Homeಮುಖಪುಟಮೈಲುತುತ್ತದ ಸಹಾಯಧನ ಬಂದ್: ಅಡಿಕೆ ತೋಟಿಗರ ಆಕೋಶ!

ಮೈಲುತುತ್ತದ ಸಹಾಯಧನ ಬಂದ್: ಅಡಿಕೆ ತೋಟಿಗರ ಆಕೋಶ!

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಬರೆ ಮೇಲೆ ಬರೆ ಎಳೆಯುತ್ತಿದೆಯೆಂಬ ಅಳಲಿನ ನಡುವೆ ಅಡಿಕೆ ತೋಟಿಗರಿಗೆ ಸಿಗುತ್ತಿದ್ದ ಮೈಲುತುತ್ತದ ಅನುದಾನವನ್ನು ಹಠಾತ್ ನಿಲ್ಲಿಸಲಾಗಿದ್ದು, ಇದು ಉತ್ತರ ಕನ್ನಡದ ಅಡಿಕೆ ಬೆಳೆಗಾರನ್ನು ಕಂಗೆಡಿಸಿಬಿಟ್ಟಿದೆ. ಅಡಿಕೆಗೆ ಬರುವ ಕೊಳೆ ರೋಗ ನಿಯಂತ್ರಣಕ್ಕಾಗಿ ಅಡಿಕೆ ಗೊನೆಗಳಿಗೆ ಸಿಂಪಡಿಸುವ ಬೊಡೋ ದ್ರಾವಣಕ್ಕೆ ಮೈಲುತುತ್ತ ಅತಿ ಅವಶ್ಯ.

ತೋಟಗಾರಿಕಾ ಇಲಾಖೆಯ ವಿವಿಧ ಯೋಜನೆಯಲ್ಲಿ ರೈತರು ಖರೀದಿಸುವ ಮೈಲುತುತ್ತಕ್ಕೆ ಶೇ.50 ಸಹಾಯ ಧನ ಪ್ರತಿ ವರ್ಷ ಸಿಗುತ್ತಿತ್ತು. ಕಳೆದ ವರ್ಷ ಉತ್ತರ ಕನ್ನಡ ಜಿಲ್ಲೆಗೆ 22 ಲಕ್ಷ ಅನುದಾನ ಬಂದಿತ್ತು. ಆದರೆ ಈ ವರ್ಷ ಕೇವಲ 18 ಲಕ್ಷವಷ್ಟೇ ಬಂದಿದೆಯೆಂದು ಅಧಿಕಾರಿಗಳು ಹೇಳುತ್ತಾರೆ. ಹೀಗಾಗಿ ರೈತರ ಅರ್ಧಕ್ಕಿಂತ ಹೆಚ್ಚು ಅರ್ಜಿಗಳಿಗೆ ನೆರವು ಸಿಕ್ಕಿಲ್ಲ. ಈ ಬಾರಿ ಬಂದಿರುವ ಅನುದಾನದಲ್ಲಿ ಹಿಂದಿನ ವರ್ಷದ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈಗ ಹೆಚ್ಚಿನ ಅನದಾನ ಬಂದರಷ್ಟೇ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತ ಕೊಡಲು ಸಾಧ್ಯವೆಂದು ತೋಟಗಾರಿಕಾ ಅಧಿಕಾರಿಗಳು ಹೇಳುತ್ತಾರೆ.

ಉತ್ತರ ಕನ್ನಡದ ಎಲ್ಲ ತಾಲೂಕುಗಳಲ್ಲಿಯೋ ಒಂದೇ ರೀತಿಯ ಪರಿಸ್ಥಿತಿಯಿದೆ. ಉದಾಹರಣೆಗೆ ಶಿರಸಿ ತಾಲೂಕಲ್ಲಿ ಕಳೆದ ವರ್ಷ 8 ಲಕ್ಷ ಬೇಡಿಕೆ ಇಡಲಾಗಿತ್ತು. ಆದರೆ ಬಂದಿದ್ದು 4.5 ಲಕ್ಷ ಮಾತ್ರ. ಅಂದರೆ ಅನುದಾನ ಕಡಿತದಿಂದ ಅರ್ಧದಷ್ಟು ರೈತರಿಗೆ ಸಹಾಯಧನದ ಮೈಲುತುತ್ತ ಪಡೆಯಲಾಗಿಲ್ಲ. ಅಡಿಕೆಯನ್ನು ಬಾಧಿಸುವ ಕೋಳೆ ರೋಗ ತಪ್ಪಿಸಲು ಹಲವು ರಾಸಾಯನಿಕ ಔಷಧಗಳು ಬಂದಿವೆಯಾದರೂ ಸುಣ್ಣ ಮತ್ತು ಮೈಲುತುತ್ತ ಮಿಶ್ರಣದ ಬೋಡೋ ದ್ರಾವಣ ಹೆಚ್ಚು ಪರಿಣಾಮಕಾರಿ ಎಂಬ ಅಭಿಪ್ರಾಯ ತೋಟಿಗರದು. ಮಳೆಗಾಲದಲ್ಲಿ ಕನಿಷ್ಠ ಎರಡು ಸಲವಾದರೂ ಈ ದ್ರಾವಣ ಸಿಂಪಡಿಸಬೇಕಾಗುತ್ತದೆ.

ಒಂದು ಎಕರೆ ತೋಟಕ್ಕೆ ಒಂದು ಬಾರಿ ಮದ್ದು ಹೊಡೆಯಲು ಕನಿಷ್ಠ 5 ಕೆ.ಜಿ ಮೈಲುತುತ್ತವಾದರೂ ಬೇಕು. ಮಾರುಕಟ್ಟೆಯಲ್ಲಿ ಒಂದು ಕೆ.ಜಿ ಮೈಲುತುತ್ತಕ್ಕೆ 200 ರಿಂದ 220 ರೂ ದರವಿದೆ. ಫಲಾನುಭವಿಗಳಿಗೆ ಐದು ಎಕರೆಗೆ ಗರಿಷ್ಟ 7,500 ರೂ. ಸಹಾಯಧನ ಕೊಡಬಹುದಾಗಿದೆ. ತೋಟಗಾರಿಕಾ ಇಲಾಖೆಯಿಂದ ಈ ಸಹಾಯಧನ ದೊರಕಿದರೆ ಬಡ ರೈತ ಸಮುದಾಯಕ್ಕೆ ಅನುಕೂಲವಾಗುತ್ತದೆಂದು ತೋಟಿಗರು ಹೇಳುತ್ತಾರೆ.


ಇದನ್ನೂ ಓದಿ: ನೀರಾವರಿ ಯೋಜನೆ ಕುರಿತು ಬಿಜೆಪಿಗೆ ಬದ್ಧತೆ ಇಲ್ಲ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...