ಬಿಜೆಪಿ ನಾಯಕ, ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಸಂಸ್ಥೆ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಯುಎಇ ಮತ್ತು ಕತಾರ್ಗೆ ಭೇಟಿ ನೀಡುವಾಗ ಬಾಲಿವುಡ್ ತಾರೆ ಶಾರುಖ್ ಖಾನ್ ಅವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಳಿದ್ದಾರೆ. ಅಲ್ಲದೆ ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ 8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಸುಬ್ರಮಣಿಯನ್ ಸ್ವಾಮಿ, ಮೋದಿ ಅವರು ತಮ್ಮೊಂದಿಗೆ ಸಿನಿಮಾ ನಟ ಶಾರುಖ್ ಖಾನ್ ಅವರನ್ನು ಕತಾರ್ಗೆ ಕರೆದುಕೊಂಡು ಹೋಗಬೇಕು, ಏಕೆಂದರೆ ವಿದೇಶಾಂಗ ಇಲಾಖೆ ಮತ್ತು NSA ಕತಾರ್ನ ಶೇಖ್ಗಳನ್ನು ಮನವೊಲಿಸಲು ವಿಫಲವಾದ ನಂತರ, ಮೋದಿ ಖಾನ್ಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು ಮತ್ತು ಹೀಗಾಗಿ ನಮ್ಮ ನೌಕಾ ಅಧಿಕಾರಿಗಳನ್ನು ಶಿಕ್ಷೆಯಿಂದ ಮುಕ್ತಗೊಳಿಸಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಎಕ್ಸ್ನಲ್ಲಿ ಕತಾರ್ ಪ್ರವಾಸದ ಬಗ್ಗೆ ಪೋಸ್ಟ್ವೊಂದನ್ನು ಹಾಕಿದ್ದರು. ಮುಂದಿನ ಎರಡು ದಿನಗಳಲ್ಲಿ, ನಾನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯುಎಇ ಮತ್ತು ಕತಾರ್ಗೆ ಭೇಟಿ ನೀಡಲಿದ್ದೇನೆ, ಇದು ಈ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸುತ್ತದೆ. ಯುಎಇಗೆ ನನ್ನ ಭೇಟಿಯು ಅಧಿಕಾರ ವಹಿಸಿಕೊಂಡ ನಂತರ ನನ್ನ ಏಳನೆಯದಾಗಿದೆ, ಇದು ಬಲವಾದ ಭಾರತ-ಯುಎಇ ಸ್ನೇಹಕ್ಕೆ ನಾವು ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ನನ್ನ ಸಹೋದರ HH @MohamedBinZayed ಅವರನ್ನು ಭೇಟಿಯಾಗಲು ನಾನು ಉತ್ಸುಕನಾಗಿದ್ದೇನೆ. ಯುಎಇಯಲ್ಲಿ ಮೊದಲ ಹಿಂದೂ ಮಂದಿರವನ್ನು ಉದ್ಘಾಟಿಸುವ ಗೌರವ ನನಗಿದೆ. ಅಬುಧಾಬಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ನಾನು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತೇನೆ. ನಾನು @WorldGovSummit ನಲ್ಲಿ ಮಾತನಾಡುತ್ತೇನೆ ಮತ್ತು ದುಬೈನಲ್ಲಿ @HHShkMohd ಅನ್ನು ಭೇಟಿ ಮಾಡುತ್ತೇನೆ. ನಾನು HH ಶೇಖ್ @TamimBinHamad ಅವರನ್ನು ಭೇಟಿ ಮಾಡುತ್ತೇನೆ ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್ ಸ್ವಾಮಿ, ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ 8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.
ಕತಾರ್ನಲ್ಲಿ ಗೂಢಚರ್ಯೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಕತಾರ್ ನ್ಯಾಯಾಲಯವು ಎರಡು ದಿನಗಳ ಮೊದಲು ಬಿಡುಗಡೆ ಮಾಡಿತ್ತು. ಕತಾರ್ನಲ್ಲಿ ಸೆರೆಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳು ಭಾರತಕ್ಕೆ ಮರಳಿದ್ದಾರೆ.
ಕತಾರ್ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್ನಲ್ಲಿ ಕತಾರ್ ಪೊಲೀಸರು ಬಂಧಿಸಿದ್ದರು. ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿತ್ತು. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಕರಣದಲ್ಲಿ 8 ಮಂದಿ ಅಧಿಕಾರಿಗಳಿಗೆ ಕತಾರ್ನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ದಹ್ರಾ ಗ್ಲೋಬಲ್ ಪ್ರಕರಣವು 8 ಮಂದಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಆದೇಶದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು. ಆ ಬಳಿಕ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳ ಮರಣದಂಡನೆಯನ್ನು ಕತಾರ್ನ ಮೇಲ್ಮನವಿ ನ್ಯಾಯಾಲಯವು ಇಳಿಸಿದ್ದು, ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿತ್ತು.
Over the next two days, I will be visiting UAE and Qatar to attend various programmes, which will deepen India's bilateral relations with these nations.
My visit to UAE will be my seventh since assuming office, indicating the priority we attach to strong India-UAE friendship. I…
— Narendra Modi (@narendramodi) February 13, 2024
Qatar Prime Minister HE Sheikh Mohammed bin Abdulrahman bin Jassim Al Thani welcomes Bollywood Superstar Shah Rukh Khan as he attends AFC Final in Doha as Special Guest of Honor.
World’s biggest star for a reason 🔥@iamsrk #Qatar #ShahRukhKhan #Doha #Bollywood #SRK… pic.twitter.com/f5JcsDDZk2— Shah Rukh Khan Universe Fan Club (@SRKUniverse) February 11, 2024
ಇದನ್ನು ಓದಿ: ಪೂಂಚ್ ಸೇನಾ ಚಿತ್ರಹಿಂಸೆ ಬಗೆಗಿನ ವರದಿಯನ್ನು ತೆಗೆದು ಹಾಕುವಂತೆ ‘ದಿ ಕ್ಯಾರವಾನ್’ಗೆ ಸೂಚಿಸಿದ ಕೇಂದ್ರ ಸಚಿವಾಲಯ