Homeಮುಖಪುಟ'ಸಿಎಎಸ್‌ನಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆ, ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ..': ವಿನೇಶಾ ಪರ ವಕೀಲ

‘ಸಿಎಎಸ್‌ನಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆ, ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ..’: ವಿನೇಶಾ ಪರ ವಕೀಲ

- Advertisement -
- Advertisement -

ವಿನೇಶಾ ಫೋಗಟ್ ತನ್ನ ಪ್ಯಾರಿಸ್ ಒಲಿಂಪಿಕ್ಸ್ ಪ್ರದರ್ಶನದ ಆಧಾರದ ಮೇಲೆ ಬೆಳ್ಳಿ ಪದಕವನ್ನು ನೀಡಬೇಕೆಂದು ಒತ್ತಾಯಿಸಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಆಫ್ ಸ್ಪೋರ್ಟ್ (ಸಿಎಎಸ್) ನಲ್ಲಿ ತನ್ನ ಮೊಕದ್ದಮೆಯನ್ನು ಮುಂದುವರಿಸುತ್ತಿರುವುದರಿಂದ ಇಡೀ ಭಾರತವು ತೀರ್ಪಿಗಾಗಿ ಕಾತುರದಿಂದ ಕಾಯುತ್ತಿದೆ.

ನಿರ್ಧಾರವು ಇನ್ನೂ ಬಾಕಿ ಇರುವಾಗಲೇ, ಸಿಎಎಸ್ ಮೇಲ್ಮನವಿಯ ಸಂದರ್ಭದಲ್ಲಿ ವಿನೇಶಾ ಅವರ ಪರ ವಕೀಲ ವಿದುಷ್ಪತ್ ಸಿಂಘಾನಿಯಾ ಅವರು, ಭಾರತೀಯ ಕುಸ್ತಿಪಟು ಯಶಸ್ಸಿನ ಸಾಧ್ಯತೆಯ ಬಗ್ಗೆ ತಮ್ಮ ಪ್ರಾಮಾಣಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಸಿಎಎಸ್‌ನಲ್ಲಿನ ಯಶಸ್ಸಿನ ಪ್ರಮಾಣವು ಐತಿಹಾಸಿಕವಾಗಿ ಸಾಕಷ್ಟು ಕಠೋರವಾಗಿದೆ. ಆದರೆ, ಒಲಿಂಪಿಕ್ ಕ್ರೀಡಾಕೂಟದ ಇತಿಹಾಸದಲ್ಲಿ ಒಂದು ಹೆಗ್ಗುರುತು ತೀರ್ಪಿನಲ್ಲಿ ವಿನೇಶಾಗೆ ನ್ಯಾಯವನ್ನು ನೀಡುವುದನ್ನು ನೋಡಲು ಭರವಸೆ ಹೊಂದಿದ್ದೇವೆ ಎಂದು ಸಿಂಘಾನಿಯಾ ಹೇಳಿದ್ದಾರೆ.

“ನಾವೆಲ್ಲರೂ ನಂಬುತ್ತೇವೆ.. ಹೌದು, ಸಿಎಎಸ್‌ನ ತಾತ್ಕಾಲಿಕ ಸಮಿತಿಯು 24 ಗಂಟೆಗಳ ಕಾಲಾವಧಿಯನ್ನು ಹೊಂದಿದೆ. ಅವರು ತೀರ್ಪಿನ ಗಡುವನ್ನು ಒಂದಕ್ಕಿಂತ ಹೆಚ್ಚು ಬಾರಿ ವಿಸ್ತರಿಸಿದ್ದಾರೆ ಎಂದರೆ ತಮ್ಮ ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದಾರೆ ಎಂದರ್ಥ; ಇದು ನಮಗೆ ಒಳ್ಳೆಯದು” ಎಂದು ವಿದುಷ್ಪತ್ ಸಿಂಘಾನಿಯಾ ತಿಳಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ನಾನು ಈ ಹಿಂದೆ ಸಿಎಎಸ್‌ನಲ್ಲಿ ಹಲವು ಪ್ರಕರಣಗಳನ್ನು ಎದುರಿಸಿದ್ದೇನೆ. ಅಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆಯಾಗಿದೆ. ಈ ವಿಷಯದಲ್ಲಿ, ನಾವು ಮಧ್ಯಸ್ಥಗಾರರಿಂದ ಮಹತ್ವದ ನಿರ್ಧಾರವನ್ನು ಕೇಳುತ್ತಿದ್ದೇವೆ. ಇದು ಸ್ವಲ್ಪ ಕಷ್ಟ, ಆದರೆ ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ” ಎಂದು ಅವರು ಹೇಳಿದ್ದಾರೆ.

“ವಿನೇಶಾಗಾಗಿ ನಾವೆಲ್ಲರೂ ಪ್ರಾರ್ಥಿಸೋಣ; ಆಕೆಗೆ ಪದಕ ಸಿಗಲಿ ಎಂದು ಹಾರೈಸೋಣ. ಆಕೆಗೆ ಪದಕ ಸಿಗದಿದ್ದರೂ ಆಕೆ ಚಾಂಪಿಯನ್ ಆಗಿದ್ದಾಳೆ” ಎಂದು ಸಿಂಘಾನಿಯಾ ಹೇಳಿದ್ದಾರೆ.

ಓಲಂಪಿಕ್ ಗೇಮ್ಸ್ ಗ್ರಾಮ ತೊರೆದ ವಿನೇಶಾ

ವಿನೇಶಾ ಸೋಮವಾರ ಒಲಿಂಪಿಕ್ ಕ್ರೀಡಾಕೂಟದಲ್ಲಿ ತನ್ನ ಅಸಾಮಾನ್ಯ ಪ್ರದರ್ಶನದ ನಂತರ ಓಲಂಪಿಕ್ ಗೇಮ್ಸ್ ಗ್ರಾಮವನ್ನು ತೊರೆಯುತ್ತಿರುವುದು ಕಂಡುಬಂದಿತು. ಕುಸ್ತಿ ಫೈನಲ್ ಪಂದ್ಯದ ದಿನದಂದು ತೂಕದ ಸಮಯದಲ್ಲಿ ಹೆಚ್ಚುವರಿ 100 ಗ್ರಾಂ ತೂಕವನ್ನು ಹೊಂದಿದ್ದ ಕಾರಣ ಅವರು ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಚಿನ್ನದ ಪದಕದ ಪಂದ್ಯದಿಂದ ಅನರ್ಹಗೊಂಡರು.

ನಂತರ, ಅವರು ಸಿಎಎಸ್‌ನೊಂದಿಗೆ ಒಲಿಂಪಿಕ್ ಅನರ್ಹತೆಯ ವಿರುದ್ಧ ಮೇಲ್ಮನವಿ ಸಲ್ಲಿಸಿದರು. 50 ಕೆಜಿ ತೂಕ ವಿಭಾಗದಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಒತ್ತಾಯಿಸಿದರು.

ಇದನ್ನೂ ಓದಿ; ವಯನಾಡ್ ಭೂಕುಸಿತ: ಕಾಣೆಯಾದವರ ದಾಖಲೆ ವಿತರಿಸಲು ಕೇರಳದ ಶಾಲೆಗಳಲ್ಲಿ ವಿಶೇಷ ಶಿಬಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...