Homeಮುಖಪುಟ'ಸಿಎಎಸ್‌ನಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆ, ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ..': ವಿನೇಶಾ ಪರ ವಕೀಲ

‘ಸಿಎಎಸ್‌ನಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆ, ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ..’: ವಿನೇಶಾ ಪರ ವಕೀಲ

- Advertisement -
- Advertisement -

ವಿನೇಶಾ ಫೋಗಟ್ ತನ್ನ ಪ್ಯಾರಿಸ್ ಒಲಿಂಪಿಕ್ಸ್ ಪ್ರದರ್ಶನದ ಆಧಾರದ ಮೇಲೆ ಬೆಳ್ಳಿ ಪದಕವನ್ನು ನೀಡಬೇಕೆಂದು ಒತ್ತಾಯಿಸಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಆಫ್ ಸ್ಪೋರ್ಟ್ (ಸಿಎಎಸ್) ನಲ್ಲಿ ತನ್ನ ಮೊಕದ್ದಮೆಯನ್ನು ಮುಂದುವರಿಸುತ್ತಿರುವುದರಿಂದ ಇಡೀ ಭಾರತವು ತೀರ್ಪಿಗಾಗಿ ಕಾತುರದಿಂದ ಕಾಯುತ್ತಿದೆ.

ನಿರ್ಧಾರವು ಇನ್ನೂ ಬಾಕಿ ಇರುವಾಗಲೇ, ಸಿಎಎಸ್ ಮೇಲ್ಮನವಿಯ ಸಂದರ್ಭದಲ್ಲಿ ವಿನೇಶಾ ಅವರ ಪರ ವಕೀಲ ವಿದುಷ್ಪತ್ ಸಿಂಘಾನಿಯಾ ಅವರು, ಭಾರತೀಯ ಕುಸ್ತಿಪಟು ಯಶಸ್ಸಿನ ಸಾಧ್ಯತೆಯ ಬಗ್ಗೆ ತಮ್ಮ ಪ್ರಾಮಾಣಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಸಿಎಎಸ್‌ನಲ್ಲಿನ ಯಶಸ್ಸಿನ ಪ್ರಮಾಣವು ಐತಿಹಾಸಿಕವಾಗಿ ಸಾಕಷ್ಟು ಕಠೋರವಾಗಿದೆ. ಆದರೆ, ಒಲಿಂಪಿಕ್ ಕ್ರೀಡಾಕೂಟದ ಇತಿಹಾಸದಲ್ಲಿ ಒಂದು ಹೆಗ್ಗುರುತು ತೀರ್ಪಿನಲ್ಲಿ ವಿನೇಶಾಗೆ ನ್ಯಾಯವನ್ನು ನೀಡುವುದನ್ನು ನೋಡಲು ಭರವಸೆ ಹೊಂದಿದ್ದೇವೆ ಎಂದು ಸಿಂಘಾನಿಯಾ ಹೇಳಿದ್ದಾರೆ.

“ನಾವೆಲ್ಲರೂ ನಂಬುತ್ತೇವೆ.. ಹೌದು, ಸಿಎಎಸ್‌ನ ತಾತ್ಕಾಲಿಕ ಸಮಿತಿಯು 24 ಗಂಟೆಗಳ ಕಾಲಾವಧಿಯನ್ನು ಹೊಂದಿದೆ. ಅವರು ತೀರ್ಪಿನ ಗಡುವನ್ನು ಒಂದಕ್ಕಿಂತ ಹೆಚ್ಚು ಬಾರಿ ವಿಸ್ತರಿಸಿದ್ದಾರೆ ಎಂದರೆ ತಮ್ಮ ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದಾರೆ ಎಂದರ್ಥ; ಇದು ನಮಗೆ ಒಳ್ಳೆಯದು” ಎಂದು ವಿದುಷ್ಪತ್ ಸಿಂಘಾನಿಯಾ ತಿಳಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ನಾನು ಈ ಹಿಂದೆ ಸಿಎಎಸ್‌ನಲ್ಲಿ ಹಲವು ಪ್ರಕರಣಗಳನ್ನು ಎದುರಿಸಿದ್ದೇನೆ. ಅಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆಯಾಗಿದೆ. ಈ ವಿಷಯದಲ್ಲಿ, ನಾವು ಮಧ್ಯಸ್ಥಗಾರರಿಂದ ಮಹತ್ವದ ನಿರ್ಧಾರವನ್ನು ಕೇಳುತ್ತಿದ್ದೇವೆ. ಇದು ಸ್ವಲ್ಪ ಕಷ್ಟ, ಆದರೆ ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ” ಎಂದು ಅವರು ಹೇಳಿದ್ದಾರೆ.

“ವಿನೇಶಾಗಾಗಿ ನಾವೆಲ್ಲರೂ ಪ್ರಾರ್ಥಿಸೋಣ; ಆಕೆಗೆ ಪದಕ ಸಿಗಲಿ ಎಂದು ಹಾರೈಸೋಣ. ಆಕೆಗೆ ಪದಕ ಸಿಗದಿದ್ದರೂ ಆಕೆ ಚಾಂಪಿಯನ್ ಆಗಿದ್ದಾಳೆ” ಎಂದು ಸಿಂಘಾನಿಯಾ ಹೇಳಿದ್ದಾರೆ.

ಓಲಂಪಿಕ್ ಗೇಮ್ಸ್ ಗ್ರಾಮ ತೊರೆದ ವಿನೇಶಾ

ವಿನೇಶಾ ಸೋಮವಾರ ಒಲಿಂಪಿಕ್ ಕ್ರೀಡಾಕೂಟದಲ್ಲಿ ತನ್ನ ಅಸಾಮಾನ್ಯ ಪ್ರದರ್ಶನದ ನಂತರ ಓಲಂಪಿಕ್ ಗೇಮ್ಸ್ ಗ್ರಾಮವನ್ನು ತೊರೆಯುತ್ತಿರುವುದು ಕಂಡುಬಂದಿತು. ಕುಸ್ತಿ ಫೈನಲ್ ಪಂದ್ಯದ ದಿನದಂದು ತೂಕದ ಸಮಯದಲ್ಲಿ ಹೆಚ್ಚುವರಿ 100 ಗ್ರಾಂ ತೂಕವನ್ನು ಹೊಂದಿದ್ದ ಕಾರಣ ಅವರು ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಚಿನ್ನದ ಪದಕದ ಪಂದ್ಯದಿಂದ ಅನರ್ಹಗೊಂಡರು.

ನಂತರ, ಅವರು ಸಿಎಎಸ್‌ನೊಂದಿಗೆ ಒಲಿಂಪಿಕ್ ಅನರ್ಹತೆಯ ವಿರುದ್ಧ ಮೇಲ್ಮನವಿ ಸಲ್ಲಿಸಿದರು. 50 ಕೆಜಿ ತೂಕ ವಿಭಾಗದಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಒತ್ತಾಯಿಸಿದರು.

ಇದನ್ನೂ ಓದಿ; ವಯನಾಡ್ ಭೂಕುಸಿತ: ಕಾಣೆಯಾದವರ ದಾಖಲೆ ವಿತರಿಸಲು ಕೇರಳದ ಶಾಲೆಗಳಲ್ಲಿ ವಿಶೇಷ ಶಿಬಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...