Homeಮುಖಪುಟಮೈಲುತುತ್ತದ ಸಹಾಯಧನ ಬಂದ್: ಅಡಿಕೆ ತೋಟಿಗರ ಆಕೋಶ!

ಮೈಲುತುತ್ತದ ಸಹಾಯಧನ ಬಂದ್: ಅಡಿಕೆ ತೋಟಿಗರ ಆಕೋಶ!

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ಬರೆ ಮೇಲೆ ಬರೆ ಎಳೆಯುತ್ತಿದೆಯೆಂಬ ಅಳಲಿನ ನಡುವೆ ಅಡಿಕೆ ತೋಟಿಗರಿಗೆ ಸಿಗುತ್ತಿದ್ದ ಮೈಲುತುತ್ತದ ಅನುದಾನವನ್ನು ಹಠಾತ್ ನಿಲ್ಲಿಸಲಾಗಿದ್ದು, ಇದು ಉತ್ತರ ಕನ್ನಡದ ಅಡಿಕೆ ಬೆಳೆಗಾರನ್ನು ಕಂಗೆಡಿಸಿಬಿಟ್ಟಿದೆ. ಅಡಿಕೆಗೆ ಬರುವ ಕೊಳೆ ರೋಗ ನಿಯಂತ್ರಣಕ್ಕಾಗಿ ಅಡಿಕೆ ಗೊನೆಗಳಿಗೆ ಸಿಂಪಡಿಸುವ ಬೊಡೋ ದ್ರಾವಣಕ್ಕೆ ಮೈಲುತುತ್ತ ಅತಿ ಅವಶ್ಯ.

ತೋಟಗಾರಿಕಾ ಇಲಾಖೆಯ ವಿವಿಧ ಯೋಜನೆಯಲ್ಲಿ ರೈತರು ಖರೀದಿಸುವ ಮೈಲುತುತ್ತಕ್ಕೆ ಶೇ.50 ಸಹಾಯ ಧನ ಪ್ರತಿ ವರ್ಷ ಸಿಗುತ್ತಿತ್ತು. ಕಳೆದ ವರ್ಷ ಉತ್ತರ ಕನ್ನಡ ಜಿಲ್ಲೆಗೆ 22 ಲಕ್ಷ ಅನುದಾನ ಬಂದಿತ್ತು. ಆದರೆ ಈ ವರ್ಷ ಕೇವಲ 18 ಲಕ್ಷವಷ್ಟೇ ಬಂದಿದೆಯೆಂದು ಅಧಿಕಾರಿಗಳು ಹೇಳುತ್ತಾರೆ. ಹೀಗಾಗಿ ರೈತರ ಅರ್ಧಕ್ಕಿಂತ ಹೆಚ್ಚು ಅರ್ಜಿಗಳಿಗೆ ನೆರವು ಸಿಕ್ಕಿಲ್ಲ. ಈ ಬಾರಿ ಬಂದಿರುವ ಅನುದಾನದಲ್ಲಿ ಹಿಂದಿನ ವರ್ಷದ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈಗ ಹೆಚ್ಚಿನ ಅನದಾನ ಬಂದರಷ್ಟೇ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತ ಕೊಡಲು ಸಾಧ್ಯವೆಂದು ತೋಟಗಾರಿಕಾ ಅಧಿಕಾರಿಗಳು ಹೇಳುತ್ತಾರೆ.

ಉತ್ತರ ಕನ್ನಡದ ಎಲ್ಲ ತಾಲೂಕುಗಳಲ್ಲಿಯೋ ಒಂದೇ ರೀತಿಯ ಪರಿಸ್ಥಿತಿಯಿದೆ. ಉದಾಹರಣೆಗೆ ಶಿರಸಿ ತಾಲೂಕಲ್ಲಿ ಕಳೆದ ವರ್ಷ 8 ಲಕ್ಷ ಬೇಡಿಕೆ ಇಡಲಾಗಿತ್ತು. ಆದರೆ ಬಂದಿದ್ದು 4.5 ಲಕ್ಷ ಮಾತ್ರ. ಅಂದರೆ ಅನುದಾನ ಕಡಿತದಿಂದ ಅರ್ಧದಷ್ಟು ರೈತರಿಗೆ ಸಹಾಯಧನದ ಮೈಲುತುತ್ತ ಪಡೆಯಲಾಗಿಲ್ಲ. ಅಡಿಕೆಯನ್ನು ಬಾಧಿಸುವ ಕೋಳೆ ರೋಗ ತಪ್ಪಿಸಲು ಹಲವು ರಾಸಾಯನಿಕ ಔಷಧಗಳು ಬಂದಿವೆಯಾದರೂ ಸುಣ್ಣ ಮತ್ತು ಮೈಲುತುತ್ತ ಮಿಶ್ರಣದ ಬೋಡೋ ದ್ರಾವಣ ಹೆಚ್ಚು ಪರಿಣಾಮಕಾರಿ ಎಂಬ ಅಭಿಪ್ರಾಯ ತೋಟಿಗರದು. ಮಳೆಗಾಲದಲ್ಲಿ ಕನಿಷ್ಠ ಎರಡು ಸಲವಾದರೂ ಈ ದ್ರಾವಣ ಸಿಂಪಡಿಸಬೇಕಾಗುತ್ತದೆ.

ಒಂದು ಎಕರೆ ತೋಟಕ್ಕೆ ಒಂದು ಬಾರಿ ಮದ್ದು ಹೊಡೆಯಲು ಕನಿಷ್ಠ 5 ಕೆ.ಜಿ ಮೈಲುತುತ್ತವಾದರೂ ಬೇಕು. ಮಾರುಕಟ್ಟೆಯಲ್ಲಿ ಒಂದು ಕೆ.ಜಿ ಮೈಲುತುತ್ತಕ್ಕೆ 200 ರಿಂದ 220 ರೂ ದರವಿದೆ. ಫಲಾನುಭವಿಗಳಿಗೆ ಐದು ಎಕರೆಗೆ ಗರಿಷ್ಟ 7,500 ರೂ. ಸಹಾಯಧನ ಕೊಡಬಹುದಾಗಿದೆ. ತೋಟಗಾರಿಕಾ ಇಲಾಖೆಯಿಂದ ಈ ಸಹಾಯಧನ ದೊರಕಿದರೆ ಬಡ ರೈತ ಸಮುದಾಯಕ್ಕೆ ಅನುಕೂಲವಾಗುತ್ತದೆಂದು ತೋಟಿಗರು ಹೇಳುತ್ತಾರೆ.


ಇದನ್ನೂ ಓದಿ: ನೀರಾವರಿ ಯೋಜನೆ ಕುರಿತು ಬಿಜೆಪಿಗೆ ಬದ್ಧತೆ ಇಲ್ಲ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...