Homeಮುಖಪುಟ'ಸಿಎಎಸ್‌ನಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆ, ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ..': ವಿನೇಶಾ ಪರ ವಕೀಲ

‘ಸಿಎಎಸ್‌ನಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆ, ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ..’: ವಿನೇಶಾ ಪರ ವಕೀಲ

- Advertisement -
- Advertisement -

ವಿನೇಶಾ ಫೋಗಟ್ ತನ್ನ ಪ್ಯಾರಿಸ್ ಒಲಿಂಪಿಕ್ಸ್ ಪ್ರದರ್ಶನದ ಆಧಾರದ ಮೇಲೆ ಬೆಳ್ಳಿ ಪದಕವನ್ನು ನೀಡಬೇಕೆಂದು ಒತ್ತಾಯಿಸಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಆಫ್ ಸ್ಪೋರ್ಟ್ (ಸಿಎಎಸ್) ನಲ್ಲಿ ತನ್ನ ಮೊಕದ್ದಮೆಯನ್ನು ಮುಂದುವರಿಸುತ್ತಿರುವುದರಿಂದ ಇಡೀ ಭಾರತವು ತೀರ್ಪಿಗಾಗಿ ಕಾತುರದಿಂದ ಕಾಯುತ್ತಿದೆ.

ನಿರ್ಧಾರವು ಇನ್ನೂ ಬಾಕಿ ಇರುವಾಗಲೇ, ಸಿಎಎಸ್ ಮೇಲ್ಮನವಿಯ ಸಂದರ್ಭದಲ್ಲಿ ವಿನೇಶಾ ಅವರ ಪರ ವಕೀಲ ವಿದುಷ್ಪತ್ ಸಿಂಘಾನಿಯಾ ಅವರು, ಭಾರತೀಯ ಕುಸ್ತಿಪಟು ಯಶಸ್ಸಿನ ಸಾಧ್ಯತೆಯ ಬಗ್ಗೆ ತಮ್ಮ ಪ್ರಾಮಾಣಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಸಿಎಎಸ್‌ನಲ್ಲಿನ ಯಶಸ್ಸಿನ ಪ್ರಮಾಣವು ಐತಿಹಾಸಿಕವಾಗಿ ಸಾಕಷ್ಟು ಕಠೋರವಾಗಿದೆ. ಆದರೆ, ಒಲಿಂಪಿಕ್ ಕ್ರೀಡಾಕೂಟದ ಇತಿಹಾಸದಲ್ಲಿ ಒಂದು ಹೆಗ್ಗುರುತು ತೀರ್ಪಿನಲ್ಲಿ ವಿನೇಶಾಗೆ ನ್ಯಾಯವನ್ನು ನೀಡುವುದನ್ನು ನೋಡಲು ಭರವಸೆ ಹೊಂದಿದ್ದೇವೆ ಎಂದು ಸಿಂಘಾನಿಯಾ ಹೇಳಿದ್ದಾರೆ.

“ನಾವೆಲ್ಲರೂ ನಂಬುತ್ತೇವೆ.. ಹೌದು, ಸಿಎಎಸ್‌ನ ತಾತ್ಕಾಲಿಕ ಸಮಿತಿಯು 24 ಗಂಟೆಗಳ ಕಾಲಾವಧಿಯನ್ನು ಹೊಂದಿದೆ. ಅವರು ತೀರ್ಪಿನ ಗಡುವನ್ನು ಒಂದಕ್ಕಿಂತ ಹೆಚ್ಚು ಬಾರಿ ವಿಸ್ತರಿಸಿದ್ದಾರೆ ಎಂದರೆ ತಮ್ಮ ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದಾರೆ ಎಂದರ್ಥ; ಇದು ನಮಗೆ ಒಳ್ಳೆಯದು” ಎಂದು ವಿದುಷ್ಪತ್ ಸಿಂಘಾನಿಯಾ ತಿಳಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ನಾನು ಈ ಹಿಂದೆ ಸಿಎಎಸ್‌ನಲ್ಲಿ ಹಲವು ಪ್ರಕರಣಗಳನ್ನು ಎದುರಿಸಿದ್ದೇನೆ. ಅಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆಯಾಗಿದೆ. ಈ ವಿಷಯದಲ್ಲಿ, ನಾವು ಮಧ್ಯಸ್ಥಗಾರರಿಂದ ಮಹತ್ವದ ನಿರ್ಧಾರವನ್ನು ಕೇಳುತ್ತಿದ್ದೇವೆ. ಇದು ಸ್ವಲ್ಪ ಕಷ್ಟ, ಆದರೆ ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ” ಎಂದು ಅವರು ಹೇಳಿದ್ದಾರೆ.

“ವಿನೇಶಾಗಾಗಿ ನಾವೆಲ್ಲರೂ ಪ್ರಾರ್ಥಿಸೋಣ; ಆಕೆಗೆ ಪದಕ ಸಿಗಲಿ ಎಂದು ಹಾರೈಸೋಣ. ಆಕೆಗೆ ಪದಕ ಸಿಗದಿದ್ದರೂ ಆಕೆ ಚಾಂಪಿಯನ್ ಆಗಿದ್ದಾಳೆ” ಎಂದು ಸಿಂಘಾನಿಯಾ ಹೇಳಿದ್ದಾರೆ.

ಓಲಂಪಿಕ್ ಗೇಮ್ಸ್ ಗ್ರಾಮ ತೊರೆದ ವಿನೇಶಾ

ವಿನೇಶಾ ಸೋಮವಾರ ಒಲಿಂಪಿಕ್ ಕ್ರೀಡಾಕೂಟದಲ್ಲಿ ತನ್ನ ಅಸಾಮಾನ್ಯ ಪ್ರದರ್ಶನದ ನಂತರ ಓಲಂಪಿಕ್ ಗೇಮ್ಸ್ ಗ್ರಾಮವನ್ನು ತೊರೆಯುತ್ತಿರುವುದು ಕಂಡುಬಂದಿತು. ಕುಸ್ತಿ ಫೈನಲ್ ಪಂದ್ಯದ ದಿನದಂದು ತೂಕದ ಸಮಯದಲ್ಲಿ ಹೆಚ್ಚುವರಿ 100 ಗ್ರಾಂ ತೂಕವನ್ನು ಹೊಂದಿದ್ದ ಕಾರಣ ಅವರು ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಚಿನ್ನದ ಪದಕದ ಪಂದ್ಯದಿಂದ ಅನರ್ಹಗೊಂಡರು.

ನಂತರ, ಅವರು ಸಿಎಎಸ್‌ನೊಂದಿಗೆ ಒಲಿಂಪಿಕ್ ಅನರ್ಹತೆಯ ವಿರುದ್ಧ ಮೇಲ್ಮನವಿ ಸಲ್ಲಿಸಿದರು. 50 ಕೆಜಿ ತೂಕ ವಿಭಾಗದಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಒತ್ತಾಯಿಸಿದರು.

ಇದನ್ನೂ ಓದಿ; ವಯನಾಡ್ ಭೂಕುಸಿತ: ಕಾಣೆಯಾದವರ ದಾಖಲೆ ವಿತರಿಸಲು ಕೇರಳದ ಶಾಲೆಗಳಲ್ಲಿ ವಿಶೇಷ ಶಿಬಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...