಕೊಂಡು ಹೋಗಬೇಕು, ಏಕೆಂದರೆ ವಿದೇಶಾಂಗ ಇಲಾಖೆ ಮತ್ತು NSA ಕತಾರ್‌ನ ಶೇಖ್‌ಗಳನ್ನು ಮನವೊಲಿಸಲು ವಿಫಲವಾದ ನಂತರ, ಮೋದಿ ಖಾನ್‌ಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು ಮತ್ತು ಹೀಗಾಗಿ ನಮ್ಮ ನೌಕಾ ಅಧಿಕಾರಿಗಳನ್ನು ಶಿಕ್ಷೆಯಿಂದ ಮುಕ್ತಗೊಳಿಸಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಕತಾರ್ ಪ್ರವಾಸದ ಬಗ್ಗೆ ಪೋಸ್ಟ್‌ವೊಂದನ್ನು ಹಾಕಿದ್ದರು. ಮುಂದಿನ ಎರಡು ದಿನಗಳಲ್ಲಿ, ನಾನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯುಎಇ ಮತ್ತು ಕತಾರ್‌ಗೆ ಭೇಟಿ ನೀಡಲಿದ್ದೇನೆ, ಇದು ಈ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸುತ್ತದೆ. ಯುಎಇಗೆ ನನ್ನ ಭೇಟಿಯು ಅಧಿಕಾರ ವಹಿಸಿಕೊಂಡ ನಂತರ ನನ್ನ ಏಳನೆಯದಾಗಿದೆ, ಇದು ಬಲವಾದ ಭಾರತ-ಯುಎಇ ಸ್ನೇಹಕ್ಕೆ ನಾವು ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ನನ್ನ ಸಹೋದರ HH @MohamedBinZayed ಅವರನ್ನು ಭೇಟಿಯಾಗಲು ನಾನು ಉತ್ಸುಕನಾಗಿದ್ದೇನೆ. ಯುಎಇಯಲ್ಲಿ ಮೊದಲ ಹಿಂದೂ ಮಂದಿರವನ್ನು ಉದ್ಘಾಟಿಸುವ ಗೌರವ ನನಗಿದೆ. ಅಬುಧಾಬಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ನಾನು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತೇನೆ. ನಾನು @WorldGovSummit ನಲ್ಲಿ ಮಾತನಾಡುತ್ತೇನೆ ಮತ್ತು ದುಬೈನಲ್ಲಿ @HHShkMohd ಅನ್ನು ಭೇಟಿ ಮಾಡುತ್ತೇನೆ. ನಾನು HH ಶೇಖ್ @TamimBinHamad ಅವರನ್ನು ಭೇಟಿ ಮಾಡುತ್ತೇನೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್ ಸ್ವಾಮಿ, ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ  8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಕತಾರ್‌ನಲ್ಲಿ ಗೂಢಚರ್ಯೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಕತಾರ್ ನ್ಯಾಯಾಲಯವು ಎರಡು ದಿನಗಳ ಮೊದಲು ಬಿಡುಗಡೆ ಮಾಡಿತ್ತು. ಕತಾರ್‌ನಲ್ಲಿ ಸೆರೆಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳು ಭಾರತಕ್ಕೆ ಮರಳಿದ್ದಾರೆ.

ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು. ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿತ್ತು. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಕರಣದಲ್ಲಿ 8 ಮಂದಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ದಹ್ರಾ ಗ್ಲೋಬಲ್ ಪ್ರಕರಣವು 8 ಮಂದಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಆದೇಶದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು. ಆ ಬಳಿಕ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳ ಮರಣದಂಡನೆಯನ್ನು ಕತಾರ್‌ನ ಮೇಲ್ಮನವಿ ನ್ಯಾಯಾಲಯವು ಇಳಿಸಿದ್ದು, ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿತ್ತು.

 

 

ಇದನ್ನು ಓದಿ: ಪೂಂಚ್ ಸೇನಾ ಚಿತ್ರಹಿಂಸೆ ಬಗೆಗಿನ ವರದಿಯನ್ನು ತೆಗೆದು ಹಾಕುವಂತೆ ‘ದಿ ಕ್ಯಾರವಾನ್‌’ಗೆ ಸೂಚಿಸಿದ ಕೇಂದ್ರ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...