Homeಮುಖಪುಟ'ಸಿಎಎಸ್‌ನಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆ, ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ..': ವಿನೇಶಾ ಪರ ವಕೀಲ

‘ಸಿಎಎಸ್‌ನಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆ, ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ..’: ವಿನೇಶಾ ಪರ ವಕೀಲ

- Advertisement -
- Advertisement -

ವಿನೇಶಾ ಫೋಗಟ್ ತನ್ನ ಪ್ಯಾರಿಸ್ ಒಲಿಂಪಿಕ್ಸ್ ಪ್ರದರ್ಶನದ ಆಧಾರದ ಮೇಲೆ ಬೆಳ್ಳಿ ಪದಕವನ್ನು ನೀಡಬೇಕೆಂದು ಒತ್ತಾಯಿಸಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಆಫ್ ಸ್ಪೋರ್ಟ್ (ಸಿಎಎಸ್) ನಲ್ಲಿ ತನ್ನ ಮೊಕದ್ದಮೆಯನ್ನು ಮುಂದುವರಿಸುತ್ತಿರುವುದರಿಂದ ಇಡೀ ಭಾರತವು ತೀರ್ಪಿಗಾಗಿ ಕಾತುರದಿಂದ ಕಾಯುತ್ತಿದೆ.

ನಿರ್ಧಾರವು ಇನ್ನೂ ಬಾಕಿ ಇರುವಾಗಲೇ, ಸಿಎಎಸ್ ಮೇಲ್ಮನವಿಯ ಸಂದರ್ಭದಲ್ಲಿ ವಿನೇಶಾ ಅವರ ಪರ ವಕೀಲ ವಿದುಷ್ಪತ್ ಸಿಂಘಾನಿಯಾ ಅವರು, ಭಾರತೀಯ ಕುಸ್ತಿಪಟು ಯಶಸ್ಸಿನ ಸಾಧ್ಯತೆಯ ಬಗ್ಗೆ ತಮ್ಮ ಪ್ರಾಮಾಣಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಸಿಎಎಸ್‌ನಲ್ಲಿನ ಯಶಸ್ಸಿನ ಪ್ರಮಾಣವು ಐತಿಹಾಸಿಕವಾಗಿ ಸಾಕಷ್ಟು ಕಠೋರವಾಗಿದೆ. ಆದರೆ, ಒಲಿಂಪಿಕ್ ಕ್ರೀಡಾಕೂಟದ ಇತಿಹಾಸದಲ್ಲಿ ಒಂದು ಹೆಗ್ಗುರುತು ತೀರ್ಪಿನಲ್ಲಿ ವಿನೇಶಾಗೆ ನ್ಯಾಯವನ್ನು ನೀಡುವುದನ್ನು ನೋಡಲು ಭರವಸೆ ಹೊಂದಿದ್ದೇವೆ ಎಂದು ಸಿಂಘಾನಿಯಾ ಹೇಳಿದ್ದಾರೆ.

“ನಾವೆಲ್ಲರೂ ನಂಬುತ್ತೇವೆ.. ಹೌದು, ಸಿಎಎಸ್‌ನ ತಾತ್ಕಾಲಿಕ ಸಮಿತಿಯು 24 ಗಂಟೆಗಳ ಕಾಲಾವಧಿಯನ್ನು ಹೊಂದಿದೆ. ಅವರು ತೀರ್ಪಿನ ಗಡುವನ್ನು ಒಂದಕ್ಕಿಂತ ಹೆಚ್ಚು ಬಾರಿ ವಿಸ್ತರಿಸಿದ್ದಾರೆ ಎಂದರೆ ತಮ್ಮ ವಿಷಯದ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದಾರೆ ಎಂದರ್ಥ; ಇದು ನಮಗೆ ಒಳ್ಳೆಯದು” ಎಂದು ವಿದುಷ್ಪತ್ ಸಿಂಘಾನಿಯಾ ತಿಳಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ನಾನು ಈ ಹಿಂದೆ ಸಿಎಎಸ್‌ನಲ್ಲಿ ಹಲವು ಪ್ರಕರಣಗಳನ್ನು ಎದುರಿಸಿದ್ದೇನೆ. ಅಲ್ಲಿ ಯಶಸ್ಸಿನ ಪ್ರಮಾಣ ತುಂಬಾ ಕಡಿಮೆಯಾಗಿದೆ. ಈ ವಿಷಯದಲ್ಲಿ, ನಾವು ಮಧ್ಯಸ್ಥಗಾರರಿಂದ ಮಹತ್ವದ ನಿರ್ಧಾರವನ್ನು ಕೇಳುತ್ತಿದ್ದೇವೆ. ಇದು ಸ್ವಲ್ಪ ಕಷ್ಟ, ಆದರೆ ಏನಾದರೂ ದೊಡ್ಡದಾಗಲಿ ಎಂದು ಆಶಿಸೋಣ” ಎಂದು ಅವರು ಹೇಳಿದ್ದಾರೆ.

“ವಿನೇಶಾಗಾಗಿ ನಾವೆಲ್ಲರೂ ಪ್ರಾರ್ಥಿಸೋಣ; ಆಕೆಗೆ ಪದಕ ಸಿಗಲಿ ಎಂದು ಹಾರೈಸೋಣ. ಆಕೆಗೆ ಪದಕ ಸಿಗದಿದ್ದರೂ ಆಕೆ ಚಾಂಪಿಯನ್ ಆಗಿದ್ದಾಳೆ” ಎಂದು ಸಿಂಘಾನಿಯಾ ಹೇಳಿದ್ದಾರೆ.

ಓಲಂಪಿಕ್ ಗೇಮ್ಸ್ ಗ್ರಾಮ ತೊರೆದ ವಿನೇಶಾ

ವಿನೇಶಾ ಸೋಮವಾರ ಒಲಿಂಪಿಕ್ ಕ್ರೀಡಾಕೂಟದಲ್ಲಿ ತನ್ನ ಅಸಾಮಾನ್ಯ ಪ್ರದರ್ಶನದ ನಂತರ ಓಲಂಪಿಕ್ ಗೇಮ್ಸ್ ಗ್ರಾಮವನ್ನು ತೊರೆಯುತ್ತಿರುವುದು ಕಂಡುಬಂದಿತು. ಕುಸ್ತಿ ಫೈನಲ್ ಪಂದ್ಯದ ದಿನದಂದು ತೂಕದ ಸಮಯದಲ್ಲಿ ಹೆಚ್ಚುವರಿ 100 ಗ್ರಾಂ ತೂಕವನ್ನು ಹೊಂದಿದ್ದ ಕಾರಣ ಅವರು ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ಚಿನ್ನದ ಪದಕದ ಪಂದ್ಯದಿಂದ ಅನರ್ಹಗೊಂಡರು.

ನಂತರ, ಅವರು ಸಿಎಎಸ್‌ನೊಂದಿಗೆ ಒಲಿಂಪಿಕ್ ಅನರ್ಹತೆಯ ವಿರುದ್ಧ ಮೇಲ್ಮನವಿ ಸಲ್ಲಿಸಿದರು. 50 ಕೆಜಿ ತೂಕ ವಿಭಾಗದಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಒತ್ತಾಯಿಸಿದರು.

ಇದನ್ನೂ ಓದಿ; ವಯನಾಡ್ ಭೂಕುಸಿತ: ಕಾಣೆಯಾದವರ ದಾಖಲೆ ವಿತರಿಸಲು ಕೇರಳದ ಶಾಲೆಗಳಲ್ಲಿ ವಿಶೇಷ ಶಿಬಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...