Homeಕರ್ನಾಟಕರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 73 ದಿನಗಳಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟಿಸುತ್ತಿರುವ ರೈತರು ನೀಡಿದ ಚಕ್ಕಾ ಜಾಮ್ (ಸಂಚಾರ ಸ್ಥಗಿತ ಹೋರಾಟ) ಗೆ ಕರ್ನಾಟಕದ ರೈತರು ಅಭೂತಪೂರ್ವವಾಗಿ ಬೆಂಬಲಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಾದ್ಯಂತ ಆರಂಭಗೊಂಡ ಹೆದ್ದಾರಿ ಬಂದ್ ಹೋರಾಟ ಬಹುತೇಕ ಯಶಸ್ವಿಯಾಗಿದೆ.

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

ಸಿಂಧನೂರಿನ ಶ್ರೀಪುರಂ ಜಂಕ್ಷನ್ ನಲ್ಲಿ ಹೆದ್ದಾರಿ ಬಂದ್ ಯಶಸ್ವಿ

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ, ಹೊಸದಿಲ್ಲಿಯಲ್ಲಿ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ದಿಟ್ಟ ಹೋರಾಟವನ್ನು ಬೆಂಬಲಿಸಿ ದಿನಾಂಕ: 6.02.2021 ಶನಿವಾರ ಶ್ರೀಪುರಂಜಂಕ್ಷನಲ್ಲಿ ರೈತ ವಿರೋಧಿ ಕೃಷಿ ಕಾನೂನು ರದ್ದಿತಿ ಹೋರಾಟ ಸಮಿತಿ ಸಿಂಧನೂರು ವತಿಯಿಂದ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಯಿತು. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡಸಿದ ಪ್ರತಿಭಟನೆಕಾರರು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹೋರಟಗಾರರಾದ ಡಿ ಎಚ್ ಕಂಬಳಿ ಮಾತನಾಡಿ, “ಕಾರ್ಪೊರೇಟ್ ಕಂಪನಿಗಳಿಗೆ ದೇಶ ಒತ್ತೆ ಇಡುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಈ ರೀತಿ ಕರಾಳ ಕಾನೂನುಗಳನ್ನು ತರುವುದರ ಮುಖಾಂತರ ಕೋಟ್ಯಂತರ ರೈತರ ಹೊಟ್ಟಗೆ ಚೂರಿ ಹಾಕಲು ಹೊರಟಿದ್ದಾರೆ. ಅದಕ್ಕೆ ನಾವು ಅವಕಾಸ ನೀಡುವುದಿಲ್ಲ” ಎಂದರು.

ರಸ್ತೆ ತಡೆಯ ಕಾರಣಕ್ಕಾಗಿ ರಸ್ತೆಯ ಎರಡು ಬದಿಯಲ್ಲಿ ಕಿಲೋಮಿಟರ್‌ಗಟ್ಟಲೆ ವಾಹನ ನಿಲುಗಡೆಯಾಗಿದ್ದವು ಹೋರಾಟದಲ್ಲಿ ಒಕ್ಕೂಟದ ಸಂಚಾಲಕ ರಾದ ಚೆಂದ್ರಶೇಖರ್ ಗೊರೆಬಾಳ, ಸಮುದಾಯದ ಎಸ್ ದೇವೇಂದ್ರಗೌಡ, ರೈತ ಸಂಘಟನೆಯ ಶರಣಪ್ಪ ಮಳ್ಳಿ, ಅಮೀನ್ ಪಾಷ, ದಿದ್ದಿಗಿ ಶಿವರಾಜ್, ಬಸವಕೇಂದ್ರದ ವೀರಭದ್ರ ಗೌಡ ಅಮರಾಪುರ, ಜಿಲಾ ನಿಪಾಷ ಜಾಹಗೀರದಾರ್, ಮನುಜಮತ ಬಳಗದ ಖಾದರ ಸುಬಾನಿ, ಬಸವರಾಜ ಬಾದರ್ಲಿ, ಸಮದ್ ಚೌದ್ರಿ, ಮಂಜುನಾಥ ಗಾಂಧಿನಗರ, ಬಿ.ಎನ್ ಯರದಿಹಾಳ, ಬಸರಾಜ ಎಕ್ಕಿ, ರಮೇಶ ಪಾಟೀಲ್ ದೇಶಪ್ರೇಮಿ ಯುವಾಂದೋಲನದ ಚಾಂದ್ ಪಾಷ್, ಯಂಕಪ್ಪ ಕೆಂಗಲ್ ಸೇರಿದಂತೆ ಇತರರಿದ್ದರು.

ಕೋಲಾರ ವರದಿ

ದೆಹಲಿಯ ರೈತರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಗಡಿಗಳಲ್ಲಿ ಇಂಟರ್ನೆಟ್ ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬಂಗಾರಪೇಟೆ – ಕೋಲಾರ ರಸ್ತೆ ತಡೆ ಮಾಡಲಾಯಿತು. ಈ ವೇಳೆ ಹತ್ತಾರು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಪ್ರತಿಭಟನೆ

ರಾಜ್ಯದ್ಯಾಂತ ನಡೆದ ಹೆದ್ದಾರಿ ತಡೆಯ ಚಿತ್ರಗಳು ಕೆಳಗಿನಂತಿವೆ.

ದಾವಣಗೆರೆಯಲ್ಲಿ ಬೃಹತ್ ಹೆದ್ದಾರಿ ತಡೆ ಹೋರಾಟ
ವಿಜಯಪುರದಲ್ಲಿ ರಸ್ತೆ ತಡೆ
ಬಳ್ಳಾರಿಯಲ್ಲಿ ಹೋರಾಟ
ಭದ್ರಾವತಿಯಲ್ಲಿ ಹೋರಾಟ
ಯಲಹಂಕದಲ್ಲಿ ಚಕ್ಕಾ ಜಾಮ್
ಚಿಕ್ಕಬಳ್ಳಾಪುರದಲ್ಲಿ ಹೋರಾಟ
ರಾಯಚೂರಿನಲ್ಲಿ ರಸ್ತೆ ತಡೆ
ಹರಪನಹಳ್ಳಿಯಲ್ಲಿ ರಸ್ತೆ ತಡೆ
ರಾಯಚೂರಿನಲ್ಲಿ ಹೆದ್ದಾರಿ ತಡೆ
ನಾಗಮಂಗಲದಲ್ಲಿ ಹೋರಾಟ
ಬೆಳಗಾವಿಯಲ್ಲಿ ಹೋರಾಟ
ನಂಜನಗೂಡಿನಲ್ಲಿ ಪ್ರತಿಭಟನೆ
ಮೈಸೂರಿನಲ್ಲಿ ರಸ್ತೆ ತಡೆ, ಬಂಧನ
ಧಾರವಾಡದಲ್ಲಿ ನಡೆಯುತ್ತಿರುವ ಪ್ರತಿಭಟನೆ
ಕಲಬುರಗಿಯಲ್ಲಿ ರಾಸ್ತ ರೋಕ್
ಚಿತ್ರದುರ್ಗದಲ್ಲಿ ರೈತರ ಪ್ರತಿಭಟನೆ
ಹಾಸನದಲ್ಲಿ ರಸ್ತೆ ತಡೆ
ಕುರುಗೋಡಿನಲ್ಲಿ ರೈತರ ಪ್ರತಿಭಟನೆ

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...