Homeಕರ್ನಾಟಕರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 73 ದಿನಗಳಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟಿಸುತ್ತಿರುವ ರೈತರು ನೀಡಿದ ಚಕ್ಕಾ ಜಾಮ್ (ಸಂಚಾರ ಸ್ಥಗಿತ ಹೋರಾಟ) ಗೆ ಕರ್ನಾಟಕದ ರೈತರು ಅಭೂತಪೂರ್ವವಾಗಿ ಬೆಂಬಲಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಾದ್ಯಂತ ಆರಂಭಗೊಂಡ ಹೆದ್ದಾರಿ ಬಂದ್ ಹೋರಾಟ ಬಹುತೇಕ ಯಶಸ್ವಿಯಾಗಿದೆ.

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

ಸಿಂಧನೂರಿನ ಶ್ರೀಪುರಂ ಜಂಕ್ಷನ್ ನಲ್ಲಿ ಹೆದ್ದಾರಿ ಬಂದ್ ಯಶಸ್ವಿ

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ, ಹೊಸದಿಲ್ಲಿಯಲ್ಲಿ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ದಿಟ್ಟ ಹೋರಾಟವನ್ನು ಬೆಂಬಲಿಸಿ ದಿನಾಂಕ: 6.02.2021 ಶನಿವಾರ ಶ್ರೀಪುರಂಜಂಕ್ಷನಲ್ಲಿ ರೈತ ವಿರೋಧಿ ಕೃಷಿ ಕಾನೂನು ರದ್ದಿತಿ ಹೋರಾಟ ಸಮಿತಿ ಸಿಂಧನೂರು ವತಿಯಿಂದ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಯಿತು. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡಸಿದ ಪ್ರತಿಭಟನೆಕಾರರು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹೋರಟಗಾರರಾದ ಡಿ ಎಚ್ ಕಂಬಳಿ ಮಾತನಾಡಿ, “ಕಾರ್ಪೊರೇಟ್ ಕಂಪನಿಗಳಿಗೆ ದೇಶ ಒತ್ತೆ ಇಡುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಈ ರೀತಿ ಕರಾಳ ಕಾನೂನುಗಳನ್ನು ತರುವುದರ ಮುಖಾಂತರ ಕೋಟ್ಯಂತರ ರೈತರ ಹೊಟ್ಟಗೆ ಚೂರಿ ಹಾಕಲು ಹೊರಟಿದ್ದಾರೆ. ಅದಕ್ಕೆ ನಾವು ಅವಕಾಸ ನೀಡುವುದಿಲ್ಲ” ಎಂದರು.

ರಸ್ತೆ ತಡೆಯ ಕಾರಣಕ್ಕಾಗಿ ರಸ್ತೆಯ ಎರಡು ಬದಿಯಲ್ಲಿ ಕಿಲೋಮಿಟರ್‌ಗಟ್ಟಲೆ ವಾಹನ ನಿಲುಗಡೆಯಾಗಿದ್ದವು ಹೋರಾಟದಲ್ಲಿ ಒಕ್ಕೂಟದ ಸಂಚಾಲಕ ರಾದ ಚೆಂದ್ರಶೇಖರ್ ಗೊರೆಬಾಳ, ಸಮುದಾಯದ ಎಸ್ ದೇವೇಂದ್ರಗೌಡ, ರೈತ ಸಂಘಟನೆಯ ಶರಣಪ್ಪ ಮಳ್ಳಿ, ಅಮೀನ್ ಪಾಷ, ದಿದ್ದಿಗಿ ಶಿವರಾಜ್, ಬಸವಕೇಂದ್ರದ ವೀರಭದ್ರ ಗೌಡ ಅಮರಾಪುರ, ಜಿಲಾ ನಿಪಾಷ ಜಾಹಗೀರದಾರ್, ಮನುಜಮತ ಬಳಗದ ಖಾದರ ಸುಬಾನಿ, ಬಸವರಾಜ ಬಾದರ್ಲಿ, ಸಮದ್ ಚೌದ್ರಿ, ಮಂಜುನಾಥ ಗಾಂಧಿನಗರ, ಬಿ.ಎನ್ ಯರದಿಹಾಳ, ಬಸರಾಜ ಎಕ್ಕಿ, ರಮೇಶ ಪಾಟೀಲ್ ದೇಶಪ್ರೇಮಿ ಯುವಾಂದೋಲನದ ಚಾಂದ್ ಪಾಷ್, ಯಂಕಪ್ಪ ಕೆಂಗಲ್ ಸೇರಿದಂತೆ ಇತರರಿದ್ದರು.

ಕೋಲಾರ ವರದಿ

ದೆಹಲಿಯ ರೈತರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಗಡಿಗಳಲ್ಲಿ ಇಂಟರ್ನೆಟ್ ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬಂಗಾರಪೇಟೆ – ಕೋಲಾರ ರಸ್ತೆ ತಡೆ ಮಾಡಲಾಯಿತು. ಈ ವೇಳೆ ಹತ್ತಾರು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಪ್ರತಿಭಟನೆ

ರಾಜ್ಯದ್ಯಾಂತ ನಡೆದ ಹೆದ್ದಾರಿ ತಡೆಯ ಚಿತ್ರಗಳು ಕೆಳಗಿನಂತಿವೆ.

ದಾವಣಗೆರೆಯಲ್ಲಿ ಬೃಹತ್ ಹೆದ್ದಾರಿ ತಡೆ ಹೋರಾಟ
ವಿಜಯಪುರದಲ್ಲಿ ರಸ್ತೆ ತಡೆ
ಬಳ್ಳಾರಿಯಲ್ಲಿ ಹೋರಾಟ
ಭದ್ರಾವತಿಯಲ್ಲಿ ಹೋರಾಟ
ಯಲಹಂಕದಲ್ಲಿ ಚಕ್ಕಾ ಜಾಮ್
ಚಿಕ್ಕಬಳ್ಳಾಪುರದಲ್ಲಿ ಹೋರಾಟ
ರಾಯಚೂರಿನಲ್ಲಿ ರಸ್ತೆ ತಡೆ
ಹರಪನಹಳ್ಳಿಯಲ್ಲಿ ರಸ್ತೆ ತಡೆ
ರಾಯಚೂರಿನಲ್ಲಿ ಹೆದ್ದಾರಿ ತಡೆ
ನಾಗಮಂಗಲದಲ್ಲಿ ಹೋರಾಟ
ಬೆಳಗಾವಿಯಲ್ಲಿ ಹೋರಾಟ
ನಂಜನಗೂಡಿನಲ್ಲಿ ಪ್ರತಿಭಟನೆ
ಮೈಸೂರಿನಲ್ಲಿ ರಸ್ತೆ ತಡೆ, ಬಂಧನ
ಧಾರವಾಡದಲ್ಲಿ ನಡೆಯುತ್ತಿರುವ ಪ್ರತಿಭಟನೆ
ಕಲಬುರಗಿಯಲ್ಲಿ ರಾಸ್ತ ರೋಕ್
ಚಿತ್ರದುರ್ಗದಲ್ಲಿ ರೈತರ ಪ್ರತಿಭಟನೆ
ಹಾಸನದಲ್ಲಿ ರಸ್ತೆ ತಡೆ
ಕುರುಗೋಡಿನಲ್ಲಿ ರೈತರ ಪ್ರತಿಭಟನೆ

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...